Homeಅಂಕಣಗಳುಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

ಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

- Advertisement -
- Advertisement -

ಎದುರು ಬರುತ್ತಿರುವವನು ಕಾಂಗ್ರೆಸ್ ಕಾರ್ಯಕರ್ತ ಎಂದು ಗೊತ್ತಾದರೆ ಸಾಕು ಭಕ್ತಿಯಿಂದ ಕೈ ಮುಗಿದು, ’ದಯಮಾಡಿ ನನ್ನನ್ನ ಕಾಂಗ್ರೆಸ್‌ಗೆ ಸೇರಿಸಿ’ ಎಂದು ಕೇಳಿಕೊಳ್ಳುತ್ತಿದ್ದ ಕಡೂರು ದತ್ತಣ್ಣ ಕಾಂಗ್ರೆಸ್ ಸೇರಿಯೂ ಆಯ್ತು; ಅದನ್ನು ಬಿಟ್ಟು ಮತ್ತೆ ಜೆಡಿಎಸ್ ಸೇರಿ ಕಡೂರಿನ ಕ್ಯಾಂಡೇಟ್ ಆಗಿಯೂ ಆಯ್ತು. ಕಡೂರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಅಂತಹ ವ್ಯತ್ಯಾಸವಿಲ್ಲ, ಹಾಗಾಗಿ ದತ್ತಣ್ಣ ಎಲ್ಲಿ ನಿಂತರೂ ಮೂರನೆ ಸ್ಥಾನ ಕಾಯಂ ಆಗಿದೆಯಂತಲ್ಲಾ, ಥೂತ್ತೇರಿ.

*****

ಸಿ.ಸೋಮಶೇಖರ ನೆನಪಿಸಿಕೊಳ್ಳಿ; ಅಧಿಕಾರಿಯಾಗಿ ಅಖಂಡ ಐಶ್ವರ್ಯ ಹೊಂದಿದ್ದವರು ಮತ್ತು ಲಂಕೇಶ್‌ರಿಂದ ಜನ್ಮಾಪಿ ನೆನೆಸಿಕೊಳ್ಳುವಂತೆ ಟೀಕಿಸಿಕೊಂಡಿದ್ದವರು. ಇದಕ್ಕಿಂತ ಹೆಚ್ಚಾಗಿ ವಚನ ಸಾಹಿತ್ಯವನ್ನು ಅರೆದು ಕುಡಿಯಲು ಪ್ರಯತ್ನಿಸಿ, ಅರಗಿಸಿಕೊಳ್ಳಲಾಗದೆ ವಾಂತಿ ಮಾಡಿಕೊಂಡಿದ್ದರು. ಈತ ವಚನ ಹೇಳುತ್ತಿರುವುದು ಬಿಜೆಪಿ ಪಡಸಾಲೆಯಲ್ಲಿ, ಏಕೆಂದರೆ ಬಿಜೆಪಿ ಗರ್ಭಗುಡಿಗೆ ಆತ ಹೋಗುವಂತಿಲ್ಲ. ಬಿಜೆಪಿ ಲಿಂಗಾಯಿತರಿಗೆ ಗೌರವ ತಂದುಕೊಟ್ಟ ಪಕ್ಷ ಎಂದು ಹೇಳಿಕೊಂಡು ತಿರುಗುತ್ತಿರುವ ಈತ ತುಮಕೂರು ಜಿಲ್ಲೆಯ ಡಿ.ಸಿಯಾಗಿದ್ದಾಗ, ಇಂಥದೇ ಚುನಾವಣೆ ಬಂದು ಮೊದಲು ಆ ಡಿ.ಸಿಯನ್ನ ವರ್ಗಮಾಡಿ ಎಂದು ದೇವೇಗೌಡರು ಹಟ ಹಿಡಿದದ್ದು ಯಾಕೆ ಅಂತ ಈಗ ಗೊತ್ತಾಗುತ್ತಿದೆಯಲ್ಲಾ, ಥೂತ್ತೇರಿ.

