Homeಕರ್ನಾಟಕಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

ಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

- Advertisement -
- Advertisement -

“ಕೆಲವು ಟ್ವಿಟರ್ ಬಳಕೆದಾರರು ನನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಮತ್ತು ನನ್ನನ್ನು ಕೊಲೆ ಮಾಡುವುದಕ್ಕೆ ಕರೆ ನೀಡಿದ್ದಾರೆ’’ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ವಿಟರ್ ಹ್ಯಾಂಡಲ್ @Cyber_Huntss ಮತ್ತು ಹೆಸರಿಲ್ಲದ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಮಾಡುವುದು- ಈ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಎಫ್.ಐ.ಆರ್.ನಲ್ಲಿ ಹೆಸರಿಸಲಾಗಿದೆ.

ಆದರೆ ಎಫ್‌ಐಆರ್‌ನಲ್ಲಿ ಮಾಜಿ ಒಪಿಇಂಡಿಯಾ ಸಂಪಾದಕ ಅಜೀತ್ ಭಾರ್ತಿ ಹೆಸರನ್ನೂ ಸೇರಿಸುವಂತೆ ಪೊಲೀಸರಲ್ಲಿ ಜುಬೇರ್ ಒತ್ತಾಯಿಸಿದ್ದಾರೆ. “ಅಜಿತ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಸರಣಿ ಅಪರಾಧಗಳನ್ನು ಎಸಗಿದ್ದಾರೆ, ಕಾನೂನು ಕ್ರಮ ಜರುಗಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಫ್ಯಾಕ್ಟ್ ಚೆಕ್  ವೆಬ್‌ಸೈಟ್‌ `ಆಲ್ಟ್ ನ್ಯೂಸ್’ ಸಹ-ಸಂಸ್ಥಾಪಕ ಜುಬೇರ್ ಅವರು ಏಪ್ರಿಲ್‌ನಲ್ಲಿ 15 ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟ್ವಿಟರ್ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿಳಾಸವನ್ನು ಬಹಿರಂಗಪಡಿಸಿವೆ, ಕೊಲೆ ಬೆದರಿಕೆಗಳನ್ನು ಕಳುಹಿಸಲಾಗಿದೆ ಮತ್ತು ಗುಂಪುಗಳ ನಡುವೆ ದ್ವೇಷದ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ರಂಜಾನ್ ಮಾಸದ ವೇಳೆ ಸಾಕುಪ್ರಾಣಿಗಳ ಫುಡ್ ವೆಬ್‌ಸೈಟ್ ಮೂಲಕ 400 ಗ್ರಾಂ ಹಂದಿಮಾಂಸದ ಪ್ಯಾಕೆಟ್ ಅನ್ನು ಏಪ್ರಿಲ್ 9 ರಂದು ಟ್ವಿಟರ್ ಹ್ಯಾಂಡಲ್ @Cyber_Huntss ನನಗೆ ಕಳುಹಿಸಿದೆ ಎಂದು ಜುಬೈರ್ ಹೇಳಿದ್ದಾರೆ.

ಜುಬೇರ್ ಅವರಿಗೆ ಹಂದಿ ಮಾಂಸವನ್ನು ಆರ್ಡರ್ ಮಾಡಿರುವುದಾಗಿ ಈ ಹ್ಯಾಂಡಲ್ನ್ ನಲ್ಲಿ ಟ್ವೀಟ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮೂಲಕ ಬೆಂಗಳೂರಿನಲ್ಲಿರುವ ಜುಬೈರ್ ಅವರ ವಿಳಾಸವನ್ನು ಬಹಿರಂಗಪಡಿಸಲಾಗಿತ್ತು. ನಂತರ ಟ್ವೀಟ್ ಅನ್ನು ಅಳಿಸಲಾಗಿತ್ತು.

