Homeಕರ್ನಾಟಕಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

ಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

- Advertisement -
- Advertisement -

ಕೊಳ್ಳೇಗಾಲ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎನ್.ಮಹೇಶ್ ಅವರಿಗೆ ಅನೇಕ ಕಡೆಯಲ್ಲಿ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಕ್ಷೇತ್ರದ ಮತದಾರರು ಘೇರಾವ್ ಹಾಕುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

ಬಹುಜನ ಚಳವಳಿಯ ಮೂಲಕ ಮುಂಚೂಣಿಗೆ ಬಂದು ಬಿಎಸ್ಪಿ ರಾಜ್ಯಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಮಹೇಶ್ ಅವರು ಸತತ ಸೋಲುಗಳನ್ನು ಕಂಡಿದ್ದರು. ಈ ಅನುಕಂಪದ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು 2018ರ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಮತದಾರರು ಬೆಂಬಲಿಸಿದ್ದರು.

ಬಿಎಸ್ಪಿಯಿಂದ ಆಯ್ಕೆಯಾದ ಏಕೈಕ ಶಾಸಕರೂ ಅವರಾಗಿದ್ದರು. ಚುನಾವಣೆ ಮುಂಚಿತವಾಗಿ ಜೆಡಿಎಸ್- ಬಿಎಸ್ಪಿ ಹೊಂದಾಣಿಕೆ ಮಾಡಿಕೊಂಡಿದ್ದರ ಫಲವಾಗಿ, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎನ್.ಮಹೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರೂ ಆಗಿದ್ದರು. ಆದರೆ ಮೈತ್ರಿ ಮುರಿದುಬಿದ್ದ ಬಳಿಕ ಎನ್.ಮಹೇಶ್ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡರು.

ಆಪರೇಷನ್ ಕಮಲ ನಡೆದು ಬಿಜೆಪಿ ಸರ್ಕಾರ ರಚನೆಯಾಗುವ ವೇಳೆ ಕೇಸರಿ ಪಡೆಯ ಜೊತೆಯಲ್ಲಿ ನಿಂತರು. ಇದು ಬಿಎಸ್ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು. ಬಿಎಸ್ಪಿಯಿಂದ ಉಚ್ಚಾಟನೆಗೆ ಒಳಗಾದರು. ಆದರೆ ಬಿಎಸ್ಪಿಯ ಏಕೈಕ ಶಾಸಕರು ಅವರಾಗಿದ್ದರಿಂದ ಪಕ್ಷಾಂತರ ನಿಷೇಧದ ನಿಯಮಗಳು ಅನ್ವಯವಾಗದೆ ಬಚಾವಾಗಿ ಕ್ಷೇತ್ರದ ಶಾಸಕರಾಗಿ ಮುಂದುವರಿದರು. ಬಳಿಕ ಅಧಿಕೃತವಾಗಿ ಬಿಜೆಪಿ ಸೇರಿಕೊಂಡು ಹಿಂದುತ್ವ ಸಿದ್ಧಾಂತದ ಸಖರಾದರು.

ಹಿಂದುತ್ವ ಸಿದ್ಧಾಂತದ ಪ್ರವರ್ತಕ ವಿ.ಡಿ.ಸಾವರ್ಕರ್ ಜಪವನ್ನು ಎನ್.ಮಹೇಶ್ ಅವರು ಆರಂಭಿಸಿದ್ದು, ದಲಿತ ಮತ್ತು ಇತರ ಹಿಂದುಳಿದ ವರ್ಗಗಳಲ್ಲಿ ಆಕ್ರೋಶ ವ್ಯಕ್ತವಾಗಲು ಕಾರಣವಾಯಿತು. ಈ ಚುನಾವಣೆಯಲ್ಲಿ ಎನ್.ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಪ್ರಚಾರಕ್ಕೆ ಹೋದ ಬಹುತೇಕ ಕಡೆಯಲ್ಲಿ ಎನ್.ಮಹೇಶ್ ವಿರುದ್ಧ ಮತದಾರರು ಧಿಕ್ಕಾರ ಕೂಗುತ್ತಿದ್ದಾರೆ.

“ನೀವು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಮುಖ್ಯವಾಗಿ ತತ್ವ ಸಿದ್ಧಾಂತವನ್ನು ಗಾಳಿಗೆ ತೂರಿ ಏಕಾಏಕಿ ಬಿಜೆಪಿಗೆ ಹೋದಿರಿ ಎಂಬುದು ನಮ್ಮ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ’’ ಎಂದು `ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಕ್ಷೇತ್ರದ ಮತದಾರರೊಬ್ಬರು ತಿಳಿಸಿದರು.