*****

ಬಿಜೆಪಿ ಪರವಾಗಿ ಸಿ.ಸೋಮಶೇಖರ್ ನಂತಹವರು ಎಷ್ಟೇ ವಕಾಲತ್ತು ವಹಿಸಿದರೂ ಈಶ್ವರಪ್ಪನಿಗಿರುವ ಪಕ್ಷನಿಷ್ಠೆ ಇಡೀ ದೇಶದಲ್ಲಿಯೇ ಯಾರಿಗೂ ಇಲ್ಲ ಎಂಬುದು ಸಾಬೀತಾಗಿದೆಯಲ್ಲಾ. ಅದಕ್ಕಾಗಿಯೇ ಪ್ರಧಾನಿಯವರೇ ಫೋನು ಮಾಡಿ ಅಭಿನಂದಿಸಿ, ’ಈಶ್ವರಪ್ಪಾಜಿ, ತು ಅಸಾಧಾರಣ ವ್ಯಕ್ತಿ ಹೈ. ಏಕ್ ಬಾರ್ ಇದರ್ ಆನ’ ಎಂದರಂತಲ್ಲಾ. ಆ ಕೂಡಲೇ ಕೇಸರಿ ಮೈದುಂಬಿದಂತಾದ ಈಶ್ವರಪ್ಪ, ’ಆ ಜಗದೀಶ್ ಶೆಟ್ಟರ್ ಕಾಂಗ್ರೆಸ್ಸಲ್ಲಿ ಸಾಯಿಲಿ, ನಾನು ಮಾತ್ರ ಬಿಜೆಪಿಲಿದ್ದೇ ಹೋಯ್ತಿನಿ’ ಎಂದರಂತಲ್ಲಾ. ಇಂತಹ ಕಠೋರ ಶಪಥ ಮಾಡಿದ ಈಶ್ವರಪ್ಪನನ್ನು ಅಭಿನಂದಿಸುವುದು ನಮ್ಮ ಕರ್ತವ್ಯ ಅಲ್ಲವೆ! ಅದಕ್ಕಾಗಿ ಫೋನು ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್, ’ನಮಸ್ತೇ ಸದಾ ವತ್ಸಲೇ ಮಾತೃ ಭೂಮಿ..’

“ಹಲೋ ಯಾರೂ?”

“ನಾನು ಸಾರ್ ಯಾಹೂ.”

“ಯಾಹೂ ಎಲ್ಲಿಗೋದ್ರಿ, ಬನ್ರಿ ಮಾತಾಡನ”.

“ಡೆಡ್‌ಲೈನಿಗೆ ಒಂದೆರಡು ಮಾತ್ ಹೇಳಿ ಸಾರ್.”

“ಏನು ಮಾತಾಡದ್ರಿ.. ಯಾವುದ್ಕು ಉತ್ಸಾಹ ಇಲ. ಸುಮ್ಮನೆ ತೋರಿಕೆಗೆ ಏನೇನೋ ಮಾತಾಡ್ತಿನಿ.”

“ಅದು ಗೊತ್ತು ಸಾರ್, ನಿಮ್ಮತ್ರ ಸೇವಕನಂಗಿದ್ದ ಹುಡುಗನ ಪರ ಓಟು ಕೇಳಿದರಂತೆ. ಹಿಂಸೆ ನ್ಯನಿಸಿಗಳಕ್ಕಾಗಲ್ಲ.”

“ಆದ್ರು ಕೇಳಬೇಕಲ್ಲ ಹೇಳಿ.”

“ಯಾಕ್ಸರ್ ಬಿಜೆಪಿಗಳು ನಿಮಿಗೆ ಇಂತ ಅವುಮಾನ ಮಾಡಿದ್ರು. ಬಿಜೆಪಿ ಇತಿಹಾಸದಲ್ಲಿ ಯಾರಿಗೂ ಇಂತ ಅವುಮಾನಾಗಿಲ್ಲ ಸಾ.”

“ಶೆಟ್ಟರ್‌ಗಿಂತ ಅವುಮಾನಾಗಿಲ್ಲ ಬುಡ್ರಿ.”

“ಅಂಗಂತಿರಾ?”

ಇದನ್ನೂ ಓದಿ: ಮೂರು ಪಾರ್ಟಿಯವರೂ ಅಳುತ್ತಿದ್ದಾರಲ್ಲಾ!

