Homeಕರ್ನಾಟಕ2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

2018ರ ಪ್ರಣಾಳಿಕೆಯನ್ನೇ ಮರೆತ ಬಿಜೆಪಿ ಈಗ ಮತ್ತೊಂದು ಬಿಡುಗಡೆ ಮಾಡಿದೆ: ಕೆಪಿ ಸುರೇಶ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. 2018ರ ಪ್ರಣಾಳಿಕೆಯನ್ನೇ ಪೂರೈಸಿಲ್ಲ ಇದೀಗ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಶುರುವಾಗಿದೆ.

ಈ ಬಗ್ಗೆ ಲೇಖಕ ಕೆಪಿ ಸುರೇಶ್ ಅವರು ಪೋಸ್ಟ್ ಮಾಡಿದ್ದು, ”ಈ ಬಿಜೆಪಿಗೆ ಒಂದೋ ಬುದ್ಧಿಗೆಟ್ಟಿದೆ, ಇಲ್ಲಾ ಸಂಪೂರ್ಣ ಮಾನಗೆಟ್ಟಿದೆ! 2018ರಲ್ಲಿ ತಾನೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೆ ಎಂಬು ಮರೆತೇ ಹೋದಂತೆ ಈ ಪಕ್ಷ ನಟಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಸರಕಾರಕ್ಕೂ ಸರಕಾರ ರಚಿಸುವ ಪಕ್ಷಕ್ಕೂ ಒಂದು ಉತ್ತರದಾಯಿತ್ವ ಇದೆ. ಉದಾ: ಒಂದು ಯೋಜನೆ ಅನುಷ್ಠಾನವಾಗಲು ಮೂರು ವರ್ಷ ಬೇಕಿದ್ದರೆ ಮುಂದಿನ ವರ್ಷದ ಬಜೆಟ್‌ನಲ್ಲಿ ಅದಕ್ಕೆ ನಿಗದಿ ಪಡಿಸಿದ ಅನುದಾನ ನೀಡುವುದು ಕಡ್ಡಾಯ. ಕೈಗೆತ್ತಿಕೊಂಡ/ ಘೋಷಿಸಿದ ಕಾರ್ಯಕ್ರಮ ಪೂರೈಸದೇ ಇನ್ನೊಂದನ್ನು ತೆಗೆದುಕೊಳ್ಳುವುದು ಆರ್ಥಿಕ, ಆಡಳಿತ ನಿರ್ವಹಣೆಯ ನೈತಿಕತೆಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಪಕ್ಷವೊಂದರ ಪ್ರಣಾಳಿಕೆಯೂ ಅಂಥಾದ್ದೇ?

”ಈ ಭಾಜಪ 2018ರಲ್ಲಿ ಹೇಳಿದ ಶೇ.10ರಷ್ಟನ್ನೂ ಅನುಷ್ಠಾನಗೊಳಿಸಿಲ್ಲ. ಶೇ.40ರಷ್ಟು ಸಾಧನೆ ಮಾಡಿದ್ದು ಭ್ರಷ್ಟಾಚಾರದಲ್ಲಿ ಮಾತ್ರ. ಉದಾ: ಕೆ.ಎಂ.ಎಫ್ ಮೂಲಕ ಇತರೇ ಉತ್ಪನ್ನ ಮಾರಲು ಸಾವಿರ ಕೋಟಿ ನೀಡುವ ಭರವಸೆ ಪ್ರಣಾಳಿಕೆಯಲ್ಲಿತ್ತು. ಇಂಥಾ ನೂರು ಉದಾಹರಣೆ ಆ 1ಪ್ರಣಾಳಿಕೆ ಇಟ್ಟುಕೊಂಡರೆ ಕಾಣಿಸುತ್ತೆ.
ಈಗ ಹೊಸದಾಗಿ ಸ್ಪರ್ಧಿಸುವ ಹೊಸ ಪಕ್ಷದ ಹಾಗೆ ಬಿಜೆಪಿ ಪ್ರಣಾಲಿಕೆ ಪ್ರಕಟಿಸಿದೆ. ಬಾಯಿಗೆ ಬಂದ ಸುಳ್ಳುಗಳನ್ನು ಅಸಂಬದ್ಧವಾಗಿ ಪೋಣಿಸಿದ ಪ್ರಣಾಳಿಕೆ ಇದು” ಎಂದು ಟೀಕಿಸಿದ್ದಾರೆ.

