Homeಕರ್ನಾಟಕಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ, 'ಧಾರ್ಮಿಕ' ಘೋಷಣೆ ಕೂಗಿದ್ದು ಆಶ್ಚರ್ಯ ತಂದಿದೆ: ಶರದ್ ಪವಾರ್

ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ, ‘ಧಾರ್ಮಿಕ’ ಘೋಷಣೆ ಕೂಗಿದ್ದು ಆಶ್ಚರ್ಯ ತಂದಿದೆ: ಶರದ್ ಪವಾರ್

- Advertisement -
- Advertisement -

ಕರ್ನಾಟಕ ವಿಧಾನಸಭೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು “ಧಾರ್ಮಿಕ” ಘೋಷಣೆಗಳನ್ನು ಕೂಗಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಒಬ್ಬರು ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ, ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಅದು ಒಳ್ಳೆಯದಲ್ಲ ಎಂದು ಪವಾರ್ ಅವರು ಮಹಾರಾಷ್ಟ್ರದ ಪ್ರಾದೇಶಿಕ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಪಂಢರಪುರ ದೇವಸ್ಥಾನ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎನ್‌ಸಿಪಿ ಮುಖ್ಯಸ್ಥರು ಹೇಳಿದ್ದಾರೆ.

”ಚುನಾವಣೆಯಲ್ಲಿ ಸ್ಪರ್ಧಿಸುವ ಸಮಯದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜಾತ್ಯತೀತತೆಗಾಗಿ ಪ್ರತಿಜ್ಞೆ ಮಾಡುತ್ತೇವೆ” ಎಂದು ಪವಾರ್ ತಿಳಿಸಿದರು.

”ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಜಾತ್ಯತೀತತೆಯ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ನೀವು ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಇದು ಒಳ್ಳೆಯದಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

ಅಂಕೋಲದಲ್ಲಿ ಸಾರ್ವಜನಿಕ ಸಭೆ ಉದ್ದೇಶ ಮಾತನಾಡಿದ್ದ ಮೋದಿ, ”ಮತದಾನದ ದಿನ ಇವಿಎಂನಲ್ಲಿ ಬಟನ್‌ ಒತ್ತುವ ಮುನ್ನ ಜೈ ಭಜರಂಗ ಬಲಿ ಎಂದು ಘೋಷಣೆ ಕೂಗಿ ಕಾಂಗ್ರೆಸ್‌ಗೆ ಶಿಕ್ಷೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು.

ಪ್ರಧಾನಿ ಮೋದಿ ಅವರು ಪ್ರಚಾರ ಸಂದರ್ಭದಲ್ಲಿ ಹನುಮಾನ್ ಚಾಲಿಸ್ ಹೇಳುವುದು, ಬಜರಂಗ ಬಲಿ ಎನ್ನುವ ಘೋಷಣೆ ಕೂಗಿದ್ದರು. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದರು.

”ಬಿಜೆಪಿ ಹಿರಿಯ ನಾಯಕರಾಗಿರುವ ಪ್ರಧಾನಿ  ಮೋದಿ ಪ್ರಚಾರದಲ್ಲಿ ಹಿಂದೂ ದೇವರುಗಳನ್ನು ಬಳಸಿಕೊಳ್ಳುವ ಮೂಲಕ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ” ಎಂದು ಆರೋಪಿಸಿತ್ತು.

”ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣಗಳಲ್ಲಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಂಡಿದ್ದಾರೆ. ಕೇವಲ ಚುನಾವಣೆ ಲಾಭಕ್ಕೋಸ್ಕರ ದೇವ ದೇವತೆಗಳನ್ನು ಬಳಸುತ್ತಿದ್ದಾರೆ. ಈ ರೀತಿಯ ಪ್ರಚಾರಕ್ಕೆ ಅವಕಾಶ ನೀಡಬಾರದು. ಜಾತಿ ಧರ್ಮದ ಹೆಸರು ಬಳಸಿಕೊಂಡು ಚುನಾವಣೆ ಪ್ರಚಾರಕ್ಕೆ ಅವಕಾಶ ನೀಡಬಾರದು” ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಈ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...