Homeಕರ್ನಾಟಕನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಸೋಮವಾರ ಸಂಜೆಗೆ ಅಂತ್ಯವಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ #ByeByeBJP ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಟ್ವಿಟರ್‌ ಅಭಿಯಾನ ಆರಂಭವಾಗಿದೆ.

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಹೇಳುವ ವಿಡಿಯೊ, ಚಿತ್ರ, ವ್ಯಂಗ್ಯಚಿತ್ರ, ಮಾಧ್ಯಮ ವರದಿ ಹಾಗೂ ಬರಹಗಳನ್ನು ಟ್ವೀಟ್‌ ಮಾಡಿ ಈ ಹ್ಯಾಶ್‌ಟ್ಯಾಗ್‌ ಬಳಸಲಾಗುತ್ತಿದೆ.

ಶೇ 40 ಕಮೀಷನ್‌ ಸರ್ಕಾರಕ್ಕೆ ನನ್ನ ಮತ ಇಲ್ಲ ಎನ್ನುವ ಪೋಸ್ಟರ್ ಹಿಡಿದಿರುವ ಜನರ ವಿಡಿಯೊ ಹೆಚ್ಚು ಹರಿದಾಡುತ್ತಿದೆ.

ಬಿಜೆಪಿ ನಾಯಕರ ದ್ವೇಷ ಭಾಷಣ, ಕೋಮು ಗಲಭೆ, ನಂದಿನಿ ವಿವಾದ, ಪೇಸಿಎಂ, ರಸ್ತೆಗುಂಡಿ, ಹಿಜಾಬ್‌ ವಿವಾದ, ನಿರುದ್ಯೋಗ, ಶೇ 40 ಕಮಿಷನ್‌ ಮುಂತಾದ ವಿಷಯಗಳನ್ನು ಪ್ರಸ್ತಾಪಿಸಿ ಟ್ವಿಟರ್‌ ಅಭಿಯಾನ ನಡೆಯುತ್ತಿದೆ.

ರಾಜ್ಯ ಕಾಂಗ್ರೆಸ್‌ ಘಟಕ, ಭಾರತೀಯ ಯುವ ಕಾಂಗ್ರೆಸ್, ಕೇರಳ ಕಾಂಗ್ರೆಸ್‌ ಸೇವಾದಳ, ಜಾನ್ಸಿ ಕಾಂಗ್ರೆಸ್‌ ಸೇವಾದಳ, ದೇಶದ ಕಾಂಗ್ರೆಸ್‌ ನಾಯಕರು, ವಕ್ತಾರರು ಟ್ವೀಟ್‌ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕಳೆದ ನಾಲ್ಕು ವರ್ಷಗಳಿಂದ ಕರ್ನಾಟಕವನ್ನು ಕೋವಿಡ್ ವೈರಸ್ಸಿಗಿಂತಲೂ ಕ್ರೂರವಾಗಿ ಪೀಡಿಸಿದ ಬಿಜೆಪಿ ಸರ್ಕಾರದ ಅಂತ್ಯ ಸಮೀಪಿಸಿದೆ. ಕರ್ನಾಟಕಕ್ಕೆ ಕಾಡುತ್ತಿದ್ದ 40% ಕಮಿಷನ್ ಪಿಡುಗು ತೊಲಗಲಿದೆ, ಮುಂದೆ ಕಾಂಗ್ರೆಸ್ ನೇತೃತದಲ್ಲಿದೆ ಕರ್ನಾಟಕ ಪ್ರಗತಿಯತ್ತ ಸಾಗಲಿದೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ರಸ್ತೆಗುಂಡಿಗಳಿಗೆ 30ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ 40% ಕಮಿಷನ್ನಿನ ಭ್ರಷ್ಟ ಬಿಜೆಪಿ ಸರ್ಕಾರ ತೊಲಗುವ ಸಮಯ ಬಂದಿದೆ. ಇನ್ಮುಂದೆ ಕಮಿಷನ್ ರಹಿತ, ಭ್ರಷ್ಟಾಚಾರ ರಹಿತ ಸರ್ಕಾರಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ. ಕರ್ನಾಟಕದ ಪ್ರತಿಯೊಬ್ಬರ ಕಾಳಜಿಯೂ ಇನ್ಮುಂದೆ ಕಾಂಗ್ರೆಸ್ ಸರ್ಕಾರದ ಹೊಣೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ನಮ್ಮ ಬ್ಯಾಂಕುಗಳು ನಮ್ಮ ಸಂಸ್ಥೆಗಳು ನಮ್ಮ ಕೆಎಂಎಫ್ ನಮ್ಮ ನಂದಿನಿ ಎಲ್ಲವೂ ನಮ್ಮ ಅಸ್ಮಿತೆಯ ಸಂಕೇತಗಳು! ಕನ್ನಡಿಗರ ಅಸ್ಮಿತೆಯನ್ನು ಕಾಪಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ” ಎಂದು ಟ್ವೀಟ್ ಮಾಡಿದೆ.

”ಕೋರೋನ ಸಮಯದಲ್ಲಿ ಅನುಭವಿಸಿದ್ದು ಸಾಕು ಹಗರಣಗಳನ್ನು ನೋಡಿದ್ದೂ ಸಾಕು ಹಗರಣಗಳಿಗೆ ಮುಕ್ತಿ ಹಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಟ್ವೀಟ್ ಮಾಡಿದೆ.

”40% ಕಮಿಷನ್ ತೆಗೆದುಕೊಳ್ಳುವ ಪೇಸಿಎಂ ತೊಲಗಿಸೋಣ ರಾಜ್ಯವನ್ನು ಪ್ರಗತಿಯ ಹಾದಿಗೆ ಮರಳಿ ತರೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

”ಉದ್ಯೋಗಕ್ಕೂ ಲಂಚ ಅಥವಾ ಮಂಚ ಈ ಲಂಚ ಮಂಚದ ಸರ್ಕಾರ ತೊಲಗಿಸಿಸೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಕರೆ ಕೊಟ್ಟಿದ್ದಾರೆ.

”ಸುಳ್ಳು ಭಾಷಣ ಸಾಕು ಪೊಳ್ಳು ಭರವಸೆಯೂ ಸಾಕು ಅಭಿವೃದ್ಧಿಯ ಆಡಳಿತಕ್ಕೆ ಮತ ನೀಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...