“ಊ ಮತ್ತೆ. ಮುಖ್ಯಮಂತ್ರಿಯಾಗಿದ್ದೋರಿಗೆ ಮಿಸ್ ಕಾಲ್ ಕೊಟ್ಟು, ಇವುರು ಪೋನ್ ಮಾಡಿದಾಗ ನಿಮಗೆ ಟಿಕೆಟ್ ಇಲ್ಲ ಅಂದುಬುಟ್ಟು ಕಟ್ ಮಾಡ್ಯವುರಲ್ಲ, ಇದವು ಅವಮಾನ ಅಲವೆ?”

“ನಿಮ್ಮ ಅವುಮಾನದ ಮುಂದೆ ಅವುರದೇನೂ ಅಲ್ಲ ಸಾರ್.”

“ಅದ್ಯಂಗರೀ?”

“ನೀವು ಬಿಜೆಪಿ ಕಟ್ಟಿ ಬೆಳೆಸಿದ ಮಹಾನಾಯಕ. ಶಿವಮೊಗ್ಗದಲ್ಲಿ ಪಾರ್ಟಿಗಾಗಿ ಬಂದ್, ಗೋಲಿಬಾರು, ಲೂಟಿ ಯಲ್ಲಾನು ಮಾಡಿಸಿದ್ದಿರಿ. ಕೆ.ಹೆಚ್.ಶ್ರೀನಿವಾಸ್ ಊರಾಬುಟ್ಟೋಗಂಗೆ ಮಾಡಿದ್ದಿರಿ, ಮುಸ್ಲಿಮರ ಮದುವೆಗೂ ದುಡ್ಡುಕೊಟ್ಟಿದ್ದಿರಿ. ತಮುಳು ಜನ ಸಂಘಟಿಸಿ ಅವುರನೆಲ್ಲಾ ಬಸ್ಸಲ್ಲಿ ಸರದಿ ಪ್ರಕಾರ ತುಂಬಿಕಂಡೋಗಿ ತಮುಳು ನಾಡಿನ ತಂಜಾವ್ಯೂರು, ರಾಮೇಶ್ವರ, ಚಿದಂಬರ, ಮದುರೆ, ಪಳನಿ ಯಲ್ಲಾನು ತೋರಿಸಿಗಂಡು ಬಂದು ಸುರದ್ದಿದ್ದಿರಿ. ಹಂಗೆ ನೋಡಿದ್ರೆ ಆ ಶಿವಮೊಗ್ಗದಲ್ಲಿ ನಿಮ್ಮನ್ನ ಸೋಲಸಕ್ಕೆ ಯಾರಿಂದ್ಲೂ ಸಾಧ್ಯವಿಲ್ಲ. ಇದ್ಯಾವುದನ್ನು ಲೆಕ್ಕಕ್ಕೆ ತಗೊಳ್ದೆ, ಕೇವಲ ಸಿದ್ದರಾಮಯ್ಯನ ತಲೆ ಕಡಿತಿನಿ ಅಂದಿದ್ದ ಮಾತ್ರಕ್ಕೆ ನಿಮ್ಮ ಸೇವಕನಿಗೆ ಟಿಕೆಟ್ ಕೊಟ್ಟು ನಿಮಗಿಲ್ಲ ಅಂದರಲ್ಲಾ ಸಾರ್. ನನಗೇ ಇಷ್ಟು ಹಿಂಸೆ ಆಯ್ತಾ ಅದೆ. ನೀವ್ಯಂಗೆ ತಡ್ಕೋತಾ ಇದೀರಿ ಅನ್ನದೆ ಆಶ್ಚರ್ಯ ಸಾರ್.”

“ಅದು ಪಾರ್ಟಿ ನಿಷ್ಟೆ ಕಂಡ್ರಿ, ನನಿಗೆ ಇಲ್ಲಿವರಿಗೂ ಸಿಕ್ಕಿದೆಲ್ಲಾ ಪಾರ್ಟಿಯಿಂದ. ಪಾರ್ಟಿ ನಮ್ಮ ತಾಯಿಯಿದ್ದಂಗೆ.”

“ಪಾರ್ಟಿ ತಾಯಿಯಾದ್ರೆ, ತಂದೆ ಯಾರು ಸಾರ್?”

“ಪೊಲಿಟಿಕೆಲ್ ಪಾರ್ಟಿ ಅಂದ್ರೆ ತಾಯಿ, ಅಲ್ಲಿ ತಂದೆಯಿರಲ್ಲ”

“ಅಂದ್ರೆ ಪೊಲಿಟಿಕಲ್ ಪಾರ್ಟಿಗೆ ತಂದೆಯಿರಲ್ವ ಸಾರ್?”

