Homeಕರ್ನಾಟಕಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ; ವಿಧಾನಸೌಧವು 'ವ್ಯಾಪಾರಸೌಧ' ಆಗಿದೆ ಎಂದ ಕಾಂಗ್ರೆಸ್

ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ; ವಿಧಾನಸೌಧವು ‘ವ್ಯಾಪಾರಸೌಧ’ ಆಗಿದೆ ಎಂದ ಕಾಂಗ್ರೆಸ್

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ರಾಜಕೀಯ ಮುಖಂಡರ ನಡುವಿನ ವಾಕ್ಸಮರವೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ.

ಎಐಸಿಸಿ ವಕ್ತಾರ ಪವನ್ ಖೇರಾ ಅವರು ಇಂದು (ಮೇ.5) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತ ರೇಟ್​ ಕಾರ್ಡ್​ ಬಿಡುಗಡೆ ಮಾಡಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು ”ಬಿಜೆಪಿಯು ರಾಜ್ಯವನ್ನು ರಾಜಕೀಯ ಪ್ರವಾಸದ ಕೇಂದ್ರ ಮಾಡಿಕೊಂಡಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ರಾಜ್ಯದಲ್ಲಿ 40% ಅಲ್ಲ 50% ಕಮಿಷನ್ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ಕಮಿಷನ್​, ಮಂತ್ರಿ ಹುದ್ದೆಗೆ 500 ಕೋಟಿ, ವರ್ಗಾವಣೆಗೆ 5-15 ಕೋಟಿ, ಇಂಜಿನಿಯರ್​ ಹುದ್ದೆಗೆ 1ರಿಂದ 5 ಕೋಟಿ ನೀಡಬೇಕು” ಎಂದು ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

”ಬಿಜೆಪಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಾರಂಭ ಮಾಡಿದೆ. ಆದರೆ, ಕರ್ನಾಟಕದ ಜನ ಮಾತ್ರ ಎಲ್ಲ ವಿಚಾರಗಳನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆಯಿಂದ ಜನರಿಗೆ ಬಿಜೆಪಿಯವರ ಬಗ್ಗೆ ಸಿಟ್ಟಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಗ್ಗೆ ಜನರು ಆಕ್ರೋಶಗೊಂಡಿದ್ದಾರೆ. ಇದೇ ಸಿಟ್ಟು ಬಿಜೆಪಿ ವಿರುದ್ದ ಜನರು ಓಟು ಒತ್ತುವಂತೆ ಮಾಡುತ್ತದೆ. ಬಿಜೆಪಿ ಮತ್ತೆ ಬಂದರೆ 40% ಕಮಿಷನ್ ಭ್ರಷ್ಟಾಚಾರ 80% ಆಗುತ್ತದೆ ಎಂಬ ಭಯ ಆತಂಕ ಜನರಿಗೆ ಇದೆ. ಇದೇ ಭಾವನೆಗಳು ಬಿಜೆಪಿಗೆ ಹೊಡೆತ ಕೊಡಲಿದೆ” ಎಂದರು.

ಇನ್ನು ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”2019ರಿಂದ 2023ರ ರವರೆಗೆ ಆಡಳಿತದುದ್ದಕ್ಕೂ ಲೂಟಿಯನ್ನೇ ಪರಮದೈವ ಎಂದುಕೊಂಡು ರಾಜ್ಯದ ಖಜಾನೆಯನ್ನು ಬರಿದು ಮಾಡಿದ ಬಿಜೆಪಿ ಸರ್ಕಾರ ಕನ್ನಡಿಗರನ್ನು, ಕರ್ನಾಟಕದ ಅಭಿವೃದ್ಧಿಯನ್ನು ಬೀದಿಪಾಲು ಮಾಡಿದೆ. ಮತ ಹಾಕುವ ಮುನ್ನ ಕರ್ನಾಟಕದ ಭವಿಷ್ಯವನ್ನು ಪರಿಗಣಿಸಿ” ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದೆ.

