Homeಕರ್ನಾಟಕ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಯೋಜನೆಗಳನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಿಬಿಜೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ರಾಜ್ಯದ ಮತದಾರರು ಸಿಡಿದೆದ್ದಿದ್ದಾರೆ. “ರಾಜ್ಯದ ಜನತೆ ತೆರೆಗೆ ಕೊಡುವುದನ್ನೇ ನಿಲ್ಲಿಸಬೇಕಾಗುತ್ತದೆ, ನಮ್ಮಿಂದ ನೀವೇ ಹೊರತು, ನಿಮ್ಮಿಂದ ನಾವಲ್ಲ” ಎಂದು ಅಭಿಪ್ರಾಯ ತಾಳುತ್ತಿದ್ದಾರೆ.

“ಬಿಜೆಪಿ ಸೋತರೆ ಕರ್ನಾಟಕದಿಂದ ಕೇಂದ್ರ ಸಂಗ್ರಹಿಸುವ ಜಿಎಸ್‌ಟಿಯೂ ಬಂದ್ ಎಂದು ಹೇಳಿಕೆ ನೀಡುವ ದಮ್ಮು ತಾಕತ್ತು ಇದೆಯೇ ನಡ್ಡಾ ಅವರೇ? ಡಬಲ್ ಇಂಜಿನ್ ಇದ್ದಾಗಲೂ ಕೇಂದ್ರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಖಾಲಿ ಚಿಪ್ಪು ಅಲ್ಲವೇ? ನೆರೆ ಪರಿಹಾರ, ಜಿಎಸ್‌ಟಿ ಬಾಕಿ, ಲಸಿಕೆ, ಆಕ್ಸಿಜನ್, ಹಣಕಾಸು ಆಯೋಗದ ಹಣ ಎಲ್ಲದರಲ್ಲೂ ಮಹಾದ್ರೋಹ ಎಸಗಿದ್ದೀರಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸೋಲಿನ ಭೀತಿ ಬಿಜೆಪಿಯನ್ನು ಹೇಗೆ ಕಾಡುತ್ತಿದೆ ಎಂಬುದಕ್ಕೆ ನಡ್ಡಾ ಅವರ ಈ ಹೇಳಿಕೆಯೇ ಸಾಕ್ಷಿ. ಸೋಲು ಸನಿಹಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಕನ್ನಡಿಗರಿಗೆ ನೇರಾನೇರ ಬೆದರಿಕೆ ಹಾಕುತ್ತಿದೆ. ನಡ್ಡಾ ಅವರ ಹೇಳಿಕೆ ಸಂವಿಧಾನ, ಪ್ರಜಾಪ್ರಭುತ್ವಗಳಿಗೆ ಸಂಪೂರ್ಣ ವಿರುದ್ಧವಾದುದು, ಬಿಜೆಪಿಯ ಮಾನ್ಯತೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ‌ಮೋದಿಯವರ ಆಶೀರ್ವಾದ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ. ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ. ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಹೋರಾಟಗಾರರಾದ ಡಾ.ಎಚ್.ವಿ.ವಾಸು ಪ್ರತಿಕ್ರಿಯಿಸಿ, “ಇದನ್ನು ನಡ್ಡಾ ಹೇಳಿರೋದು ನಿಜವಾದರೆ, ಕ್ಷಮೆ ಕೇಳಿದರೆ ಸಾಲದು.‌ ನಡ್ಡಾ ಮೇಲೆ ಕ್ರಮ ತೆಗೆದುಕೊಳ್ಳಬೇಕು.‌ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು. ಇಲ್ಲವಾದರೆ ಬಿಜೆಪಿಯನ್ನು ದೇಶದ ಎಲ್ಲಾ ರಾಜ್ಯಗಳ ಜನರು ಬಹಿಷ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಡ್ಡಾ ಅವರೇ ನಾವು ಬಿಜೆಪಿಯನ್ನು ಸೋಲಿಸುತ್ತೇವೆ.. ಸೋಲಿಸಿಯೇ ಸೋಲಿಸುತ್ತೇವೆ ಮತ್ತು ಒಕ್ಕೂಟ ಸರ್ಕಾರದಿಂದ ಅದೇನು ಬಂದ್ ಮಾಡುತ್ತಿರೋ ನಾವು ನೋಡುತ್ತೇವೆ. ನೀವು ಸೋಲಿಗೆ ಇಷ್ಟೊಂದು ಹೆದರಿಬಿಟ್ಟರೆ ಹೇಗೆ? ಮುಂದೆ ಬಹಳಷ್ಟು ಸೋಲುವುದು ಬಾಕಿ ಇದೆ. ನೆನೆಪಿರಲಿ ನಡ್ಡಾ ಅವರೇ, ಜಿಎಸ್‌ಟಿ ಸಂಗ್ರಹದ ದೊಡ್ಡ ಮೊತ್ತವು ಕೇಂದ್ರಕ್ಕೆ ಪಾವತಿಯಾಗುವುದು ಕರ್ನಾಟಕ ರಾಜ್ಯದಿಂದಲೇ. ನಾವು ಕೊಟ್ಟರೇನೇ ನೀವು ಬಾಳುವುದು” ಎಂದು ಕವಿ ರಾಜೇಂದ್ರ ಪ್ರಸಾದ್ ಎಚ್ಚರಿಸಿದ್ದಾರೆ.

