Homeಕರ್ನಾಟಕ2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

- Advertisement -
- Advertisement -

2018ರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ರಾಜ್ಯದ ಮತದಾರರು ಸ್ಪಷ್ಟ ಬಹುಮತವನ್ನು ನೀಡಿರಲಿಲ್ಲ. 224 ಸಂಖ್ಯಾಬಲದ ವಿಧಾನಸಭೆಯಲ್ಲಿ 104 ಶಾಸಕರನ್ನು ಹೊಂದಿದ್ದ ಬಿಜೆಪಿಯು ಏಕೈಕ ದೊಡ್ಡ ಪಕ್ಷವಾಗಿ ಹೊಮ್ಮಿತು. ಸರ್ಕಾರ ರಚಿಸಲು ಬಿಜೆಪಿಯನ್ನು ಆಹ್ವಾನಿಸಲಾಯಿತು. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್‌ ತ್ವರಿತವಾಗಿ ಒಗ್ಗೂಡಿ ಸರ್ಕಾರ ರಚಿಸಿದವು.

ಕಾಂಗ್ರೆಸ್-ಜೆಡಿಎಸ್‌ನ 17 ಶಾಸಕರು ಬಂಡಾಯವೆದ್ದು ಆಪರೇಷನ್ ಕಮಲಕ್ಕೆ ಒಳಗಾಗಿ ಬಾಂಬೆ ಸೇರಿದ್ದರಿಂದ ಒಂದು ವರ್ಷದೊಳಗೆ ಸರ್ಕಾರ ಪಥನವಾಯಿತು. ಬಿಜೆಪಿ ಮತ್ತೆ ಸರ್ಕಾರವನ್ನು ರಚಿಸಿತು. ಕರ್ನಾಟಕ ಬಿಜೆಪಿಯ ಕಟ್ಟಾಳು ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದರು. ಆದರೆ ಜುಲೈ 26, 2021 ರಂದು ರಾಜೀನಾಮೆ ನೀಡಿದರು. ಅವರ ನಂತರದಲ್ಲಿ ಬಸವರಾಜ ಬೊಮ್ಮಾಯಿ ಸಿಎಂ ಆದರು.

2018ರ ಎಕ್ಸಿಟ್ ಪೋಲ್‌ಗಳು ಏನು ಹೇಳಿದ್ದವು?

ಆರು ರಾಷ್ಟ್ರೀಯ ಟೆಲಿವಿಷನ್ ಚಾನೆಲ್‌ಗಳು ಮತ್ತು ಒಂದು ಪ್ರಾದೇಶಿಕ ಚಾನೆಲ್ ಪ್ರಸಾರ ಮಾಡಿದ ಎಂಟು ಪ್ರಮುಖ ಎಕ್ಸಿಟ್ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊಮ್ಮಲಿದೆ ಎಂದು ಭವಿಷ್ಯ ನುಡಿದಿದ್ದವು. ಎಂಟರಲ್ಲಿ ಏಳು ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರದ ಕುರಿತು ಸುಳಿವು ನೀಡಿದ್ದವು. ಬಿಜೆಪಿ ಅಥವಾ ಕಾಂಗ್ರೆಸ್ ಬಹುಮತವನ್ನು ಪಡೆಯಲಿಲ್ಲ. ಜೆಡಿಎಸ್ ಕಿಂಗ್‌ಮೇಕರ್ ಆಗಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ತಿಳಿಸಿದ್ದವು. ಹಾಗೆಯೇ ಆಯಿತು. ಜೆಡಿಎಸ್‌ 20 ರಿಂದ 40 ಸ್ಥಾನಗಳನ್ನು ಪಡೆಯುತ್ತದೆ ಎಂದು ಸಮೀಕ್ಷೆಗಳು ಸೂಚನೆ ನೀಡಿದ್ದವು.

ವಿಧಾನಸಭೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಲಿದೆ ಎಂದು ಎಬಿಪಿ-ಸಿ ವೋಟರ್, ನ್ಯೂಸ್‌ಎಕ್ಸ್-ಸಿಎನ್‌ಎಕ್ಸ್, ರಿಪಬ್ಲಿಕ್-ಜನ್ ಕಿ ಬಾತ್ ಮತ್ತು ನ್ಯೂಸ್ ನೇಷನ್ ಎಕ್ಸಿಟ್ ಪೋಲ್‌ಗಳು  ಭವಿಷ್ಯ ನುಡಿದಿದ್ದವು. ಪ್ರಾದೇಶಿಕ ಮಾಧ್ಯಮವಾದ ದಿಗ್ವಿಜಯ್-ವಿಜಯವಾಣಿ ಸಮೀಕ್ಷೆಯು ಇದನ್ನೇ ಹೇಳಿತ್ತು.

ಇದನ್ನೂಓದಿರಿ: ಕರ್ನಾಟಕ ಚುನಾವಣೆ ಎಕ್ಸಿಟ್ ಪೋಲ್: ಮತದಾನೋತ್ತರ ಸಮೀಕ್ಷೆಗಳು ಹೀಗೆ ಹೇಳುತ್ತಿವೆ

ಟೈಮ್ಸ್ ನೌ ಎರಡು ಎಕ್ಸಿಟ್ ಪೋಲ್‌ಗಳನ್ನು ಪ್ರಸಾರ ಮಾಡಿತ್ತು. ಟೈಮ್ಸ್ ನೌ-ವಿಎಂಆರ್ ಸಮೀಕ್ಷೆ ಕಾಂಗ್ರೆಸ್‌ಗೆ ಅಲ್ಪ ಮುನ್ನಡೆ ನೀಡಿತ್ತು; ಟೈಮ್ಸ್ ನೌ-ಟುಡೇಸ್ ಚಾಣಕ್ಯ- ಬಿಜೆಪಿಗೆ ಸ್ಪಷ್ಟ ಬಹುಮತವನ್ನು ನೀಡಿತ್ತು. ಇಂಡಿಯಾ ಟುಡೆ-ಆಕ್ಸಿಸ್ ಎಕ್ಸಿಟ್ ಪೋಲ್- ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಲಿದೆ ಎಂದಿತ್ತು.

