Homeಕರ್ನಾಟಕಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

ಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

- Advertisement -
- Advertisement -

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರನ್ನೇ ಬಹುಜನರು ಆಯ್ಕೆ ಮಾಡಿದ್ದಾರೆ, ನಂತರದ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿರುವ ಸಮೀಕ್ಷೆ ಬಹಿರಂಗಪಡಿಸಿದೆ.

ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತು ಆನಂತರ ಯಾರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂದು ಜನರು ಬಯಸುತ್ತಿದ್ದಾರೆಂಬ ವಿಷಯದ ಕುರಿತು ಸಮೀಕ್ಷೆ ಬೆಳಕುಚೆಲ್ಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮತದಾರರಲ್ಲಿ ಸ್ವಲ್ಪ ಹೆಚ್ಚು ಜನಪ್ರಿಯರಾಗಿದ್ದಾರೆ, ಆದರೆ ಕಿರಿಯ ಮತದಾರರು ಬೊಮ್ಮಾಯಿ ಅವರಿಗೆ ಆದ್ಯತೆ ನೀಡಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರನೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನಂತರದ ಸ್ಥಾನದಲ್ಲಿದ್ದಾರೆ.

ಒಂದು ಅವಧಿಯನ್ನೂ ಪೂರ್ಣಗೊಳಿಸದೆ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು 5 ನೇ ಸ್ಥಾನದಲ್ಲಿದ್ದು ಆಶ್ಚರ್ಯಕರವಾಗಿ ಕಡಿಮೆ ಸ್ಥಾನ ಪಡೆದಿದ್ದಾರೆ.

ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವವರೆಗೂ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದರು. ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವ ಬಿ.ಎಸ್.ಯಡಿಯೂರಪ್ಪನವರು ಯಾವುದೇ ಪ್ರಬಲ ಸ್ಥಾನದ ಆಕಾಂಕ್ಷೆಯನ್ನು ಸದ್ಯಕ್ಕೆ ಹೊಂದಿಲ್ಲ.

ಆದರೆ ಮತ ಚಲಾಯಿಸುವಾಗ ಪಕ್ಷ ಮತ್ತು ಅಭ್ಯರ್ಥಿಯಷ್ಟೇ ಅಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮತದಾರರು ಗಮನಿಸುತ್ತಾರೆಯೇ ಎಂಬುದರ ಕುರಿತೂ ಸಮೀಕ್ಷೆ ಅವಲೋಕಿಸಿರುವುದಾಗಿ ಎನ್.ಡಿ.ಟಿ.ವಿ ವರದಿ ಪ್ರಕಟಿಸಿದೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಹೆಚ್ಚಿನವರು ಪಕ್ಷಕ್ಕೆ ಪ್ರಾಮುಖ್ಯತೆಯನ್ನು ನೀಡಿದ್ದಾರೆ. 56% ಮಂದಿ ಪಕ್ಷಕ್ಕೆ ಮತ್ತು 38% ಜನರು ಅಭ್ಯರ್ಥಿಗೆ ಒಲುವು ತೋರಿದ್ದಾರೆ. ಶೇ.4ರಷ್ಟು ಮಂದಿ ಮಾತ್ರ ಮುಖ್ಯಮಂತ್ರಿ ಯಾರೆಂದು ನೋಡಿ ಮತ ಹಾಕುವುದಾಗಿ ಹೇಳಿದ್ದಾರೆಂದು ವರದಿ ತಿಳಿಸಿದೆ.

ಕಾಂಗ್ರೆಸ್ ಅಥವಾ ಜೆಡಿಎಸ್ ಅನ್ನು ಬೆಂಬಲಿಸುವ ಮತದಾರರು ಹೆಚ್ಚಾಗಿ ಪಕ್ಷವನ್ನು ಪ್ರಮುಖ ಅಂಶವೆಂದು ಪರಿಗಣಿಸಿದ್ದಾರೆ. ಆದರೆ ಬಿಜೆಪಿ ಮತದಾರರು ಈ ವಿಚಾರವಾಗಿ ಭಿನ್ನಾಭಿಪ್ರಾಯ ಹೊಂದಿದ್ದಾರೆ.

