Homeಅಂಕಣಗಳುನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

ನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

- Advertisement -
- Advertisement -
  • ಎಚ್.ಎಸ್.ದೊರೆಸ್ವಾಮಿ |

27.05.2018ರ ಪ್ರಜಾವಾಣಿ ಪತ್ರಿಕೆಯಲ್ಲಿ ಒಂದು ಜಾಹೀರಾತು ಅಚ್ಚಾಗಿದೆ. ಮಾದಿಗ ಜನಾಂಗದವರು ಕಾಂಗ್ರೆಸ್ಸನ್ನು ಚಿಂದಿ ಮಾಡಿದೆವು ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಜಾಹೀರಾತು ಅದು.

ಮಾದಿಗರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕೆಂದು ನಾಲ್ಕಾರು ವರ್ಷಗಳಿಂದ ಕರ್ನಾಟಕದಲ್ಲಿ ಚಳವಳಿ ನಡೆಯುತ್ತಿದೆ. ನ್ಯಾಯಮೂರ್ತಿ ಸದಾಶಿವ ಅವರು ಕೂಡ ತಮ್ಮ ವರದಿಯಲ್ಲಿ ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹೀಗಿದ್ದೂ ಸಿದ್ದರಾಮಯ್ಯನವರ ಸರ್ಕಾರ ಮಾದಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿಲ್ಲ. ಇತ್ತೀಚೆಗೆ ವಿಭಜನೆಗೊಂಡ ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತರ ಹಣೆಪಟ್ಟಿಗೆ ಶಿಫಾರಸ್ಸು ಮಾಡಿ, ಆ ಮೂಲಕ ಅವರಿಗೆ ಮೀಸಲಾತಿ ಸೌಲಭ್ಯಕ್ಕೂ ಅವಕಾಶ ಕಲ್ಪಿಸಿದÀ ಸರ್ಕಾರ ಮಾದಿಗ ಸಮುದಾಯದ ಬಹಳ ದಿನಗಳ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಮಾದಿಗ ಮುಖಂಡರು ಕಾಂಗ್ರೆಸ್ಸಿಗೆ ಈ ಬಾರಿ ನಾವು ಮತ ಹಾಕುವುದಿಲ್ಲವೆಂದು ಘೋಷಣೆ ಕೂಡ ಮಾಡಿದ್ದರು. ನಾನಾಕಾರಣಗಳಿಂದ ಈ ಸಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ 78 ಉಮೇದುವಾರರು ಮಾತ್ರ ಗೆದ್ದು ಬಂದರು. ಭಾಜಪ, ಕಾಂಗ್ರೆಸ್, ಜಾತ್ಯತೀತ ಜನತಾದಳದ ಯಾರಿಗೂ ಬಹುಮತ ದೊರಕಲಿಲ್ಲ. ಈಗ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳದ ಸಂಯುಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಲಿ ಸರ್ಕಾರ ಕೂಡಲೇ ತಡಮಾಡದೆ ವಂಚಿತ ಮಾದಿಗ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡಬೇಕು ಹಾಗೂ ಆ ಸಮುದಾಯದ ಆದರಕ್ಕೆ ಪಾತ್ರರಾಗಬೇಕು.

ಹಾಗೆಯೇ ಮಾದಿಗ ಸಮುದಾಯದವರು ಒಂದು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾರಿಗೋ ಅಪಶಕುನ ಮಾಡಲು ಹೋಗಿ ತನ್ನ ಮೂಗನ್ನೇ ಕೊಯ್ದುಕೊಂಡಂತಾಗಬಾರದು. ಒಳಮೀಸಲಾತಿ ಒದಗಿಸಲಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್‍ಅನ್ನು ಚಿಂದಿ ಮಾಡುವ ಆವೇಶದಲ್ಲಿ, ಸಂವಿಧಾನವನ್ನೇ ಬುಡಮೇಲು ಮಾಡುವ ಹಾಗೂ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡಲು ಹವಣಿಸುತ್ತಿರುವ ಶಕ್ತಿಗಳ ಕಡೆಗೆ ವಾಲುವಂತಾಗಬಾರದು. ಹಾಗಾದರೆ ನಮ್ಮ ಕಾಲನ್ನು ನಾವೇ ಕತ್ತರಿಸಿಕೊಂಡಂತೆ.

