Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಪಾವಗಡ: ಈ ಬಾರಿಯೂ ವೆಂಕಟರಮಣಪ್ಪ - ತಿಮ್ಮರಾಯಪ್ಪ ಕುಟುಂಬದ ನಡುವೆಯೇ ಹಣಾಹಣಿ

ಪಾವಗಡ: ಈ ಬಾರಿಯೂ ವೆಂಕಟರಮಣಪ್ಪ – ತಿಮ್ಮರಾಯಪ್ಪ ಕುಟುಂಬದ ನಡುವೆಯೇ ಹಣಾಹಣಿ

- Advertisement -
- Advertisement -

ಆಂಧ್ರ ಪ್ರದೇಶದ ಗಡಿಗೆ ಅಂಟಿಕೊಂಡಿರುವ, ಹೆಚ್ಚಾಗಿ ತೆಲುಗು ಭಾಷಿಕರೆ ಇರುವ ತುಮಕೂರು ಜಿಲ್ಲೆಯ ಹಿಂದುಳಿದ ತಾಲ್ಲೂಕು ಎನಿಸಿಕೊಂಡ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಬಿರುಸು ಪಡೆದಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪಾವಗಡ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪನವರು ಸದ್ಯ ಶಾಸಕರಾಗಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಅವರು ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು ತಮ್ಮ ಪುತ್ರ ಹೆಚ್.ವಿ ವೆಂಕಟೇಶ್‌ರವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವಂತೆ ನೋಡಿಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಕೂದಲೆಳೆ ಅಂತರದಲ್ಲಿ ಸೋಲು ಕಂಡ ಜೆಡಿಎಸ್ ಪಕ್ಷದ ತಿಮ್ಮರಾಯಪ್ಪನವರು ಮತ್ತೆ ಕಣಕ್ಕೆ ಧುಮುಕಿದ್ದಾರೆ. ಕ್ಷೇತ್ರದ ಸ್ಥಿತಿಗತಿ ಹೀಗಿದೆ.

ಇದುವರೆಗೂ ಪಾವಗಡದಲ್ಲಿ 15 ಚುನಾವಣೆಗಳು ನಡೆದಿವೆ. ಅದರಲ್ಲಿ 10 ಬಾರಿ ಕಾಂಗ್ರೆಸ್ ಪಕ್ಷವೇ ಜಯ ಗಳಿಸಿದೆ. ಜೆಡಿಎಸ್ ಎರಡು ಬಾರಿ, ಜನತಾದಳ ಮತ್ತು ಜನತಾ ಪಕ್ಷ ತಲಾ ಒಮ್ಮೆ ಮತ್ತು ಒಂದು ಬಾರಿ ಪಕ್ಷೇತರ ಅಭ್ಯರ್ಥಿ ಜಯ ಗಳಿಸಿದ್ದಾರೆ. ಈ ಕ್ಷೇತ್ರದ ವಿಶೇಷವೆಂದರೆ ಇಲ್ಲಿ ಯಾರೂ ಸಹ ಸತತವಾಗಿ ಎರಡನೇ ಬಾರಿ ಗೆಲ್ಲಲು ಸಾಧ್ಯವಾಗಿಲ್ಲ.

1951ರಲ್ಲಿ ಮೈಸೂರು ಸಂಸ್ಥಾನದ ಭಾಗವಾಗಿದ್ದಾಗ ಪಾವಗಡ ದ್ವಿಸದಸ್ಯತ್ವ ಹೊಂದಿತ್ತು. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. 1978ರಲ್ಲಿ ಇಂದಿರಾ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವವರೆಗೂ ಕಾಂಗ್ರೆಸ್ ಪಾರುಪತ್ಯ ಮೆರೆದಿತ್ತು. ಆದರೆ 1983ರಲ್ಲಿ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿ ಉಗ್ರನರಸಿಂಹಪ್ಪ ಗೆಲುವು ಕಂಡರು. 1985ರಲ್ಲಿ ಸೋಮ್ಲಾ ನಾಯ್ಕ್ ಜನತಾ ಪಕ್ಷದಿಂದ ಆಯ್ಕೆಯಾಗಿದ್ದರು.

