Homeಮುಖಪುಟಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ - ದೇವನೂರು

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

- Advertisement -
- Advertisement -

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಹಾಗಾಗಿ ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ, ನಾವು ಉಳಿಯಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕರೆ ನೀಡಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ, ಬದಲಿಗೆ- ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ ಈ ಸಲ 2023ರ ವಿಧಾನಸಭೆಯ ಚುನಾವಣೆ ಸಂದರ್ಭಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಓದಬೇಕಾಗಿ ಬಂತು. ಈ ದೇಶದ ಪ್ರಧಾನಮಂತ್ರಿಯವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕಾಲಂ ಒಂದನ್ನು ಉಲ್ಲೇಖಿಸಿ ಅದರ ವಿರುದ್ಧವಾಗಿ ಅನೇಕ ಕಡೆ ಉಗ್ರ ಭಾಷಣ ಮಾಡಿದರು. ನಾನು ಕುತೂಹಲಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಂತಹದು ಏನಿರಬಹುದು ಎಂದು ಗಮನವಿಟ್ಟು ಓದಿದೆ. “ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು, ಯಾವುದೇ ವ್ಯಕ್ತಿಗಳಾಗಲಿ ಭಜರಂಗ ದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಬರೆಯಲಾಗಿದೆ” ಎಂದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದಿದ್ದೇನೆ. ನನಗೆ ಪ್ರಮುಖವಾಗಿ ಕಂಡಿದ್ದು ಇಷ್ಟು: 1) ಸಮಾಜದ ವಿಭಜನೆಗೆ ಅಂದರೆ ಒಡಕಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧ (2) ಕಾಂಗ್ರೆಸ್‌ಗೆ ಸಂವಿಧಾನ ಪವಿತ್ರ (3) ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಬಾರದು (4) ಇದನ್ನು ಉಲ್ಲಂಘಿಸುವವರು ಯಾರೇ ಆಗಲಿ ಭಜರಂಗದಳ, ಪಿಎಫ್‌ಐ ಇತ್ಯಾದಿಗಳ ಮೇಲೆ ಕಾಂಗ್ರೆಸ್ ಪಕ್ಷ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಇದು ಆ ಪ್ರಣಾಳಿಕೆಯ ಸಾರಾಂಶ. ಅಂದರೆ ಯಾರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೊ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಆಶಯ ಇಲ್ಲಿದೆ. ರಾಜ್ಯದ law and order ಕಾಪಾಡುವುದು ತನ್ನ ಧರ್ಮ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳುತ್ತಿದೆ.
ನನಗೆ ಅನಿಸುವಂತೆ, ಯಾವುದೇ ಒಂದು ಸರ್ಕಾರಕ್ಕೆ ತನ್ನ ರಾಜ್ಯದ, ದೇಶದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಂದರೆ ಅದು ಆ ಸರ್ಕಾರದ ಕನಿಷ್ಠ ಅರ್ಹತೆ. ಈ ಕನಿಷ್ಠ ಅರ್ಹತೆ ಇಲ್ಲದಿರುವುದರಿಂದಾಗಿ ಇದುವರೆಗೂ ರಾಜ್ಯವನ್ನು ಆಳ್ವಿಕೆ ನಡೆಸುತ್ತಿದ್ದ ಬಿಜೆಪಿ ಸರ್ಕಾರದ ಜಮಾನದಲ್ಲಿ ಒಂದೆರಡಲ್ಲ-ನೂರಾರು ಸಲ, ಕೆಲವು ಗುಂಪುಗಳು ದಾಂಧಲೆ ಎಬ್ಬಿಸಿ ಗಲಭೆ ಆಯ್ತು. ವ್ಯಾಪಾರ ನಿಷೇಧ, ಹಿಜಾಬ್, ಹಲಾಲ್, ಗೋವು ಸಾಗಾಣಿಕೆ ಇತ್ಯಾದಿ, ಇತ್ಯಾದಿ ಸರಮಾಲೆಯಲ್ಲಿ ಕೊಲೆ ಸುಲಿಗೆ ಹೊಡೆ ಬಡಿ ಎಲ್ಲಾ ನಡೆಯಿತು. ಸರ್ಕಾರ ಎನ್ನುವುದು ಇದೆಯೋ ಇಲ್ಲವೋ ಎಂದು ಅನುಮಾನ ಬರುವ ಪರಿಸ್ಥಿತಿ ಉಂಟಾಯ್ತು. ಇದೇ ಪರಿಸ್ಥಿತಿ ಮತ್ತೆ ಬರಬೇಕೆ? ಎಂದು ದೇವನೂರು ಪ್ರಶ್ನಿಸಿದರು.

