Homeಕರ್ನಾಟಕಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ...

ಆಪರೇಷನ್ ಕಮಲಕ್ಕೆ ಅವಕಾಶ ಕೊಡಬೇಡಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿ: ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಕರೆ

- Advertisement -
- Advertisement -

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ‘ಆಪರೇಷನ್ ಕಮಲ’ ಮಾಡಲು ಅವಕಾಶ ಮಾಡಿಕೊಡದೇ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಬೇಕು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಮನವಿ ಮಾಡಿದ್ದಾರೆ. ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸುಧೀಂದ್ರ ಕುಲಕರ್ಣಿ ಅವರು ಸಲಹೆಗಾರರಾಗಿದ್ದರು.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ರಾಜ್ಯದ ಪ್ರಬುದ್ಧ ಮತದಾರರು ‘ಆಪರೇಷನ್ ಕಮಲ’ದ ಮೂಲಕ ಜನಾದೇಶ ಕದಿಯಲು ಬಿಜೆಪಿಗೆ ಅವಕಾಶ ನೀಡದೇ, ಕಾಂಗ್ರೆಸ್‌ಗೆ ಸ್ಪಷ್ಟ, ಪೂರ್ಣ ಬಹುಮತ ನೀಡಬೇಕು” ಎಂದು ಹೇಳಿದ್ದಾರೆ.

”ಆಪರೇಷನ್ ಕಮಲ ಎನ್ನುವುದು ಪ್ರಜಾತಂತ್ರ ವ್ಯವಸ್ಥಗೆ ಮಾಡುವ ಅಪಚಾರ. ಒಂದರ್ಥದಲ್ಲಿ ಪ್ರಜಾತಂತ್ರ ಹಾಗೂ ಜನಾದೇಶವನ್ನೇ ಅಪಹರಣ ಮಾಡುವ ಅಪಾಯಕಾರಿ ಬೆಳವಣಿಗೆ. ಇಂಥ ದುಸ್ಥಿತಿಗೆ ರಾಜ್ಯ ವಿಧಾನಸಬೆ ಚುನಾವಣೆ ಮೂಲಕವೇ ರಾಷ್ಟ್ರ ಮಟ್ಟದಲ್ಲಿ 2024 ರಲ್ಲಿ ಪ್ರಜಾಪ್ರಭುತ್ವ ರಕ್ಷಣೆಗೆ ನಾಂದಿ ಹಾಡಬೇಕು” ಎಂದು ಕೋರಿದರು.

”ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಮೌಲ್ಯ ಉಳಿಯಬೇಕು ಎಂದಾದರೆ ಬಿಜೆಪಿ ವಿರುದ್ಧ ಮತ ಚಲಾಯಿಸಿ” ಎಂದು ಅವರು ಮತದಾರರಿಗೆ ಕರೆ ನೀಡಿದರು.

”ಒಂದು ವೇಳೆ ಮೇ 13ರಂದು ತ್ರಿಶಂಕು ಸರ್ಕಾರ ಬಂದರೆ ರಾಜ್ಯಕ್ಕೆ ದೊಡ್ಡ ಅಪಾಯ ಎದುರಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

”ಶೇ.40 ಲಂಚದ ಆರೋಪಕ್ಕೆ ಪ್ರಧಾನಿ ಹಾಗೂ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುತ್ತಿಲ್ಲ. ಬದಲಾಗಿ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಗಳಾಗುತ್ತವೆ ಎಂದು ರಾಜ್ಯದ ಜನರಿಗೆ ಭಯ ಹಾಕುವ ಹಾಗೂ ರಾಜ್ಯದ ಮತದಾರರನ್ನು ಅವಮಾನ ಮಾಡುವ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಾ ಪ್ರಹಾರ ನಡೆಸಿದರು.