“ರಿ ತಲೆಕೆಟ್ಟಂಗೆ ಮಾತಾಬ್ಯಾಡಿ. ನಮ್ಮನ್ನ ಬೆಳೆಸಿ ಸ್ಥಾನಮಾನ ಕೊಟ್ಟ ಪಾರ್ಟಿ ತಾಯಿಗೆ ಸಮಾನ ಅಂತ ನಾನು ಹೇಳಿದ್ದು.”

“ನನಿಗೇನೂ ಈ ಹೋಲಿಕೆನೆ ಸರಿಯಿಲ್ಲ ಸಾರ್. ಅಪ್ರಭುದ್ಧ ಮೂರ್ಖರು ಮಾತ್ರ ಇಂತ ಹೋಲಿಕೆ ಮಾಡಬಲ್ಲರು.”

“ಯಾಕ್ರಿ ಅಂಗಂತಿರಿ?”

“ಮತ್ತಿನ್ನೇನು ಸಾರ್, ಹೆತ್ತು ಹಾಲು ಕುಡಿಸಿ ಬೆಳೆಸೋ ತಾಯಿ ಎಲ್ಲೀ, ಹಾದಿ ಬೀದಿಲಿ ಸಿಕ್ಕಿದೋರ ಹಿಡಕಂಡು ಬಂದು, ಚಡ್ಡಿ ಇಕ್ಕಿ, ಲಾಟಿ ಕೊಟ್ಟು ಮಹೊಡಿ ಸಾಬರಿಗೆ ಅನ್ನೂ ಪಾರ್ಟಿ ಎಲ್ಲಿ? ಅಂಥ ಪಾರ್ಟಿನ ದೇವತೆಯಂತ ತಾಯಿಗೋಲುಸ್ತಿರಲ್ಲಾ. ಆಯ್ತು ನಿಮ್ಮ ಮಾತನ್ನ ಒಪ್ಪಿಗಳನ. ಇವತ್ತು ನಿಮ್ಮ ಕತೆ ಏನಾಗಿದೆ?”

“ಏನು ಆಗಬಾರದ್ದಾಗಿಲ್ಲ ಕಂಡ್ರೀ.”

“ಸಾರ್ ನಿಮಗೆ ಯಂಗೇಳಬೇಕು ಅಂತ ಗೊತ್ತಾಯ್ತಯಿಲ್ಲ. ಬಿಜೆಪಿಲಿ ಚುನಾವಣೆಗೆ ನಿಲ್ಲಕ್ಕೆ ನಿಮ್ಮಷ್ಟು ಯೋಗ್ಯ ಕ್ಯಾಂಡೇಟ್ ಇರಲಿಲ್ಲ. ಅವುರು ನಿರಾಕರಿಸಿದ ತಕ್ಷಣನೆ ಶೆಟ್ಟರ್ ತರ ತೀರ್ಮಾನ ತಗೊಬೇಕಿತ್ತು.”

“ಬ್ಯಾರೆ ಪಾರ್ಟಿಯೋರು ನನ್ನನ್ನ ಸೇರಿಸ್ರಿರಲಿಲ್ಲ ಕಂಡ್ರಿ.”

“ಜೆಡಿಎಸ್‌ನೋರು ಸೇರಿಸ್ತಿದ್ರು ಸಾರ್. ಜೆಡಿಎಸ್ ಟೀಮನ್ನ ದಂಡೂಪಾಳ್ಯದ ಗ್ಯಾಂಗು ಅಂದಿದ್ದ ಆಯನೂರ್ ಮಂಜುನಾಥನ್ನೆ ಸೇರಿಸಿಕೊಂಡ್ರು. ಅಂಥದರಲ್ಲಿ ಕುಮಾರಣ್ಣ ನಿಮ್ಮನ್ನ ಬುಡತಿದ್ರೆ..”

