Homeಕರ್ನಾಟಕತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

ತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, “ಪ್ರಧಾನಿಗೆ ಜನರ ಬಗ್ಗೆ ಕಾಳಜಿ ಇಲ್ಲ ಬದಲಿಗೆ ಅನುಕಂಪ ಪಡೆಯಲು ನಿಮ್ಮ ಬಳಿ ಅಳುತ್ತಾರೆ” ಎಂದು ಹೇಳಿದ್ದಾರೆ.

ಹೊಸಕೋಟೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, ”ತನ್ನನ್ನು ನಿಂದಿಸುತ್ತಿದ್ದಾರೆ ಎಂದು ಜನರ ಬಳಿ ಹೇಳಿಕೊಂಡು ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಧಾನಿಯನ್ನು ಇದೇ ಮೊದಲಬಾರಿಗೆ ನೋಡುತ್ತಿದ್ದೇನೆ” ಎಂದು ಗೇಲಿ ಮಾಡಿದ್ದಾರೆ.

ಬಿಜೆಪಿಯನ್ನು ವ್ಯಂಗ್ಯವಾಡಿದ ಅವರು, ಕೇಸರಿ ಪಕ್ಷವು ಪ್ರಜಾಪ್ರಭುತ್ವವನ್ನೇ ಕದಿಯುತ್ತಿದೆ ಎಂದರು. ಹಳೆಯ ಪಕ್ಷವಾದ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

”ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಾನಾ ತರಹದ ಕಳ್ಳರಿದ್ದಾರೆ, ಕೆಲವರು ಮನೆಗಳಲ್ಲಿ ಕಳ್ಳತನ ಮಾಡುತ್ತಾರೆ… ಈಗ ಸರ್ಕಾರವನ್ನೇ ಕದಿಯುವ ಕಳ್ಳರು ಕೂಡ ಬಂದಿದ್ದಾರೆ, ಪ್ರಜಾಪ್ರಭುತ್ವವನ್ನೇ ಕದಿಯುತ್ತಿದ್ದಾರೆ… ಅದನ್ನು ತಡೆಯಿರಿ…,” ಎಂದು ಪ್ರಿಯಾಂಕಾ ಹೇಳಿದರು.

ಮಾಜಿ ಕಾಂಗ್ರೆಸ್ ಸಂಸದರು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧರಾಗಿದ್ದಾರೆ. ರಾಹುಲ್‌ ಗಾಂಧಿ ಅವರನ್ನು ನೋಡಿ ಪಾಠ ಕಲಿಯಿರಿ ಎಂದು ಈ ಹಿಂದೆ ಏಪ್ರಿಲ್ 30ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರೀಯಾಂಕಾ ಹೇಳಿದರು.

ಇದನ್ನೂ ಓದಿ: ‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಜಮಖಂಡಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ”ಸಾರ್ವಜನಿಕರ ಮುಂದೆ ನಿಂದನೆಯಾಗುತ್ತಿದೆ ಎಂದು ಹೇಳುವ ಮೊದಲ ಪ್ರಧಾನಿಯನ್ನು ನಾನು ನೋಡಿದ್ದೇನೆ, ಪ್ರಧಾನಿ ಬಳಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಪಟ್ಟಿ ಇಲ್ಲ, ಆದರೆ ನಿಂದನೆಯ ಪಟ್ಟಿ ಇದೆ. ಮೋದಿಜೀ , ‘ಗಾಲಿ ಕ್ಯಾ ಮೇ ದೇಶ್ ಕೆ ಲಿಯೇ ಗೋಲಿ ಖಾ ಲುಂಗಾ’ ಎಂದು ಹೇಳುವ ನನ್ನ ಸಹೋದರನಿಂದ (ರಾಹುಲ್ ಗಾಂಧಿ) ಪಾಠ ಕಲಿಯಿರಿ” ಎಂದು ಹೇಳಿದರು.

”ನನ್ನ ಕುಟುಂಬದ ಮೇಲೆ ಎಸೆದಿರುವ ನಿಂದನೆಗಳ ಸಂಖ್ಯೆಯನ್ನು ನಾನು ಎಣಿಸಲು ಪ್ರಾರಂಭಿಸಿದರೆ ಮತ್ತು ಬಿಜೆಪಿಯ ಒಬ್ಬೊಬ್ಬರ ಹೆಸರ ಮೇಲೂ ನಾನು ಹಲವಾರು ಪುಸ್ತಕಗಳನ್ನು ಪ್ರಕಟಿಸಬೇಕಾಗಬಹುದು” ಎಂದು ಹೇಳಿದರು.

ಮೊನ್ನೆ ಭಾನುವಾರ ಬೆಳಗಾವಿಯ ಕುಡಚಿಯಲ್ಲಿ ಪ್ರಿಯಾಂಕಾ ಗಾಂಧಿ ಅವರು ರೋಡ್‌ಶೋ ನಡೆಸಿದರು. ಈ ವೇಳೆ, ”ಹಣದುಬ್ಬರವನ್ನು ತಂದವರು ಯಾರು? ಜನರನ್ನು ಲೂಟಿ ಮಾಡಿದವರು ಯಾರು? ಜಿಎಸ್‌ಟಿಯನ್ನು ತಂದು ನಿಮ್ಮನ್ನು ತೊಂದರೆಗೊಳಿಸಿದ್ದು ಯಾರು? 40% ಕಮಿಷನ್ ಸರ್ಕಾರವನ್ನು ನಡೆಸುವವರು ಯಾರು?” ಸರಣಿ ಪ್ರಶ್ನೆಗಳನ್ನು ಕೇಳಿದ್ದರು.

”ಬಿಜೆಪಿಯು ಸುಳ್ಳು ಭರವಸೆಗಳನ್ನು ನೀಡುತ್ತದೆ ಮತ್ತು ಎಂದಿಗೂ ಈಡೇರಿಸುವುದಿಲ್ಲ. ಆದರೆ ಕಾಂಗ್ರೆಸ್ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಕಾಂಗ್ರೆಸ್ ಯಾವಾಗಲೂ ಜನರಿಗಾಗಿ ಕೆಲಸ ಮಾಡುವ ಉದ್ದೇಶವನ್ನು ಹೊಂದಿದೆ ಮತ್ತು ಜನರಿಗೆ ದ್ರೋಹ ಮಾಡಬಾರದು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...