Homeಕರ್ನಾಟಕಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

ಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

- Advertisement -
- Advertisement -

ಕೊಳ್ಳೇಗಾಲ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎನ್.ಮಹೇಶ್ ಅವರಿಗೆ ಅನೇಕ ಕಡೆಯಲ್ಲಿ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಕ್ಷೇತ್ರದ ಮತದಾರರು ಘೇರಾವ್ ಹಾಕುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

ಬಹುಜನ ಚಳವಳಿಯ ಮೂಲಕ ಮುಂಚೂಣಿಗೆ ಬಂದು ಬಿಎಸ್ಪಿ ರಾಜ್ಯಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಮಹೇಶ್ ಅವರು ಸತತ ಸೋಲುಗಳನ್ನು ಕಂಡಿದ್ದರು. ಈ ಅನುಕಂಪದ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು 2018ರ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಮತದಾರರು ಬೆಂಬಲಿಸಿದ್ದರು.

ಬಿಎಸ್ಪಿಯಿಂದ ಆಯ್ಕೆಯಾದ ಏಕೈಕ ಶಾಸಕರೂ ಅವರಾಗಿದ್ದರು. ಚುನಾವಣೆ ಮುಂಚಿತವಾಗಿ ಜೆಡಿಎಸ್- ಬಿಎಸ್ಪಿ ಹೊಂದಾಣಿಕೆ ಮಾಡಿಕೊಂಡಿದ್ದರ ಫಲವಾಗಿ, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಎನ್.ಮಹೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರೂ ಆಗಿದ್ದರು. ಆದರೆ ಮೈತ್ರಿ ಮುರಿದುಬಿದ್ದ ಬಳಿಕ ಎನ್.ಮಹೇಶ್ ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡರು.

ಆಪರೇಷನ್ ಕಮಲ ನಡೆದು ಬಿಜೆಪಿ ಸರ್ಕಾರ ರಚನೆಯಾಗುವ ವೇಳೆ ಕೇಸರಿ ಪಡೆಯ ಜೊತೆಯಲ್ಲಿ ನಿಂತರು. ಇದು ಬಿಎಸ್ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು. ಬಿಎಸ್ಪಿಯಿಂದ ಉಚ್ಚಾಟನೆಗೆ ಒಳಗಾದರು. ಆದರೆ ಬಿಎಸ್ಪಿಯ ಏಕೈಕ ಶಾಸಕರು ಅವರಾಗಿದ್ದರಿಂದ ಪಕ್ಷಾಂತರ ನಿಷೇಧದ ನಿಯಮಗಳು ಅನ್ವಯವಾಗದೆ ಬಚಾವಾಗಿ ಕ್ಷೇತ್ರದ ಶಾಸಕರಾಗಿ ಮುಂದುವರಿದರು. ಬಳಿಕ ಅಧಿಕೃತವಾಗಿ ಬಿಜೆಪಿ ಸೇರಿಕೊಂಡು ಹಿಂದುತ್ವ ಸಿದ್ಧಾಂತದ ಸಖರಾದರು.

ಹಿಂದುತ್ವ ಸಿದ್ಧಾಂತದ ಪ್ರವರ್ತಕ ವಿ.ಡಿ.ಸಾವರ್ಕರ್ ಜಪವನ್ನು ಎನ್.ಮಹೇಶ್ ಅವರು ಆರಂಭಿಸಿದ್ದು, ದಲಿತ ಮತ್ತು ಇತರ ಹಿಂದುಳಿದ ವರ್ಗಗಳಲ್ಲಿ ಆಕ್ರೋಶ ವ್ಯಕ್ತವಾಗಲು ಕಾರಣವಾಯಿತು. ಈ ಚುನಾವಣೆಯಲ್ಲಿ ಎನ್.ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಪ್ರಚಾರಕ್ಕೆ ಹೋದ ಬಹುತೇಕ ಕಡೆಯಲ್ಲಿ ಎನ್.ಮಹೇಶ್ ವಿರುದ್ಧ ಮತದಾರರು ಧಿಕ್ಕಾರ ಕೂಗುತ್ತಿದ್ದಾರೆ.

“ನೀವು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಮುಖ್ಯವಾಗಿ ತತ್ವ ಸಿದ್ಧಾಂತವನ್ನು ಗಾಳಿಗೆ ತೂರಿ ಏಕಾಏಕಿ ಬಿಜೆಪಿಗೆ ಹೋದಿರಿ ಎಂಬುದು ನಮ್ಮ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ’’ ಎಂದು `ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಕ್ಷೇತ್ರದ ಮತದಾರರೊಬ್ಬರು ತಿಳಿಸಿದರು.