“ನನ್ನ ಧಾರ್ಮಿಕ ಗುರುತನ್ನು ಟಾರ್ಗೆಟ್ ಮಾಡಲಾಗಿದೆ. ಮುಸ್ಲಿಮರು ಸೇವಿಸದ ಹಂದಿಮಾಂಸವನ್ನು ಕಳಿಸುವ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ’’ ಎಂದು ಜುಬೇರ್ ತಿಳಿದ್ದಾರೆ. “ನನ್ನ ಧಾರ್ಮಿಕ ಅಸ್ಮಿತೆ ಮತ್ತು ಘನತೆಯ ಮೇಲೆ ದಾಳಿ ಮಾಡುವುದಕ್ಕೆ ನಿಷೇಧಿತ ಮಾಂಸವನ್ನು ರಂಜಾನ್ ಮಾಸದ ವೇಳೆ ನನಗೆ ಕಳುಹಿಸಲಾಗಿದೆ’’ ಎಂದು ಅವರು ಆರೋಪಿಸಿದ್ದಾರೆ.

ನನ್ನ ವಿಳಾಸವನ್ನು ಬಹಿರಂಗಪಡಿಸಿರುವ ಟ್ವೀಟ್, ತನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಜುಬೇರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮಾರ್ಚ್ ತಿಂಗಳಿನಿಂದ ನಾನು ಸ್ವೀಕರಿಸಿರುವ ಕೊನೆಯಿಲ್ಲದ ದ್ವೇಷದ ಕರೆಗಳೊಂದಿಗೆ ಈ ಟ್ವೀಟ್ ಅನ್ನು ಪರಿಗಣಿಸಬೇಕು’’ ಎಂದು ಜುಬೇರ್ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜುಬೈರ್ ಅವರು ಆನ್‌ಲೈನ್ ನಿಂದನೆಯನ್ನು ವ್ಯಾಪಕವಾಗಿ ಎದುರಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಿಂದುತ್ವ ಬೆಂಬಲಿಗರಿಂದ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಹಲವಾರು ಹಿಂದುತ್ವವಾದಿ ಪ್ರಭಾವಿಗಳು ಆನ್‌ಲೈನ್‌ನಲ್ಲಿ ಬೆದರಿಕೆಗಳನ್ನು ಹಾಕಿದ್ದರು ಮತ್ತು ಕೆಲವರು ಜುಬೇರ್ ವಿರುದ್ಧ ಕಾನೂನು ಮೀರಿದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೆದರಿಸಿದ್ದರು.

ತಮಿಳುನಾಡಿಗೆ ವಲಸೆ ಬಂದ ಬಿಹಾರಿ ಕಾರ್ಮಿಕರ ಹತ್ಯೆಯಾಗಿದೆ ಎಂದು ಹಬ್ಬಿಸಲಾಗಿದ್ದ ಸುಳ್ಳುಗಳನ್ನು ಆಲ್ಟ್ ನ್ಯೂಸ್ ಬಯಲಿಗೆಳೆದಿತ್ತು. “ಈ ಸುಳ್ಳುಗಳನ್ನು ಭೇದಿಸಿದ ನಂತರ ನನಗೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ’’ ಎಂದು ಜುಬೇರ್ ದೂರಿದ್ದಾರೆ.

ಆ ಸಮಯದಲ್ಲಿ ಒಪಿಇಂಡಿಯಾದ ಮಾಜಿ ಸಂಪಾದಕ ಅಜೀತ್ ಭಾರ್ತಿ ಟ್ವೀಟ್ ಮಾಡಿ, “ಯೋಜನೆ ಚಾಲನೆ ಪಡೆದಿದೆ. ಈ ಬಾರಿ ಅವನು ಸಂಪೂರ್ಣವಾಗಿ ಸುನ್ನತಿ ಮಾಡಿಸಿಕೊಳ್ಳುತ್ತಾನೆ, ಅವನಿಗೆ ಮೂತ್ರ ವಿಸರ್ಜಿಸಲು ಪೈಪ್ ಅಗತ್ಯವಿದೆ’’ ಎಂದು ಬೆದರಿಕೆ ಹಾಕಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...