Homeಮುಖಪುಟತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

ತಿಹಾರ್ ಜೈಲಿನಲ್ಲಿ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಹತ್ಯೆ

- Advertisement -
- Advertisement -

ದೆಹಲಿಯ ತಿಹಾರ್ ಜೈಲಿನಲ್ಲಿ ಎದುರಾಳಿ ಗ್ಯಾಂಗ್ ಸದಸ್ಯರು ನಡೆಸಿದ ದಾಳಿಯಿಂದಾಗಿ ಜೈಲಿನಲ್ಲಿದ್ದ ಗ್ಯಾಂಗ್ ಸ್ಟರ್ ತಿಲ್ಲು ತಾಜ್‌ಪುರಿ ಕೊಲೆಯಾಗಿದ್ದಾನೆ.

ಹೆಚ್ಚಿನ ಬಿಗಿಭದ್ರತೆ ಇರುವ ಜೈಲಿನಲ್ಲಿ ಗ್ಯಾಂಗ್ ಸ್ಟರ್ ಯೋಗೇಶ್ ತುಂಡಾ ಮತ್ತು ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ತಿಲ್ಲು ತಾಜ್‌ಪುರಿಯಾ, ಅಲಿಯಾಸ್ ಸುನಿಲ್ ಮಾನ್ ಅವರನ್ನು ಥಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿದ್ದ ತಿಲ್ಲುನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೋರ್ವ ಖೈದಿ ರೋಹಿತ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಸದ್ಯ ಆತ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಯೋಗೇಶ್ ತುಂಡಾ, ದೀಪಕ್ ತೀತಾರ್, ರಿಯಾಜ್ ಖಾನ್ ಮತ್ತು ರಾಜೇಶ್- ಜೈಲಿನ ಮೊದಲ ಮಹಡಿಯಲ್ಲಿರುವ ವಾರ್ಡ್‌ನ ಕಬ್ಬಿಣದ ಗ್ರಿಲ್‌ಗಳನ್ನು ಒಡೆದಿದ್ದಾರೆ. ನೆಲ ಅಂತಸ್ತಿನ ವಾರ್ಡ್‌ನಲ್ಲಿ ಇದ್ದ ತಿಲ್ಲು ಮೇಲೆ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎದುರಾಳಿ ಗೋಗಿ ಗ್ಯಾಂಗ್‌ನ ನಾಲ್ವರು ಸದಸ್ಯರು ನೆಲ ಮಹಡಿಗೆ ಇಳಿಯಲು ಬೆಡ್‌ಶೀಟ್‌ಗಳನ್ನು ಬಳಸಿದ್ದಾರೆ.

2021 ರ ರೋಹಿಣಿ ಕೋರ್ಟ್ ಶೂಟೌಟ್‌ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದರ್ ಗೋಗಿ ಕೊಲ್ಲಲ್ಪಟ್ಟಾಗ ತಿಲ್ಲು ಅದರಲ್ಲಿ ಪ್ರಧಾನ ಸಂಚುಕೋರನಾಗಿದ್ದನು.

2021 ರ ಸೆಪ್ಟೆಂಬರ್ 24 ರಂದು ರೋಹಿಣಿ ನ್ಯಾಯಾಲಯದ ಒಳಗೆ ವಕೀಲರಂತೆ ವೇಷಧರಿಸಿದ ತಿಲ್ಲು ಗ್ಯಾಂಗ್‌ನ ಇಬ್ಬರು ಸದಸ್ಯರು ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಂದರು. ನಂತರ ಪೊಲೀಸರು ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಇಬ್ಬರೂ ಕೊಲ್ಲಲ್ಪಟ್ಟರು.

“ನ್ಯಾಯಾಲಯದ ಒಳಗೆ ಜಿತೇಂದರ್ ಗೋಗಿಯ ಮೇಲೆ ಇಬ್ಬರು ವಕೀಲರ ವೇಷದಲ್ಲಿ ಗುಂಡು ಹಾರಿಸಿದರು. ಆಗ ಪೊಲೀಸರು ಪ್ರತಿದಾಳಿ ನಡೆಸಿ ಆ ಇಬ್ಬರು ದಾಳಿಕೋರರನ್ನು ಕೊಂದರು. ಇದು ಗ್ಯಾಂಗ್ ವಾರ್ ಅಲ್ಲ” ಎಂದು ಪೊಲೀಸರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಜಿತೇಂದರ್ ಗೋಗಿ ಗ್ಯಾಂಗ್ ಮತ್ತು ತಿಲ್ಲು ಗ್ಯಾಂಗ್ ನಡುವೆ ಇದ್ದ ವರ್ಷ ಕಾಲದ ಪೈಪೋಟಿಯ ಪರಿಣಾಮವೇ ಈ ದಾಳಿಯಾಗಿತ್ತು.

ಜಿತೇಂದರ್ ಗೋಗಿಯನ್ನು ಕೊಲ್ಲುವ ಸೂಚನೆಯನ್ನು ತಿಲ್ಲು ತಾಜ್‌ಪುರಿ ಫೋನ್‌ ಕರೆಯ ಮೂಲಕ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ತಿಲ್ಲು ತಾಜ್‌ಪುರಿಯ ಹತ್ಯೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಿಹಾರ್ ಜೈಲಿನಲ್ಲಿ ಒಂದು ತಿಂಗಳೊಳಗೆ ನಡೆದ ಹಿಂಸಾಚಾರ ಮತ್ತು ಎರಡು ಗ್ರೂಪಿನ ನಡುವಿನ ಪೈಪೋಟಿಗೆ ಸಂಬಂಧಿಸಿದ ಎರಡನೇ ಪ್ರಕರಣ ಇದಾಗಿದೆ. ಕಳೆದ ತಿಂಗಳು, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕ ಪ್ರಿನ್ಸ್ ತೆವಾಟಿಯಾ ಅವರನ್ನು ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ತಿಹಾರ್ ಜೈಲಿನಲ್ಲಿ ಕೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...