“ದಲಿತ ಮತದಾರರು ಇರುವಲ್ಲಿ ಎನ್.ಮಹೇಶ್ ಅವರಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಅನೇಕರು ಎನ್.ಮಹೇಶ್ ಅವರಿಂದ ದೂರವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ’’ ಎಂದು ಅವರು ಮಾಹಿತಿ ನೀಡಿದರು.
ಕ್ಷೇತ್ರದ ಯಳಂದೂರು ತಾಲ್ಲೂಕಿನ ಮಸಣಪುರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಮುಖಂಡರು ಮಹೇಶ್ ಅವರಿಗೆ ಘೇರಾವ್ ಹಾಕಿದ್ದರು. ಈವರೆಗೆ ಗ್ರಾಮಕ್ಕೆ ನೀವು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಒಂದು ದಿನದ ನಂತರ ಗ್ರಾಮಸ್ಥರು ಘಟನೆಗೆ ವಿಷಾದ ವ್ಯಕ್ತಪಡಿಸಿರುವ ವರದಿಯೂ ಆಗಿದೆ.

“ಎನ್. ಮಹೇಶ್ ಸತತವಾಗಿ ಸೋಲುತ್ತಿದ್ದರು ಎಂದು ಜನರು ಬೆಂಬಲಿಸಿದರು. ವರ್ತಕ ಸಮುದಾಯ ಅವರ ಬೆನ್ನೆಲುಬಾಗಿ ನಿಂತಿತು. ಎನ್.ಮಹೇಶ್ ಅವರಂತೆಯೇ ನಿರಂತರವಾಗಿ ಕಾಂಗ್ರೆಸ್ಸಿನ ಎ.ಆರ್.ಕೃಷ್ಣಮೂರ್ತಿಯವರೂ ಸೋಲಿದ್ದಾರೆ. ಎನ್.ಮಹೇಶ್ ಅವರ ಮೇಲೆ ಇದ್ದ ಅನುಕಂಪ ಈಗ ಎ.ಆರ್.ಕೆ.ಯತ್ತ ತಿರುಗಿದೆ’’ ಎಂದು ಮತ್ತೊಬ್ಬ ಮತದಾರರು ಹೇಳಿದರು.

ಕ್ಷೇತ್ರದ ಇರಸವಾಡಿ ಗ್ರಾಮದಲ್ಲಿ, ಕೊಳ್ಳೇಗಾಲ ಪಟ್ಟಣದ ಒಂದು ಕಡೆ ಘೇರಾವ್ ಹಾಕಿರುವ ಘಟನೆ ನಡೆದಿದೆ. ಉಮ್ಮತ್ತೂರು ಗ್ರಾಮದಲ್ಲಿ ದೊಡ್ಡ ಮಟ್ಟದಲ್ಲಿ ವಿರೋಧವನ್ನು ಮಹೇಶ್ ಎದುರಿಸಿದ್ದಾರೆ.

ಉಮ್ಮತ್ತೂರಿಗೆ ಪ್ರಚಾರಕ್ಕೆ ಬಂದಿದ್ದ ಮಹೇಶ್ ಅವರು, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅಥವಾ ಚಿತ್ರಕ್ಕೆ ಮಾಲಾರ್ಪಣೆ ಮಾಡದೆ, ಬಸವಣ್ಣನವರ ಪುತ್ಥಳಿಯತ್ತ ತೆರಳಿದ್ದು ಇಲ್ಲಿನ ದಲಿತರನ್ನು ಕೆರಳಿಸಿದೆ.

“ಅಂಬೇಡ್ಕರ್ ಅವರಿಗೆ ನಮಿಸದೆ, ನೀವು ಬಸವಣ್ಣನವರ ಪುತ್ಥಳಿಯತ್ತ ಹೋದಿರಿ. ನಿಮಗೆ ಲಿಂಗಾಯತ ಮತಗಳು ಬೇಕೇ, ಹೊರತು ದಲಿತರು ಬೇಡವಾಗಿದ್ದಾರೆ. ಅಂಬೇಡ್ಕರ್ ಅವರನ್ನು ಕಡೆಗಣಿಸಿದ್ದೀರಿ’’ ಎಂದು ಪ್ರತಿರೋಧ ತೋರಿದ್ದಾರೆ.

ಯಳಂದೂರು ಪಟ್ಟಣದ ಗೌತಮ್ ಬಡಾವಣೆಯಲ್ಲಿ ಪ್ರಚಾರಕ್ಕೆ ಬಂದ ವೇಳೆಯೂ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.

ಮತ್ತೊಂದೆಡೆ ಎನ್.ಮಹೇಶ್ ಬೆಂಬಲಿಗರು ಈ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ಘೇರಾವ್ ಘಟನೆಗಳ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಇದ್ದಾರೆಂದು ಆರೋಪಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...