“ಬುಡತಿರಲಿಲ್ಲ ನಿಜ. ಅಂಗೆ ನೋಡಿದ್ರೆ ಕುಮಾರಣ್ಣ ಈ ಹಿಂದೆ ಎರಡು ಬಾರಿ ನಾನೇಳಿದೋರಿಗೆ ಟಿಕೆಟ್ ಕೊಟ್ಟವುರೆ. ಅಂಗಂತ ನಾನು ಪಾರ್ಟಿ ಬುಡಕ್ಕಾಗಲ್ಲ. ಈಗ ನಾನು ಚುನಾವಣಾ ರಾಜಕಾರಣದಿಂದ ದೂರ. ಮುಂದೆ ಪಾರ್ಟಿ ಕೆಲಸ ಮಾಡಿಕಂಡೋಯ್ತಿನಿ”

“ಪಾರ್ಟಿ ಕೆಲಸನ ನಿಮ್ಮಿಂದ ಯಾರೂ ನಿರೀಕ್ಷೆ ಮಾಡಿಲ್ಲ.”

“ಯಾಕ್ರಿ ಅಂಗಂತಿರಿ?”

“ನಿಮ್ಮ ಜಾಗಕ್ಕೆ ನಿಮಗಿಂತ್ಲೂ ಭೀಕರ ವ್ಯಕ್ತಿನ ತಂದಾಗ್ಯದೆ. ಮುಂದೆ ಅವುಂದೆ ರಾಜ್ಯಭಾರ. ಅವುರು ಆವರಿಸಿಕೊಂಡ ಜಾಗದಲ್ಲಿ ನೀವು ಅಪ್ಪಮಕ್ಕಳಿಗೇನೂ ಕೆಲಸಿಲ್ಲ. ನಿಮ್ಮ ಈ ನಿವೃತ್ತಿ ನಂತರ ನಿಮ್ಮ ಮಗ ನಿಮ್ಮ ಜೊತೆ ಬಂದು ಸೇರಿಕಳ್ತನೆ. ನೀವು ಮೂಲೆಗುಂಪಾಗದ್ರಲ್ಲಿ ಈಗಾಗ್ಲೆ ಮೂಲೆಗುಂಪಾಗಿರೊ ಎಡೂರಪ್ಪನ ಕೈವಾಡನೂ ಇದೆ.”

“ಅವುರ ಕೈವಾಡ ಯಾಕಿರತ್ರಿ?”

“ಸಾರ್ ನಿಜ ಹೇಳಿ. ನಿಮಗೆ ಎಡೂರಪ್ಪ ಅಂದ್ರೆ ಅಷ್ಟಕಷ್ಟೆ. ಇನ್ನ ರಾಘವೇಂದ್ರನ ಗೆಲುವು ನಿಮಗೆ ಬೇಕಿರಲಿಲ್ಲ. ಅಂಗೇನೆ ಆ ವಿಜಯೇಂದ್ರನ ಅಭ್ಯುದಯ ನಿಮಗೆ ಬೇಕಿಲ್ಲ, ಇದು ಗೊತ್ತಾಗಿ ಎಡೂರಪ್ಪ ನಮ್ಮ ಕತೆ ಮುಗದರಷ್ಟೆ ಹೋಯ್ತು, ಈಶ್ವರಪ್ಪನ ಕತೆನೂ ಮುಗಿಲಿ ಅಂತ ಕಾಯ್ತಿದ್ರು ಸಾರ್.”

“ಅದು ನನಿಗೂ ಗೊತ್ತು ಕಂಡ್ರಿ. ನಾನೇನು ಅಷ್ಟು ದಡ್ಡ ಅಲ್ಲ.”

“ಆದ್ರು ನೀವು ಅಸಹಾಯಕರಾಗಿ ಅಂತ್ಯವಾಗ್ತಿರಿ ಸಾರ್.”

“ಹ್ಯಂಗ್ರೀ?”

“ಎಡೂರಪ್ಪನ ಮಕ್ಕಳು ಎಂ.ಪಿ ಎಂ.ಎಲ್.ಎ ಆಯ್ತರೆ. ಸಿಟ್ಟು ಸ್ವಾಭಿಮಾನ ತೋರಿದ ಶೆಟ್ಟರ್ ಎಂ.ಎಲ್.ಎ ಆಯ್ತರೆ. ನೀವು ಅಪ್ಪಾ ಮಗ ಏನೂ ಆಗಲವಲ್ಲ ಸಾ.”

“ಆಗದಿದ್ರೆ ಕತ್ತೆ ಬಾಲ, ಸಂಘದ ಕಾರ್ಯಕರ್ತರಾಗಿರ್ತಿವಿ.”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...