1989ರಲ್ಲಿ ವೆಂಕಟರಮಣಪ್ಪನವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. 1994ರಲ್ಲಿ ಸೋಮ್ಲಾ ನಾಯಕ್ ಜನತಾದಳದಿಂದ ಜಯ ಕಂಡರೆ 1999ರಲ್ಲಿ ಮತ್ತೆ ವೆಂಕಟರಮಣಪ್ಪನವರು ಕಾಂಗ್ರೆಸ್‌ನಿಂದ ಆರಿಸಿಬಂದರು. 2004ರಲ್ಲಿ ಜೆಡಿಎಸ್‌ನ ಕೆ.ಎಂ ತಿಮ್ಮರಾಯಪ್ಪನವರು ಗೆದ್ದುಬಂದರು. 2008ರಲ್ಲಿ ವೆಂಕಟರಮಣಪ್ಪನವರ ಬದಲು ಡಾ.ಗಾಯಿತ್ರಿ ದೇವಿ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಸೋಮ್ಲಾ ನಾಯ್ಕ್ ಬಿಜೆಪಿ ಸೇರಿ ಅಭ್ಯರ್ಥಿಯಾದರು. ಜೆಡಿಎಸ್‌ನಿಂದ ತಿಮ್ಮರಾಯಪ್ಪನವರು ಕಣಕ್ಕಿಳಿದಿದ್ದರು. ಆದರೆ ವೆಂಕಟರಮಣಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಕಂಡು ಮೂರನೇ ಬಾರಿಗೆ ಶಾಸಕರಾದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕನೇ ಸ್ಥಾನಕ್ಕೆ ಕುಸಿದಿತ್ತು!

2013ರ ಚುನಾವಣೆಯಲ್ಲಿ ವೆಂಕಟರಮಣಪ್ಪನವರ ಬದಲಿಗೆ ಅವರ ಪುತ್ರ ಹೆಚ್.ವಿ ವೆಂಕಟೇಶ್‌ ಕಾಂಗ್ರೆಸ್ ಅಭ್ಯರ್ಥಿಯಾದರು. ಜೆಡಿಎಸ್‌ನಿಂದ ತಿಮ್ಮರಾಯಪ್ಪನವರು ಕಣಕ್ಕಿಳಿದರು. ಇಬ್ಬರ ನಡುವಿನ ಪೈಪೋಟಿಯಲ್ಲಿ ತಿಮ್ಮರಾಯಪ್ಪನವರು 4,863 ಮತಗಳ ಅಂತರದಲ್ಲಿ ಗೆದ್ದು ಎರಡನೇ ಭಾರಿಗೆ ಶಾಸಕರಾದರು.

2018ರಲ್ಲಿ ಕಾಂಗ್ರೆಸ್‌ನಿಂದ ಮತ್ತೆ ವೆಂಕಟರಮಣಪ್ಪನವರು ಕಣಕ್ಕಿಳಿದರು. ಜೆಡಿಎಸ್‌ನ ತಿಮ್ಮರಾಯಪ್ಪನವರು ಎದುರಾಳಿಯಾಗಿದ್ದರು. ಇವರಿಬ್ಬರ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ವೆಂಕಟರಮಣಪ್ಪನವರು 72,974 ಮತಗಳನ್ನು ಪಡೆದರೆ ತಿಮ್ಮರಾಯಪ್ಪನವರು 72,565 ಮತಗಳನ್ನು ಪಡೆದು ಕೇವಲ 409 ಮತಗಳ ಅಂತರದಿಂದ ಸೋಲುಂಡರು. ವೆಂಕಟರಮಣಪ್ಪ ನಾಲ್ಕನೇ ಬಾರಿಗೆ ಶಾಸಕರಾಗಿ, ಸಚಿವರೂ ಆಗಿದ್ದರು.

ಒಟ್ಟು 2 ಲಕ್ಷ ಮತಗಳಿರುವ ಪಾವಗಡ ಪ.ಜಾ ಮೀಸಲು ಕ್ಷೇತ್ರವಾಗಿದೆ. ಪರಿಶಿಷ್ಟ ಜಾತಿಯ 55,000 ಮತಗಳಿದ್ದರೆ, ಪರಿಶಿಷ್ಟ ಪಂಗಡ 35,000 ಮತಗಳಿವೆ. 10,000 ಮುಸ್ಲಿಂ ಮತಗಳು ಇವೆ ಎನ್ನಲಾಗಿದೆ.