ಹೀಗಿದ್ದೂ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುವ ಭಜರಂಗದಳದ ನಿಷೇಧ ಪ್ರಸ್ತಾಪವನ್ನು ವಿರೋಧಿಸುತ್ತಾರೆ. ಆಕ್ರೋಶಭರಿತರಾಗುತ್ತಾರೆ. ಬ್ಯಾಲೆಟ್ ಬಾಕ್ಸ್‌ನಲ್ಲಿ ಬಟನ್ ಒತ್ತುವಾಗ ‘ಜೈ ಭಜರಂಗ ಬಲಿ’ ಎಂದು ಮತ ನೀಡಿ ಎಂದು ಮತದಾರರಿಗೆ ಬಹಿರಂಗ ಕರೆಯನ್ನೂ ಕೊಡುತ್ತಾರೆ. ಆದರೆ ಹನುಮಂತ, ಹನುಮಾನ್ ಪರಮಭಕ್ತಿಯ ಸಂಕೇತವಾಗಿ ನಮ್ಮ ಜನಸಮುದಾಯದ ಸುಪ್ತಪ್ರಜ್ಞೆಯಲ್ಲಿ ವಾಸ ಮಾಡುತ್ತಿದ್ದಾನೆ. ಇಂತಹ ಪರಮಭಕ್ತಿಯ ಹನುಮಾನ್ ಯಾವ ಕಾರಣಕ್ಕೂ ‘ಭಕ್ತಿಯೇ ಇಲ್ಲದ ವೇಷಧಾರಿ ಭಕ್ತ’ರ ಗದ್ದಲದ ಮಾತುಗಳನ್ನು ಕೇಳಿಸಿಕೊಳ್ಳಲಾರ. ವಚನ ಪಾಲನೆಯ ಸಂಕೇತವಾದ ರಾಮನ ಭಕ್ತನಾದ ಹನುಮಾನ್ ವಚನಭ್ರಷ್ಠ ಭಕ್ತರನ್ನಂತೂ ಕ್ಷಮಿಸಲಾರ. ಇದೇ ಭಾರತದ ಪರಂಪರೆಯ ಅಂತಃಸಾಕ್ಷಿ ಎಂದು ದೇವನೂರು ತಿಳಿಸಿದರು.

ನಮ್ಮ ಪ್ರಧಾನಿಯವರಿಗೆ ಒಂದು ಪ್ರಶ್ನೆ. ಕಾನೂನು ಕೈಗೆತ್ತಿಕೊಳ್ಳುವ ಹಿನ್ನೆಲೆಯ ಭಜರಂಗದಳ ಮತ್ತು ಪಿಎಫ್‌ಐ ಇತ್ಯಾದಿಗಳ ಅವಾಂತರ ನೋಡಿಕೊಂಡು ಸರ್ಕಾರವೊಂದು ಸುಮ್ಮನಿರಬೇಕೆ? ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದು? ಇಂತಹ ಮತಾಂಧರ ಬಗ್ಗೆ- ಕನ್ನಡ ಮಹೋನ್ನತ ಲೇಖಕ ಪಿ.ಲಂಕೇಶ್ ಅವರು ಒಂದು ಮಾತು ಹೇಳುತ್ತಾರೆ- “ನಗು ಮರೆತ, ಅಳು ಮರೆತ, ದಯೆ ಮರೆತ ಧರ್ಮಾಂಧರು ಯಾವುದೇ ಅಣುಬಾಂಬಿಗಿಂತ ‘ಅಪಾಯದ ಮನುಷ್ಯರು’ ” ಅಂತ. ಲಂಕೇಶರ ಈ ಒಳಗಣ್ಣಿನ ನುಡಿಗಳನ್ನು ನಾವು ಆಲಿಸಬೇಕಾಗಿದೆ ಎಂದರು.