ಮಾದಿಗ ಸಮುದಾಯದ ಜಾಹೀರಾತನ್ನು ಮತ್ತೊಂದು ದೃಷ್ಟಿಯಿಂದ ಗಮನಿಸಿ ಅರ್ಥಮಾಡಿಕೊಳ್ಳಬೇಕಾದ ಜರೂರಿದೆ. ಸ್ವತಂತ್ರ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ಕುರಿತು ನಾವೆಲ್ಲ ಚಿಂತನೆ ಮಾಡಬೇಕು. ಕೆಂಗಲ್ ಹನುಮಂತಯ್ಯನವರು ಮೈಸೂರು ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದ ಸಮಯದಲ್ಲಿ ವಿಧಾನಸಭೆಯ ಚುನಾವಣೆ ಬಂತು. ಕಾಂಗ್ರೆಸ್ ಉಮೇದುವಾರರ ಆಯ್ಕೆಯೂ ಆಯ್ತು. ಬಲಿಜ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‍ನ ಹಿರಿಯ ಧುರೀಣ ಕೆ.ಪಟ್ಟಾಬಿರಾಮನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲಾಗಿತ್ತಾದರೂ, ಅವರು ಅಲ್ಪಸಂಖ್ಯಾತ ಸಮುದಾಯದವರ ಆಯ್ಕೆಯ ಕ್ರಮವನ್ನು ಒಪ್ಪದೆ ತಮಗೆ ನೀಡಿದ್ದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರು. ಅವರು ಹನುಮಂತಯ್ಯನವರಿಗೆ ಒಂದು ಪತ್ರ ಬರೆದು ‘ನೀವು ವಿಚಾರವಂತರು, ಆಧುನಿಕರು. ಉಮೇದುವಾರರ ಆಯ್ಕೆಯಲ್ಲಿ ಹೊಸ ವಿಧಾನವನ್ನು ಅನುಸರಿಸುವಿರಿ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಒಕ್ಕಲಿಗರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಒಕ್ಕಲಿಗರನ್ನು ಮತ್ತು ಲಿಂಗಾಯತರು ಜಾಸ್ತಿ ಇರುವ ಕ್ಷೇತ್ರಗಳಲ್ಲಿ ಲಿಂಗಾಯತ ಉಮೇದುವಾರರನ್ನೇ ಆಯ್ಕೆ ಮಾಡಿದ್ದಿರಿ. ಈ ಹಳೆಯ ಸಂಪ್ರದಾಯವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಒಕ್ಕಲಿಗ, ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಉಮೇದುವಾರರನ್ನಾಗಿ ನಿಲ್ಲಿಸಿ, ಗೆಲ್ಲಿಸುವಿರೆಂದು ಭಾವಿಸಿದ್ದೆ. ನೀವು ಕೂಡ ಹಿಂದಿನ ಅಧ್ಯಕ್ಷರುಗಳಂತೆ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ ಕೆಲಸ ಮಾಡಿದ್ದೀರಿ. ಇದನ್ನು ವಿರೋಧಿಸಿ ನಾನು ನೀವು ನೀಡಿರುವ ಟಿಕೆಟ್‍ಅನ್ನು ಹಿಂದಿರುಗಿಸುತ್ತಿದ್ದೇನೆ. ನಾನು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದ್ದರು. ಅದರಂತೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕೋಲಾರದಲ್ಲಿ ನಿಂತು ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬಂದಿದ್ದರು. ಇಂಥಾ ಆದರ್ಶಗಳೆಲ್ಲಾ ಈಗ ಎಲ್ಲಿ ಮಾಯವಾದವು?

ಇಂದು ಕಾಂಗ್ರೆಸ್ ಮಾತ್ರವಲ್ಲ, ಎಲ್ಲ ಪಕ್ಷಗಳಲ್ಲೂ ಬಹುಸಂಖ್ಯೆಯಲ್ಲಿರುವ ಜಾತಿಗಳ ಉಮೇದುವಾರರನ್ನೇ ಹುಡುಕಿ ಹುಡುಕಿ ಉಮೇದುವಾರರನ್ನಾಗಿ ಮಾಡುವ ಚಾಳಿ ವ್ಯಾಪಿಸಿದೆ. ಅಲ್ಪಸಂಖ್ಯೆಯ ಸಮುದಾಯಗಳನ್ನು ಕಡೆಗಣಿಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯೆಂದರೆ ‘ನಿಮಗೆ ಜಾತಿಯ ಜಾತಿಯ ಬಲವಿದೆಯೆ? ನಿಮ್ಮಲ್ಲಿ ಕೋಟಿ ಕೋಟಿ ಹಣವಿದೆಯೆ? ನೀವು ಗೆಲ್ಲುವ ಕುದುರೆಯೆ?’ ಎಂಬ ಅಂಶಗಳ ಆಧಾರದ ಮೇಲೆ ಉಮೇದುವಾರರನ್ನು ಆಯ್ಕೆ ಮಾಡಲಾಗುತ್ತಿದೆ. ದೀನದಲಿತರು, ಅಲ್ಪಸಂಖ್ಯಾತರನ್ನು ಈ ಮೂಲಕ ಕಡೆಗಣಿಸಲಾಗುತ್ತಿದೆ.

ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಡ್ಡಾಯ ಮೀಸಲಾತಿ ಇರುವುದರಿಂದ, ವಿಧಿಯಿಲ್ಲದೆ ರಾಜಕೀಯ ಪಕ್ಷಗಳು ಅವರಿಗೆ ಉಮೇದುವಾರಿಕೆ ನೀಡುತ್ತಿವೆ. ಈ ಮೀಸಲಾತಿ ವ್ಯವಸ್ಥೆ ಇಲ್ಲದೆ ಹೋಗಿದ್ದರೆ ಈ ರಾಜಕೀಯ ಪಕ್ಷಗಳು ಬಹುಸಂಖ್ಯೆಯ ಹಾಗೂ ಬಲಾಢ್ಯ ಜನಾಂಗದವರಿಗೇ ಎಲ್ಲ ಸೀಟುಗಳನ್ನು ಹಂಚಿಬಿಡುತ್ತಿದ್ದರು ಎಂಬುದರಲ್ಲಿ ಯಾರಿಗೂ ಅನುಮಾನ ಬೇಡ.

ಜನಸಂಖ್ಯೆಯ ಅನುಪಾತದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗರಿಗೆ ಸಿಗಬೇಕಾಗಿದ್ದ ಪ್ರಾತಿನಿಧ್ಯ 57 ಶಾಸಕ ಸ್ಥಾನಗಳು ಮಾತ್ರ. ಆದರೆ 2018ರ ಚುನಾವಣೆಯಲ್ಲಿ ಗೆದ್ದು ಬಂದಿರುವ ಲಿಂಗಾಯತ ಮತ್ತು ಒಕ್ಕಲಿಗರ ಪ್ರಾತಿನಿಧ್ಯ 117. ಅಲ್ಪಸಂಖ್ಯಾತರನ್ನು ಕಡೆಗಣಿಸಿರುವುದಕ್ಕೆ ಜೀವಂತ ನಿದರ್ಶನ ಇದು. ಪ್ರಜಾತಂತ್ರದ ಮೂಲ ಆಶಯವನ್ನೇ ದುರ್ಬಲಗೊಳಿಸುತ್ತಿರುವ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ತುರ್ತು ಬಂದೊದಗಿದೆ.

ಬಿಜೆಪಿಯಂತೂ ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಟಿಕೆಟ್ ಕೊಡಬಾರದು ಎಂಬ ತೀರ್ಮಾನ ಮಾಡಿ ಎಷ್ಟೋ ವರ್ಷಗಳಾದವು. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಒಕ್ಕಲಿಗ ಮತ್ತು ಲಿಂಗಾಯತ ರಾಜಕಾರಣಿಗಳಿಗೆ ಸಿಂಹಪಾಲು ಹಂಚಿಕೆ ಮಾಡುತ್ತಿವೆ. ಬಿಜೆಪಿ ಪಕ್ಷವು ಈ ಮಲತಾಯಿ ಮಾತ್ಸರ್ಯದ ಜೊತೆಗೆ, ಅಲ್ಪಸಂಖ್ಯಾತ ಧಾರ್ಮಿಕರನ್ನು ಮೂಲೆಗುಂಪು ಮಾಡುವ ಧೋರಣೆಯನ್ನೂ ಅಳವಡಿಸಿಕೊಂಡಿದೆ.

ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರಿರುವ ಕ್ಷೇತ್ರದಲ್ಲಿ ನಿಲ್ಲಿಸಿ, ನಿಮ್ಮ ಗೆಲುವು ನಮ್ಮ ಹೊಣೆ ಎಂದು ಬಹುಸಂಖ್ಯಾತರು ಘೋಷಣೆ ಮಾಡುವಂತಾಗಬೇಕು. ಆಗ ಸಾಮಾಜಿಕ ನ್ಯಾಯ ಎಲ್ಲ ಜನಾಂಗದವರಿಗೂ ದೊರಕಿಸಿಕೊಟ್ಟಂತಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...