”ವಾಕ್ಯ ರಚನೆಗಳೂ ಹೀಗೇ ಇವೆ. ಮಾಡಿದ್ದೇವೆ, ಮಾಡಲಿದ್ದೇವೆ, ಘೋಷಿಸಿದ್ದೇವೆ, ಹೀಗೆ ಗಲಿಬಿಲಿ ಉಂಟು ಮಾಡುವ ವಾಕ್ಯಗಳಿವೆ. ಸಾಧನೆಗಳ ಪಟ್ಟಿ ನೋಡಬೇಕು. ಸತ್ಯದ ತಲೆ ಮೇಲೆ ಹೊಡೆದ ಹಾಗೆ ಕ್ಲೈಮ್ ಮಾಡಿರುವುದು ನೋಡಿದರೆ ಈ ರಾಜ್ಯದ ಮತದಾರರು ಗಾಂಪರು ಅಂತ ಬಿಜೆಪಿ ತಿಳಿದುಕೊಂಡಂತಿದೆ” ಎಂದು ಬರೆದಿದ್ದಾರೆ.

”55 ಲಕ್ಷ ಉದ್ಯೋಗ ಸೃಷ್ಟಿ ಮಾಡಿದ್ದೇವೆ ಎನ್ನುವ ಬಿಜೆಪಿ ಯಾವ ವಲಯದಲ್ಲಿ ಎಷ್ಟು ಅಂತ ಹೇಳಿದರೂ ಸಾಕು! ಕೌಶಲ್ಯ ತರಬೇತಿಯಲ್ಲಿ ಸರ್ಟಿಫಿಕೇಟ್ ನೀಡಿರುವ ಅಂಕಿ-ಅಂಶ ನೀಡಲಾಗಿದೆ. ಆದರೆ ದಾಖಲೆ ನೋಡಿ:
ಮೊದಲ ಹಂತದಲ್ಲಿ 1,12,445 ಯುವಕರಿಗೆ ತರಬೇತಿ ಕೊಟ್ಟರೂ ಉದ್ಯೋಗ ಲಭಿಸಿದ್ದು ಕೇವಲ 20956. 2ನೇ ಹಂತದಲ್ಲಿ 4,32,411 ಮಂದಿಗೆ ತರಬೇತಿ ಕೊಟ್ಟ ದಾಖಲೆ ಇದೆ. ಆದರೆ ಉದ್ಯೋಗ ಲಭಿಸಿದ್ದು ಕೇವಲ 58,960 ಯುವಕರಿಗೆ. 3ನೇ ಹಂತದಲ್ಲಿ 31,120 ಮಂದಿಗೆ ತರಬೇತಿ ನೀಡಿದರೆ, ಉದ್ಯೋಗ ಲಭಿಸಿದ್ದು ಕೇವಲ 1388 ಯುವಕರಿಗೆ. ಇದು ಅಧಿಕೃತ ದಾಖಲೆ” ಎಂದು ಮಾಹಿತಿ ನೀಡಿದ್ದಾರೆ.

”ಆರೋಗ್ಯ ಕ್ಷೇತ್ರದಲ್ಲಿ ಕೇಂದ್ರದ ಅನುದಾನ 500+ ಕೋಟಿಯಲ್ಲಿ ಒಂದು ರೂಪಾಯಿಯೂ ಬಂದಿಲ್ಲ ಎಂದು ಮೊನ್ನೆ ಮೊನ್ನೆ ಬಯಲಾಗಿದೆ” ಎಂದಿದ್ದಾರೆ.

ಕೇಂದ್ರದ ವಿಶೇಷ ಅನುದಾನ ರಾಜ್ಯಕ್ಕೆ ಸೊನ್ನೆ

”ಭದ್ರಾ, ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳು ಅಂತರ್‌ರಾಜ್ಯ ಪ್ರಕರಣಗಳಾಗಿರುವ ಕಾರಣ ಅವು ಪ್ರಸ್ತಾವದಿಂದಾಚೆ ಜರುಗಿಯೇ ಇಲ್ಲ. ಇದರ ಬಗ್ಗೆ ಪ್ರಭಾವ ಬೀರಬಹುದಾದ ಮೋದಿ ಬಾಯಿಮುಚ್ಚಿ ಕೂತಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈಗ ಹೊಸ ಪ್ರಣಾಳಿಕೆ ಬಿಡುಗಡೆ ಮಾಡುವ ಭಂಡ ಧೈರ್ಯ ಬೇರೆ ಈ ಪಕ್ಷಕ್ಕೆ!! 2018ರ ಪ್ರಣಾಳಿಕೆ ಮುಖಕ್ಕೆ ಹಿಡಿದು ಮತದಾರರು ಇದರಲ್ಲಿರುವ ಭರವಸೆ ಕಳೆದ ನಾಲ್ಕು ವರ್ಷ ಯಾಕೆ ಅನುಷ್ಠಾನ ಮಾಡಿಲ್ಲ ಎಂದು ಕೇಳಬೇಕಿದೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...