ಮತದಾರರ ಗ್ರಹಿಕೆಗೆ ಬಂದಾಗ ಬಿಜೆಪಿಗಿಂತ ಕಾಂಗ್ರೆಸ್ ಉತ್ತಮವಾಗಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಪ್ರತಿಕ್ರಿಯಿಸಿದವರು ಹೆಚ್ಚಿನವರು ಬಿಜೆಪಿ ಸರ್ಕಾರವನ್ನು `ಭ್ರಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ. 59% ಮಂದಿ ಬಿಜೆಪಿಯನ್ನು ಭ್ರಷ್ಟ ಎಂದರೆ 35% ಜನರು ಕಾಂಗ್ರೆಸ್ ಪಕ್ಷವನ್ನು ಭ್ರಷ್ಟವೆಂದು ಟೀಕಿಸಿದ್ದಾರೆ. 3% ಜನರು ಜೆಡಿಎಸ್ ಪಕ್ಷವನ್ನು ಭ್ರಷ್ಟವೆಂದು ಪರಿಗಣಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲೂ ಬಿಜೆಪಿಯೇ ಮುಂದಿದೆ ಎಂದು 59% ಮಂದಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ 30%, ಜೆಡಿಎಸ್ 8% ಸ್ವಜನಪಕ್ಷಪಾತ ಮಾಡಿರುವುದಾಗಿ ಜನರು ಅಭಿಪ್ರಾಯ ತಾಳಿದ್ದಾರೆ. ಗುಂಪುಗಾರಿಕೆಯಲ್ಲೂ ಬಿಜೆಪಿ (55%) ಪಕ್ಷವು, ಕಾಂಗ್ರೆಸ್ (30%), ಜೆಡಿಎಸ್ (12) ಪಕ್ಷಗಳಿಗಿಂತ ಮುಂದಿದೆ ಎಂದು ಸಮೀಕ್ಷೆ ತಿಳಿಸಿದೆ. ಇದು ಪಕ್ಷವನ್ನು ಹದಗೆಡಿಸುವ ಪ್ರಮುಖ ಅಂಶವೂ ಹೌದು.

ಕಾಂಗ್ರೆಸ್ ಪಕ್ಷವೇ ಅಭಿವೃದ್ಧಿ ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಹೆಚ್ಚಿನ ಮಂದಿ ಒಲುವು ತೋರಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ 47%, ಬಿಜೆಪಿ 34%, ಜೆಡಿಎಸ್ 14% ಜನರ ಬೆಂಬಲ ಪಡೆದಿವೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ನಿಭಾಯಿಸುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಾನ ರೇಟಿಂಗ್ (40%)  ಪಡೆದಿವೆ. ಜೆಡಿಎಸ್ ಮೂರನೇ (14%) ಸ್ಥಾನ ಗಳಿಸಿದೆ.

ವಿವಿಧ ಜಾತಿಗಳು ಮತ್ತು ಸಮುದಾಯಗಳು ಹೇಗೆ ಮತ ಚಲಾಯಿಸುವ ಸಾಧ್ಯತೆಯಿದೆ ಎಂಬುದನ್ನು ತಿಳಿಯಲು ಎನ್.ಡಿ.ಟಿ.ವಿ. ಸಮೀಕ್ಷೆಯು ಪ್ರಯತ್ನಿಸಿದೆ.

ಒಕ್ಕಲಿಗರಲ್ಲಿ ಶೇ.34% ಮಂದಿ ಕಾಂಗ್ರೆಸ್ಸಿಗೂ, 36% ಜನರು ಜೆಡಿ(ಎಸ್) ಪಕ್ಷಕ್ಕೂ ಹಂಚಿ ಹೋಗಿದ್ದರೆ, 67% ಲಿಂಗಾಯತರು ಬಿಜೆಪಿಯೊಂದಿಗೆ ದೃಢವಾಗಿ ಉಳಿದಿದ್ದಾರೆ. ಮುಸ್ಲಿಮರಲ್ಲಿ 59% ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ನಿರ್ಧರಿಸಿದ್ದಾರೆ.

ಸರ್ಕಾರದ ವಿರುದ್ಧ  ಆಡಳಿತ ವಿರೋಧಿ ಅಲೆ ಬಲವಾಗಿ ಇರುವುದನ್ನು ಸಮೀಕ್ಷೆ ಬಹಿರಂಗಪಡಿಸಿದೆ. ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಮತದಾರರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೇಸರವಿರುವುದನ್ನು ಸಮೀಕ್ಷೆಯ  ಅಂಕಿ-ಅಂಶಗಳು ಎತ್ತಿಹಿಡಿದಿವೆ.

ಬಡಮತದಾರರು ಹೆಚ್ಚಿನದಾಗಿ ಕಾಂಗ್ರೆಸ್ಸಿಗೆ ಜೈ ಎಂದಿದ್ದಾರೆ. 50 ಬಡವರು ಕಾಂಗ್ರೆಸ್ಸಿನೊಂದಿಗೆ ನಿಂತರೆ, 23% ಬಡವರು ಬಿಜೆಪಿಗೆ ಸಮ್ಮತಿ ಸೂಚಿಸಿದ್ದಾರೆ. ಶ್ರೀಮಂತರಲ್ಲಿ 46% ಜನರು ಬಿಜೆಪಿಗೆ ಜೈ ಎಂದರೆ, 31% ಶ್ರೀಮಂತರು ಕಾಂಗ್ರೆಸ್ಸಿನತ್ತ ಹೊರಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...