”ಪ್ರಧಾನಿ ಮೋದಿ, ಗೃಹಸಚಿವ ಸೇರಿದಂತೆ ಎಲ್ಲ ಬಿಜೆಪಿ ನಾಯಕರು, ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬೇಕೇ ಬೇಕು ಎಂದು ಅಬ್ಬರದ ಪ್ರಚಾರ ನಡೆಸಿದ್ದಾರೆ. ಆದರೆ ಇದೀಗ ಕೇಂದ್ರ-ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವೇ ಇದ್ದರೂ ರಾಜ್ಯದಲ್ಲಿ ಬೆಲೆ ಏರಿಕೆ ಏಕೆ ನಿಯಂತ್ರಿಸಲಿಲ್ಲ, ಅಡುಗೆ ಅನಿಲ ದರ 1200 ರೂ. ಗಡಿ ದಾಡಲು ಬಿಟ್ಟಿದ್ದೇಕೆ. ನಾನು ಲಂಚ ತಿನ್ನುವುದಿಲ್ಲ, ಇತರರು ಲಂಚ ತಿನ್ನಲು ಬಿಡುವುದಿಲ್ಲವೆಂದು ದೇಶದ ಜನರಿಗೆ ಭರವಸೆ ನೀಡಿದ್ದ ಪ್ರಧಾನಿ ರಾಜ್ಯದಲ್ಲಿ ಭ್ರಷ್ಟಚಾರ ನಿಗ್ರಹಿಸಲು ಏಕೆ ಆಸಕ್ತಿ ತೋರಲಿಲ್ಲ ಎಂದು ಪ್ರಶ್ನಿಸಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದರೆ ದಂಗೆಯಾಗುತ್ತವೆ ಎನ್ನುವ ಗೃಹ ಸಚಿವ ಅಮಿತ್ ಶಾ, ಮಣಿಪುರ ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಇದ್ದರೂ ಹಿಂಸಾಚಾರ ತಡೆಯಲು ಏಕೆ ಸಾಧ್ಯವಾಗಿಲ್ಲ. ಅಲ್ಲಿನ ಡಬಲ್ ಎಂಜಿನ್ ಸರ್ಕಾರ ಏನು ಮಾಡುತ್ತಿದೆ” ಎಂದು ಕುಟುಕಿದರು.

”ಡಬಲ್ ಎಂಜಿನ್ ಸರ್ಕಾರ ಎಂಬುದು ಪೊಳ್ಳು ಭರವಸೆ, ಡಬಲ್ ಎಂಜಿನ್ ಎಂಬುದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿಯಾಗಿದೆ. ನಮ್ಮ ದೇಶ ಹಲವು ಪಕ್ಷಗಳಿರುವ ದೇಶವಾಗಿದೆ” ಎಂದರು.

”ಬಿಜೆಪಿಗೆ ಡಬಲ್ ಎಂಜಿನ್ ಸರ್ಕಾರವಷ್ಟೇ ಬೇಕಿಲ್ಲ, ಮೋದಿ ಎಂಬ ಸಿಂಗಲ್ ಡ್ರೈವರ್ ಇರುವ ಡಬಲ್‌ ಎಂಜಿನ್‌ ಸರ್ಕಾರ ಬೇಕಾಗಿದೆ. ದೆಹಲಿಯಲ್ಲೂ ಮೋದಿಯೇ ಡ್ರೈವರ್‌, ಕರ್ನಾಟಕದಲ್ಲೂ ಮೋದಿಯವರೇ ಡ್ರೈವರ್‌ ಎಂಬುದು ಅವರ ಹುನ್ನಾರವಾಗಿದೆ” ಎಂದು ದೂರಿದರು.

”ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದು ಮೋದಿಯ ಪೊಳ್ಳು ಘೋಷಣೆ. ರಾಜ್ಯದ 224 ಕ್ಷೇತ್ರದಲ್ಲಿ ಒಬ್ಬ ಮುಸ್ಲಿಮರಿಗೂ ಟಿಕೆಟ್‌ ನೀಡಿಲ್ಲ. ಇದೇನಾ‌ ಸಬ್ ಕಾ ಸಾಥ್, ಸಬ್ ಕಾ ವಿಕಾಸ್?” ಎಂದು ಪ್ರಶ್ನೆ ಮಾಡಿದರು.

”ರಾಹುಲ್ ಗಾಂಧಿ ಒಳ್ಳೆಯ ಗುಣಗಳಿರುವ ನಾಯಕ, ಅವರು ದೇಶದ ನಾಯಕತ್ವ ವಹಿಸಿಕೊಳ್ಳಬೇಕಾದ ತಮ್ಮ ಸಾಮರ್ಥ್ಯವನ್ನು ಇನ್ನೂ ತೋರಿಸಬೇಕಾದ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...