Homeಕರ್ನಾಟಕಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ; ವಿಧಾನಸೌಧವು 'ವ್ಯಾಪಾರಸೌಧ' ಆಗಿದೆ ಎಂದ ಕಾಂಗ್ರೆಸ್

ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ; ವಿಧಾನಸೌಧವು ‘ವ್ಯಾಪಾರಸೌಧ’ ಆಗಿದೆ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ರಾಜಕೀಯ ಮುಖಂಡರ ನಡುವಿನ ವಾಕ್ಸಮರವೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ.

ಎಐಸಿಸಿ ವಕ್ತಾರ ಪವನ್ ಖೇರಾ ಅವರು ಇಂದು (ಮೇ.5) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತ ರೇಟ್​ ಕಾರ್ಡ್​ ಬಿಡುಗಡೆ ಮಾಡಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು ”ಬಿಜೆಪಿಯು ರಾಜ್ಯವನ್ನು ರಾಜಕೀಯ ಪ್ರವಾಸದ ಕೇಂದ್ರ ಮಾಡಿಕೊಂಡಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ರಾಜ್ಯದಲ್ಲಿ 40% ಅಲ್ಲ 50% ಕಮಿಷನ್ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ಕಮಿಷನ್​, ಮಂತ್ರಿ ಹುದ್ದೆಗೆ 500 ಕೋಟಿ, ವರ್ಗಾವಣೆಗೆ 5-15 ಕೋಟಿ, ಇಂಜಿನಿಯರ್​ ಹುದ್ದೆಗೆ 1ರಿಂದ 5 ಕೋಟಿ ನೀಡಬೇಕು” ಎಂದು ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

”ಬಿಜೆಪಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಾರಂಭ ಮಾಡಿದೆ. ಆದರೆ, ಕರ್ನಾಟಕದ ಜನ ಮಾತ್ರ ಎಲ್ಲ ವಿಚಾರಗಳನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆಯಿಂದ ಜನರಿಗೆ ಬಿಜೆಪಿಯವರ ಬಗ್ಗೆ ಸಿಟ್ಟಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಗ್ಗೆ ಜನರು ಆಕ್ರೋಶಗೊಂಡಿದ್ದಾರೆ. ಇದೇ ಸಿಟ್ಟು ಬಿಜೆಪಿ ವಿರುದ್ದ ಜನರು ಓಟು ಒತ್ತುವಂತೆ ಮಾಡುತ್ತದೆ. ಬಿಜೆಪಿ ಮತ್ತೆ ಬಂದರೆ 40% ಕಮಿಷನ್ ಭ್ರಷ್ಟಾಚಾರ 80% ಆಗುತ್ತದೆ ಎಂಬ ಭಯ ಆತಂಕ ಜನರಿಗೆ ಇದೆ. ಇದೇ ಭಾವನೆಗಳು ಬಿಜೆಪಿಗೆ ಹೊಡೆತ ಕೊಡಲಿದೆ” ಎಂದರು.

ಇನ್ನು ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”2019ರಿಂದ 2023ರ ರವರೆಗೆ ಆಡಳಿತದುದ್ದಕ್ಕೂ ಲೂಟಿಯನ್ನೇ ಪರಮದೈವ ಎಂದುಕೊಂಡು ರಾಜ್ಯದ ಖಜಾನೆಯನ್ನು ಬರಿದು ಮಾಡಿದ ಬಿಜೆಪಿ ಸರ್ಕಾರ ಕನ್ನಡಿಗರನ್ನು, ಕರ್ನಾಟಕದ ಅಭಿವೃದ್ಧಿಯನ್ನು ಬೀದಿಪಾಲು ಮಾಡಿದೆ. ಮತ ಹಾಕುವ ಮುನ್ನ ಕರ್ನಾಟಕದ ಭವಿಷ್ಯವನ್ನು ಪರಿಗಣಿಸಿ” ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದೆ.

ಕಳೆದ ನಾಲ್ಕು ವರ್ಷಗಳಲ್ಲಿ 40 ಪರ್ಸೆಂಟ್ ಸರ್ಕಾರ ಕನ್ನಡಿಗರಿಂದ ₹1,50,000 ಕೋಟಿಗೂ ಹೆಚ್ಚು ಹಣ ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ! ಎಂದು ಕಾಂಗ್ರೆಸ್ ಮನವಿ ಮಾಡಿದೆ.

”ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಇದು.. ಆಡಳಿತದುದ್ದಕ್ಕೂ ಲೂಟಿಯನ್ನೇ ಪರಮಧೈವ ಎಂದುಕೊಂಡು ರಾಜ್ಯದ ಖಜಾನೆಯನ್ನು ಬರಿದು ಮಾಡಿದ ಸರ್ಕಾರ ಕನ್ನಡಿಗರನ್ನು, ಕರ್ನಾಟಕದ ಅಭಿವೃದ್ಧಿಯನ್ನು ಬೀದಿಪಾಲು ಮಾಡಿದೆ. ಮತ ಹಾಕುವ ಮುನ್ನ ಕರ್ನಾಟಕದ ಭವಿಷ್ಯವನ್ನು ಪರಿಗಣಿಸಿ ಕಾಂಗ್ರೆಸ್ ಬೆಂಬಲಿಸ” ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಹುದ್ದೆಗೆ ₹2,500 ಕೋಟಿ

ಮಂತ್ರಿಗಳ ಹುದ್ದೆ ₹500 ಕೋಟಿ

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್‌ ₹5 ಕೋಟಿ –₹15 ಕೋಟಿ

ಎಂಜಿನಿಯರ್ ₹1 ಕೋಟಿ– ₹5 ಕೋಟಿ

ಸಬ್ ರಿಜಿಸ್ಟಾರ್‌ ₹ಲಕ್ಷ –₹5 ಕೋಟಿ

ಬೆಸ್ಕಾಂ ₹1 ಕೋಟಿ

ಪಿಎಸ್‌ಐ ₹80 ಲಕ್ಷ

ಸಹಾಯಕ ಪ್ರಾಧ್ಯಾಪಕ ₹50 ಲಕ್ಷ –₹70 ಲಕ್ಷ

ಉಪನ್ಯಾಸಕ ₹30 ಲಕ್ಷ –₹50 ಲಕ್ಷ

ಎಫ್‌ಡಿಎ ₹30 ಲಕ್ಷ

ಸಹಾಯಕ ಎಂಜಿನಿಯರ್ ₹30 ಲಕ್ಷ

ಬಮುಲ್ ₹25 ಲಕ್ಷ

ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ ₹10 ಲಕ್ಷ

ಪೊಲೀಸ್ ₹10 ಲಕ್ಷ

ಹುದ್ದೆಗಳ ದರ

ಬಿಡಿಎ ಆಯುಕ್ತ ₹10 ಕೋಟಿ– ₹15 ಕೋಟಿ

ಕೆಪಿಎಸ್‌ಸಿ ಅಧ್ಯಕ್ಷ ₹5 ಕೋಟಿ –₹15 ಕೋಟಿ

ಡಿಸಿ ಮತ್ತು ಎಸ್‌ಸಿ ₹5 ಕೋಟಿ– ₹15 ಕೋಟಿ

ಉಪಕುಲಪತಿ ₹5 ಕೋಟಿ –₹10 ಕೋಟಿ

ಎಸಿ– ತಹಸೀಲ್ದಾರ್ ₹50 ಲಕ್ಷ –₹3 ಕೋಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....