Homeಮುಖಪುಟ32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

- Advertisement -
- Advertisement -

ಕೇರಳದಲ್ಲಿ 32,000ಕ್ಕೂ ಹೆಚ್ಚು ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್‌ಗೆ (ಐಎಸ್‌ಐಎಸ್‌) ಸೇರಿಸಿಕೊಳ್ಳಲಾಗಿದೆ ಎಂದು ಪ್ರತಿಪಾದಿಸಿರುವ ಟೀಸರ್ ಅನ್ನು ತೆಗೆದುಹಾಕುವುದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಕರು ಶುಕ್ರವಾರ ಕೇರಳ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ನವೆಂಬರ್‌ನಲ್ಲಿ ಟೀಸರ್‌ ಬಿಡುಗಡೆಯಾಗಿತ್ತು. ಸುಮಾರು 32,000 ಮಹಿಳೆಯರನ್ನು ಮತಾಂತರಿಸಿ, ಇಸ್ಲಾಮಿಕ್ ಸ್ಟೇಟ್‌ಗೆ ಸೇರಿಸಲಾಗಿದೆ ಎಂದು ಟೀಸರ್‌ನಲ್ಲಿ ಪ್ರತಿಪಾದಿಸಲಾಯಿತು. ಆದರೆ ಸಾಕ್ಷ್ಯವನ್ನು ನೀಡಲು ಚಿತ್ರತಂಡ ವಿಫಲವಾಗಿದೆ. “ಮೂವರು ಯುವತಿಯರ ನೈಜ ಕಥೆ ಇದಾಗಿದೆ” ಎಂದು ಚಿತ್ರದ ಟ್ರೈಲರ್‌ನಲ್ಲಿ ಬಿಂಬಿಸಲಾಗಿದೆ.

ಸುದೀಪ್ತೋ ಸೇನ್ ನಿರ್ದೇಶನದ ‘ಕೇರಳ ಸ್ಟೋರಿ’ ಶುಕ್ರವಾರ ಬಿಡುಗಡೆಯಾಗಿದೆ.

ಈ ಸಿನಿಮಾ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆಯಿತು. ಚಿತ್ರದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಮಾತುಗಳನ್ನು ಪ್ರಚಾರ ಮಾಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ “ಈ ಸಿನಿಮಾ ನಿಜವಾದ ಘಟನೆಗಳಿಂದ ಪ್ರೇರಿತವಾಗಿದೆ” ಎಂದು ಮಾತ್ರ ಚಿತ್ರತಂಡ ಹೇಳಿರುವುದನ್ನು ಗಮನಿಸಿದ ನ್ಯಾಯಾಲಯವು ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

ನ್ಯಾಯಮೂರ್ತಿ ಎನ್ ನಾಗರೇಶ್ ಮತ್ತು ನ್ಯಾಯಮೂರ್ತಿ ಸೋಫಿ ಥಾಮಸ್ ಅವರನ್ನೊಳಗೊಂಡ ವಿಭಾಗೀಯ ಪೀಠವು, “ಹಿಂದೂ ಪಾತ್ರಗಳನ್ನು ನಕಾರಾತ್ಮಕವಾಗಿ ಚಿತ್ರಿಸಿದ ಇತರ ಹಲವಾರು ಚಲನಚಿತ್ರಗಳಿವೆ” ಎಂದು ಹೇಳಿದೆ.

“ಹಿಂದೂ ಸನ್ಯಾಸಿಗಳನ್ನು ಕಳ್ಳಸಾಗಾಣಿಕೆದಾರರು ಮತ್ತು ಅತ್ಯಾಚಾರಿಗಳನ್ನಾಗಿ ತೋರಿಸಿರುವ ಅನೇಕ ಚಲನಚಿತ್ರಗಳಿವೆ” ಎಂದು ನ್ಯಾಯಮೂರ್ತಿ ನಾಗರೇಶ್ ಮೌಖಿಕವಾಗಿ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ. “ಯಾರೂ ಏನನ್ನೂ ಹೇಳುವುದಿಲ್ಲ. ಇಂತಹ ಸಿನಿಮಾಗಳನ್ನು ನೀವು ಹಿಂದಿ ಮತ್ತು ಮಲಯಾಳಂನಲ್ಲಿ ನೋಡಿರಬಹುದು. ಕೇರಳದಲ್ಲಿ ನಾವು ಜಾತ್ಯತೀತರು” ಎಂದಿದ್ದಾರೆ.

ಆದಾಗ್ಯೂ, 32,000 ಮಹಿಳೆಯರ ಮತಾಂತರದ ವಿಷಯ ಹೇಗೆ ಬಂದಿದೆ ಎಂದು ನ್ಯಾಯಮೂರ್ತಿ ನಾಗರೇಶ್ ಚಿತ್ರದ ನಿರ್ಮಾಪಕರ ವಕೀಲರನ್ನು ಪ್ರಶ್ನಿಸಿದರು. “ಸಿನಿಮಾ ನಿರ್ಮಾಪಕರು ಪಡೆದಿರುವ ಮಾಹಿತಿಯನ್ನು ಇದು ಆಧರಿಸಿದೆ” ಎಂದು ಪ್ರತಿಕ್ರಿಯಿಸಿರುವ ವಕೀಲರು, “ಟ್ರೇಲರ್‌ನಲ್ಲಿ ಇದನ್ನು ತೆಗೆದುಹಾಕಲಾವುದು” ಎಂದು ಒಪ್ಪಿಕೊಂಡರು.

