Homeಕರ್ನಾಟಕಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿರುವ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ನೋಟಿಸ್ ಜಾರಿ ಮಾಡಿದೆ.

“ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ, ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಳಿಗಾಗಿ ಜನರು ಲಂಚವನ್ನು ನೀಡಬೇಕಾಗಿದೆ” ಎಂದು ಆರೋಪಿಸಿರುವ ಕಾಂಗ್ರೆಸ್, “ಯಾವ ಯಾವ ಕೆಲಸಕ್ಕೆ ಎಷ್ಟು ಹಣ ಪಾವತಿಸಬೇಕಾಗಿದೆ” ಎಂಬ ವಿವರಗಳೊಂದಿಗೆ ಕಾಂಗ್ರೆಸ್ ಜಾಹೀರಾತು ನೀಡಿದೆ.

ಬಿಜೆಪಿ ದೂರಿನ ಮೇರೆಗೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಹೇಳಿದೆ.

“ಸಾಧನೆಯ ಕೊರತೆ, ದುಷ್ಕೃತ್ಯಗಳು, ರಾಜಕೀಯ ವಿರೋಧಿಗಳ ಭ್ರಷ್ಟಾಚಾರ, ಮುಕ್ತ ಆಡಳಿತವನ್ನು ಖಾತರಿಪಡಿಸದಿರುವ ಸಾಮಾನ್ಯ ಉಲ್ಲೇಖಗಳು ಮತ್ತು ಪ್ರಸ್ತಾಪಗಳು ರಾಜಕೀಯ ಪ್ರಚಾರಗಳಲ್ಲಿ ಇರುತ್ತವೆ. ನಿರ್ದಿಷ್ಟ ಆರೋಪಗಳನ್ನು ಪ್ರತ್ಯೇಕಿಸಬೇಕಾಗಿದೆ. ಏಕೆಂದರೆ ಅವುಗಳು ಪರಿಶೀಲಿಸಬೇಕಾದ ಸತ್ಯಗಳಿಂದ ಇರಬೇಕು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

“ನೀವು ನೀಡಿದ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ನೇಮಕಾತಿಗಳು, ವರ್ಗಾವಣೆಗಳು, ಉದ್ಯೋಗಗಳು ಮತ್ತು ಕಮಿಷನ್ ಪ್ರಕಾರಗಳ ದರಗಳಿಗೆ ಪುರಾವೆಗಳನ್ನು ಮೇ 7, 2023 ರಂದು ಸಂಜೆ 7 ಗಂಟೆಗಳ ಒಳಗೆ ಯಾವುದೇ ವಿವರಣೆಯೊಂದಿಗೆ ಮತ್ತು ಅದನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸುವ ಮೂಲಕ ಪಕ್ಷ ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಬೇಕು” ಎಂದು ಸೂಚಿಸಿದೆ.

“ಪುರಾವೆಗಳನ್ನು ಸಲ್ಲಿಸಲು ವಿಫಲವಾದರೆ ನೀತಿ ಸಂಹಿತೆಗೆ ಸಂಬಂಧಿತ ಕಾನೂನು ನಿಬಂಧನೆಗಳನ್ನು ನಿಮ್ಮ ವಿರುದ್ಧ ಜರುಗಿಸಲಾಗುವುದು. ಜನಪ್ರತಿನಿಧಿ ಕಾಯ್ದೆ ಮತ್ತು ಐಪಿಸಿಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

ಜಾಹೀರಾತಿನಲ್ಲಿ ಏನಿದೆ?

“ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂದ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದೆ.

“ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿದೆ.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

***

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

***

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

-ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. “ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...