HomeUncategorizedಮೋದಿ ರೋಡ್‌ ಶೋದಿಂದ ಬೆಂಗಳೂರು ನಿವಾಸಿಗಳಿಗೆ ತೊಂದರೆ: ವೇಳಾಪಟ್ಟಿಯಲ್ಲಿ ಬದಲಾವಣೆ

ಮೋದಿ ರೋಡ್‌ ಶೋದಿಂದ ಬೆಂಗಳೂರು ನಿವಾಸಿಗಳಿಗೆ ತೊಂದರೆ: ವೇಳಾಪಟ್ಟಿಯಲ್ಲಿ ಬದಲಾವಣೆ

- Advertisement -
- Advertisement -

ಪ್ರಧಾನಿ ಮೋದಿ ಅವರು ದಿನಪೂರ್ತಿ ರೋಡ್‌ಶೋ ನಡೆಸುವುದರಿಂದ ಬೆಂಗಳೂರು ನಿವಾಸಿಗಳು ಟ್ರಾಫಿಕ್ ತೊಂದರೆ ಅನುಭವಿಸುತ್ತಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಬಹಳ ಚರ್ಚೆ ನಡೆಯುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಶನಿವಾರ ನಡೆಯಬೇಕಿದ್ದ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಚಾರ ಆರಂಭಿಸಿರುವ ಪ್ರಧಾನಿ ಮೋದಿ ಅವರು, ಕಳೆದ ಶನಿವಾರ ರೋಡ್‌ಶೋ ನಡೆಸಿದರು. ಈ ವೇಳೆ ಸಹಜವಾಗಯೇ ಭದ್ರತೆ ವಿಚಾರವಾಗಿ ಅಲ್ಲಲ್ಲಿ ಬ್ಯಾರಿಕೇಡ್ ಹಾಕುವುದು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಭಾರೀ ಟ್ರಾಫಿಕ್ ಸಮಸ್ಯೆ ಎದುರಿಸಿದರು. ಇದೀಗ ಮತ್ತೆ ನಾಳೆ(ಶನಿವಾರ) ರೋಡ್ ಶೋ ನಡೆಸಲು ವೇಳಾಪಟ್ಟಿ ಸಿದ್ದಪಡಿಸಲಾಗಿದೆ.

ಜನರಿಗೆ ಕಿರಿಕಿರಿ ಉಂಟಾಗುವುದರಿಂದ ಮೊದಲೇ ಎಚ್ಚೆತ್ತಿಕೊಂಡಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರು ಎಂಟು ಗಂಟೆಗಳ ರೋಡ್ ಶೋ ನಡೆಸುವ ಯೋಜನೆಯನ್ನು ಬಿಜೆಪಿ ಕೈಬಿಟ್ಟಿದೆ.

ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಮತ್ತು ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ರವರೆಗೆ ಎರಡು ದಿನಗಳ ಕಾಲ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಇದನ್ನೂ ಓದಿ: ತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

”ಪ್ರಧಾನಿ ಮೋದಿ ಶನಿವಾರ ಇಲ್ಲಿ 36.6 ಕಿಮೀ ರೋಡ್ ಶೋ ನಡೆಸಲಿದ್ದಾರೆ — ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ 10.1 ಕಿಮೀ ಮತ್ತು ಸಂಜೆ 4 ರಿಂದ ರಾತ್ರಿ 10 ರವರೆಗೆ 26.5 ಕಿಮೀ ದೂರವನ್ನು ಒಳಗೊಂಡಿದೆ ಎಂದು ಪಕ್ಷವು ಬುಧವಾರ ಹೇಳಿತ್ತು. ಆದರೆ, ಇಡೀ ದಿನ ರೋಡ್ ಶೋ ನಡೆಸಿದರೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅವರ ಭಾವನೆಗೆ ಗೌರವ ನೀಡಿ ಎರಡು ದಿನ ಪ್ರಚಾರ ಮಾಡಿದ್ದೇವೆ” ಎಂದು ಶೋಭಾ ಕರಂದ್ಲಾಜೆ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

”ಮೇ 6 ಮತ್ತು 7 ರಂದು ನಗರದ ಒಟ್ಟು 28 ವಿಧಾನಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಲ್ಲಿ ರೋಡ್ ಶೋಗಳು ನಡೆಯಲಿವೆ” ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೂ ಮೋದಿ ಶೋದಿಂದ ತೊಂದರೆ

ಶನಿವಾರ ಹಾಗೂ ಭಾನುವಾರ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ ನಡೆಸುತ್ತಿದ್ದು ಇದರಿಂದಾಗಿ ನೀಟ್​ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ.

ಪ್ರಧಾನಿ ರೋಡ್​ ಶೋ ನಡೆಸುವ ಕಾರಣ ಟ್ರಾಫಿಕ್​ ಜಾಮ್​ ಉಂಟಾಗಿ ರಸ್ತೆಗಳನ್ನು ಬಂದ್​ ಮಾಡಲಾಗುತ್ತದೆ. ಹೀಗಾಗಿ ನಗರದ ವಿವಿಧ ಭಾಗಗಳಿಂದ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆ ಉಂಟಾಗುತ್ತದೆ.