ಹಾಲಿ ಪರಿಸ್ಥಿತಿ

ವೆಂಕಟರಮಣಪ್ಪನವರು ಯಾವುದೇ ಅಹಂ ಇಲ್ಲದೆ ಎಲ್ಲರ ಕೈಗೆ ಸಿಗುತ್ತಾರೆ. ಜನರ ಕೆಲಸಗಳನ್ನು ಮಾಡಿಕೊಡುತ್ತಾರೆ. ಎಲ್ಲರ ಫೋನ್ ತೆಗೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತವೆ. ಆದರೆ ತಮ್ಮ ಊರಿಗೆ ರಸ್ತೆ ಕೇಳಿದ ಯುವಕನ ಕಪಾಳಕ್ಕೆ ಹೊಡೆದಿದ್ದರು, 4 ದಶಕಗಳಿಂದ ಕಾಂಗ್ರೆಸ್‌ನಲ್ಲಿ ಅವರೊಬ್ಬರೆ ಅಧಿಕಾರದಲ್ಲಿದ್ದಾರೆ ಎಂಬ ಆರೋಪಗಳು ಸಹ ಅವರ ಮೇಲಿವೆ. ಅವರ ಕುಟುಂಬ ಸದಸ್ಯರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಕೊಡಬಾರದು ಎಂಬ ಒತ್ತಾಯವನ್ನು ಸ್ಥಳೀಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮುಂದಿಟ್ಟಿದ್ದರು. ಆದರೆ ಅದಕ್ಕೆ ಸೊಪ್ಪು ಹಾಕದ ಕಾಂಗ್ರೆಸ್ ಅವರು ಪುತ್ರ ಹೆಚ್.ವಿ ವೆಂಕಟೇಶ್‌ರವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿಸಿದೆ.

ಜೆಡಿಎಸ್ ಪಕ್ಷವು ಮಾಜಿ ಶಾಸಕ ತಿಮ್ಮರಾಯಪ್ಪನವರಿಗೆ ಮತ್ತೊಂದು ಅವಕಾಶ ನೀಡಿದೆ. ಅವರು ಕ್ಷೇತ್ರದ ಸಂಪ್ರದಾಯದಂತೆ ಈ ಬಾರಿ ಜನ ತನ್ನನ್ನು ಆಯ್ಕೆ ಮಾಡುತ್ತಾರೆ ಎಂದು ನಂಬಿ ಕೆಲಸ ಮಾಡುತ್ತಿದ್ದಾರೆ.

ಕೃಷ್ಣ ನಾಯ್ಕ್ ಎಂಬುವವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜನಾರ್ದನ ರೆಡ್ಡಿಯ ಕೆಆರ್‌ಪಿಪಿ ಪಕ್ಷದಿಂದ ನೇರಳೇಕುಂಟೆ ನಾಗೇಂದ್ರ ಕುಮಾರ್ ಕಣಕ್ಕಿಳಿದಿದ್ದಾರೆ.

2023ರ ಸಾಧ್ಯತೆಗಳು

ಜೆಡಿಎಸ್ ಪಕ್ಷದ ತಿಮ್ಮರಾಯಪ್ಪ ಅವರು ಪರಿಶಿಷ್ಟ ಜಾತಿಯ ಎಡಗೈ ಸಮುದಾಯದವರಾಗಿದ್ದಾರೆ. ಕಾಂಗ್ರೆಸ್‌ನ ಹೆಚ್.ವಿ ವೆಂಕಟೇಶ್ ಬೋವಿ ಸಮುದಾಯಕ್ಕೆ ಸೇರಿದ್ದಾರೆ. ಕೆಆರ್‌ಪಿಪಿ ಪಕ್ಷದ ನಾಗೇಂದ್ರ ಕುಮಾರ್ ಸಹ ಬೋವಿ ಸಮುದಾಯದವರೆ ಆಗಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯ್ಕ್ ಲಂಬಾಣಿ ಸಮುದಾಯಕ್ಕೆ ಸೇರಿದ್ದಾರೆ. ಆದರೆ ನೇರ ಪೈಪೋಟಿ ಇರುವುದು ಜೆಡಿಎಸ್‌ನ ತಿಮ್ಮರಾಯಪ್ಪ ಮತ್ತು ಕಾಂಗ್ರೆಸ್‌ನ ಹೆಚ್.ವಿ ವೆಂಕಟೇಶ್‌ರವರ ನಡುವೆ. ಇಲ್ಲಿ ಒಮ್ಮೆ ಗೆದ್ದವರು ಮುಂದಿನ ಚುನಾವಣೆಯಲ್ಲಿ ಗೆದ್ದ ಇತಿಹಾಸವಿಲ್ಲ. ಆದರೆ ಹಾಲಿ ಅಭ್ಯರ್ಥಿಗಳಿಬ್ಬರೂ ತಮ್ಮ ಹಿಂದಿನ ಚುನಾವಣೆಯಲ್ಲಿ ಸೋಲು ಕಂಡವರೆ ಆಗಿದ್ದು, ಜನ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ಫಲಿತಾಂಶದ ದಿನವೇ ತಿಳಿಯಬಹುದಾಗಿದೆ.

ಇದನ್ನೂ ಓದಿ; ಕೆ.ಆರ್.ನಗರ ಕ್ಷೇತ್ರ ಸಮೀಕ್ಷೆ: ಅನುಕಂಪದಲ್ಲಿ `ರವಿ’ ಮೂಡುವರೇ? ಪ್ರಭಾವದಲ್ಲಿ `ಸಾರಾ’ ಗೆಲ್ಲುವರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...