Homeಅಂಕಣಗಳುನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

ನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

- Advertisement -
- Advertisement -
  • ಡಾ. ವಿನಯಾ ಒಕ್ಕುಂದ |

ನಮ್ಮ ಸುತ್ತ ನಡೆಯುತ್ತಿರುವ ಸಣ್ಣ ಸಂಗತಿಗಳನ್ನು ಉಪೇಕ್ಷಿಸಲು ಸಾಧ್ಯವಿಲ್ಲ. ಅವು ಬೃಹತ್ ವಿದ್ಯಮಾನದ ನೆರಳಿನಂತಿರುತ್ತವೆ. ಮೊನ್ನೆ ಧಾರವಾಡದ ಮೇ ಸಾಹಿತ್ಯದ ಕಾರ್ಯಕ್ರಮದಲ್ಲಿದ್ದೆ. ನನ್ನ ಪಕ್ಕ ಹಿರಿಯರೊಬ್ಬರು ಕೂತಿದ್ದರು. ನಿಧಾನ ಮಾತು ಆರಂಭಿಸಿದರು. ‘ನಿಮ್ಮ ಮಗಳಾ?’ ‘ಹೀಗೆ ಫೋಟೋ ತೆಗೆದು ಓಡಾಡಿ ಮುಂದೇನು ಮಾಡುತ್ತಾಳೆ?’ .. ಆ ಮಾತುಗಳಲ್ಲಿ ಮಮತೆ ಇರಲಿಲ್ಲ. ವ್ಯಂಗ್ಯವಿತ್ತು. ಪೇಚಿಗೆ ಸಿಲುಕಿಸುವ ಇರಾದೆಯಿತ್ತು. ನಾನು ‘ಗೊತ್ತಿಲ್ಲ’ ಎಂದೆ. ‘ಚಿತ್ರ ಗಿತ್ರ ತಗೀತಾಳಂತಲ್ಲ?’ ‘ಹೂಂ’. ‘ಓದೋದು ಬರೆಯೋದು?’ ‘ಅಂಥದೇನಿಲ್ಲ’… ನಾನು ಕುರ್ಚಿಯನ್ನು ಅತ್ತಿತ್ತ ಜರುಗಿಸಿಕೊಂಡು ಕೂತೆ. ಅವಳು ಬಂದಾಗ ‘ನೋಡು ಚಿತ್ರವೆಂದರೆ ಹೀಗೆ ತಗೀಬೇಕು’ ಎಂದು ಮೊಬೈಲ್‍ನಿಂದ ತೋರಿಸಿದರು. ಬಿಜೆಪಿ ಶಾಸಕರೊಬ್ಬರ ಚಿತ್ರ ಬಿಡಿಸಿದ ಕಲಾವಿದರೊಬ್ಬರ ಚಿತ್ರಗಳವು. ಇವಳು ತಲೆಯಾಡಿಸಿ ಎದ್ದುಹೋದಳು. ಧರ್ಮದ ಕುರಿತ ಗೋಷ್ಠಿಯಲ್ಲಿ ವೀರಶೈವ- ಲಿಂಗಾಯತ ಚರ್ಚೆ ಬಂತು. ಎಚ್.ಎಸ್.ಶಿವಪ್ರಕಾಶ್, ಎಸ್ ಜಿ. ಸಿದ್ದರಾಮಯ್ಯ, ರಂಜಾನ್ ದರ್ಗಾ ಚರ್ಚಿಸುತ್ತಿದ್ದರು. ‘ಇದೇನಿದು, ಸಾಹಿತ್ಯದ ಬಗ್ಗೆ ಮಾತಾ? ತಥ್.. ನೀವು ಇಂಗ್ಲಿಷ್ ಲಿಟರೇಚರ್ ಓದಿದ್ದೀರಾ ಮೇಡಂ? ಅಲ್ಲಿ ಹೀಗೆ ಮಾತಾಡುವುದನ್ನು ಮಾತಿನ ವಾಂತಿ ಅಂತಾರೆ’. ನನಗೆ ಕೋಪ ಬರುತ್ತಿತ್ತು. ‘ನಿಮಗೆ ಬೇಡವಾದರೆ ಎದ್ದು ಹೋಗಿ’ ಎಂದೆ. ‘ಇಲ್ಲ ಇಲ್ಲ ನಾನು ಕೇಳಲಿಕ್ಕೇ ಬಂದಿದ್ದು’ ಎಂದು ಉತ್ತರ ಬಂತು. ದಿನೇಶ್ ಅಮೀನ್‍ಮಟ್ಟು, ‘ಇಷ್ಟೆಲ್ಲ ಮಾಡುವ ಬದಲು ಇವಿಎಂ ಮಶಿನ್‍ಗಳನ್ನು ಹ್ಯಾಕ್ ಮಾಡುವವರನ್ನು ತಯಾರು ಮಾಡಿಕೊಂಡಿದ್ದರೆ ಸಾಕಾಗಿತ್ತು’ ಎಂದು ಪ್ರಜಾಪ್ರಭುತ್ವದ ಅಭದ್ರತೆಯ ಬಗ್ಗೆ ವ್ಯಂಗ್ಯದಿಂದ ಮಾತು ಆರಂಭಿಸಿದರು. ನನ್ನ ಪಕ್ಕದ ವ್ಯಕ್ತಿಗೆ ಸಿಟ್ಟು ನೆತ್ತಿಗೇರಿತ್ತು. ‘ಏನಿದು ಬಾಯಿಬಡುಕರ ಹಾಗೆ ಒದರಿದರೆ..? ವಿವಿಪ್ಯಾಟ್ ಲಗತ್ತಿಸಿಲ್ವಾ?’ ಈ ಬಾರಿ ಆಸಾಮಿ ನನ್ನ ಕಡೆ ಹೊರಳಿರಲಿಲ್ಲ. ಆ ಕಡೆಯ ವ್ಯಕ್ತಿಯ ಜತೆಗೆ ಮಾತಾಡುತ್ತಿತ್ತು. ಆ ಕ್ಷಣ ವಿವಿಪ್ಯಾಟ್ ಹಿಂದೆ ಹೀಗೆ ಬಾಯ್ಮುಚ್ಚಿಸುವ ತಂತ್ರಗಾರಿಕೆ ಇದೆ ಅನ್ನಿಸಿತು.

ಸಂಜೆಯ ಸಮಾರೋಪದಲ್ಲಿ ಮಾತನಾಡುತ್ತ ಸುನಂದಾ ಕಡಮೆ, ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋ ಫೇಸ್ ಬುಕ್ಕಿಗೆ ಹಾಕಿದಾಗ ಕೆಲ ದಿನ ನಿರಂತರವಾಗಿ ಕೆಟ್ಟ ಮೆಸೇಜ್‍ಗಳು ಬಂದಿದ್ದನ್ನು ಪ್ರಸ್ತಾಪಿಸಿದರು. ನನಗೆ ಗಾಬರಿಯಾಯಿತು. ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋಗಳನ್ನು ನನ್ನ ಗಂಡನೂ ಮಗಳೂ ಫೇಸ್ ಬುಕ್ಕಿಗೆ ಹಾಕಿದ್ದರು. ಮಗಳಿಗೆ ಪ್ರಕಾಶ್ ರೈ ಕುರಿತು ಕೆಲವು ಕೆಟ್ಟ ಕಮೆಂಟ್‍ಗಳು ಬಂದಿದ್ದವಂತೆ. ‘ನನಗೆ ಹೇಳಲಿಲ್ಲವಲ್ಲ’ಎಂದರೆ ‘ನಾನೇ ಓದ್ಲಿಲ್ಲ, ಹೀಗೆ ಅಂತ ಕಂಡ ತಕ್ಷಣ ಬ್ಲಾಕ್ ಮಾಡಿ ಒಗೆದೆ’ ಎಂದಳು ನಿಸೂರಾಗಿ. ಇವೆಲ್ಲ ಇಷ್ಟು ಉಪೇಕ್ಷಿಸುವ ಸಂಗತಿಗಳಲ್ಲ ಎಂದು