ಇತ್ತೀಚೆಗೆ ನಾನು ನಂಜನಗೂಡಿನ ಹತ್ತಿರದ ತಗಡೂರಿಗೆ ಒಂದು ಸಭೆಗೆ ಹೋಗಿದ್ದೆ. ಅಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಸೇರಿದ್ದರು. ಅಲ್ಲಿ ಶಾಲಾಮಕ್ಕಳು, ತರುಣರು, ಮಹಿಳೆಯರು, ಸಂಘಟನೆಗಳ ನಾಯಕರು, ಆ ಊರಿನ ಯಜಮಾನರು ಎಲ್ಲರೂ ಸೇರಿದ್ದರು. ನಾನು ಸುಮಾರು ಅರ್ಧ ಗಂಟೆಗಳ ಕಾಲ ಮಾತಾಡಿದೆ. ಮಾತಾಡಿದೆ ಅನ್ನುವುದಕ್ಕಿಂತ ನಾನು ಬರೆದುಕೊಂಡಿದ್ದನ್ನು ಓದಿದೆ ಅನ್ನಬಹುದು. ನಾನೇ ಚಕಿತನಾಗುವಂತೆ ಎಲ್ಲರೂ ಆಲಿಸಿದರು. ಸಭೆ ಮುಗಿದ ಮೇಲೆ ನಾಕಾರು ಹುಡುಗರು –“ನಮಗೆ ಅರ್ಥವಾಯ್ತು. ನಾವು ಬಿಜೆಪಿಗೆ ಮತ ನೀಡುವುದಿಲ್ಲ” ಅಂದರು. ಆಮೇಲೆ ಹತ್ತಾರು ಜನ ತರುಣರು ರಾತ್ರಿ 12.30ರವರೆಗೆ ಅಂದು ನಾನು ಹೇಳಿದ್ದ ಮುಖ್ಯ ಮಾತೊಂದನ್ನು ಚರ್ಚಿಸುತ್ತಿದ್ದರು ಎಂದು ತಿಳಿದು ಬಂತು. ತಗಡೂರು ಸಭೆಯಲ್ಲಿ ಹೇಳಿದ್ದ ಮಾತುಗಳ ಸಾರಾಂಶ ಏನೆಂದರೆ- “ಈ 2023ರ ವಿಧಾಸಭಾ ಚುನಾವಣೆ ಮತ್ತು ಮುಂಬರುವ 2024ರ ಲೋಕಸಭಾ ಚುನಾವಣೆ ನಿರ್ಣಾಯಕ. ಇಂದಿನ ರಾಜಕಾರಣದ ಒಳಹೊಕ್ಕು ನೋಡಿದರೆ, ಇಂದಿನ ಚುನಾವಣೆ ವ್ಯಕ್ತಿ ವ್ಯಕ್ತಿಗಳ ನಡುವೆ ಅಲ್ಲ. ಪಕ್ಷ ಪಕ್ಷಗಳ ನಡುವೆಯೂ ಅಲ್ಲ. ಇಂದಿನ ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಮನುಧರ್ಮ ಶಾಸ್ತ್ರದ ಭಕ್ತರಾದ ಸಂಘಪರಿವಾರ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ, ಆ ಮನುಧರ್ಮ ಶಾಸ್ತ್ರದಂತೆ ಒಕ್ಕಲಿಗರು, ಲಿಂಗಾಯಿತರು, ತಳಸಮುದಾಯದವರು ಮತ್ತೆ ಸೇವಕರಾಗಬೇಕಾಗುತ್ತದೆ. ಆಗ ದಲಿತರು, ಅಲೆಮಾರಿ, ಆದಿವಾಸಿಗಳು ಊರಾಚೆ ತಳ್ಳಲ್ಪಡುತ್ತಾರೆ, ನೆನಪಿಡಿ” –ಎಂದು ಹೇಳಿದ್ದೆ. ಈಗ ಬಿಜೆಪಿ ಸರ್ಕಾರಗಳು ತರುತ್ತಿರುವ ಕಾಯ್ದೆಗಳನ್ನು ಮೂಸಿ ನೋಡಿದರೂ, ಅಲ್ಲಿ ಮನುಧರ್ಮ ಶಾಸ್ತ್ರದ ವಾಸನೆ ಇರುವುದನ್ನು ಗುರುತಿಸಬಹುದು. ಹೀಗಿರುವಾಗ, ಸ್ನೇಹಿತರೇ ಸಂಘಪರಿವಾರ ಬಿಜೆಪಿಯನ್ನು ಸೋಲಿಸಲೇಬೇಕು. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಿದ ಭಾರತದ ಸಂವಿಧಾನವನ್ನು ಪವಿತ್ರ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಇಂದಿನ ಪರಿಸ್ಥಿತಿಯಲ್ಲಿ ಎಷ್ಟೇ ಭಿನ್ನಾಭಿಪ್ರಾಯ ಇದ್ದರೂ ಬೆಂಬಲ ನೀಡಬೇಕಾಗಿದೆ. ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ ನಾವು ಉಳಿಯಬೇಕಾಗಿದೆ ಎಂದರು.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...