Homeಮುಖಪುಟ'ಮೋದಿ ಸರ್‌ನೇಮ್‌' ಹೇಳಿಕೆ ಪ್ರಕರಣ: ರಾಹುಲ್‌ ಗಾಂಧಿಗೆ ಮಧ್ಯಂತರ ರಕ್ಷಣೆ ನಿರಾಕರಿಸಿದ ಗುಜರಾತ್ ಹೈಕೋರ್ಟ್

‘ಮೋದಿ ಸರ್‌ನೇಮ್‌’ ಹೇಳಿಕೆ ಪ್ರಕರಣ: ರಾಹುಲ್‌ ಗಾಂಧಿಗೆ ಮಧ್ಯಂತರ ರಕ್ಷಣೆ ನಿರಾಕರಿಸಿದ ಗುಜರಾತ್ ಹೈಕೋರ್ಟ್

- Advertisement -
- Advertisement -

‘ಮೋದಿ ಸರ್‌ನೇಮ್’ ಹೇಳಿಕೆಯ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಯಾವುದೇ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ದೋಷಾರೋಪಣೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ಕಾಯ್ದಿರಿಸಿದ್ದಾರೆ.

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಧಿಸಲಾಗಿದ್ದ 2 ವರ್ಷ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದ್ದು, ಇದರಿಂದ ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರಿಗೆ ಮತ್ತೆ ರಿಲೀಫ್‌ ಸಿಕ್ಕಿಲ್ಲ. ಬೇಸಿಗೆ ರಜೆಯ ನಂತರ ಅಂದರೆ, ಜೂನ್ 4 ರ ಬಳಿಕ ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ತೀರ್ಪು ಪ್ರಕಟಿಸಲಿದ್ದಾರೆ. ರಾಹುಲ್‌ ಗಾಂಧಿ ಸಲ್ಲಿಸಿರುವ ಅರ್ಜಿಯ ಮೇಲೆ ಆದೇಶ ನೀಡಲಿದೆ.

ರಾಹುಲ್ ಗಾಂಧಿ ಅವರ ಮೇಲೆ ‘ಮೋದಿ ಸರ್‌ನೇಮ್’ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು, ರಾಹುಲ್ ತಪ್ಪಿತಸ್ಥ ಎಂದು ಹೇಳಿ, ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿತ್ತು. ಇದರಿಂದ ಅವರು ಸಂಸತ್ ಸದಸ್ಯತ್ವದಿಂದ ಅನರ್ಹರಾದರು.

ಆ ಬಳಿಕ ರಾಹುಲ್ ಅವರು ನ್ಯಾಯಾಲಯದ ಆರೋಪಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ನಡೆಸಿತು. ರಾಹುಲ್ ಪರ ವಕೀಲರು, ಈ ಅಪರಾಧವು ಸ್ವಭಾವತಃ ಗಂಭೀರವಾಗಿಲ್ಲ ಮತ್ತು ನೈತಿಕ ಕ್ಷೋಭೆಯನ್ನು ಒಳಗೊಂಡಿಲ್ಲ ಮತ್ತು ರಾಹುಲ್ ಗಾಂಧಿಯವರ ಅನರ್ಹತೆಯಿಂದ ಅವರ ಮತ್ತು ಅವರ ಕ್ಷೇತ್ರದ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.

ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಸಲ್ಲಿಸಿದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ಇದನ್ನೂ ಓದಿ: ರಾಹುಲ್ ಶಿಕ್ಷೆ ತಡೆಗೆ ಮೇಲ್ಮನವಿ: ವಿಚಾರಣೆಯಿಂದಲೇ ಹಿಂದೆ ಸರಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ

ಪ್ರಕರಣದ ಹಿನ್ನೆಲೆ:

2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು, ”ಎಲ್ಲಾ ಕಳ್ಳರಿಗೂ ಮೋದಿ ಎಂಬ ಹೆಸರು ಏಕೆ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ರಾಹುಲ್ ಗಾಂಧಿ ಮೇಲೆ ಸೂರತ್ ಪಶ್ಚಿಮ ಶಾಸಕ ಪೂರ್ಣೇಶ್ ಮೋದಿ ಅವರು ಕ್ರಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧೀಸಿದಂತೆ ಮಾರ್ಚ್ 23 ರಂದು ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್‌ಗೆ ಎರಡು ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಿತ್ತು.

1951ರ ಪ್ರಜಾಪ್ರತಿನಿಧಿ ಕಾಯ್ದೆಯ 8ನೇ ಪರಿಚ್ಛೇದದೊಂದಿಗೆ, ಭಾರತದ ಸಂವಿಧಾನದ 102(1)(ಇ) ವಿಧಿಯ ನಿಬಂಧನೆಗಳ ಪ್ರಕಾರ, ಮಾರ್ಚ್ 23, 2023 ರಿಂದ (ಶಿಕ್ಷೆಯಾದ ದಿನಾಂಕದಿಂದ) ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲಿನ ದೋಷಾರೋಪನೆಗೆ ತಡೆ ಕೋರಿ ಸಲ್ಲಿಸಿದ ಮನವಿಯನ್ನು ಏಪ್ರಿಲ್ 20 ರಂದು ಸೂರತ್ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಬಿನ್ ಮೊಗೇರಾ ಅವರು ತಿರಸ್ಕರಿಸಿದ್ದರು.

ಗಾಂಧಿಯವರು ಗುಜರಾತ್ ಹೈಕೋರ್ಟ್‌ನ ಮುಂದೆ ಸಲ್ಲಿಸಿದ ಮನವಿಯಲ್ಲಿ, ಅಸಮಪಾರ್ಶ್ವದ ಶಿಕ್ಷೆಯ ಆಧಾರದ ಮೇಲೆ ಮತ್ತು ಅಂತಹ ಶಿಕ್ಷೆಯು ಲೋಕಸಭೆಯ ಸದಸ್ಯತ್ವವನ್ನು ಅನರ್ಹಗೊಳಿಸುವ ಮೂಲಕ ತನಗೆ ಬದಲಾಯಿಸಲಾಗದ ಹಾನಿಯನ್ನುಂಟುಮಾಡಿದೆ ಎಂದು ತನ್ನ ಅಪರಾಧವನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ನ್ಯಾಯಾಲಯವು ಗಾಂಧಿಗೆ ಜಾಮೀನು ಮಂಜೂರು ಮಾಡಿದರೂ, ಶಿಕ್ಷೆಗೆ ತಡೆಯಾಜ್ಞೆ ನೀಡುವ ಅವರ ಮನವಿಯನ್ನು ಅದು ತಿರಸ್ಕರಿಸಿತು.

ಕಳೆದ ಬುಧವಾರ, ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಗೀತಾ ಗೋಪಿ ಅವರು ಈ ಪ್ರಕರಣವನ್ನು ತುರ್ತು ವಿಚಾರಣೆಗಾಗಿ ತಮ್ಮ ಮುಂದೆ ಹಾಜರುಪಡಿಸಿದ ನಂತರ ವಿಚಾರಣೆಯಿಂದ ಹಿಂದೆ ಸರಿದಿದ್ದರು. ನಂತರ ಪ್ರಕರಣವನ್ನು ನ್ಯಾಯಮೂರ್ತಿ ಪ್ರಚ್ಛಕ್ ಅವರಿಗೆ ವಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...