Homeಕರ್ನಾಟಕಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ; ವಿಧಾನಸೌಧವು 'ವ್ಯಾಪಾರಸೌಧ' ಆಗಿದೆ ಎಂದ ಕಾಂಗ್ರೆಸ್

ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ; ವಿಧಾನಸೌಧವು ‘ವ್ಯಾಪಾರಸೌಧ’ ಆಗಿದೆ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ರಾಜಕೀಯ ಮುಖಂಡರ ನಡುವಿನ ವಾಕ್ಸಮರವೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ.

ಎಐಸಿಸಿ ವಕ್ತಾರ ಪವನ್ ಖೇರಾ ಅವರು ಇಂದು (ಮೇ.5) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತ ರೇಟ್​ ಕಾರ್ಡ್​ ಬಿಡುಗಡೆ ಮಾಡಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು ”ಬಿಜೆಪಿಯು ರಾಜ್ಯವನ್ನು ರಾಜಕೀಯ ಪ್ರವಾಸದ ಕೇಂದ್ರ ಮಾಡಿಕೊಂಡಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ರಾಜ್ಯದಲ್ಲಿ 40% ಅಲ್ಲ 50% ಕಮಿಷನ್ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ಕಮಿಷನ್​, ಮಂತ್ರಿ ಹುದ್ದೆಗೆ 500 ಕೋಟಿ, ವರ್ಗಾವಣೆಗೆ 5-15 ಕೋಟಿ, ಇಂಜಿನಿಯರ್​ ಹುದ್ದೆಗೆ 1ರಿಂದ 5 ಕೋಟಿ ನೀಡಬೇಕು” ಎಂದು ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

”ಬಿಜೆಪಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಾರಂಭ ಮಾಡಿದೆ. ಆದರೆ, ಕರ್ನಾಟಕದ ಜನ ಮಾತ್ರ ಎಲ್ಲ ವಿಚಾರಗಳನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆಯಿಂದ ಜನರಿಗೆ ಬಿಜೆಪಿಯವರ ಬಗ್ಗೆ ಸಿಟ್ಟಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಗ್ಗೆ ಜನರು ಆಕ್ರೋಶಗೊಂಡಿದ್ದಾರೆ. ಇದೇ ಸಿಟ್ಟು ಬಿಜೆಪಿ ವಿರುದ್ದ ಜನರು ಓಟು ಒತ್ತುವಂತೆ ಮಾಡುತ್ತದೆ. ಬಿಜೆಪಿ ಮತ್ತೆ ಬಂದರೆ 40% ಕಮಿಷನ್ ಭ್ರಷ್ಟಾಚಾರ 80% ಆಗುತ್ತದೆ ಎಂಬ ಭಯ ಆತಂಕ ಜನರಿಗೆ ಇದೆ. ಇದೇ ಭಾವನೆಗಳು ಬಿಜೆಪಿಗೆ ಹೊಡೆತ ಕೊಡಲಿದೆ” ಎಂದರು.

ಇನ್ನು ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”2019ರಿಂದ 2023ರ ರವರೆಗೆ ಆಡಳಿತದುದ್ದಕ್ಕೂ ಲೂಟಿಯನ್ನೇ ಪರಮದೈವ ಎಂದುಕೊಂಡು ರಾಜ್ಯದ ಖಜಾನೆಯನ್ನು ಬರಿದು ಮಾಡಿದ ಬಿಜೆಪಿ ಸರ್ಕಾರ ಕನ್ನಡಿಗರನ್ನು, ಕರ್ನಾಟಕದ ಅಭಿವೃದ್ಧಿಯನ್ನು ಬೀದಿಪಾಲು ಮಾಡಿದೆ. ಮತ ಹಾಕುವ ಮುನ್ನ ಕರ್ನಾಟಕದ ಭವಿಷ್ಯವನ್ನು ಪರಿಗಣಿಸಿ” ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದೆ.

ಕಳೆದ ನಾಲ್ಕು ವರ್ಷಗಳಲ್ಲಿ 40 ಪರ್ಸೆಂಟ್ ಸರ್ಕಾರ ಕನ್ನಡಿಗರಿಂದ ₹1,50,000 ಕೋಟಿಗೂ ಹೆಚ್ಚು ಹಣ ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ! ಎಂದು ಕಾಂಗ್ರೆಸ್ ಮನವಿ ಮಾಡಿದೆ.

”ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಇದು.. ಆಡಳಿತದುದ್ದಕ್ಕೂ ಲೂಟಿಯನ್ನೇ ಪರಮಧೈವ ಎಂದುಕೊಂಡು ರಾಜ್ಯದ ಖಜಾನೆಯನ್ನು ಬರಿದು ಮಾಡಿದ ಸರ್ಕಾರ ಕನ್ನಡಿಗರನ್ನು, ಕರ್ನಾಟಕದ ಅಭಿವೃದ್ಧಿಯನ್ನು ಬೀದಿಪಾಲು ಮಾಡಿದೆ. ಮತ ಹಾಕುವ ಮುನ್ನ ಕರ್ನಾಟಕದ ಭವಿಷ್ಯವನ್ನು ಪರಿಗಣಿಸಿ ಕಾಂಗ್ರೆಸ್ ಬೆಂಬಲಿಸ” ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಹುದ್ದೆಗೆ ₹2,500 ಕೋಟಿ

ಮಂತ್ರಿಗಳ ಹುದ್ದೆ ₹500 ಕೋಟಿ

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್‌ ₹5 ಕೋಟಿ –₹15 ಕೋಟಿ

ಎಂಜಿನಿಯರ್ ₹1 ಕೋಟಿ– ₹5 ಕೋಟಿ

ಸಬ್ ರಿಜಿಸ್ಟಾರ್‌ ₹ಲಕ್ಷ –₹5 ಕೋಟಿ

ಬೆಸ್ಕಾಂ ₹1 ಕೋಟಿ

ಪಿಎಸ್‌ಐ ₹80 ಲಕ್ಷ

ಸಹಾಯಕ ಪ್ರಾಧ್ಯಾಪಕ ₹50 ಲಕ್ಷ –₹70 ಲಕ್ಷ

ಉಪನ್ಯಾಸಕ ₹30 ಲಕ್ಷ –₹50 ಲಕ್ಷ

ಎಫ್‌ಡಿಎ ₹30 ಲಕ್ಷ

ಸಹಾಯಕ ಎಂಜಿನಿಯರ್ ₹30 ಲಕ್ಷ

ಬಮುಲ್ ₹25 ಲಕ್ಷ

ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ ₹10 ಲಕ್ಷ

ಪೊಲೀಸ್ ₹10 ಲಕ್ಷ

ಹುದ್ದೆಗಳ ದರ

ಬಿಡಿಎ ಆಯುಕ್ತ ₹10 ಕೋಟಿ– ₹15 ಕೋಟಿ

ಕೆಪಿಎಸ್‌ಸಿ ಅಧ್ಯಕ್ಷ ₹5 ಕೋಟಿ –₹15 ಕೋಟಿ

ಡಿಸಿ ಮತ್ತು ಎಸ್‌ಸಿ ₹5 ಕೋಟಿ– ₹15 ಕೋಟಿ

ಉಪಕುಲಪತಿ ₹5 ಕೋಟಿ –₹10 ಕೋಟಿ

ಎಸಿ– ತಹಸೀಲ್ದಾರ್ ₹50 ಲಕ್ಷ –₹3 ಕೋಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....