ಅವಳಿಗೆ ತಿಳಿದಿರಲಿಲ್ಲ. ಪ್ರಕಾಶ್ ರೈ, ನಮ್ಮ ಮನೆಯಲ್ಲಿ ಕೆಲಗಂಟೆ ಕಳೆದು ಹೋದ ಮೇಲೆ ನಡೆದ ಸಂಗತಿಗಳನ್ನು ನೆನಪಿಸಿಕೊಂಡೆ. ಅಕ್ಕಪಕ್ಕದವರ ಕಣ್ಣು ಬೇರೆ ನಮೂನಿ ತೂಗತೊಡಗಿವೆ ಅನ್ನಿಸಿತ್ತು. ಎಲ್ಲರ ಹಾಗೆ ಬಾಗಿಲಿಗೆ ರಂಗೋಲಿ ಇಕ್ಕಿ, ಎಲ್ಲರ ಹಾಗೆ ಆಕಾಶಬುಟ್ಟಿ ತೂಗುಬಿಟ್ಟು, ಎಲ್ಲರ ಹಾಗೆ ಕಬ್ಬು ನಿಲ್ಲಿಸಿ ತುಳಸಿ ಪೂಜೆ ಮಾಡಿ… ಏನೆಲ್ಲಾ ಮಾಡಿದರೂ ಇವರು ನಮ್ಮಂತಿಲ್ಲ ಅಂತ ಸುತ್ತಲ ಜನ ಇರುಸು-ಮುರಸು ಅನುಭವಿಸುತ್ತಿದ್ದ ಹಾಗಿತ್ತು. ಅವರ ಬಗ್ಗೆ ಪಾಪ ಅನ್ನಿಸಿತು. ನಮ್ಮ ಕೆಲಸದವಳು, ಆವತ್ತು ಪ್ರಕಾಶ್ ರೈ ಅಡಿಗೆ ಮನೆ ಬಾಗಿಲವರೆಗೂ ಬಂದು ಅವಳೊಡನೊಂದು ಫೋಟೋ ಕೂಡ ತಗೊಂಡಿದ್ದರು. ಅವಳು ಆವತ್ತು ಪ್ರಕಾಶ್ ರೈ ಬಗ್ಗೆ ಫಿದಾ ಆಗಿದ್ದು ನಿಜ. ಆದರೆ ದಿನವೂ ಒಂದೊಂದು ಪ್ರಶ್ನೆಗಳನ್ನು ತರುತ್ತಿದ್ದಳು. ‘ಅವರಿಗೆ ಕಾಂಗ್ರೆಸ್ ಏಜೆಂಟ್ ಅಂತಾರಂತಲ್ಲ?’ ‘ಅವರಿಗೆ ಎರಡು ಮದುವೆಯಾಗಿದಾವಂತಲ್ಲ?’ ಹೀಗೆ. ತಿಳಿದಷ್ಟನ್ನು ಸಮಾಧಾನದಿಂದ ವಿವರಿಸಿದ್ದೆ. ಪ್ರಕಾಶ ರೈ ಭಾಷಣದ ತುಣುಕುಗಳನ್ನು ಕೇಳಿಸಿದೆ. ‘ ಹೌದ್ ಬಿಡ್ರೀ, ಸರಿ ಬಿಡ್ರೀ,’ ಅಂತ ಸುಮ್ಮನಾಗಿದ್ದಳು. ನಿಜಕ್ಕೂ ಅವಳ ಅಂತರಂಗದಲ್ಲಿ ಹೌದೆನ್ನಿಸಿತೇ ತಿಳಿಯಲಿಲ್ಲ. ದುಡಿದು ಬದುಕುವ ಇಂತಹ ಜನರ ಅನಕ್ಷರತೆ, ಮುಗ್ಧತೆಗಳನ್ನು ಕೋಮುವಾದ ಬಳಸಿಕೊಳ್ಳುವ ಪರಿ ದಂಗುಬಡಿಯುವಂಥದ್ದು. ಕಲ್ಬುರ್ಗಿಯವರ ಹತ್ಯೆಯ ನಂತರದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮನೆಗೆ ಬರುವಾಗ ಆಟೋ ಚಾಲಕ ಕೇಳಿದ್ದ-‘ ಅವ್ರು ನಮ್ದೇವ್ರ ಮೇಲೆ ಉಚ್ಚಿ ಹೊಯ್ಬಹುದು