Homeಕರ್ನಾಟಕ‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ.

ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಡೆಯವರು ಬಂದು ಹಲ್ಲೆ ನಡೆಸಿದ್ದಾರೆ, ಈ ಕುರಿತು ಯಾವುದೇ ಕ್ರಮವನ್ನು ಈವರೆಗೆ ಜರುಗಿಸಿಲ್ಲ ಎಂದು ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಎದ್ದೇಳು ಕರ್ನಾಟಕದ ಪ್ರಜ್ಞಾವಂತ ನಾಗರಿಕರು ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದರು. ಆದರೆ ಜಯನಗರದ ಬಿಜೆಪಿ ಅಭ್ಯರ್ಥಿ (ಸಿ.ಕೆ.ರಾಮಮೂರ್ತಿ) ಮತ್ತು ಸಂಸದ ತೇಜಸ್ವಿಸೂರ್ಯ ಅವರ ನಿರ್ದೇಶನದ ಮೇರೆಗೆ ನಾಗರಿಕರ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ಅಶ್ಲೀಲ ಪದಗಳಿಂದ ನಿಂದಿಸಲಾಗಿದೆ” ಎಂದು ವಿಡಿಯೊ ಹಂಚಿಕೊಂಡಿದ್ದಾರೆ.

“ದೂರು ನೀಡಿದರೂ ಬೆಂಗಳೂರು ನಗರ ಪೊಲೀಸರಾಗಲಿ, ಜಯನಗರ ಪೊಲೀಸರಾಗಲೀ ಈ ಪುಂಡರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಸಾಕು, ಸಾಕು. ಬಿಜೆಪಿಯ ಗೂಂಡಾ ಸಂಸ್ಕೃತಿಯನ್ನು ಕೊನೆಗಾಣಿಸಬೇಕಾಗಿದೆ. ಎದ್ದೇಳು ಕರ್ನಾಟಕ, ಎದ್ದೇಳು. ನಾವು ಮಹಿಳೆಯರು- ನಮಗೆ ರಕ್ಷಣೆ ಬೇಕಿದೆ. ಮತ್ತೆ ನಮ್ಮ ಬೆಂಗಳೂರು ಸುರಕ್ಷಿತ ನಗರವಾಗಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.

ವಾರ್ಡ್ ನಂ.170ರ (ಅರಸು ಕಾಲೋನಿ) ಬಿಜೆಪಿ ಅಧ್ಯಕ್ಷ ಷಣ್ಮುಗಂ, ಆತನ ಮೈದುನ ಮಣಿಕಂಠ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆಂದು ತಿಳಿದುಬಂದಿದೆ. ಕಾರ್ಮಲ್ ಕಾನ್ವೆಂಟ್ ಪೊಲಿಂಗ್ ಬೂತ್ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಎದ್ದೇಳು ಕರ್ನಾಟಕದ 17 ಮಂದಿ ಸಾಮಾಜಿಕ ಕಾರ್ಯಕರ್ತರು ಸ್ಥಳದಲ್ಲಿ ಹಾಜರಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾಡಿದ ಸಾಮಾಜಿಕ ಕಾರ್ಯಕರ್ತೆ ಗೌರಿಯವರು ಘಟನೆಯ ಕುರಿತು ವಿವರಿಸಿದರು. “ಎಂದಿನಂತೆ ನಾವು ಪ್ರಚಾರವನ್ನು ಮಾಡಿಕೊಂಡು ಹೋಗುತ್ತಿದ್ದೆವು. ಈ ವಾರ್ಡ್‌ನಲ್ಲಿ ಬಿಜೆಪಿ ಪ್ರಬಲವಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಹೆಣ್ಣುಮಕ್ಕಳ ಮತದಾನ ಈ ಕ್ಷೇತ್ರದಲ್ಲಿ ಕುಸಿದಿತ್ತು. ಹೀಗಾಗಿ ಜಾಗೃತಿ ಮಾಡುತ್ತಿದ್ದೆವು. ಸಂವಿಧಾನವನ್ನು ಎತ್ತಿಹಿಡಿಯುವವರ ಪರವಾಗಿ, ಕೋಮುವಾದಿಗಳ ವಿರುದ್ಧ ಪ್ರಚಾರ ಮಾಡಲು ಹಕ್ಕು ನಮಗಿದೆ. ಆದರೆ ಇದನ್ನು ಬಿಜೆಪಿಯವರು ಸಹಿಸಲಿಲ್ಲ” ಎಂದು ವಿವರಿಸಿದರು.

