Homeಮುಖಪುಟಚಾನೆಲ್ ಚಿತ್ರಾನ್ನ: ಸೀರಿಯಲ್ ತುಂಬ ‘ಮತ್ತೆ ಕಲ್ಯಾಣ’!

ಚಾನೆಲ್ ಚಿತ್ರಾನ್ನ: ಸೀರಿಯಲ್ ತುಂಬ ‘ಮತ್ತೆ ಕಲ್ಯಾಣ’!

- Advertisement -
- Advertisement -

ಅತ್ಯಂತ ಜನಪರ, ಜಾತ್ಯಾತೀತ ನಿಲುವುಗಳ ಮತ್ತು ಸಮತಾ ಭಾವದ ಉದ್ದೇಶ ಇಟ್ಟುಕೊಂಡಿರುವ ‘ಮತ್ತೆ ಕಲ್ಯಾಣ’ ಈಗ ಸಾಂದರ್ಭಿಕ ಎಡವಟ್ಟುಗಳ ಮೂಲಕ ಒಂದಿಷ್ಟು ಜಾಸ್ತಿನೇ ಟೀಕೆಗೊಳಗಾಗಿದೆ.

ಇರಲಿ, ಈಗ ನಾ ಹೇಳಾ ಲೆಕ್ಕದ ಪ್ರಕಾರ, ಸೀರಿಯಲ್‍ಗಳಲ್ಲಿ ‘ಮತ್ತೆ ಕಲ್ಯಾಣ’ ಆಂದೋಲನ ಬಲು ಜೋರಾಗೇ ನಡದೈತಿ… ಆದರೆ, ಸೀರಿಯಲ್‍ಗಳ ನಿರ್ದೇಶಕರಿಗೆ ಮಾತ್ರ ಪಕ್ಕಾ ಗೊತ್ತೈತಿ ‘ಮತ್ತೆ ಕಲ್ಯಾಣ’ ಆದ್ರ ಅಲ್ಲಿಗೆ ಧಾರಾವಾಹಿ ಖತಂ ಅಂತ್ಹೇಳಿ…

ಹೊರಗೆ ನಡೆಯುತ್ತಿರುವ ‘ಮತ್ತೆ ಕಲ್ಯಾಣ’ ಮತ್ತು ಈಗ ನಂಗ ಸೀರಿಯಲ್ ಒಳಗ ಸಿಕ್ಕಿರೋ ‘ಮತ್ತೆ ಕಲ್ಯಾಣ’ಕ್ಕೂ ಬಾಳ ಫರಕ್ (ತರೀಕೆರೆ ಮೇಷ್ಟ್ರು ಈ ನಮ್ ಪದಾನ್ನ ‘ಫರಕು’ ಅಂತಾ ಫೇಮಸ್ ಮಾಡ್ಯಾರ) ಐತಿ.

ಯಾವುದೇ ಮನರಂಜನಾ ಚಾನೆಲ್‍ಗಳಿಗೆ ಹೋಗಿ, ಅಲ್ಲಿರುವ ಕನಿಷ್ಠ ಎರಡು-ಮೂರು ಧಾರಾವಾಹಿಗಳಲ್ಲಿ ಕತೆ ನಿಂತಿರುವುದೇ ‘ಮತ್ತೆ ಕಲ್ಯಾಣ’ ಆಗಲಿ ಎಂಬ ದುರಾಶೆಯ ಮೇಲೆಯೇ! ಸದ್ಯ ಚಾಲ್ತಿಯಲ್ಲಿರುವ ಬಹುಪಾಲು ಸೀರಿಯಲ್‍ಗಳ ಸುತ್ತ ‘ಒಬ್ಬನಿಗಿಬ್ಬರು…’… ಆಗಲೇ ‘ಅವನ’ ಮದುವೆ ಆಗಿದ್ದರೂ ಅದನ್ನು ಮುರಿದು ಇನ್ನೊಂದು ‘ಕಲ್ಯಾಣ’ ಮಾಡಲು ನಡೆಸುವ ಕಸರತ್ತುಗಳೋ ಅಬ್ಬಬ್ಬಾ!

ಈ ಫಾರ್ಮುಲಾ ಜನರಿಗೆ ಬಹಳ ಇಷ್ಟವಾಗಿದೆಯೋ ಏನೋ ಗೊತ್ತಿಲ್ಲ! ಶೇಕಡಾ 70 ರಷ್ಟು ಧಾರಾವಾಹಿಗಳಲ್ಲಿ ಒಬ್ಬ ಹೀರೋ, ಇಬ್ಬರು ಹೀರೊಯಿನ್‍ಗಳು… ಇಬ್ಬರು ಹೀರೊಯಿನ್‍ಗಳಲ್ಲಿ ಒಬ್ಬಳು ಒಳ್ಳೆಯವಳು, ಇನ್ನೊಬ್ಬಳು ಕೆಟ್ಟವಳು! ವಿಚಿತ್ರ ಎಂದರೆ ನನಗೆ ಈ ‘ಕೆಟ್ಟ’ ಪಾತ್ರದ ಹುಡುಗಿಯರೇ ಕೆಲವೊಮ್ಮೆ ಇಷ್ಟ… ಆಹಾಹಾ. ಒಳ್ಳೊಳ್ಳೆ ಜೀನ್ಸ್, ಸಖತ್ ಹೇರ್‍ಸ್ಟೈಲ್, ಬಿಂದಾಸ್ ಮೇಕಪ್….ಆದರೆ ಏನ್ ಮಾಡೋದು ಅದೆಲ್ಲವನ್ನೂ ಈ ಮೆದುಳೇ ಇಲ್ಲದ ನಿರ್ದೇಶಕರು ನೆಗೆಟಿವ್ ಮಾಡಿಟ್ಟಿದ್ದಾರೆ.

ಎಲ್ಲ ಚಾನೆಲ್‍ಗಳಲ್ಲೂ ‘ಒಬ್ಬನಿಗಿಬ್ಬರು’ ಎಂಬ ಆಧಾರದಲ್ಲೇ ಬಹುಪಾಲು ಕತೆಗಳು ಓಡುತ್ತಿವೆ: ರಾಧಾ ರಮಣ, ಕಮಲಿ, ಇಷ್ಟ ದೇವತೆ, ಸೀತಾ ವಲ್ಲಭ, ಬ್ರಹ್ಮಗಂಟು (ಪಾಪ, ಗಂಟು ಬಿದ್ದಿದ್ದ ಎರಡನೇವಳನ್ನು ಡೈರೆಕ್ಟರ್ ಯಾವಾಗಲೋ ಓಡಿಸಿಬಿಟ್ಟ), ಕುಲವಧು……ಈ ಪಟ್ಟಿ ಹಾಗೇ ಬೆಳೆಯುತ್ತ ಹೋಗುತ್ತದೆ.

ಸೀರಿಯಲ್ ನೋಡದವರಿಗೆ ಅನಿಸಬಹುದು: ಅಂದ್ರೆ ಎಲ್ಲ ಕತೆ ಒಂದೇನಾ ಎಂದು… ನೋ ನೋ, ಅದರಲ್ಲೂ ಪರ್ಮುಟೇಷನ್ ಮತ್ತು ಕಾಂಬಿನೇಷನ್ ಇರ್ತಾವೆ… ಮುಂದ್ಲ ವಾರ ನೋಡಾಕ್ರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...