ಅಂದಿದ್ರಂತಲ್ಲ. ಅಂಥವರ ಸಂಬಂಧ ರ್ಯಾಲಿ ಮಾಡೀರಿ? ಹುಷಾರ್ರೀ ನಿಮ್ಮ ಮನಿಗೋಳ ಮ್ಯಾಲೂ ಕಲ್ ಬಿದ್ದಾವು’. ಹಿಂದುತ್ವದ ಅಜೆಂಡಾ ತುಂಬಾ ಪ್ರಬಲವಾಗಿ ಈ ಕೆಲಸ ಮಾಡುತ್ತಿದೆ. ಸಾಮಾಜಿಕ ವ್ಯವಸ್ಥೆಯ ತಳಹದಿಯಲ್ಲಿರುವ ಜೀವಿಗಳಲ್ಲಿ ತನ್ನ ನಂಬಿಕೆಯನ್ನು ಉತ್ಪಾದಿಸುತ್ತಿದೆ. ನಿಧಾನ ವಿಷದಂತೆ ದಿನವೂ ಸುಳ್ಳುಗಳು ತಪ್ಪುಗಳು ಅರೆ ಬರೆ ವ್ಯಾಖ್ಯಾನಗಳು ಅವರನ್ನು ತಲುಪುತ್ತವೆ. ಮರು ವಿಶ್ಲೇಷಿಸಬಹುದಾದ ಸುದ್ದಿಯಾಗಿಯಲ್ಲ, ನಂಬಿಕೆಯಾಗಿ. ಈ ನಂಬಿಕೆಯ ಲೇಹ್ಯದ ಕಟುತ್ವವನ್ನು ಯಾವ ವೈಚಾರಿಕತೆಯೂ ಮಾಗಿಸಲಾರದು ಎನ್ನುವಷ್ಟು ತೀವ್ರವಾಗಿ.

ಪ್ರಕಾಶ್ ರೈ ಬಂದುಹೋದ ಕೆಲ ದಿನಗಳಲ್ಲಿ, ಮಗಳು ತನ್ನ ಗೆಳತಿಯೊಂದಿಗೆ ಸಮೀಪದ ಪರಿಚಯದ ಪಾರ್ಲರಿಗೆ ಹೋಗಿದ್ದಳು ಕೂದಲು ಶೇಪ್‍ಲೆಸ್ ಆಗಿದೆ ಎಂದು ಗೊಣಗಿಕೊಳ್ಳುತ್ತ. ಬೇಡವೆಂದರೂ ಏನೋ ಮಹತ್ವದ್ದನ್ನು ಪಡೆಯುವ ಉಮೇದಿಯಲ್ಲಿ. ಬಂದಾಗ ಕೋಪದಿಂದ ಧುಮುಗುಡುತ್ತಿದ್ದಳು. ಆ ಪಾರ್ಲರಿನಲ್ಲಿ ಗಂಡಹೆಂಡತಿ ಇಬ್ಬರೂ ಇರುತ್ತಾರೆ. ಮಕ್ಕಳ ಕೂದಲನ್ನು ಶೇಪ್ ಮಾಡೋದು ಸಾಮಾನ್ಯವಾಗಿ ಗಂಡನೇ ಅಂತೆ. ಅವರ ಮಗಳು ಇವರ ಗೆಳತಿ ಕೂಡ. ಅವರು ತೆಲುಗು ಮಾತಾಡುವ ದಲಿತರು. ಬಹಳ ಕಾಲದಿಂದ ಇಲ್ಲೇ ಇರುವವರು. ಇವಳು ಕೂದಲು ಕೊಟ್ಟು ಕೂತಾಗ ಆತ ಕೇಳಿದನಂತೆ. ‘ನಿಮ್ಮನೆಗೆ ಹುಚ್ಚ ಬಂದಿದ್ದನಂತಲ್ಲ?’ ‘ಆಂ’? ‘ಆ ಪ್ರಕಾಶ ರೈ ಅನ್ನೋ ಹುಚ್ಚ ಬಂದಿದ್ದನಂತಲ್ಲ?’ ‘ಯಾಕ್ರಿ ಅಂಕಲ್, ಅನಂತಕುಮಾರ ಹೆಗಡೆ ಬಂದಿದ್ದರೆ ಹಾಗನ್ನಬಹುದಿತ್ತು. ಹೋಗಿ ಹೋಗಿ ಅಷ್ಟು ದೊಡ್ಡ ವ್ಯಕ್ತಿಗೆ ಹೀಗನ್ನುತ್ತೀರಲ್ರೀ.. ಏನ್ರೀ ನೀವು…?’ ಆತ ದಂಗಾದನಂತೆ. ಇಷ್ಟು ಸಣ್ಣ ಹುಡುಗಿ ಹೀಗೆ ಉತ್ತರಿಸಬಹುದೆಂದುಕೊಂಡಿರಲಿಲ್ಲವೇನೋ. ನಂತರದ್ದು ಇನ್ನೊಂದು ಬಗೆಯ ವಿಕಾರ. ಚೆಂದದ ಕೂದಲನ್ನು ಅಸಡ್ಡಾಳ ಕತ್ತರಿಸಿದ್ದ. ಕಣ್ಣೊರೆಸಿಕೊಳ್ಳುತ್ತ ಬಂದವಳು ಕೂದಲ ದುಃಸ್ಥಿತಿ ನೋಡಿ ಕೊರಗುತ್ತಲೇ ಇದ್ದಳು. ಆದರೆ, ಪ್ರಕಾಶ್ ರೈ ಜತೆ ಇದ್ದ ಬಿದ್ದ ಫೋಟೋಗಳನ್ನೆಲ್ಲ ಅಪ್ ಲೋಡ್ ಮಾಡಿದಳು. ನನಗೆ ಅರ್ಧ ಹೇರ್ ಕಟಿಂಗ್ ಮಾಡಿ ಹೊರದಬ್ಬಿಸಿಕೊಂಡಿದ್ದ ಹಿರೇಕೆರೂರಿನ ದಲಿತ ಯುವಕ ನೆನಪಾಗುತ್ತಿದ್ದ. ಅವನನ್ನು ಹೊರದಬ್ಬಲಾಗಿತ್ತು. ಇವಳು ಇನ್ನೊಂದು ರೀತಿಯಲ್ಲಿ ಹೊರಬಂದಿದ್ದಳು, ಇನ್ನೆಂದೂ ಅಲ್ಲಿ ಕಾಲಿಡಲಾರದಂತೆ. ಜಾತಿ, ಧರ್ಮ, ಲಿಂಗಗಳ ಜತೆಗೆ ವೈಚಾರಿಕತೆಯೂ ತೀವ್ರ ಒತ್ತುವರಿಗೆ ಒಳಗಾಗುತ್ತಿರುವ ಕಾಲವಿದು.

ರಾಜೇಂದ್ರ ಚೆನ್ನಿಯವರು ನಮ್ಮ ಈ ವರ್ತಮಾನವನ್ನು ಜಾರ್ಜ್ ಆರ್ವೆಲ್ 1984ರಲ್ಲಿ ಬರೆದ Thought police ವಿಧಾನದೊಂದಿಗೆ ಇಡುತ್ತಾರೆ. ಬಿಗ್ ಬ್ರದರ್ ತನ್ನ ಪ್ರಜೆಗಳ ಮೇಲೆ ನಿಗಾ ಇಡುತ್ತಾನೆ. ಸಾರ್ವಜನಿಕ ಸ್ಥಳಗಳಲ್ಲಿ ಪರದೆಯ ಮೇಲೆ ದೊಡ್ಡ ಭಾವಚಿತ್ರ ಮೂಡುತ್ತದೆ. ಯಾರು ನಮಸ್ಕರಿಸುವುದಿಲ್ಲವೋ ಅದು ದಾಖಲಾಗುತ್ತದೆ. ಅಂಥವರನ್ನು ಅರೆಸ್ಟ್ ಮಾಡಲಾಗುತ್ತದೆ. ಇದು ಸಲೀಸಾಗಿ ನಡೆಯುತ್ತದೆ. ಯಾಕೆಂದರೆ ಪ್ರಭುತ್ವಕ್ಕೆ ಅಪಥ್ಯವೆನ್ನಿಸುವ ಚರಿತ್ರೆಯ ನೆನಪುಗಳನ್ನು ಜನರ ಮನಸ್ಸಿನಿಂದ ಶಾಶ್ವತವಾಗಿ ಅಳಿಸಲಾಗಿದೆ. ನಮ್ಮ ಸುತ್ತ ನಡೆಯುತ್ತಿರುವ ಸಣ್ಣಸಣ್ಣ ಸಂಗತಿಗಳು ಅದೇ ಕರೆಗಂಟೆಗಳೇ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...