Homeಕರ್ನಾಟಕಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

ಸಿದ್ದರಾಮಯ್ಯನವರೇ ಬಹುಜನರ ಆಯ್ಕೆ, ಕಾಂಗ್ರೆಸ್ಸಿಗೆ ಜೈ ಎಂದ ಜನತೆ; ಎನ್.ಡಿ.ಟಿ.ವಿ. ಸಮೀಕ್ಷೆ

- Advertisement -
- Advertisement -

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರನ್ನೇ ಬಹುಜನರು ಆಯ್ಕೆ ಮಾಡಿದ್ದಾರೆ, ನಂತರದ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿರುವ ಸಮೀಕ್ಷೆ ಬಹಿರಂಗಪಡಿಸಿದೆ.

ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತು ಆನಂತರ ಯಾರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂದು ಜನರು ಬಯಸುತ್ತಿದ್ದಾರೆಂಬ ವಿಷಯದ ಕುರಿತು ಸಮೀಕ್ಷೆ ಬೆಳಕುಚೆಲ್ಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮತದಾರರಲ್ಲಿ ಸ್ವಲ್ಪ ಹೆಚ್ಚು ಜನಪ್ರಿಯರಾಗಿದ್ದಾರೆ, ಆದರೆ ಕಿರಿಯ ಮತದಾರರು ಬೊಮ್ಮಾಯಿ ಅವರಿಗೆ ಆದ್ಯತೆ ನೀಡಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂರನೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನಂತರದ ಸ್ಥಾನದಲ್ಲಿದ್ದಾರೆ.

ಒಂದು ಅವಧಿಯನ್ನೂ ಪೂರ್ಣಗೊಳಿಸದೆ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು 5 ನೇ ಸ್ಥಾನದಲ್ಲಿದ್ದು ಆಶ್ಚರ್ಯಕರವಾಗಿ ಕಡಿಮೆ ಸ್ಥಾನ ಪಡೆದಿದ್ದಾರೆ.

ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸುವವರೆಗೂ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದರು. ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವ ಬಿ.ಎಸ್.ಯಡಿಯೂರಪ್ಪನವರು ಯಾವುದೇ ಪ್ರಬಲ ಸ್ಥಾನದ ಆಕಾಂಕ್ಷೆಯನ್ನು ಸದ್ಯಕ್ಕೆ ಹೊಂದಿಲ್ಲ.

ಆದರೆ ಮತ ಚಲಾಯಿಸುವಾಗ ಪಕ್ಷ ಮತ್ತು ಅಭ್ಯರ್ಥಿಯಷ್ಟೇ ಅಲ್ಲ, ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮತದಾರರು ಗಮನಿಸುತ್ತಾರೆಯೇ ಎಂಬುದರ ಕುರಿತೂ ಸಮೀಕ್ಷೆ ಅವಲೋಕಿಸಿರುವುದಾಗಿ ಎನ್.ಡಿ.ಟಿ.ವಿ ವರದಿ ಪ್ರಕಟಿಸಿದೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಹೆಚ್ಚಿನವರು ಪಕ್ಷಕ್ಕೆ ಪ್ರಾಮುಖ್ಯತೆಯನ್ನು ನೀಡಿದ್ದಾರೆ. 56% ಮಂದಿ ಪಕ್ಷಕ್ಕೆ ಮತ್ತು 38% ಜನರು ಅಭ್ಯರ್ಥಿಗೆ ಒಲುವು ತೋರಿದ್ದಾರೆ. ಶೇ.4ರಷ್ಟು ಮಂದಿ ಮಾತ್ರ ಮುಖ್ಯಮಂತ್ರಿ ಯಾರೆಂದು ನೋಡಿ ಮತ ಹಾಕುವುದಾಗಿ ಹೇಳಿದ್ದಾರೆಂದು ವರದಿ ತಿಳಿಸಿದೆ.

ಕಾಂಗ್ರೆಸ್ ಅಥವಾ ಜೆಡಿಎಸ್ ಅನ್ನು ಬೆಂಬಲಿಸುವ ಮತದಾರರು ಹೆಚ್ಚಾಗಿ ಪಕ್ಷವನ್ನು ಪ್ರಮುಖ ಅಂಶವೆಂದು ಪರಿಗಣಿಸಿದ್ದಾರೆ. ಆದರೆ ಬಿಜೆಪಿ ಮತದಾರರು ಈ ವಿಚಾರವಾಗಿ ಭಿನ್ನಾಭಿಪ್ರಾಯ ಹೊಂದಿದ್ದಾರೆ.

