Homeಅಂಕಣಗಳುನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

ನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

- Advertisement -
- Advertisement -
  • ಡಾ. ವಿನಯಾ ಒಕ್ಕುಂದ |

ನಮ್ಮ ಸುತ್ತ ನಡೆಯುತ್ತಿರುವ ಸಣ್ಣ ಸಂಗತಿಗಳನ್ನು ಉಪೇಕ್ಷಿಸಲು ಸಾಧ್ಯವಿಲ್ಲ. ಅವು ಬೃಹತ್ ವಿದ್ಯಮಾನದ ನೆರಳಿನಂತಿರುತ್ತವೆ. ಮೊನ್ನೆ ಧಾರವಾಡದ ಮೇ ಸಾಹಿತ್ಯದ ಕಾರ್ಯಕ್ರಮದಲ್ಲಿದ್ದೆ. ನನ್ನ ಪಕ್ಕ ಹಿರಿಯರೊಬ್ಬರು ಕೂತಿದ್ದರು. ನಿಧಾನ ಮಾತು ಆರಂಭಿಸಿದರು. ‘ನಿಮ್ಮ ಮಗಳಾ?’ ‘ಹೀಗೆ ಫೋಟೋ ತೆಗೆದು ಓಡಾಡಿ ಮುಂದೇನು ಮಾಡುತ್ತಾಳೆ?’ .. ಆ ಮಾತುಗಳಲ್ಲಿ ಮಮತೆ ಇರಲಿಲ್ಲ. ವ್ಯಂಗ್ಯವಿತ್ತು. ಪೇಚಿಗೆ ಸಿಲುಕಿಸುವ ಇರಾದೆಯಿತ್ತು. ನಾನು ‘ಗೊತ್ತಿಲ್ಲ’ ಎಂದೆ. ‘ಚಿತ್ರ ಗಿತ್ರ ತಗೀತಾಳಂತಲ್ಲ?’ ‘ಹೂಂ’. ‘ಓದೋದು ಬರೆಯೋದು?’ ‘ಅಂಥದೇನಿಲ್ಲ’… ನಾನು ಕುರ್ಚಿಯನ್ನು ಅತ್ತಿತ್ತ ಜರುಗಿಸಿಕೊಂಡು ಕೂತೆ. ಅವಳು ಬಂದಾಗ ‘ನೋಡು ಚಿತ್ರವೆಂದರೆ ಹೀಗೆ ತಗೀಬೇಕು’ ಎಂದು ಮೊಬೈಲ್‍ನಿಂದ ತೋರಿಸಿದರು. ಬಿಜೆಪಿ ಶಾಸಕರೊಬ್ಬರ ಚಿತ್ರ ಬಿಡಿಸಿದ ಕಲಾವಿದರೊಬ್ಬರ ಚಿತ್ರಗಳವು. ಇವಳು ತಲೆಯಾಡಿಸಿ ಎದ್ದುಹೋದಳು. ಧರ್ಮದ ಕುರಿತ ಗೋಷ್ಠಿಯಲ್ಲಿ ವೀರಶೈವ- ಲಿಂಗಾಯತ ಚರ್ಚೆ ಬಂತು. ಎಚ್.ಎಸ್.ಶಿವಪ್ರಕಾಶ್, ಎಸ್ ಜಿ. ಸಿದ್ದರಾಮಯ್ಯ, ರಂಜಾನ್ ದರ್ಗಾ ಚರ್ಚಿಸುತ್ತಿದ್ದರು. ‘ಇದೇನಿದು, ಸಾಹಿತ್ಯದ ಬಗ್ಗೆ ಮಾತಾ? ತಥ್.. ನೀವು ಇಂಗ್ಲಿಷ್ ಲಿಟರೇಚರ್ ಓದಿದ್ದೀರಾ ಮೇಡಂ? ಅಲ್ಲಿ ಹೀಗೆ ಮಾತಾಡುವುದನ್ನು ಮಾತಿನ ವಾಂತಿ ಅಂತಾರೆ’. ನನಗೆ ಕೋಪ ಬರುತ್ತಿತ್ತು. ‘ನಿಮಗೆ ಬೇಡವಾದರೆ ಎದ್ದು ಹೋಗಿ’ ಎಂದೆ. ‘ಇಲ್ಲ ಇಲ್ಲ ನಾನು ಕೇಳಲಿಕ್ಕೇ ಬಂದಿದ್ದು’ ಎಂದು ಉತ್ತರ ಬಂತು. ದಿನೇಶ್ ಅಮೀನ್‍ಮಟ್ಟು, ‘ಇಷ್ಟೆಲ್ಲ ಮಾಡುವ ಬದಲು ಇವಿಎಂ ಮಶಿನ್‍ಗಳನ್ನು ಹ್ಯಾಕ್ ಮಾಡುವವರನ್ನು ತಯಾರು ಮಾಡಿಕೊಂಡಿದ್ದರೆ ಸಾಕಾಗಿತ್ತು’ ಎಂದು ಪ್ರಜಾಪ್ರಭುತ್ವದ ಅಭದ್ರತೆಯ ಬಗ್ಗೆ ವ್ಯಂಗ್ಯದಿಂದ ಮಾತು ಆರಂಭಿಸಿದರು. ನನ್ನ ಪಕ್ಕದ ವ್ಯಕ್ತಿಗೆ ಸಿಟ್ಟು ನೆತ್ತಿಗೇರಿತ್ತು. ‘ಏನಿದು ಬಾಯಿಬಡುಕರ ಹಾಗೆ ಒದರಿದರೆ..? ವಿವಿಪ್ಯಾಟ್ ಲಗತ್ತಿಸಿಲ್ವಾ?’ ಈ ಬಾರಿ ಆಸಾಮಿ ನನ್ನ ಕಡೆ ಹೊರಳಿರಲಿಲ್ಲ. ಆ ಕಡೆಯ ವ್ಯಕ್ತಿಯ ಜತೆಗೆ ಮಾತಾಡುತ್ತಿತ್ತು. ಆ ಕ್ಷಣ ವಿವಿಪ್ಯಾಟ್ ಹಿಂದೆ ಹೀಗೆ ಬಾಯ್ಮುಚ್ಚಿಸುವ ತಂತ್ರಗಾರಿಕೆ ಇದೆ ಅನ್ನಿಸಿತು.

ಸಂಜೆಯ ಸಮಾರೋಪದಲ್ಲಿ ಮಾತನಾಡುತ್ತ ಸುನಂದಾ ಕಡಮೆ, ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋ ಫೇಸ್ ಬುಕ್ಕಿಗೆ ಹಾಕಿದಾಗ ಕೆಲ ದಿನ ನಿರಂತರವಾಗಿ ಕೆಟ್ಟ ಮೆಸೇಜ್‍ಗಳು ಬಂದಿದ್ದನ್ನು ಪ್ರಸ್ತಾಪಿಸಿದರು. ನನಗೆ ಗಾಬರಿಯಾಯಿತು. ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋಗಳನ್ನು ನನ್ನ ಗಂಡನೂ ಮಗಳೂ ಫೇಸ್ ಬುಕ್ಕಿಗೆ ಹಾಕಿದ್ದರು. ಮಗಳಿಗೆ ಪ್ರಕಾಶ್ ರೈ ಕುರಿತು ಕೆಲವು ಕೆಟ್ಟ ಕಮೆಂಟ್‍ಗಳು ಬಂದಿದ್ದವಂತೆ. ‘ನನಗೆ ಹೇಳಲಿಲ್ಲವಲ್ಲ’ಎಂದರೆ ‘ನಾನೇ ಓದ್ಲಿಲ್ಲ, ಹೀಗೆ ಅಂತ ಕಂಡ ತಕ್ಷಣ ಬ್ಲಾಕ್ ಮಾಡಿ ಒಗೆದೆ’ ಎಂದಳು ನಿಸೂರಾಗಿ. ಇವೆಲ್ಲ ಇಷ್ಟು ಉಪೇಕ್ಷಿಸುವ ಸಂಗತಿಗಳಲ್ಲ ಎಂದು