Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಬೆಂಬಲಕ್ಕಾಗಿ ದೇಶದ ರೈತರು, ಸಾರ್ವಜನಿಕರಿಗೆ ಬಜರಂಗ್ ಪುನಿಯಾ ಮನವಿ

ಕುಸ್ತಿಪಟುಗಳ ಪ್ರತಿಭಟನೆ: ಬೆಂಬಲಕ್ಕಾಗಿ ದೇಶದ ರೈತರು, ಸಾರ್ವಜನಿಕರಿಗೆ ಬಜರಂಗ್ ಪುನಿಯಾ ಮನವಿ

- Advertisement -
- Advertisement -

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ ಬಳಿಕ ತಮ್ಮ ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂದು ದೇಶದ ರೈತರು ಹಾಗೂ ಸಾರ್ವಜನಿಕರಿಗೆ ಕಾಮನ್‌ವೆಲ್ತ್ ಕ್ರಿಡಾಕೂಟದ ಚಿನ್ನದ ಪದಕ ವಿಜೇತ ಬಜರಂಗ್ ಪುನಿಯಾ ವಿನಂತಿ ಮಾಡಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದನೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್, ಒಬ್ಬ ಅಪ್ರಾಪ್ತ ಸೇರಿದಂತೆ ಏಳು ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆ(ಬುಧವಾರ) ರಾತ್ರಿ 11 ಗಂಟೆಯ ಸುಮಾರಿಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ರಾತ್ರಿ ತಂಗಲು ಮಡಚುವ ಹಾಸಿಗೆಗಳನ್ನು ತರುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಆಗ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆ ಬಗ್ಗೆ ವಿಚಾರಣೆ ಮಾಡಲು ಪ್ರಾರಂಭಿಸಿದರು.

ಕುಸ್ತಿಪಟುಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು ಅವರೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು ಮತ್ತು ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾತನಾಡಿರುವ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ಬಜರಂಗ್ ಪೊನಿಯಾ ಮಾತನಾಡಿ, ರೈತರು ಮತ್ತು ಸಾರ್ವಜನಿಕರು ಜಂತರ್ ಮಂತರ್‌ಗೆ ಬಂದು ತಮ್ಮ ಬೆಂಬಲಕ್ಕೆ ನಿಲ್ಲಬೇಕು ಎಂದು ಬಜರಂಗ್ ಪುನಿಯಾ ಕೇಳಿಕೊಂಡರು.

ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಹಲ್ಲೆ: ‘ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ಕೊಲ್ಲಬಹುದು’ ಎಂದು ಕಣ್ಣೀರಿಟ್ಟ ವಿನೇಶ್ ಫೋಗಟ್

”ಎಲ್ಲರೂ ಬೆಳಿಗ್ಗೆಯೊಳಗೆ ದೆಹಲಿ ತಲುಪಲು ನಾನು ವಿನಂತಿಸುತ್ತೇನೆ. ಇದು ಸರಿಯಾದ ಸಮಯ, ಈಗಲ್ಲದಿದ್ದರೆ, ನಂತರ ಯಾವಾಗ ಒಟ್ಟಾಗೋದು? ಇದು ನಮ್ಮ ಹೆಣ್ಣುಮಕ್ಕಳ ಘನತೆಯ ಪ್ರಶ್ನೆಯಾಗಿದೆ. ಬ್ರಿಜ್ ಭೂಷಣ್ (ಡಬ್ಲ್ಯುಎಫ್‌ಐ ಅಧ್ಯಕ್ಷ) ನಂತಹ ಜನರು ಅಪರಾಧಿಯಾಗಿದ್ದರೂ, ಅವರು ಸ್ವತಂತ್ರವಾಗಿ ತಿರುಗುತ್ತಿದ್ದಾರೆ. ಆದರೆ ನಮಗೆ ಈ ಶಿಕ್ಷೆ ನೀಡುತ್ತಿದ್ದಾರೆ” ಎಂದು ಬಜರಂಗ್ ಹೇಳಿದರು.

ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡುವಂತೆ ಕೇಳಿದಾಗ, ”ಸಿಸಿಟಿವಿ ಕ್ಯಾಮೆರಾಗಳು ಇಲ್ಲಿ ಇರುತ್ತವೆ, ಅದರ ದೃಶ್ಯಾವಳಿಗಳು ಸ್ಪಷ್ಟಪಡಿಸುತ್ತವೆ” ಎಂದು ಬಜರಂಗ್ ಹೇಳಿದರು.

ದೆಹಲಿ ಪೊಲೀಸರು ಹೇಳುವಂತೆ ಎಎಪಿ ನಾಯಕ ಸೋಮನಾಥ್ ಭಾರ್ತಿ ಅವರು ಮಡಚುವ ಹಾಸಿಗೆಗಳನ್ನು ತಂದಿದ್ದಾರೆಯೇ? ಎಂದು ಪತ್ರಕರ್ತರು ಪ್ರಶ್ನಿಸಿದಾಗ, ”ನೀವು ಸಿಸಿಟಿವಿ ದೃಶ್ಯಾವಳಿಗಳನ್ನೇ ನೋಡಿ, ಆ ಘಟನೆ ನಡೆದಾಗ ಅವರು ಇರಲಿಲ್ಲ ಎಂಬುದು ನಿಮಗೆ ಅರ್ಥವಾಗುತ್ತದೆ. ನಾವೇ ಹಾಸಿಗೆಗಳನ್ನು ಆರ್ಡರ್ ಮಾಡಿದ್ದೇವು, ಅವುಗಳನ್ನು ಒಳಗೆ ತರುತ್ತಿದ್ದೆವು” ಎಂದು ಉತ್ತರಿಸಿದರು.

ಈ ವೇಳೆ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತರು ವಿನೇಶ್ ಫೋಗಟ್ ಮಾತನಾಡಿ, ”ಮಹಿಳಾ ಪೊಲೀಸ್ ಅಧಿಕಾರಿಗಳು ಎಲ್ಲಿದ್ದರು? ಪುರುಷ ಅಧಿಕಾರಿಗಳು ನಮ್ಮನ್ನು ಹೇಗೆ ತಳ್ಳುತ್ತಾರೆ. ನಾವು ಅಪರಾಧಿಗಳಲ್ಲ, ಅಂತಹ ವರ್ತನೆ ತೋರಲು ನಾವು ಅರ್ಹರಲ್ಲ. ಕುಡಿದು ಬಂದ ಪೊಲೀಸ್ ಅಧಿಕಾರಿ ನನ್ನ ಸಹೋದರನಿಗೆ ಹೊಡೆದರು” ಎಂದು ಹೇಳಿದರು.

”ನಿಜಕ್ಕೂ ಪೊಲೀಸರ ವರ್ತನೆಯಿಂದ ನಮಗೆ ಆಘಾತವಾಗಿದೆ. ಏಕೆಂದರೆ ನಾವು ಅಪರಾಧಿಗಳಲ್ಲ ಮತ್ತು ಅಂತಹ ಅಗೌರವಕ್ಕೆ ಅರ್ಹರಲ್ಲ” ಎಂದರು.

”ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಲ್ಲಿ” ಎಂದು ಅಳುತ್ತಾ ವಿನೇಶ್ ಫೋಗಟ್ ತಡರಾತ್ರಿಯ ಮಾಧ್ಯಮ ಸಂವಾದದಲ್ಲಿ ಹೇಳಿದರು.

”ನಾವು ಈ ದಿನ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ? ನಾವು ನಮ್ಮ ಆಹಾರವನ್ನು ಸಹ ತಿನ್ನಲಿಲ್ಲ. ಪ್ರತಿಯೊಬ್ಬ ಪುರುಷನಿಗೆ ಮಹಿಳೆಯರನ್ನು ನಿಂದಿಸುವ ಹಕ್ಕು ಇದೆಯೇ? ಈ ಪೊಲೀಸರು ಬಂದೂಕು ಹಿಡಿದಿದ್ದಾರೆ, ಅವರು ನಮ್ಮನ್ನು ಕೊಲ್ಲಬಹುದು” ಎಂದು ಭಾವುಕರಾದ ವಿನೇಶ್ ಕಣ್ಣೀರಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...