Homeಮುಖಪುಟಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು.

- Advertisement -
- Advertisement -

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಕೊಲೆ ಬೆದರಿಕೆ ಹಾಕಿದ್ದು ಕೇವಲ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಅದು ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹದೇವ ಕಳವಳ ವ್ಯಕ್ತಪಡಿಸಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಇತ್ತೀಚೆಗೆ ನನ್ನ ಗೆಳೆಯ ಶ್ರೀನಿವಾಸ್ ಪ್ರಸಾದ್‌ರ ಒಂದು ಹೇಳಿಕೆ ನನಗೆ ಅತೀವ ನೋವು ಉಂಟು ಮಾಡಿತು. ಶ್ರೀನಿವಾಸ್ ಪ್ರಸಾದ್ ‘ಮಲ್ಲಿಕಾರ್ಜುನ ಖರ್ಗೆಯವರು ಅವಕಾಶವಾದಿ’ ಎಂದು ಹೇಳಿದ ಮಾತಿಗೆ ನಾನು ನೊಂದುಕೊಂಡೆ” ಎಂದರು.

ನಾನು ಬಲ್ಲಂತೆ, ಮಲ್ಲಿಕಾರ್ಜುನ ಖರ್ಗೆಯವರದು ಹಿತಮಿತ ವ್ಯಕ್ತಿತ್ವ. ಖರ್ಗೆಯವರು ತಾವು ನಂಬಿದ ಸಿದ್ಧಾಂತ, ಪಕ್ಷಕ್ಕೆ ಪರಮ ನಿಷ್ಠರು. ಅಧಿಕಾರ ದಾಹ ಇಲ್ಲದವರು. ಅವರು ಈ ಹಿಂದೆ ಸಚಿವರಾಗಿದ್ದಾಗ ಒಳ್ಳೊಳ್ಳೆಯ ಜನಹಿತ ಕಾಯ್ದೆಗಳನ್ನು ತಂದಿದ್ದಾರೆ. ಅವರು ಮುತ್ಸದ್ದಿ ಕೂಡ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸರ್ವಸಮ್ಮತ ಪ್ರಧಾನಮಂತ್ರಿ ಅಭ್ಯರ್ಥಿ ಆಗುವ ಸಾಧ್ಯತೆಗಳೂ ಇವೆ. ಹೀಗಿರುವಾಗ, ಇಂತಹ ಘನ ವ್ಯಕ್ತಿತ್ವ ಖರ್ಗೆಯವರಿಗೆ ಇರುವಾಗ ಶ್ರೀನಿವಾಸ್ ಪ್ರಸಾದ್‌ರಿಗೆ ಖರ್ಗೆಯವರನ್ನು ಅವಕಾಶವಾದಿ ಅನ್ನಲು ಹೇಗೆ ಬಾಯಿ ಬಂತು? ನನಗೆ ಪ್ರಶ್ನೆಯಾಗಿದೆ. ಪ್ರಸಾದ್‌ರಿಗೆ ನನ್ನ ಸಂಕಟದ ಭಾವನೆಗಳು ಮುಟ್ಟಬಹುದು ಅಂದುಕೊಂಡಿದ್ದೇನೆ ಎಂದರು.

ಹಾಗೆಯೇ ಇನ್ನೊಂದು ಸಂಗತಿ ಎಂದರೆ ಪ್ರಿಯಾಂಕ ಖರ್ಗೆ ಸಂಘ ಪರಿವಾರದ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದಾರೆ. ಅವರ ವ್ಯಕ್ತಿತ್ವವೂ ಒಂದು ಮರಿಸಿಂಹದಂತೆಯೇ ಇದೆ. ಜೊತೆಗೆ ಇವರು ಪ್ರಖರ ಬುದ್ಧಿವಂತ. ವಾಗ್ಮಿ ಕೂಡ. ಇವರ ಬಗ್ಗೆ ಬೆದರಿದ ಸಂಘ ಪರಿವಾರದ ಬಿಜೆಪಿಯವರು ಪ್ರಿಯಾಂಕ ಖರ್ಗೆ ವಿರುದ್ಧ ಮಣಿಕಂಠ ರಾಥೋಡ್ ಎಂಬ ರೌಡಿಶೀಟರ್‌ನ್ನು ನಿಲ್ಲಿಸಿದೆ. ‘ಯಥಾ ಪಕ್ಷ, ತಥಾ ಅಭ್ಯರ್ಥಿ!’ ಎಂದು ಲೇವಡಿ ಮಾಡಿದರು.

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು. ಈಗ ಈತ ಖರ್ಗೆಯವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದು ಸುದ್ದಿಯಾಗಿದೆ. ಈತನ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಇಡೀ ನಾಡಿಗೇ ಹಾಕಿದ ಬೆದರಿಕೆ. ನಾಗರೀಕ ಸಮಾಜ, ಪ್ರಗತಿಪರ ಸಂಘಟನೆಗಳು ತಕ್ಷಣವೇ ರಾಜ್ಯಾದ್ಯಂತ ಕೇವಲ ಒಂದು ಗಂಟೆ ಧರಣಿ ಮಾಡಿ, ‘ಮಣಿಕಂಠ ರಾಥೋಡ್ ನಡಾವಳಿ ಸಹಿಸುವುದಿಲ್ಲ’ ಎಂದು ಹೇಳಬೇಕಾಗಿದೆ. ನಿಮ್ಮೊಡನೆ ನಾನೂ ಇದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...