Homeಕರ್ನಾಟಕಜಿಎಸ್‌ಟಿ ಹಣ ಬಡವರ ಬದುಕಿಗೋ?, ಒಂದೆರಡು ಕಂಪನಿಗಳ ಉದ್ಧಾರಕ್ಕೋ?: ಎಚ್‌ಡಿಕೆ ಪ್ರಶ್ನೆ

ಜಿಎಸ್‌ಟಿ ಹಣ ಬಡವರ ಬದುಕಿಗೋ?, ಒಂದೆರಡು ಕಂಪನಿಗಳ ಉದ್ಧಾರಕ್ಕೋ?: ಎಚ್‌ಡಿಕೆ ಪ್ರಶ್ನೆ

- Advertisement -
- Advertisement -

ದೇಶದ ಜನರು ಇಂತಹ ಕಷ್ಟದ ಸಮಯದಲ್ಲೂ ತೆರಿಗೆ ಕಟ್ಟುತ್ತಿದ್ದಾರೆ. ಆ ಹಣ ಬಡವರ ಬದುಕಿಗೆ ಉಪಯೋಗ ಆಗುತ್ತಿದೆಯೋ ಅಥವಾ ಒಂದೆರಡು ಕಂಪನಿಗಳ ಉದ್ಧಾರ ಮಾಡಲು ಬಳಕೆಯಾಗುತ್ತಿದೆಯೋ ಎಂಬುದನ್ನು ಜನರ ಮುಂದಿಡಬೇಕು. ಏಕೆಂದರೆ ದೇಶದಲ್ಲಿ ಜಿಎಸ್‌ಟಿ ತೆರಿಗೆ ದಾಖಲೆ ಪ್ರಮಾಣದಲ್ಲಿ ಸಂಗ್ರಹ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಯಚೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ”ಕರ್ನಾಟಕದ 10 ಜಿಲ್ಲೆಯಲ್ಲಿ ಬಡತನವಿದೆ ಎಂದು ಕೇಂದ್ರದ ವರದಿಯಲ್ಲಿದೆ. ರಾಯಚೂರು ಜಿಲ್ಲೆಯ ಅಪೌಷ್ಟಿಕತೆ ಸಮಸ್ಯೆಗೆ ಬಿಜೆಪಿ ಸರ್ಕಾರ ಏನು ಪರಿಹಾರ ಕಲ್ಪಿಸಿದೆ ಎನ್ನುವುದನ್ನು ಪ್ರಧಾನಮಂತ್ರಿ ರಾಯಚೂರು ಜಿಲ್ಲೆಯ ಸಿಂಧನೂರಿಗೆ ಬಂದಾಗ ಹೇಳಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು ರಾಜ್ಯ ಚುನಾವಣಾ ಪ್ರಚಾರಕ್ಕೆ ಬರುತ್ತಿರುವ ಬಗ್ಗೆ ಮಾತನಾಡಿದ ಅವರು, ”ಎರಡೂ ರಾಷ್ಟ್ರೀಯ ಪಕ್ಷಗಳ ಉತ್ತರ‌ ಭಾರತದ ನಾಯಕರಿಗೆ ಕರ್ನಾಟಕದ ಮೇಲೆ ಇತ್ತೀಚೆಗೆ ಪ್ರೀತಿ ಹೆಚ್ಚಾಗಿದೆ. ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹ ಸಚಿವರು ರಾಜ್ಯ ಬಿಟ್ಟು ಅಲಗಾಡುತ್ತಿಲ್ಲ. ಈ ಬಾರಿ ಕರ್ನಾಟಕದ ಜನರು ಹಣಬಲಕ್ಕಿಂತ ಜನಬಲ ಗೆಲ್ಲುತ್ತದೆ ಎಂಬುದನ್ನು ತೋರಿಸಲಿದ್ದಾರೆ” ಎಂದರು.

ಇದನ್ನೂ ಓದಿ: ಸಿಟಿ ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ: ಕೈ ಅಭ್ಯರ್ಥಿ ಪರ ಜೆಡಿಎಸ್ ಮುಖಂಡನ ಪ್ರಚಾರ

”ಬಿಜೆಪಿಯವರು 70 ಸೀಟು ಪಡೆಯಲು ಬೆವರು ಹರಿಸಬೇಕಾಗುತ್ತದೆ. ಈ ಸಲ ಪ್ರತಿ ಜಿಲ್ಲೆಯಲ್ಲಿ ಜೆಡಿಎಸ್ ಖಾತೆ ತೆರೆಯಲಿದೆ. ಉತ್ತರ ಕರ್ನಾಟಕ ಭಾಗದಲ್ಲಿಯೇ ಕನಿಷ್ಠ‌ 35 ಸ್ಥಾನಗಳನ್ನು ಪಡೆಯುತ್ತಿದ್ದೇವೆ. ದೇವೇಗೌಡರನ್ನು ಭೇಟಿ ಮಾಡಿದ ಧೂತರು ಯಾರು ಎಂಬುದು ಚುನಾವಣೆ ಬಳಿಕ ಬಹಿರಂಗವಾಗಲಿದೆ” ಎಂದು ಮೈತ್ರಿ ಸರ್ಕಾರ ರಚನೆಯ ಬಗ್ಗೆ ಸುಳಿವು ನೀಡಿದರು.

”ಸಮೀಕ್ಷೆಗಳನ್ನು ಹಣ ಕೊಟ್ಟು ಮಾಡಿಸುತ್ತಾರೆ. ಈ ಮೂಲಕ ಜನರ‌ ಭಾವನೆಗಳನ್ನು ಕದಡುವ ಯತ್ನ‌ ಮಾಡುತ್ತಿದ್ದಾರೆ. ಬಿಜೆಪಿ ಪ್ರಣಾಳಿಕೆಯಲ್ಲಿ ಜೆಡಿಎಸ್ ಪಂಚರತ್ನ ಯೋಜನೆಗಳನ್ನೇ ಬಹುತೇಕ ನಕಲು ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, ”ಬಿಜೆಪಿಯವರ ಹೆಲಿಕಾಪ್ಟರ್ ಹಾರಿದ ನಂತರ ಬೇರೆ ಪಕ್ಷದವರ ಹೆಲಿಕಾಪ್ಟರ್ ಹಾರಲು ಅನುಮತಿ ನೀಡುತ್ತಿದ್ದಾರೆ. ಚುನಾವಣೆ ಆಯೋಗ ಈ ಬಗ್ಗೆ ಗಮನಹರಿಸಬೇಕಾಗಿತ್ತು. ಆದರೆ ಅದು ಆಗುತ್ತಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...