ಇದಕ್ಕೆ ಸಂಬಂಧಪಟ್ಟಿರೋ ಅಧಿಕಾರಿಗಳು ಕೂಡಲೇ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದ್ದಾರೆ.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕನಿಷ್ಠ ಎರಡು ತಾಸು ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಾಗುತ್ತದೆ. ವಿಶೇಷ ಭದ್ರತಾ ವ್ಯವಸ್ಥೆ ಇರುವ ಪ್ರಧಾನಿ ಮೋದಿ ರೋಡ್ ಶೋ, ಪ್ರಚಾರ ಸಭೆ, ರ್‍ಯಾಲಿ ಇದೇ ಸಮಯದಲ್ಲಿ ನಡೆಯಲಿವೆ. ಈ ವೇಳೆ ಅವರು ಸಾಗುವ ಮಾರ್ಗಗಳನ್ನು ಸಾಮಾನ್ಯವಾಗಿ ಮೂರ್ನಾಲ್ಕು ಗಂಟೆ ಮೊದಲೇ ಬಂದ್ ಮಾಡಲಾಗುತ್ತದೆ. ಪರೀಕ್ಷೆ ಎದುರಿಸುವ ಸವಾಲನ್ನು ಒಡಲೊಳಗೆ ಇಟ್ಟುಕೊಂಡ ಮಕ್ಕಳು, ಈ ಅಡೆತಡೆಗಳನ್ನು ದಾಟಿ ಪರೀಕ್ಷಾ ಕೇಂದ್ರಗಳನ್ನು ಮುಟ್ಟುವುದಕ್ಕೆ ಕಷ್ಟ ಪಡಬೇಕಾಗುತ್ತದೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ರೋಡ್ ಶೋ ನಡೆಸಲಿದ್ದಾರೆ. ಈಗ ನಿಗದಿಯಾಗಿರುವಂತೆ, ಬ್ರಿಗೇಡ್ ರಸ್ತೆಯ ಯುದ್ಧ ಸ್ಮಾರಕದ (ಒಪೆರಾ ಹೌಸ್ ವೃತ್ತ) ಬಳಿಯಿಂದ ಅವರ ರೋಡ್ ಶೋ ಶುರುವಾಗಲಿದೆ. ಅದು ಮಲ್ಲೇಶ್ವರದ ಸರ್ಕಲ್ ಮಾರಮ್ಮ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. ಮೋದಿಯವರ ರೋಡ್ ಶೋ ಯಾವ್ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ ಎಂಬ ನಿಖರ ಮಾಹಿತಿಯನ್ನು ಪ್ರಧಾನಿ ಕಾರ್ಯಾಲಯ ಇನ್ನೂ ಬಿಡುಗಡೆ ಮಾಡಿಲ್ಲ.

10 ಗಂಟೆಗೆ ರೋಡ್ ಶೋ ಆರಂಭವಾದರೆ ಅದು ಸಾಗುವ ಮಾರ್ಗವನ್ನು ಕನಿಷ್ಠ ಎರಡು ಗಂಟೆ ಮೊದಲೇ ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ತನ್ನ ಕಣ್ಗಾವಲಿನಲ್ಲಿ ಇಡುತ್ತದೆ. ರೋಡ್ ಶೋಗೆ ಯಾವುದೇ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ, ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ. ರೋಡ್ ಶೋ ಸಾಗುವ ಮುಖ್ಯಮಾರ್ಗಕ್ಕೆ ಸಂಪರ್ಕಿಸುವ ಎಲ್ಲ ಉಪ ಹಾಗೂ ಕಿರು ಮಾರ್ಗಗಳಲ್ಲಿ ಬ್ಯಾರಿಕೇಡ್ ಹಾಕಿ, ನಿರ್ಬಂಧ ವಿಧಿಸಲಾಗುತ್ತದೆ.

”ನಿಗದಿತ ಪರೀಕ್ಷಾ ಕೇಂದ್ರ ತಲುಪಲು ತಾವು ನಿತ್ಯವೂ ಓಡಾಡುವ ದಾರಿಯಲ್ಲಿ ಹೋಗುವುದು ರೋಡ್ ಶೋನಿಂದಾಗಿ ಭಾನುವಾರ  ಕಷ್ಟವಾಗುವ ಸಂಭವ ಇದೆ. ಎರಡು ಗಂಟೆ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಇರಬೇಕಾದರೆ, ಅದಕ್ಕಿಂತ 2–3 ಗಂಟೆ ಮೊದಲು ಮಕ್ಕಳನ್ನು ಮನೆಯಿಂದ ಹೊರಡಿಸಬೇಕಾಗುತ್ತದೆ” ಎಂದು ಪೋಷಕರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಮೇ 10 ರಂದು ಕರ್ನಾಟಕದ ಮತಗಳು. ಮೇ 8 ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ಮೇ 13 ರಂದು ಮತಗಳ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...