ಕಳೆದ ನಾಲ್ಕು ವರ್ಷಗಳಲ್ಲಿ 40 ಪರ್ಸೆಂಟ್ ಸರ್ಕಾರ ಕನ್ನಡಿಗರಿಂದ ₹1,50,000 ಕೋಟಿಗೂ ಹೆಚ್ಚು ಹಣ ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ! ಎಂದು ಕಾಂಗ್ರೆಸ್ ಮನವಿ ಮಾಡಿದೆ.

”ಬಿಜೆಪಿಯ ಭ್ರಷ್ಟಾಚಾರದ ರೇಟ್ ಕಾರ್ಡ್ ಇದು.. ಆಡಳಿತದುದ್ದಕ್ಕೂ ಲೂಟಿಯನ್ನೇ ಪರಮಧೈವ ಎಂದುಕೊಂಡು ರಾಜ್ಯದ ಖಜಾನೆಯನ್ನು ಬರಿದು ಮಾಡಿದ ಸರ್ಕಾರ ಕನ್ನಡಿಗರನ್ನು, ಕರ್ನಾಟಕದ ಅಭಿವೃದ್ಧಿಯನ್ನು ಬೀದಿಪಾಲು ಮಾಡಿದೆ. ಮತ ಹಾಕುವ ಮುನ್ನ ಕರ್ನಾಟಕದ ಭವಿಷ್ಯವನ್ನು ಪರಿಗಣಿಸಿ ಕಾಂಗ್ರೆಸ್ ಬೆಂಬಲಿಸ” ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಹುದ್ದೆಗೆ ₹2,500 ಕೋಟಿ

ಮಂತ್ರಿಗಳ ಹುದ್ದೆ ₹500 ಕೋಟಿ

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್‌ ₹5 ಕೋಟಿ –₹15 ಕೋಟಿ

ಎಂಜಿನಿಯರ್ ₹1 ಕೋಟಿ– ₹5 ಕೋಟಿ

ಸಬ್ ರಿಜಿಸ್ಟಾರ್‌ ₹ಲಕ್ಷ –₹5 ಕೋಟಿ

ಬೆಸ್ಕಾಂ ₹1 ಕೋಟಿ

ಪಿಎಸ್‌ಐ ₹80 ಲಕ್ಷ

ಸಹಾಯಕ ಪ್ರಾಧ್ಯಾಪಕ ₹50 ಲಕ್ಷ –₹70 ಲಕ್ಷ

ಉಪನ್ಯಾಸಕ ₹30 ಲಕ್ಷ –₹50 ಲಕ್ಷ

ಎಫ್‌ಡಿಎ ₹30 ಲಕ್ಷ

ಸಹಾಯಕ ಎಂಜಿನಿಯರ್ ₹30 ಲಕ್ಷ

ಬಮುಲ್ ₹25 ಲಕ್ಷ

ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ ₹10 ಲಕ್ಷ

ಪೊಲೀಸ್ ₹10 ಲಕ್ಷ

ಹುದ್ದೆಗಳ ದರ

ಬಿಡಿಎ ಆಯುಕ್ತ ₹10 ಕೋಟಿ– ₹15 ಕೋಟಿ

ಕೆಪಿಎಸ್‌ಸಿ ಅಧ್ಯಕ್ಷ ₹5 ಕೋಟಿ –₹15 ಕೋಟಿ

ಡಿಸಿ ಮತ್ತು ಎಸ್‌ಸಿ ₹5 ಕೋಟಿ– ₹15 ಕೋಟಿ

ಉಪಕುಲಪತಿ ₹5 ಕೋಟಿ –₹10 ಕೋಟಿ

ಎಸಿ– ತಹಸೀಲ್ದಾರ್ ₹50 ಲಕ್ಷ –₹3 ಕೋಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...