HomeಮುಖಪುಟNCP ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶರದ್ ಪವಾರ್: ಬೆಂಬಲಿಗರ ಪ್ರತಿಭಟನೆ

NCP ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶರದ್ ಪವಾರ್: ಬೆಂಬಲಿಗರ ಪ್ರತಿಭಟನೆ

- Advertisement -
- Advertisement -

ಹಿರಿಯ ರಾಜಕಾರಣಿ ಶರದ್ ಪವಾರ್‌ರವರು NCP ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಮುಂಬೈನ ಕಾರ್ಯಕ್ರಮವೊಂದರಲ್ಲಿ ಈ ನಿರ್ಧಾರ ಘೋಷಿಸಿರುವ ಅವರು, ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರೂ ಸಹ ಸಕ್ರಿಯ ರಾಜಕಾರಣದಲ್ಲಿರುತ್ತೇನೆ ಎಂದಿದ್ದಾರೆ.

ಮುಂಬೈನ ಯಶವಂತ್‌ರಾವ್ ಚವಾಣ್ ಪ್ರತಿ‍ಷ್ಠಾನದಲ್ಲಿ ತಮ್ಮ ಆತ್ಮ ಚರಿತ್ರೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, “ನಾನು NCP ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ. ಆದರೆ ನಿವೃತ್ತಿಯಾಗುವುದಿಲ್ಲ. ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ. ಮುಂದೆಯು ಸಾರ್ವಜನಿಕ ಸಭೆಗಳು, ರ್ಯಾಲಿಗಳಲ್ಲಿ ಭಾಗವಹಿಸುತ್ತೇನೆ. ನಾನು ದೆಹಲಿಯಲ್ಲಿರಲಿ, ಮುಂಬೈ ಅಥವಾ ಪುಣೆಯಲ್ಲಿರಲಿ ಎಂದಿನಿಂದ ನಿಮಗೆ ಸಿಗುತ್ತೇನೆ” ಎಂದಿದ್ದಾರೆ.

1960 ರ ಮೇ 1 ರಂದು ಸಕ್ರಿಯ ರಾಜಕಾರಣಕ್ಕೆ ಇಳಿದೆ. ಈಗ 2023ರ ಮೇ 1 ರಂದು ಕೆಳಗಿಳಿಯುವುದು ಅನಿವಾರ್ಯ ಅನಿಸುತ್ತಿದೆ. ಹಾಗಾಗಿ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ ಎಂದಿದ್ದಾರೆ.

ನನ್ನ ರಾಜ್ಯಸಭಾ ಸದಸ್ಯತ್ವದ ಅವಧಿ ಇನ್ನೂ ಮೂರು ವರ್ಷವಿದೆ. ಸಂಸತ್ತಿನಲ್ಲಿ ಮಹಾರಾಷ್ಟ್ರ ಮತ್ತು ಭಾರತದ ಕುರಿತು ಮಾತನಾಡುತ್ತೇನೆ. ಬೇರೆ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ. ಆದರೆ ತಮ್ಮ ಉತ್ತರಾಧಿಕಾರಿ ಯಾರು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ. ಬದಲಿಗೆ ಒಂದು ಸಮಿತಿಯನ್ನು ರಚಿಸಿದ್ದು ಆ ಸಮಿತಿಯು ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಸಮಿತಿಯಲ್ಲಿ ಪವಾರ್ ಮಗಳಾದ ಸುಪ್ರಿಯಾ ಸುಳೆ, ಸಹೋದರನ ಮಕ್ಕಳಾದ ಅಜಿತ್ ಪವಾರ್, ಪ್ರಫುಲ್ ಪಟೇಲ್, ಜಯಂತ್ ಪಟೇಲ್, ಅನಿಲ್ ದೇಶ್‌ಮುಖ್, ರಾಜೇಶ್ ಟೋಪೆ, ಛಗನ್ ಭುಜ್ಬಾಲ್ ಮತ್ತು ಇತರರು ಇದ್ದಾರೆ.

ಶರದ್ ಪವಾರ್‌ರವರು 1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿತರಾದ ನಂತರ ಪಿ.ಎ ಸಂಗ್ಮಾ ಮತ್ತು ತಾರೀಖ್ ಅನ್ವರ್ ಜೊತೆಗೂಡಿ ಎನ್‌ಸಿಪಿ ಕಟ್ಟಿದ್ದರು. ಅವರು ನಾಲ್ಕು ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿದ್ದಾರೆ. ಅಲ್ಲದೇ ಕೇಂದ್ರ ರಕ್ಷಣಾ ಸಚಿವ ಮತ್ತು ಕೃಷಿ ಮಂತ್ರಿಯೂ ಆಗಿದ್ದರು.

ಬೆಂಬಲಿಗರ ಪ್ರತಿಭಟನೆ

ಶರದ್ ಪವಾರ್‌ರವರ ಈ ನಿರ್ಧಾರ ಪ್ರಕಟಿಸುತ್ತಿದ್ದಂತೆ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಪವಾರ್ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿ ಸಮಾಧಾನಪಡಿಸಿದ್ದಾರೆ.

ಇದನ್ನೂ ಓದಿ: ಬಜರಂಗದಳ, ಪಿಎಫ್‌ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....