Homeಮುಖಪುಟಮಣಿಪುರ ಹಿಂಸಾಚಾರ: ಸಿಆರ್‌ಪಿಎಫ್‌ ಯೋಧನಿಗೆ ಗುಂಡಿಕ್ಕಿ ಹತ್ಯೆ

ಮಣಿಪುರ ಹಿಂಸಾಚಾರ: ಸಿಆರ್‌ಪಿಎಫ್‌ ಯೋಧನಿಗೆ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯ ತನ್ನ ಮನೆಗೆ ರಜೆಯ ಮೇಲೆ ತೆರಳಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ಕೋಬ್ರಾ ಘಟಕದ ಕಮಾಂಡೋ ಒಬ್ಬರನ್ನು ಶುಕ್ರವಾರ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

204ನೇ ಕೋಬ್ರಾ ಬೆಟಾಲಿಯನ್‌ನ ಡೆಲ್ಟಾ ಕಂಪನಿಯ ಕಾನ್‌ಸ್ಟೆಬಲ್ ಚೋನ್‌ಖೋಲೆನ್ ಹಾಕಿಪ್ ಅವರನ್ನು ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆಯ ನಡುವೆ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲೀಸ್ ಫೋರ್ಸ್‌ನ ಕೋಬ್ರಾ ಬೆಟಾಲಿಯನ್‌ನ ಕಂಟ್ರೋಲ್ ರೂಮ್‌ಗೆ ಸಂಜೆ 5.50 ವೇಳೆಗೆ ಹಾಕಿಪ್ ಸಾವಿನ ಬಗ್ಗೆ ಅವರ ಸಹೋದರನಿಂದ ಮಾಹಿತಿ ಸಿಕ್ಕಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಹಿಂಸಾಚಾರ ತಾರಕಕ್ಕೇರಿದೆ. ಬುಧವಾರದಿಂದ ಇಲ್ಲಿಯವರಿಗೆ ಕನಿಷ್ಠ 13 ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ಇಂಫಾಲ್‌ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹಿರಿಯ ಅಧಿಕಾರಿ ಶುಕ್ರವಾರ ಮಧ್ಯಾಹ್ನ ‘ಸ್ಕ್ರಾಲ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ದಾಖಲೆ ರಹಿತ ವಲಸಿಗರ ಪತ್ತೆಗೆ ಮನೆಮನೆ ಸರ್ವೇ: ಮಣಿಪುರ ಸರ್ಕಾರ

ಮಣಿಪುರದ 16 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಸುಮಾರು 20,000 ಜನರು ನಿರಾಶ್ರಿತರಾಗಿದ್ದಾರೆ ಮತ್ತು ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ ನಂತರ ಬುಧವಾರ ಹಿಂಸಾಚಾರ ಭುಗಿಲೆದ್ದಿತು.

ಕಳೆದ ತಿಂಗಳು ವಿಚಾರಣೆಯನ್ನು ನಡೆಸಿದ ಮಣಿಪುರ ಉಚ್ಚ ನ್ಯಾಯಾಲಯವು, ಮೈತೇಯಿ ಸಮುದಾಯದ ಬೇಡಿಕೆಯ ಅರ್ಜಿಗಳನ್ನು ಪರಿಗಣಿಸಲು ಮತ್ತು ಅದನ್ನು “ತ್ವರಿತವಾಗಿ” ವಿಲೇವಾರಿ ಮಾಡಲು ಬಿಜೆಪಿ ಸರ್ಕಾರಕ್ಕೆ ಸೂಚಿಸಿತ್ತು.

ಹಾಕಿಪ್‌ನ ಹತ್ಯೆಯ ಹಿನ್ನೆಲೆಯಲ್ಲಿ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಶುಕ್ರವಾರ ಮಣಿಪುರದ ತನ್ನ ಎಲ್ಲಾ ಸಿಬ್ಬಂದಿಗೆ ಸಂದೇಶವನ್ನು ರವಾನಿಸಿದೆ. ರಜೆಯಲ್ಲಿ ಇರುವ ಎಲ್ಲಾ ಸಿಬ್ಬಂದಿ ತಮ್ಮ ಕುಟುಂಬ ಸದಸ್ಯರೊಂದಿಗೆ ಹತ್ತಿರದ ಭದ್ರತಾ ನೆಲೆಗೆ ಬಂದು ತಕ್ಷಣ ವರದಿ ಮಾಡಬೇಕೆಂದು ಸೂಚಿಸಲಾಗಿದೆ. ಅಂತಹ ಸಿಬ್ಬಂದಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಸಿಆರ್‌ಪಿಎಫ್‌ನ ನಾಗಾಲ್ಯಾಂಡ್ ಸೆಕ್ಟರ್ ಆಫೀಸ್‌ಗೆ ತಿಳಿಸಲಾಗಿದೆ.

ಶುಕ್ರವಾರ ಮುಂಜಾನೆ, ಉಗ್ರಗಾಮಿ ಗುಂಪುಗಳು ಮತ್ತು ಭದ್ರತಾ ಪಡೆಗಳ ನಡುವೆ ಮಧ್ಯಂತರ ಗುಂಡಿನ ಚಕಮಕಿಗಳು ನಡೆದಿವೆ. ಚುರಾಚಂದ್‌ಪುರ ಜಿಲ್ಲೆಯ ಕಾಂಗ್‌ವೈ, ಪಕ್ಕದ ಬಿಷ್ಣುಪುರ ಜಿಲ್ಲೆಯ ಫೌಗಕ್‌ಚಾವೊದ ಪಶ್ಚಿಮ ಗುಡ್ಡಗಾಡು, ಇಂಫಾಲ್ ಪೂರ್ವ ಜಿಲ್ಲೆಯ ದೋಲೈತಾಬಿ ಮತ್ತು ಪುಖಾವೊದಲ್ಲಿ ಗುಂಡಿನ ಘರ್ಷಣೆಗಳು ವರದಿಯಾಗಿವೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ರೈಲು ಸಂಚಾರ, ಇಂಟರ್ನೆಟ್ ಸ್ಥಗಿತ

ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ 6,000 ಕ್ಕೂ ಹೆಚ್ಚು ಸೈನಿಕರನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ. ರಾಜ್ಯದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಕೇಂದ್ರದ ಕ್ಷಿಪ್ರ ಕಾರ್ಯಪಡೆಯ ತಂಡಗಳು ಧಾವಿಸಿವೆ.

ಮಣಿಪುರದ ಜನಸಂಖ್ಯೆಯ 60% ರಷ್ಟಿರುವ ಮೈತೇಯಿ ಸಮುದಾಯದ ಸದಸ್ಯರು ಹೆಚ್ಚಾಗಿ ಇಂಫಾಲ್ ಕಣಿವೆಯಲ್ಲಿ ಇದ್ದಾರೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿರುವುದಾಗಿ ಸಮುದಾಯವು ಹೇಳಿಕೊಂಡಿದೆ. ಅಸ್ತಿತ್ವದಲ್ಲಿರುವ ಕಾನೂನುಗಳ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ನೆಲೆಸಲು ವಲಸಿಗರಿಗೆ ಅವಕಾಶವಿಲ್ಲ.

ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ನೀಡಿದರೆ ಮೈತೇಯಿ ತಮ್ಮ ಭೂ ಸಂಪನ್ಮೂಲಗಳನ್ನು ಸ್ವಾಧೀನ ಮಾಡಿಕೊಳ್ಳಬಹುದು ಎಂದು ಕುಕಿ ಸಮುದಾಯ ಆತಂಕಗೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...