Homeಮುಖಪುಟ`ಎಫ್.ಐ.ಆರ್. ದಾಖಲಾಗಿದೆ, ಮನವಿ ಈಡೇರಿದೆ’: ಕುಸ್ತಿಪಟುಗಳ ಅರ್ಜಿ ತೆರವುಗೊಳಿಸಿದ ಸುಪ್ರೀಂಕೋರ್ಟ್

`ಎಫ್.ಐ.ಆರ್. ದಾಖಲಾಗಿದೆ, ಮನವಿ ಈಡೇರಿದೆ’: ಕುಸ್ತಿಪಟುಗಳ ಅರ್ಜಿ ತೆರವುಗೊಳಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತೆರವುಗೊಳಿಸಿರುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಹೇಳಿದೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ನೋಂದಣಿ ಮಾಡಬೇಕೆಂಬುದು ಕುಸ್ತಿಪಟುಗಳ ಮನವಿಯ ಮುಖ್ಯ ಉದ್ದೇಶವಾಗಿತ್ತು.

“ಈ ಪ್ರಕ್ರಿಯೆಗಳ ವ್ಯಾಪ್ತಿಯನ್ನು ಗಮನದಲ್ಲಿಟ್ಟುಕೊಂಡು, ನಾವು ಈ ಹಂತದಲ್ಲಿ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸುತ್ತೇವೆ. ಅರ್ಜಿದಾರರು ಬೇರೇನಾದರೂ ಬಯಸಿದರೆ, ಅವರು ಮ್ಯಾಜಿಸ್ಟ್ರೇಟ್ ಅಥವಾ ಅದರ ಅಧಿಕಾರ ವ್ಯಾಪ್ತಿಯಲ್ಲಿರುವ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು” ಎಂದು ಸಿಜೆಐ ಡಿವೈ ಚಂದ್ರಚೂಡ್ ಸೂಚಿಸಿದ್ದಾರೆ.

ಅಪ್ರಾಪ್ತ ಸಂತ್ರಸ್ತೆ ಸೇರಿದಂತೆ ಏಳು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರಮುಖ ಕುಸ್ತಿಪಟುಗಳು ಹಲವು ದಿನಗಳಿಂದ ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೋರ್ಟ್ ನಿರ್ದೇಶನದಂತೆ ದೂರುದಾರರಿಗೆ ಭದ್ರತೆ ಒದಗಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.

“ಅಪ್ರಾಪ್ತ ದೂರುದಾರರಿಗೆ ಸೂಕ್ತ ಭದ್ರತೆ ಒದಗಿಸಲಾಗಿದೆ. ಇತರ ದೂರುದಾರರಿಗೆ ಬಂದಿರುವ ಬೆದರಿಕೆಯ ಮೌಲ್ಯಮಾಪನ ನಡೆಸಲಾಗಿದೆ. ಮೌಲ್ಯಮಾಪನದ ಪ್ರಕಾರ ಯಾವುದೇ ಬೆದರಿಕೆ ಇಲ್ಲ. ಆದರೆ ಅವರಿಗೆ ಭದ್ರತೆ ಒದಗಿಸುವುದು ಸಮಂಜಸವೆಂದು ಕಂಡುಬಂದಿದೆ. ಎಲ್ಲಾ ದೂರುದಾರರಿಗೆ ಭದ್ರತೆ ಒದಗಿಸಲಾಗಿದೆ’’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತನಿಖೆ ನಡೆಯುತ್ತಿದೆ ಮತ್ತು ದೂರುದಾರರನ್ನು ಪೊಲೀಸರು ಪರಿಶೀಲಿಸಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ದೂರುದಾರರ ಪರ ವಕೀಲರಾದ ಹಿರಿಯ ವಕೀಲ ನರೇಂದ್ರ ಹೂಡಾ ಅವರು ಪ್ರತಿಕ್ರಿಯಿಸಿ, “ಎಫ್‌ಐಆರ್ ದಾಖಲಿಸುವಲ್ಲಿ ಮತ್ತು ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ’’ ಎಂದು ಆರೋಪಿಸಿದ್ದಾರೆ.

‘’ಟಿ.ವಿ. ಚಾನೆಲ್ಗಳಲ್ಲಿ ಆರೋಪಿಯು ದೂರುದಾರರ ಹೆಸರು ಬಹಿರಂಗಪಡಿಸಿದ್ದಾನೆ. ಇದು ಕಾನೂನಿಗೆ ವಿರುದ್ಧವಾಗಿದೆ’’ ಎಂದು ಅವರು ವಾದಿಸಿದ್ದಾರೆ.

ದೆಹಲಿ ಪೊಲೀಸರ ನಡವಳಿಕೆಯಿಂದ ಬೇಸತ್ತಿರುವ ದೂರುದಾರರು, ಸುಪ್ರೀಂ ಪೀಠವೇ ತನಿಖೆಯನ್ನು ಮೇಲ್ವಿಚಾರಣೆ ಮಾಡುವಂತೆ ಕೋರಿದರು. ಆದರೆ ಪೀಠವು ಅವರ ಮನವಿಯನ್ನು ತಿರಸ್ಕರಿಸಿತು, ಮುಂದಿನ ಕ್ರಮಕ್ಕಾಗಿ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಹೋಗಬಹುದು ಎಂದು ಸ್ಪಷ್ಟಪಡಿಸಿದೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ತೆರಳಿದ ನಂತರ, ದೆಹಲಿ ಪೊಲೀಸರು ಏಪ್ರಿಲ್ 28 ರಂದು ಕುಸ್ತಿಪಟುಗಳ ದೂರಿನ ಆಧಾರದ ಮೇಲೆ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಆರ್ ದಾಖಲಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ನಂತರ ಪೊಲೀಸರು ಆತನ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದರು ಮತ್ತು ಎಫ್‌ಐಆರ್‌ಗಳ ಒಂದು ಪ್ರತಿಯನ್ನು ಕುಸ್ತಿಪಟುಗಳಿಗೆ ಹಸ್ತಾಂತರಿಸಲಾಯಿತು.

ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪೊಲೀಸ್ ಉಪ ಆಯುಕ್ತ (ನವದೆಹಲಿ) ಪ್ರಣವ್ ತಯಾಲ್, “ಮೊದಲನೆಯದು ಅಪ್ರಾಪ್ತ ಸಂತ್ರಸ್ತೆಯ ಆರೋಪಗಳಿಗೆ ಸಂಬಂಧಿಸಿದೆ, ಇದನ್ನು ಪೋಕ್ಸೊ ಕಾಯ್ದೆಯಡಿಯಲ್ಲಿ ಮತ್ತು ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಜೊತೆಯಲ್ಲಿ ದಾಖಲಿಸಲಾಗಿದೆ’’ ಎಂದಿದ್ದಾರೆ.

ಮುಂದುವರಿದು, “ಎರಡನೇ ಎಫ್‌ಐಆರ್ ಅನ್ನು ಇತರ, ವಯಸ್ಕ ದೂರುದಾರರು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲಿಸಲಾಗಿದೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ  ಕ್ರಮ ಜರುಗಿಸಲಾಗಿದೆ’’ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...