Homeಮುಖಪುಟಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ನಿರ್ಧಾರವನ್ನು ತಿರಸ್ಕರಿಸಿದ NCPಯ ಸಮಿತಿ

ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ನಿರ್ಧಾರವನ್ನು ತಿರಸ್ಕರಿಸಿದ NCPಯ ಸಮಿತಿ

- Advertisement -
- Advertisement -

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಹಿರಿಯ ರಾಜಕಾರಣಿ ಶರದ್ ಪವಾರ್ ಅವರ ನಿರ್ಧಾರವನ್ನು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ 18 ಸದಸ್ಯರ ಸಮಿತಿಯು ತಿರಸ್ಕರಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಸಮಿತಿಯಲ್ಲಿ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ, ಸೋದರಳಿಯ ಅಜಿತ್ ಪವಾರ್ ಮತ್ತು ಹಿರಿಯ ನಾಯಕರಾದ ಪ್ರಫುಲ್ ಪಟೇಲ್, ಛಗನ್ ಭುಜಬಲ್, ದಿಲೀಪ್ ವಾಲ್ಸೆ-ಪಾಟೀಲ್ ಮತ್ತು ಅನಿಲ್ ದೇಶಮುಖ್ ಸೇರಿದಂತೆ ಇತರರನ್ನು ಇದ್ದಾರೆ.

”[ಶರದ್] ಪವಾರ್ ಸಾಹೇಬ್ ನಮಗೆ ತಿಳಿಸದೆ ನಿರ್ಧಾರ ತೆಗೆದುಕೊಂಡರು. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಎಲ್ಲಾ ಬೇಡಿಕೆಗಳನ್ನು ಪರಿಗಣಿಸಿ ನಾವು ಇಂದು ಸಭೆ ನಡೆಸಿದ್ದೇವೆ ಮತ್ತು ಸಮಿತಿಯು ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದೆ” ಎಂದು ಹಿರಿಯ ನಾಯಕ ಪ್ರಫುಲ್ ಪಟೇಲ್ ಹೇಳಿದರು.

1999ರಲ್ಲಿ ಪಕ್ಷವನ್ನು ರಚಿಸಿದಾಗಿನಿಂದ ಪವಾರ್ ಅವರು ಈ ಹುದ್ದೆಯನ್ನು ಅಲಂಕರಿಸಿದ್ದರು. ಅವರು ಮೇ 2ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದರೇ ಇದೀಗ ಸಮಿತಿಯು ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ.

”ರಾಜ್ಯಸಭೆಯಲ್ಲಿ ನನಗೆ ಮೂರು ವರ್ಷಗಳ ಅಧಿಕಾರವಿದೆ, ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಮೂರು ವರ್ಷಗಳಲ್ಲಿ, ನಾನು ರಾಜ್ಯ ಮತ್ತು ದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ. ನಾನು ಯಾವುದೇ ಹೆಚ್ಚುವರಿ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ಪವಾರ್ ತಮ್ಮ ಆತ್ಮಚರಿತ್ರೆ ಲೋಕ ಮೇಜ್ ಸಂಗತಿಯ ಎರಡನೇ ಆವೃತ್ತಿಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಘೋಷಿಸಿದ್ದರು.

ಪವಾರ್ ಅವರ ನಿರ್ಧಾರದಿಂದ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಮಹಾರಾಷ್ಟ್ರ ಸೇರಿದಂತೆ ದೇಶದ ಅನೇಕ ಭಾಗಗಳಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂಬೈಗೆ ಬಂದಿದ್ದರು. ಮುಂಬೈನ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪ್ರತಿಭಟನೆಗಳು ನಡೆದವು ಮತ್ತು ಪಕ್ಷದ ಹಲವಾರು ಜಿಲ್ಲಾಧ್ಯಕ್ಷರು ತಮ್ಮ ರಾಜೀನಾಮೆಯನ್ನು ಪ್ರತಿಭಟಿಸಿದರು.

ಇದನ್ನೂ ಓದಿ: NCP ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶರದ್ ಪವಾರ್: ಬೆಂಬಲಿಗರ ಪ್ರತಿಭಟನೆ

ಶುಕ್ರವಾರ, ಪವಾರ್ ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹಲವಾರು ನಾಯಕರು ಮನವಿ ಮಾಡಿದ್ದಾರೆ ಎಂದು ಪಟೇಲ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

”ಪಕ್ಷ ಮತ್ತು ದೇಶಕ್ಕೆ ಪವಾರ್ ಅವರಂತಹ ನಾಯಕನ ಅಗತ್ಯವಿದೆ. ಎನ್‌ಸಿಪಿ ನಾಯಕರು ಮಾತ್ರವಲ್ಲದೆ ಪಕ್ಷದ ಇತರ ನಾಯಕರು ಮತ್ತು ಗಣ್ಯ ವ್ಯಕ್ತಿಗಳು ಸಹ ಪಕ್ಷದ ಮುಖ್ಯಸ್ಥರಾಗಿ ಮುಂದುವರಿಯಲು ಅವರನ್ನು ವಿನಂತಿಸಿದ್ದಾರೆ” ಎಂದು ಹೇಳಿದರು.

”ಈಗ ತೆಗೆದುಕೊಂಡ ನಿರ್ಧಾರದಿಂದಾಗಿ ಮಹಾರಾಷ್ಟ್ರದ ಹೊರಗಿನಿಂದ ನಿಮ್ಮ ಅನೇಕ ನಮ್ಮ ಪಕ್ಷದ ನಾಯಕರು ಈ ಸ್ಥಳಕ್ಕೆ ಬಂದಿದ್ದಾರೆ” ಎಂದು ಪವಾರ್ ಹೇಳಿದ್ದಾರೆ.

”ಅವರು ನಾಳೆ ನನ್ನೊಂದಿಗೆ ಮಾತನಾಡಲು ಬಯಸುತ್ತಾರೆ. ನಾವು ನಾಳೆ ಸಂಜೆಯೊಳಗೆ ಭೇಟಿಯಾಗುತ್ತೇವೆ. ಅದಾದ ಬಳಿಕ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಅಂತಿಮ ನಿರ್ಧಾರವನ್ನು ಪ್ರಕಟಿಸುತ್ತೇವೆ ಎಂದ” ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...