ಇದನ್ನೂ ಓದಿರಿ: ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

“ಬಿಜೆಪಿಯವರು ಬಂದು ನಮಗೆ ತಡೆ ನೀಡಿದರು. ಬೆಲೆ ಏರಿಕೆ ಬಗ್ಗೆ ಮಾತನಾಡಬೇಡಿ, ಜಿಎಸ್‌ಟಿ ಕುರಿತು ಪ್ರಸ್ತಾಪಿಸಬೇಡಿ ಎಂದು ಧಮ್ಕಿ ಹಾಕಿದರು. ಜನರಿಗೆ ಈ ಸಮಸ್ಯೆಗಳು ಬಾಧಿಸುತ್ತಿವೆ ಎಂದು ನಾವು ತಿಳಿಸಿದೆವು. ನಾಗರಿಕರಾಗಿ ಮಾತನಾಡುವ ಹಕ್ಕು ನಮಗಿದೆ ಎಂದೆವು. ನಮ್ಮೆಲ್ಲರ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಶುರು ಮಾಡಿದರು. ನೀವು ಕಾಂಗ್ರೆಸ್ ಏಜೆಂಟಾರಾಗಿದ್ದು, ದುಡ್ಡು ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದೀರಿ ಎಂದು ಆರೋಪಿಸಿದರು. ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ ಎಂದರು. ಸಮಾಧಾನದಲ್ಲಿ ಚರ್ಚೆ ಮಾಡಲು ನಾವು ಕರೆದೆವು” ಎಂದು ತಿಳಿಸಿದರು.

“ಸಮಾಧಾನವಾಗಿಯೇ ನಾವು ಎಲ್ಲವನ್ನು ಹೇಳುತ್ತಿದ್ದೆವು. ನಮ್ಮ ಜೊತೆಯಲ್ಲಿದ್ದ ಗಂಡಸರನ್ನು ಟಾರ್ಗೆಟ್ ಮಾಡಲು ಮುಂದಾದರು. ನಾವು ಬೇರೆ ಜಾಗಕ್ಕೆ ತೆರಳಲು ಸಿದ್ಧವಾದೆವು. ಅಷ್ಟರಲ್ಲಿ ಒಂದಿಷ್ಟು ಜನರಿಗೆ ಸಂದೇಶ ಕಳುಹಿಸಿ ಕರೆಸಿಕೊಂಡಿದ್ದರು. ಮೂವತ್ತರಿಂದ ಐವತ್ತು ಮಂದಿ ಬಂದು, ನಮ್ಮನ್ನು ಸುತ್ತುವರಿದರು. ನಮ್ಮ ಕರಪತ್ರಗಳನ್ನು ಕಿತ್ತುಕೊಂಡರು. ನಾವೇನೂ ಮಾತನಾಡಲಿಲ್ಲ. ನಮಗೆ ಹೊಡೆಯಲು ಬಂದಿದ್ದಾರೆಂದು ತಿಳಿಯಿತು. ಆದರೆ ನಮ್ಮ ಇಬ್ಬರು ಕಾರ್ಯಕರ್ತರ ಮುಖಕ್ಕೆ ಹೊಡೆದೇಬಿಟ್ಟರು. ಜಾಗ ಬಿಟ್ಟು ಹೊರಹೋಗುವಂತೆ ಧಮ್ಕಿ ಹಾಕಿದರು. ನಾವು ಬೆಂಗಳೂರಿನವರೇ ಆಗಿದ್ದೇವೆ. ಹೊರಗಡೆಯಿಂದ ಬಂದಿಲ್ಲ ಎಂದು ತಿಳಿಸಿ ಅಲ್ಲಿಂದ ಹೊರಟುಬಂದೆವು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...