“ಸಂಯುಕ್ತ ಗಣರಾಜ್ಯ ಆಡಳಿತದಲ್ಲಿ ರಾಜ್ಯ ಸರ್ಕಾರ ಕೇಂದ್ರದಿಂದ ಅಭಿವೃದ್ಧಿ ಕಾರ್ಯ ನೀಡುವುದಿಲ್ಲ ಎಂದು ಹೇಳಿದರೆ, ತೆರಿಗೆ ಹಣ ನೀಡಬೇಡಿ ಎಂದು ಹೇಳಲಿ. ನಮ್ಮ ಅಭಿವೃದ್ಧಿ ನಮಗೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಇಂತಹ‌ ಹೇಳಿಕೆ ನೀಡಿದದರೆ ಹೇಗೆ. ಇದು ತಪ್ಪು” ಎಂದು ಚಿಂತಕ ದಾಸನೂರು ಕೂಸಣ್ಣ ಖಂಡನೆ ವ್ಯಕ್ತಪಡಿಸಿದ್ದಾರೆ.

ಕವಿ ಗೋಪಾಲಕೃಷ್ಣ ಅಡಿಗರ ಸಾಲುಗಳನ್ನು ಉಲ್ಲೇಖಿಸಿ ಚಿಂತಕ ಶ್ರೀಪಾದ್ ಭಟ್‌ ಪ್ರತಿಕ್ರಿಯಿಸಿದ್ದಾರೆ. “ನಿನ್ನ ನಾಲ್ಕು ಕಾಲ ನರ್ತನಕ್ಕೆ ಪ್ರತಿ ನಿಮಿಷ ಏನಾದರೊಂದಕ್ಕೆ ಜಖಂ ಆಗದಿದ್ದರೆ ನಿನ್ನ ಅದ್ಭುತ ಪ್ರತಿಭೆಗೆ ಕುಂದು ಕಂಡೆಯಾ- ಅಡಿಗ. ಕರ್ನಾಟಕದ ಜನತೆ ಹಗಲು ಕಂಡ ಬಾವಿಯಲ್ಲಿ ಹಗಲೂ, ಇರುಳೂ ಯಾವ ಹೊತ್ತಿನಲ್ಲಿಯೂ ಬೀಳಲ್ಲ ನಡ್ಡಾ. ವಿನಾಶ ಕಾಲ ಬಂದಂತಿದೆ ಅಥವಾ ಬಂದಾಗಿದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಇಂತಹ ಬೆದರಿಕೆಗಳಿಗೆಲ್ಲ ಕನ್ನಡಿಗರು ಹೆದರಲ್ಲ ಮಿಸ್ಟರ್‌ ನಡ್ಡಾ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ತಾಕತ್ತಿದ್ದರೆ ಬಂದ್ ಮಾಡಿ ನೋಡೋಣ” ಎಂದು ಸತೀಶ್ ಚಿಕ್ಕಮಗಳೂರು ಎಂಬವರು ಸವಾಲು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಪ್ರತಿಕ್ರಿಯಿಸಿ, “ರಾಜಕಾರಣಿಯೊಬ್ಬರು ತನ್ನ ಭಾಷಣದಲ್ಲಿ ತಮ್ಮ ಪಕ್ಷ ಚುನಾವಣೆಯಲ್ಲಿ ಸೋತರೆ ಸೆಂಟ್ರಲ್ ಯೋಜನೆಗಳು ಬಂದ್ ಎಂದು ಹೇಳಿದ್ದಾರೆಂಬ ಪತ್ರಿಕಾ ವರದಿ ನೋಡಿದೆ. ಒಂದು ವೇಳೆ ಇದು ಸಂಭವಿಸಿದರೆ, ಕರ್ನಾಟಕಕ್ಕೆ ಎಷ್ಟು ಲಾಸ್ ಆಗಬಹುದು?” ಎಂದು ವಿವರಿಸಿದ್ದಾರೆ.