ಸಿನಿಮಾ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿತು. “ಚಲನಚಿತ್ರದ ನಿರ್ಮಾಪಕರು ಈ ಸಿನಿಮಾಕ್ಕೆ ಹಣವನ್ನು ಸುರಿದಿದ್ದಾರೆ, ನಟರ ಪರಿಶ್ರಮದ ಬಗ್ಗೆಯೂ ಅರ್ಜಿದಾರರು ಯೋಚಿಸಬೇಕು” ಎಂದಿತು.

ಇದರ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಈ ಸಿನಿಮಾವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ನಿಮಿತ್ತ ಬಳ್ಳಾರಿಯಲ್ಲಿ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ದಕ್ಷಿಣ ರಾಜ್ಯದಲ್ಲಿ ಭಯೋತ್ಪಾದಕ ಪಿತೂರಿಗಳು ಇರುವುದನ್ನು ಕೇರಳ ಸ್ಟೋರಿ ಬಹಿರಂಗಪಡಿಸಿದೆ. ಭಯೋತ್ಪಾದಕ ಮನಸ್ಥಿತಿ ಹೊಂದಿರುವ ಜನರೊಂದಿಗೆ ಕಾಂಗ್ರೆಸ್ ರಹಸ್ಯವಾಗಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದರು.

‘ದಿ ಕೇರಳ ಸ್ಟೋರಿ’ಯನ್ನು ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತಗೊಳಿಸಲಾಗಿದೆ. ಮೋದಿಯವರ ಹೇಳಿಕೆಗಳ ನಂತರ, ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಶನಿವಾರ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿತು ಎಂದು ಪಿಟಿಐ ವರದಿ ಮಾಡಿದೆ.

ಒಂದು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿದಾಗ, ಅದರ ಮೇಲೆ ಮನರಂಜನಾ ತೆರಿಗೆಯನ್ನು ವಿಧಿಸಲಾಗುವುದಿಲ್ಲ, ಹೀಗಾಗಿ ಟಿಕೆಟ್ ದರ ಕಡಿಮೆಯಾಗುತ್ತದೆ. ಐತಿಹಾಸಿಕ ವಿಷಯಗಳನ್ನು ಒಳಗೊಂಡ ಅಥವಾ ಸಾಮಾಜಿಕ ಕಾರಣಗಳನ್ನು ಒಳಗೊಂಡ ಸಿನಿಮಾಗಳಿಗೆ ಮಾತ್ರ ತೆರಿಗೆ ವಿನಾಯಿತಿಯನ್ನು ಸರ್ಕಾರಗಳು ಸಾಮಾನ್ಯವಾಗಿ ನೀಡುತ್ತವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರೊಪೊಗಾಂಡ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ನೀಡಿರುವ ಉದಾಹರಣೆಗಳಿವೆ.

ಇದನ್ನೂ ಓದಿರಿ: ಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

“ನಾವು ಈಗಾಗಲೇ ಮಧ್ಯಪ್ರದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಕಾನೂನನ್ನು ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಿಟಿಐಗೆ ತಿಳಿಸಿದ್ದಾರೆ. “ಈ ಚಿತ್ರವು ಜಾಗೃತಿ ಮೂಡಿಸುತ್ತದೆ, ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡಬೇಕು. ಪೋಷಕರು, ಮಕ್ಕಳು ಮತ್ತು ಹೆಣ್ಣುಮಕ್ಕಳು ಇದನ್ನು ವೀಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

‘ಲವ್ ಜಿಹಾದ್’, ಧಾರ್ಮಿಕ ಮತಾಂತರ ಮತ್ತು ಭಯೋತ್ಪಾದನೆಯ ಪಿತೂರಿಗಳನ್ನು ಸಿನಿಮಾ ಬಯಲಿಗೆಳೆಯುತ್ತದೆ ಎಂದು ಚೌಹಾಣ್ ಹೇಳಿದ್ದಾರೆ.

‘ಲವ್ ಜಿಹಾದ್’ ಎಂಬುದು ಹಿಂದುತ್ವವಾದಿಗಳು ಸೃಷ್ಟಿಸಿರುವ ಪಿತೂರಿ ಸಿದ್ಧಾಂತವಾಗಿದೆ. ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಪುರುಷರು ಪ್ರೇಮದೊಳಗೆ ಸಿಲುಕಿಸುತ್ತಾರೆಂಬುದು ಈ ಪಿತೂರಿ ಸಿದ್ಧಾಂತದ ಸಾರಾಂಶವಾಗಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಪ್ರಿಲ್ 30 ರಂದು ಪ್ರತಿಕ್ರಿಯಿಸಿ, ಈ ಸಿನಿಮಾದ ಮೂಲಕ ಕೇರಳ ರಾಜ್ಯವನ್ನು ಧಾರ್ಮಿಕ ಉಗ್ರವಾದದ ಕೇಂದ್ರವೆಂದು ಬಿಂಬಿಸಲು ಆರ್‌ಎಸ್‌ಎಸ್ ಯತ್ನಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...