ಅವಳಿಗೆ ತಿಳಿದಿರಲಿಲ್ಲ. ಪ್ರಕಾಶ್ ರೈ, ನಮ್ಮ ಮನೆಯಲ್ಲಿ ಕೆಲಗಂಟೆ ಕಳೆದು ಹೋದ ಮೇಲೆ ನಡೆದ ಸಂಗತಿಗಳನ್ನು ನೆನಪಿಸಿಕೊಂಡೆ. ಅಕ್ಕಪಕ್ಕದವರ ಕಣ್ಣು ಬೇರೆ ನಮೂನಿ ತೂಗತೊಡಗಿವೆ ಅನ್ನಿಸಿತ್ತು. ಎಲ್ಲರ ಹಾಗೆ ಬಾಗಿಲಿಗೆ ರಂಗೋಲಿ ಇಕ್ಕಿ, ಎಲ್ಲರ ಹಾಗೆ ಆಕಾಶಬುಟ್ಟಿ ತೂಗುಬಿಟ್ಟು, ಎಲ್ಲರ ಹಾಗೆ ಕಬ್ಬು ನಿಲ್ಲಿಸಿ ತುಳಸಿ ಪೂಜೆ ಮಾಡಿ… ಏನೆಲ್ಲಾ ಮಾಡಿದರೂ ಇವರು ನಮ್ಮಂತಿಲ್ಲ ಅಂತ ಸುತ್ತಲ ಜನ ಇರುಸು-ಮುರಸು ಅನುಭವಿಸುತ್ತಿದ್ದ ಹಾಗಿತ್ತು. ಅವರ ಬಗ್ಗೆ ಪಾಪ ಅನ್ನಿಸಿತು. ನಮ್ಮ ಕೆಲಸದವಳು, ಆವತ್ತು ಪ್ರಕಾಶ್ ರೈ ಅಡಿಗೆ ಮನೆ ಬಾಗಿಲವರೆಗೂ ಬಂದು ಅವಳೊಡನೊಂದು ಫೋಟೋ ಕೂಡ ತಗೊಂಡಿದ್ದರು. ಅವಳು ಆವತ್ತು ಪ್ರಕಾಶ್ ರೈ ಬಗ್ಗೆ ಫಿದಾ ಆಗಿದ್ದು ನಿಜ. ಆದರೆ ದಿನವೂ ಒಂದೊಂದು ಪ್ರಶ್ನೆಗಳನ್ನು ತರುತ್ತಿದ್ದಳು. ‘ಅವರಿಗೆ ಕಾಂಗ್ರೆಸ್ ಏಜೆಂಟ್ ಅಂತಾರಂತಲ್ಲ?’ ‘ಅವರಿಗೆ ಎರಡು ಮದುವೆಯಾಗಿದಾವಂತಲ್ಲ?’ ಹೀಗೆ. ತಿಳಿದಷ್ಟನ್ನು ಸಮಾಧಾನದಿಂದ ವಿವರಿಸಿದ್ದೆ. ಪ್ರಕಾಶ ರೈ ಭಾಷಣದ ತುಣುಕುಗಳನ್ನು ಕೇಳಿಸಿದೆ. ‘ ಹೌದ್ ಬಿಡ್ರೀ, ಸರಿ ಬಿಡ್ರೀ,’ ಅಂತ ಸುಮ್ಮನಾಗಿದ್ದಳು. ನಿಜಕ್ಕೂ ಅವಳ ಅಂತರಂಗದಲ್ಲಿ ಹೌದೆನ್ನಿಸಿತೇ ತಿಳಿಯಲಿಲ್ಲ. ದುಡಿದು ಬದುಕುವ ಇಂತಹ ಜನರ ಅನಕ್ಷರತೆ, ಮುಗ್ಧತೆಗಳನ್ನು ಕೋಮುವಾದ ಬಳಸಿಕೊಳ್ಳುವ ಪರಿ ದಂಗುಬಡಿಯುವಂಥದ್ದು. ಕಲ್ಬುರ್ಗಿಯವರ ಹತ್ಯೆಯ ನಂತರದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮನೆಗೆ ಬರುವಾಗ ಆಟೋ ಚಾಲಕ ಕೇಳಿದ್ದ-‘ ಅವ್ರು ನಮ್ದೇವ್ರ ಮೇಲೆ ಉಚ್ಚಿ ಹೊಯ್ಬಹುದು