ಮತದಾರರ ಗ್ರಹಿಕೆಗೆ ಬಂದಾಗ ಬಿಜೆಪಿಗಿಂತ ಕಾಂಗ್ರೆಸ್ ಉತ್ತಮವಾಗಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಪ್ರತಿಕ್ರಿಯಿಸಿದವರು ಹೆಚ್ಚಿನವರು ಬಿಜೆಪಿ ಸರ್ಕಾರವನ್ನು `ಭ್ರಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ. 59% ಮಂದಿ ಬಿಜೆಪಿಯನ್ನು ಭ್ರಷ್ಟ ಎಂದರೆ 35% ಜನರು ಕಾಂಗ್ರೆಸ್ ಪಕ್ಷವನ್ನು ಭ್ರಷ್ಟವೆಂದು ಟೀಕಿಸಿದ್ದಾರೆ. 3% ಜನರು ಜೆಡಿಎಸ್ ಪಕ್ಷವನ್ನು ಭ್ರಷ್ಟವೆಂದು ಪರಿಗಣಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲೂ ಬಿಜೆಪಿಯೇ ಮುಂದಿದೆ ಎಂದು 59% ಮಂದಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ 30%, ಜೆಡಿಎಸ್ 8% ಸ್ವಜನಪಕ್ಷಪಾತ ಮಾಡಿರುವುದಾಗಿ ಜನರು ಅಭಿಪ್ರಾಯ ತಾಳಿದ್ದಾರೆ. ಗುಂಪುಗಾರಿಕೆಯಲ್ಲೂ ಬಿಜೆಪಿ (55%) ಪಕ್ಷವು, ಕಾಂಗ್ರೆಸ್ (30%), ಜೆಡಿಎಸ್ (12) ಪಕ್ಷಗಳಿಗಿಂತ ಮುಂದಿದೆ ಎಂದು ಸಮೀಕ್ಷೆ ತಿಳಿಸಿದೆ. ಇದು ಪಕ್ಷವನ್ನು ಹದಗೆಡಿಸುವ ಪ್ರಮುಖ ಅಂಶವೂ ಹೌದು.

ಕಾಂಗ್ರೆಸ್ ಪಕ್ಷವೇ ಅಭಿವೃದ್ಧಿ ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಹೆಚ್ಚಿನ ಮಂದಿ ಒಲುವು ತೋರಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ 47%, ಬಿಜೆಪಿ 34%, ಜೆಡಿಎಸ್ 14% ಜನರ ಬೆಂಬಲ ಪಡೆದಿವೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ನಿಭಾಯಿಸುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಾನ ರೇಟಿಂಗ್ (40%)  ಪಡೆದಿವೆ. ಜೆಡಿಎಸ್ ಮೂರನೇ (14%) ಸ್ಥಾನ ಗಳಿಸಿದೆ.

ವಿವಿಧ ಜಾತಿಗಳು ಮತ್ತು ಸಮುದಾಯಗಳು ಹೇಗೆ ಮತ ಚಲಾಯಿಸುವ ಸಾಧ್ಯತೆಯಿದೆ ಎಂಬುದನ್ನು ತಿಳಿಯಲು ಎನ್.ಡಿ.ಟಿ.ವಿ. ಸಮೀಕ್ಷೆಯು ಪ್ರಯತ್ನಿಸಿದೆ.

ಒಕ್ಕಲಿಗರಲ್ಲಿ ಶೇ.34% ಮಂದಿ ಕಾಂಗ್ರೆಸ್ಸಿಗೂ, 36% ಜನರು ಜೆಡಿ(ಎಸ್) ಪಕ್ಷಕ್ಕೂ ಹಂಚಿ ಹೋಗಿದ್ದರೆ, 67% ಲಿಂಗಾಯತರು ಬಿಜೆಪಿಯೊಂದಿಗೆ ದೃಢವಾಗಿ ಉಳಿದಿದ್ದಾರೆ. ಮುಸ್ಲಿಮರಲ್ಲಿ 59% ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ನಿರ್ಧರಿಸಿದ್ದಾರೆ.

ಸರ್ಕಾರದ ವಿರುದ್ಧ  ಆಡಳಿತ ವಿರೋಧಿ ಅಲೆ ಬಲವಾಗಿ ಇರುವುದನ್ನು ಸಮೀಕ್ಷೆ ಬಹಿರಂಗಪಡಿಸಿದೆ. ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಮತದಾರರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೇಸರವಿರುವುದನ್ನು ಸಮೀಕ್ಷೆಯ  ಅಂಕಿ-ಅಂಶಗಳು ಎತ್ತಿಹಿಡಿದಿವೆ.

ಬಡಮತದಾರರು ಹೆಚ್ಚಿನದಾಗಿ ಕಾಂಗ್ರೆಸ್ಸಿಗೆ ಜೈ ಎಂದಿದ್ದಾರೆ. 50 ಬಡವರು ಕಾಂಗ್ರೆಸ್ಸಿನೊಂದಿಗೆ ನಿಂತರೆ, 23% ಬಡವರು ಬಿಜೆಪಿಗೆ ಸಮ್ಮತಿ ಸೂಚಿಸಿದ್ದಾರೆ. ಶ್ರೀಮಂತರಲ್ಲಿ 46% ಜನರು ಬಿಜೆಪಿಗೆ ಜೈ ಎಂದರೆ, 31% ಶ್ರೀಮಂತರು ಕಾಂಗ್ರೆಸ್ಸಿನತ್ತ ಹೊರಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...