Homeಮುಖಪುಟಸುವೆಂದು ಬೆಂಗಾವಲು ವಾಹನಕ್ಕೆ ಸಿಲುಕಿ ವ್ಯಕ್ತಿ ಸಾವು; ಟಿಎಂಸಿ ಪ್ರತಿಭಟನೆ

ಸುವೆಂದು ಬೆಂಗಾವಲು ವಾಹನಕ್ಕೆ ಸಿಲುಕಿ ವ್ಯಕ್ತಿ ಸಾವು; ಟಿಎಂಸಿ ಪ್ರತಿಭಟನೆ

- Advertisement -
- Advertisement -

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಬಿಜೆಪಿಯ ಸುವೆಂದು ಅಧಿಕಾರಿ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ ಪ್ರತಿಭಟನಾ ರ್‍ಯಾಲಿ ನಡೆಸಿದೆ.

ಝೆಡ್‌+ ವರ್ಗದ ಭದ್ರತೆಯನ್ನು ಪಡೆಯುವ ಸುವೆಂದು ಅಧಿಕಾರಿ ಆರೋಪವನ್ನು ನಿರಾಕರಿಸಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆಯುವ ಮೊದಲೇ ನಮ್ಮ ಬೆಂಗಾವಲು ಪಡೆ ಈ ಪ್ರದೇಶವನ್ನು ಹಾದು ಹೋಗಿದೆ ಎಂದು ಅವರು ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ಹಾದು ಹೋಗುತ್ತಿದ್ದ ವಿಐಪಿ ಬೆಂಗಾವಲು ವಾಹನವೊಂದಕ್ಕೆ ಸಿಲುಕಿ ಈ ಪ್ರದೇಶದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಒಂದು ಗಂಟೆಗೂ ಹೆಚ್ಚು ಕಾಲ ಜಿಲ್ಲೆಯ ಚಂಡೀಪುರದ ಜನರು ರಸ್ತೆ ತಡೆ ನಡೆಸಿದ್ದಾರೆ.

ವ್ಯಕ್ತಿಯು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಿರಿಯ ನಾಯಕ ಡೋಲಾ ಸೇನ್ ನೇತೃತ್ವದಲ್ಲಿ ಟಿಎಂಸಿ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಸುವೆಂದು ಅಧಿಕಾರಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನಾ ರ್‍ಯಾಲಿಯನ್ನು ನಡೆಸಿದ್ದಾರೆ.

“ಒಬ್ಬ ವ್ಯಕ್ತಿ ಎಷ್ಟು ಅಮಾನವೀಯನಾಗಿರುತ್ತಾನೆ ಎಂದರೆ ತನ್ನ ಬೆಂಗಾವಲು ಪಡೆಗೆ ವ್ಯಕ್ತಿಯೊಬ್ಬರು ಸಿಲುಕಿದ ನಂತರವೂ ಸಂತ್ರಸ್ತ ವ್ಯಕ್ತಿಯನ್ನು ನೋಡಬೇಕೆಂದು ಅವರು ಚಿಂತಿಸಲಿಲ್ಲ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಬಹುದಿತ್ತು. ಸುವೆಂದು ಅಧಿಕಾರಿ ಜೊತೆಗಿರುವ ಭದ್ರತಾ ಸಿಬ್ಬಂದಿ ಸಂತ್ರಸ್ತ ವ್ಯಕ್ತಿಗೆ ಸಹಾಯ ಮಾಡಬಹುದಿತ್ತು” ಎಂದು ಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಐಪಿ ಸಂಸ್ಕೃತಿಯ ವಿರುದ್ಧ ಸಂದೇಶ ರವಾನಿಸಲು ಬಿಜೆಪಿ ನಾಯಕನನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಟಿಎಂಸಿ ವಕ್ತಾರ ಕುನಾಲ್ ಘೋಷ್ ಕೂಡ ಸುವೆಂದು ಅಧಿಕಾರಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದರೆ ಈ ಆರೋಪ ನಿರಾಧಾರ ಎಂದು ಸುವೆಂದು ಹೇಳಿಕೊಂಡಿದ್ದಾರೆ. “ಘಟನೆ ಸಂಭವಿಸುವ ಮೊದಲೇ ನನ್ನ ಬೆಂಗಾವಲು ಪಡೆ ಈ ಪ್ರದೇಶವನ್ನು ದಾಟಿತ್ತು. ಸೂಕ್ತ ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಷಯವನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಪ್ರತಿಕ್ರಿಯಿಸಿದ್ದಾರೆ. ಅಧಿಕಾರಿಗೆ ಝೆಡ್ + ಭದ್ರತೆ ಸಿಗುವುದರಿಂದ ಯಾರಾದರೂ ಭದ್ರತಾ ವಲಯವನ್ನು ಹೇಗೆ ಉಲ್ಲಂಘಿಸಬಹುದು ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ಮತ್ತು ಸುವೆಂದು ಅಧಿಕಾರಿಯವರ ಹೆಸರು ಕಡಿಸುವ ಪ್ರಯತ್ನ ಇದಾಗಿದೆ. ನಾವು ಅದನ್ನು ಖಂಡಿಸುತ್ತೇವೆ. ಆದರೆ ಝೆಡ್‌ + ರಕ್ಷಣೆಯ ಕಾರಣ ರಸ್ತೆಯನ್ನು ತೆರವು ಮಾಡುವುದಕ್ಕೆ ರಾಜ್ಯ ಪೊಲೀಸರಿಗೆ ಅಧಿಕಾರವಿದೆ. ಭದ್ರತೆಯಲ್ಲಿ ಆಗಿರುವ ಲೋಪದ ಬಗ್ಗೆ ಅವರು ಉತ್ತರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಮಣಿಪುರ ಹಿಂಸಾಚಾರ: ಸಿಆರ್‌ಪಿಎಫ್‌ ಯೋಧನಿಗೆ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...