“ದಲಿತ ಮತದಾರರು ಇರುವಲ್ಲಿ ಎನ್.ಮಹೇಶ್ ಅವರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಅನೇಕರು ಎನ್.ಮಹೇಶ್ ಅವರಿಂದ ದೂರವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ’’ ಎಂದು ಅವರು ಮಾಹಿತಿ ನೀಡಿದರು.
ಕ್ಷೇತ್ರದ ಯಳಂದೂರು ತಾಲ್ಲೂಕಿನ ಮಸಣಪುರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಮುಖಂಡರು ಮಹೇಶ್ ಅವರಿಗೆ ಘೇರಾವ್ ಹಾಕಿದ್ದರು. ಈವರೆಗೆ ಗ್ರಾಮಕ್ಕೆ ನೀವು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಒಂದು ದಿನದ ನಂತರ ಗ್ರಾಮಸ್ಥರು ಘಟನೆಗೆ ವಿಷಾದ ವ್ಯಕ್ತಪಡಿಸಿರುವ ವರದಿಯೂ ಆಗಿದೆ.

“ಎನ್. ಮಹೇಶ್ ಸತತವಾಗಿ ಸೋಲುತ್ತಿದ್ದರು ಎಂದು ಜನರು ಬೆಂಬಲಿಸಿದರು. ವರ್ತಕ ಸಮುದಾಯ ಅವರ ಬೆನ್ನೆಲುಬಾಗಿ ನಿಂತಿತು. ಎನ್.ಮಹೇಶ್ ಅವರಂತೆಯೇ ನಿರಂತರವಾಗಿ ಕಾಂಗ್ರೆಸ್ಸಿನ ಎ.ಆರ್.ಕೃಷ್ಣಮೂರ್ತಿಯವರೂ ಸೋಲಿದ್ದಾರೆ. ಎನ್.ಮಹೇಶ್ ಅವರ ಮೇಲೆ ಇದ್ದ ಅನುಕಂಪ ಈಗ ಎ.ಆರ್.ಕೆ.ಯತ್ತ ತಿರುಗಿದೆ’’ ಎಂದು ಮತ್ತೊಬ್ಬ ಮತದಾರರು ಹೇಳಿದರು.

ಕ್ಷೇತ್ರದ ಇರಸವಾಡಿ ಗ್ರಾಮದಲ್ಲಿ, ಕೊಳ್ಳೇಗಾಲ ಪಟ್ಟಣದ ಒಂದು ಕಡೆ ಘೇರಾವ್ ಹಾಕಿರುವ ಘಟನೆ ನಡೆದಿದೆ. ಉಮ್ಮತ್ತೂರು ಗ್ರಾಮದಲ್ಲಿ ದೊಡ್ಡ ಮಟ್ಟದಲ್ಲಿ ವಿರೋಧವನ್ನು ಮಹೇಶ್ ಎದುರಿಸಿದ್ದಾರೆ.

ಉಮ್ಮತ್ತೂರಿಗೆ ಪ್ರಚಾರಕ್ಕೆ ಬಂದಿದ್ದ ಮಹೇಶ್ ಅವರು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅಥವಾ ಚಿತ್ರಕ್ಕೆ ಮಾಲಾರ್ಪಣೆ ಮಾಡದೆ, ಬಸವಣ್ಣನವರ ಪುತ್ಥಳಿಯತ್ತ ತೆರಳಿದ್ದು ಇಲ್ಲಿನ ದಲಿತರನ್ನು ಕೆರಳಿಸಿದೆ.

“ಅಂಬೇಡ್ಕರ್ ಅವರಿಗೆ ನಮಿಸದೆ, ನೀವು ಬಸವಣ್ಣನವರ ಪುತ್ಥಳಿಯತ್ತ ಹೋದಿರಿ. ನಿಮಗೆ ಲಿಂಗಾಯತ ಮತಗಳು ಬೇಕೇ, ಹೊರತು ದಲಿತರು ಬೇಡವಾಗಿದ್ದಾರೆ. ಅಂಬೇಡ್ಕರ್ ಅವರನ್ನು ಕಡೆಗಣಿಸಿದ್ದೀರಿ’’ ಎಂದು ಪ್ರತಿರೋಧ ತೋರಿದ್ದಾರೆ.

ಯಳಂದೂರು ಪಟ್ಟಣದ ಗೌತಮ್ ಬಡಾವಣೆಯಲ್ಲಿ ಪ್ರಚಾರಕ್ಕೆ ಬಂದ ವೇಳೆಯೂ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.

ಮತ್ತೊಂದೆಡೆ ಎನ್.ಮಹೇಶ್ ಬೆಂಬಲಿಗರು ಈ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ಘೇರಾವ್ ಘಟನೆಗಳ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಇದ್ದಾರೆಂದು ಆರೋಪಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...