Homeಕರ್ನಾಟಕಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

ಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

- Advertisement -
- Advertisement -

”ಧರ್ಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ ಮಾಡುತ್ತಿದ್ದಾರೆ ಹಾಗೂ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ನಮ್ಮ ಪ್ರಣಾಳಿಕೆಯನ್ನು ಸುಟ್ಟು ಹಾಕಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ಹಿರಿಯ ನಾಯಕರಾಗಿರುವ ಪ್ರಧಾನಿ  ಮೋದಿ ಪ್ರಚಾರದಲ್ಲಿ ಹಿಂದೂ ದೇವರುಗಳನ್ನು ಬಳಸಿಕೊಳ್ಳುವ ಮೂಲಕ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣಗಳಲ್ಲಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಂಡಿದ್ದಾರೆ. ಕೇವಲ ಚುನಾವಣೆ ಲಾಭಕ್ಕೋಸ್ಕರ ದೇವ ದೇವತೆಗಳನ್ನು ಬಳಸುತ್ತಿದ್ದಾರೆ. ಈ ರೀತಿಯ ಪ್ರಚಾರಕ್ಕೆ ಅವಕಾಶ ನೀಡಬಾರದು. ಜಾತಿ ಧರ್ಮದ ಹೆಸರು ಬಳಸಿಕೊಂಡು ಚುನಾವಣೆ ಪ್ರಚಾರಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಬೆಂಗಳೂರು ನಗರದಲ್ಲಿ ಮೇ 6 ಹಾಗೂ 7 ರಂದು ಪ್ರಧಾನಿ ನರೇಂದ್ರ ಮೋದಿ ಹಮ್ಮಿಕೊಂಡಿರುವ ರೋಡ್ ಶೋಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಅನುಮತಿ ನೀಡದಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಸಂಬಂಧ ಸುಪ್ರೀಂಕೋರ್ಟ್ ಈಗಾಗಲೇ ಮಾರ್ಗಸೂತ್ರ ಹೊರಡಿಸಿರುವುದಾಗಿ ಕಾಂಗ್ರೆಸ್ ಕಾನೂನು ಘಟಕದ ಎಸ್ ಎ ಅಹ್ಮದ್ ಹೇಳಿದರು.

ರೋಡ್ ಶೋಗೆ ಅವಕಾಶ ನೀಡುವುದರಿಂದ ಜನರಿಗೆ ತೊಂದರೆ ಆಗುತ್ತದೆ ಎಂಬ ನಿಟ್ಟಿನಲ್ಲಿ ಹೈಕೋರ್ಟ್ ರಿಟ್ ಪಿಟಿಷನ್ ನಲ್ಲಿ ನಿರ್ದೇಶನ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನ ಪಾಲನೆ ಮಾಡದೆಯೇ ರೋಡ್ ಶೋ ಅವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ‘ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ, ಯಡಿಯೂರಪ್ಪ ಏನೂ ಚಿರಂಜೀವಿಯಲ್ಲ’: ಬಿಎಲ್‌ ಸಂತೋಷ್ ಹೇಳಿದ್ದಾರೆನ್ನಲಾದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ಬೆಂಗಳೂರು ನಗರದಲ್ಲಿ ಆ್ಯಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳ ಓಡಾಟಕ್ಕೆ ಅನನುಕೂಲ ಆಗುವ ನಿಟ್ಟಿನಲ್ಲಿ ರೋಡ್ ಶೋ ಅವಕಾಶ ನೀಡಬಾರದು. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಸರಕಾರದ ಹಣವನ್ನೂ ಖರ್ಚು ಮಾಡಲಾಗುತ್ತಿದೆ. ಇದನ್ನು ಲೆಕ್ಕಹಾಕಲು ಸರಿಯಾದ ಸಿಬ್ಬಂದಿ ನೇಮಕ ಮಾಡಬೇಕು ಎಂದೂ ದೂರಿನಲ್ಲಿ ಕಾಂಗ್ರೆಸ್ ಕಾನೂನು ಘಟಕದ ಆರೋಪಿಸಿದೆ.

ಕಾಂಗ್ರೆಸ್ ಕಾನೂನು ಘಟಕ ರೋಡ್ ಶೋ ವಿರೋಧಿಸಿ ಗುರುವಾರ ದೂರು ಸಲ್ಲಿಸಿದ್ದು, ಮೋದಿ ಅವರ ರೋಡ್ ಶೋ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಕಾಂಗ್ರೆಸ್ ದೂರು 

ಮತ್ತೊಂದೆಡೆ  ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕುವ ಮೂಲಕ  ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್, ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾನೂನು ವಿಭಾಗದ ಉಸ್ತುವಾರಿ ಎಸ್‌.ಎ ಅಹಮ್ಮದ್, ಕಾಂಗ್ರೆಸ್ ವಕ್ತಾರ ನಟರಾಜ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...