“2022-23 ಬಜೆಟ್ ಪ್ರಕಾರ ರಾಜ್ಯದ ಆದಾಯ ನಿರೀಕ್ಷೆ ಇರುವುದು 1,89,888 ಕೋಟಿ ರೂ. ಇದರಲ್ಲಿ 73% ಭಾಗ ರಾಜ್ಯದಲ್ಲೇ ಉತ್ಪತ್ತಿ ಆಗುವಂತಹದು. ಅಂದರೆ, 1,37,824 ಕೋಟಿ ರೂ.ಗಳು. ಕೇಂದ್ರ ಸರ್ಕಾರದ ಪಾಲು 27%. ಅಂದರೆ, 52,064 ಕೋಟಿ ರೂ.ಗಳು. ಇದರಲ್ಲಿ, ಅಂದರೆ ಕೇಂದ್ರ ಸರ್ಕಾರದ ಪಾಲಿನಲ್ಲಿ, 16% ಭಾಗ, ಅಂದರೆ 30,382 ಕೋಟಿ ರೂ.ಗಳು ನಮ್ಮ ರಾಜ್ಯ ಕೇಂದ್ರಕ್ಕೆ ಕಟ್ಟಿರುವ ಜಿಎಸ್‌ಟಿ ತೆರಿಗೆಯಲ್ಲಿ ಕೇಂದ್ರ ಸರ್ಕಾರ ವಾಪಸ್ ಕೊಡಲೇಬೇಕಾಗಿರುವ ರಾಜ್ಯದ ಪಾಲು. ಕೇವಲ 12% ಮಾತ್ರ ಕೇಂದ್ರದ ಅನುದಾನ (ಅರ್ಥಾತ್ ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಬರುವ ನೆರವು). ಕೇಂದ್ರ ಸರ್ಕಾರದ ರಾಜಕಾರಣಿ ಹೇಳಿರುವಂತೆ, ಅವರ ಪಕ್ಷ ಸೋತರೆ ರಾಜ್ಯಕ್ಕೆ ಕೇಂದ್ರದ ಅನುದಾನ ಬರದೆ ಆಗುವ ನಷ್ಟ ಕೇವಲ 23,000 ಕೋಟಿ ರೂ. (ಅಂಕಿಸಂಖ್ಯೆಗಳಿಗೆ ಆಧಾರ: ಕರ್ನಾಟಕ ಬಜೆಟ್ 2022-23ರ ದಾಖಲೆಗಳು)” ಎಂದು ತಿಳಿಸಿದ್ದಾರೆ.

“ಬಹುತೇಕ ಎರಡು ಲಕ್ಷ ಕೋಟಿ ಆದಾಯ ಇರುವ, ತಿಂಗಳಿಗೆ ಸಮಾರು 10,000 ಕೋಟಿ ಜಿಎಸ್‌ಟಿ ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ರಾಜ್ಯ ಕರ್ನಾಟಕ. ಬರೇ ಎರಡು ತಿಂಗಳ ಜಿಎಸ್‌ಟಿ ಆದಾಯದಲ್ಲಿ ಕೇಂದ್ರದ ಅನುದಾನದ ಕೊರತೆ ಭರ್ತಿಯಾಗಬಲ್ಲ ಸಂಪದ್ಭರಿತ ರಾಜ್ಯ ಕರ್ನಾಟಕ. ರಾಜಕಾರಣಿಗಳು ಮಾತಾಡುವಾಗ ಎಚ್ಚರ ತಪ್ಪಬಾರದು. ಅದು ಒಂದು ಒಕ್ಕೂಟ ಗಣರಾಜ್ಯಕ್ಕೆ ಹೇಳಿಸಿದ್ದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....