ಅಂದಿದ್ರಂತಲ್ಲ. ಅಂಥವರ ಸಂಬಂಧ ರ್ಯಾಲಿ ಮಾಡೀರಿ? ಹುಷಾರ್ರೀ ನಿಮ್ಮ ಮನಿಗೋಳ ಮ್ಯಾಲೂ ಕಲ್ ಬಿದ್ದಾವು’. ಹಿಂದುತ್ವದ ಅಜೆಂಡಾ ತುಂಬಾ ಪ್ರಬಲವಾಗಿ ಈ ಕೆಲಸ ಮಾಡುತ್ತಿದೆ. ಸಾಮಾಜಿಕ ವ್ಯವಸ್ಥೆಯ ತಳಹದಿಯಲ್ಲಿರುವ ಜೀವಿಗಳಲ್ಲಿ ತನ್ನ ನಂಬಿಕೆಯನ್ನು ಉತ್ಪಾದಿಸುತ್ತಿದೆ. ನಿಧಾನ ವಿಷದಂತೆ ದಿನವೂ ಸುಳ್ಳುಗಳು ತಪ್ಪುಗಳು ಅರೆ ಬರೆ ವ್ಯಾಖ್ಯಾನಗಳು ಅವರನ್ನು ತಲುಪುತ್ತವೆ. ಮರು ವಿಶ್ಲೇಷಿಸಬಹುದಾದ ಸುದ್ದಿಯಾಗಿಯಲ್ಲ, ನಂಬಿಕೆಯಾಗಿ. ಈ ನಂಬಿಕೆಯ ಲೇಹ್ಯದ ಕಟುತ್ವವನ್ನು ಯಾವ ವೈಚಾರಿಕತೆಯೂ ಮಾಗಿಸಲಾರದು ಎನ್ನುವಷ್ಟು ತೀವ್ರವಾಗಿ.

ಪ್ರಕಾಶ್ ರೈ ಬಂದುಹೋದ ಕೆಲ ದಿನಗಳಲ್ಲಿ, ಮಗಳು ತನ್ನ ಗೆಳತಿಯೊಂದಿಗೆ ಸಮೀಪದ ಪರಿಚಯದ ಪಾರ್ಲರಿಗೆ ಹೋಗಿದ್ದಳು ಕೂದಲು ಶೇಪ್‍ಲೆಸ್ ಆಗಿದೆ ಎಂದು ಗೊಣಗಿಕೊಳ್ಳುತ್ತ. ಬೇಡವೆಂದರೂ ಏನೋ ಮಹತ್ವದ್ದನ್ನು ಪಡೆಯುವ ಉಮೇದಿಯಲ್ಲಿ. ಬಂದಾಗ ಕೋಪದಿಂದ ಧುಮುಗುಡುತ್ತಿದ್ದಳು. ಆ ಪಾರ್ಲರಿನಲ್ಲಿ ಗಂಡಹೆಂಡತಿ ಇಬ್ಬರೂ ಇರುತ್ತಾರೆ. ಮಕ್ಕಳ ಕೂದಲನ್ನು ಶೇಪ್ ಮಾಡೋದು ಸಾಮಾನ್ಯವಾಗಿ ಗಂಡನೇ ಅಂತೆ. ಅವರ ಮಗಳು ಇವರ ಗೆಳತಿ ಕೂಡ. ಅವರು ತೆಲುಗು ಮಾತಾಡುವ ದಲಿತರು. ಬಹಳ ಕಾಲದಿಂದ ಇಲ್ಲೇ ಇರುವವರು. ಇವಳು ಕೂದಲು ಕೊಟ್ಟು ಕೂತಾಗ ಆತ ಕೇಳಿದನಂತೆ. ‘ನಿಮ್ಮನೆಗೆ ಹುಚ್ಚ ಬಂದಿದ್ದನಂತಲ್ಲ?’ ‘ಆಂ’? ‘ಆ ಪ್ರಕಾಶ ರೈ ಅನ್ನೋ ಹುಚ್ಚ ಬಂದಿದ್ದನಂತಲ್ಲ?’ ‘ಯಾಕ್ರಿ ಅಂಕಲ್, ಅನಂತಕುಮಾರ ಹೆಗಡೆ ಬಂದಿದ್ದರೆ ಹಾಗನ್ನಬಹುದಿತ್ತು. ಹೋಗಿ ಹೋಗಿ ಅಷ್ಟು ದೊಡ್ಡ ವ್ಯಕ್ತಿಗೆ ಹೀಗನ್ನುತ್ತೀರಲ್ರೀ.. ಏನ್ರೀ ನೀವು…?’ ಆತ ದಂಗಾದನಂತೆ. ಇಷ್ಟು ಸಣ್ಣ ಹುಡುಗಿ ಹೀಗೆ ಉತ್ತರಿಸಬಹುದೆಂದುಕೊಂಡಿರಲಿಲ್ಲವೇನೋ. ನಂತರದ್ದು ಇನ್ನೊಂದು ಬಗೆಯ ವಿಕಾರ. ಚೆಂದದ ಕೂದಲನ್ನು ಅಸಡ್ಡಾಳ ಕತ್ತರಿಸಿದ್ದ. ಕಣ್ಣೊರೆಸಿಕೊಳ್ಳುತ್ತ ಬಂದವಳು ಕೂದಲ ದುಃಸ್ಥಿತಿ ನೋಡಿ ಕೊರಗುತ್ತಲೇ ಇದ್ದಳು. ಆದರೆ, ಪ್ರಕಾಶ್ ರೈ ಜತೆ ಇದ್ದ ಬಿದ್ದ ಫೋಟೋಗಳನ್ನೆಲ್ಲ ಅಪ್ ಲೋಡ್ ಮಾಡಿದಳು. ನನಗೆ ಅರ್ಧ ಹೇರ್ ಕಟಿಂಗ್ ಮಾಡಿ ಹೊರದಬ್ಬಿಸಿಕೊಂಡಿದ್ದ ಹಿರೇಕೆರೂರಿನ ದಲಿತ ಯುವಕ ನೆನಪಾಗುತ್ತಿದ್ದ. ಅವನನ್ನು ಹೊರದಬ್ಬಲಾಗಿತ್ತು. ಇವಳು ಇನ್ನೊಂದು ರೀತಿಯಲ್ಲಿ ಹೊರಬಂದಿದ್ದಳು, ಇನ್ನೆಂದೂ ಅಲ್ಲಿ ಕಾಲಿಡಲಾರದಂತೆ. ಜಾತಿ, ಧರ್ಮ, ಲಿಂಗಗಳ ಜತೆಗೆ ವೈಚಾರಿಕತೆಯೂ ತೀವ್ರ ಒತ್ತುವರಿಗೆ ಒಳಗಾಗುತ್ತಿರುವ ಕಾಲವಿದು.

ರಾಜೇಂದ್ರ ಚೆನ್ನಿಯವರು ನಮ್ಮ ಈ ವರ್ತಮಾನವನ್ನು ಜಾರ್ಜ್ ಆರ್ವೆಲ್ 1984ರಲ್ಲಿ ಬರೆದ Thought police ವಿಧಾನದೊಂದಿಗೆ ಇಡುತ್ತಾರೆ. ಬಿಗ್ ಬ್ರದರ್ ತನ್ನ ಪ್ರಜೆಗಳ ಮೇಲೆ ನಿಗಾ ಇಡುತ್ತಾನೆ. ಸಾರ್ವಜನಿಕ ಸ್ಥಳಗಳಲ್ಲಿ ಪರದೆಯ ಮೇಲೆ ದೊಡ್ಡ ಭಾವಚಿತ್ರ ಮೂಡುತ್ತದೆ. ಯಾರು ನಮಸ್ಕರಿಸುವುದಿಲ್ಲವೋ ಅದು ದಾಖಲಾಗುತ್ತದೆ. ಅಂಥವರನ್ನು ಅರೆಸ್ಟ್ ಮಾಡಲಾಗುತ್ತದೆ. ಇದು ಸಲೀಸಾಗಿ ನಡೆಯುತ್ತದೆ. ಯಾಕೆಂದರೆ ಪ್ರಭುತ್ವಕ್ಕೆ ಅಪಥ್ಯವೆನ್ನಿಸುವ ಚರಿತ್ರೆಯ ನೆನಪುಗಳನ್ನು ಜನರ ಮನಸ್ಸಿನಿಂದ ಶಾಶ್ವತವಾಗಿ ಅಳಿಸಲಾಗಿದೆ. ನಮ್ಮ ಸುತ್ತ ನಡೆಯುತ್ತಿರುವ ಸಣ್ಣಸಣ್ಣ ಸಂಗತಿಗಳು ಅದೇ ಕರೆಗಂಟೆಗಳೇ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...