ಎಬಿಪಿ-ಸಿ ವೋಟರ್ ಸಮೀಕ್ಷೆಯು ಬಿಜೆಪಿಗೆ 104-116 ಸ್ಥಾನಗಳನ್ನು ನೀಡಿತ್ತು. ನಂತರ ಕಾಂಗ್ರೆಸ್‌ಗೆ 83-94 ಮತ್ತು ಜೆಡಿಎಸ್‌ಗೆ 20-29 ಸ್ಥಾನಗಳು ಬರಲಿವೆ ಎಂದಿತ್ತು. ನ್ಯೂಸ್‌ಎಕ್ಸ್-ಸಿಎನ್‌ಎಕ್ಸ್ ಬಿಜೆಪಿಗೆ 102-110, ಕಾಂಗ್ರೆಸ್‌ಗೆ 72-78, ಜೆಡಿಎಸ್‌ಗೆ 35-39 ಮತ್ತು ಇತರರಿಗೆ 3-5 ಸ್ಥಾನಗಳನ್ನು ನೀಡಿತ್ತು. ರಿಪಬ್ಲಿಕ್-ಜನ್ ಕಿ ಬಾತ್ ಸಮೀಕ್ಷೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 37 ಮತ್ತು ಇತರೆ 3 ಸ್ಥಾನ ಪಡೆದಿದ್ದವು.

ಟೈಮ್ಸ್ ನೌ-ಚಾಣಕ್ಯ ಸಮೀಕ್ಷೆಯು ಬಿಜೆಪಿ 120 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿತ್ತು. ಇದು ಯಾವುದೇ ಪಕ್ಷಕ್ಕೆ ಬಹುಮತದ ಮುನ್ಸೂಚನೆ ನೀಡಿದ ಏಕೈಕ ಸಮೀಕ್ಷೆಯಾಗಿತ್ತು. ಟೈಮ್ಸ್ ನೌ-ಚಾಣಕ್ಯದವರು ಕಾಂಗ್ರೆಸ್‌ಗೆ 73, ಜೆಡಿಎಸ್‌ಗೆ 26 ಮತ್ತು ಇತರರಿಗೆ 3 ಸ್ಥಾನಗಳನ್ನು ನೀಡಿದ್ದರು. ಟೈಮ್ಸ್ ನೌ-ವಿಎಂಆರ್ ಪ್ರಕಾರ, ಕಾಂಗ್ರೆಸ್ 97 ಸ್ಥಾನಗಳನ್ನು, ಬಿಜೆಪಿ 94 ಸ್ಥಾನಗಳನ್ನು, ಜೆಡಿಎಸ್ 28 ಸ್ಥಾನಗಳನ್ನು ಮತ್ತು ಇತರರು 3 ಸ್ಥಾನಗಳು ಪಡೆಯಲಿದ್ದವು.

ಇದನ್ನು ಓದಿರಿ: ಕುಸುಮಾ ವಿರುದ್ಧ ಪ್ರಚಾರಕ್ಕೆ 80 ಲಕ್ಷ ಬೇಡಿಕೆ ಇಟ್ಟ ಡಿ.ಕೆ.ರವಿ ತಾಯಿ?; ವಿಡಿಯೊ ವೈರಲ್

ನ್ಯೂಸ್ ನೇಷನ್ ಸಮೀಕ್ಷೆಯು ಬಿಜೆಪಿಗೆ 99-108, ಕಾಂಗ್ರೆಸ್‌ಗೆ 75-84, ಜೆಡಿಎಸ್‌ಗೆ 31-40 ಮತ್ತು ಇತರರಿಗೆ 3-7 ಸ್ಥಾನ ನೀಡಿತ್ತು. ದಿಗ್ವಿಜಯ್-ವಿಜಯವಾಣಿ ಸಮೀಕ್ಷೆಯು ಬಿಜೆಪಿಗೆ 103-107, ಕಾಂಗ್ರೆಸ್‌ಗೆ 76-80, ಜೆಡಿಎಸ್‌ಗೆ 31-35 ಮತ್ತು ಇತರರಿಗೆ 4-8 ಸ್ಥಾನಗಳನ್ನು ನೀಡಲಾಗಿತ್ತು.

ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆಯು ಕಾಂಗ್ರೆಸ್ ಗೆಲ್ಲಲಿದೆ ಎಂದು ಮುನ್ಸೂಚನೆ ನೀಡಿತ್ತು. ಆಡಳಿತರೂಢ ಕಾಂಗ್ರೆಸ್‌ 106 ರಿಂದ 118 ಸ್ಥಾನಗಳನ್ನು ಪಡೆಯಲಿದೆ ಎಂದಿತ್ತು. ಬಿಜೆಪಿ 79-92, ಜೆಡಿಎಸ್‌ 22-30 ಮತ್ತು ಇತರರು 1-4 ಗಳಿಸುತ್ತಾರೆ ಎಂದಿತ್ತು.

ಬಹುತೇಕ ಎಕ್ಸಿಟ್‌ ಪೋಲ್‌ಗಳು ನುಡಿದಂತೆ ಬಿಜೆಪಿ 104 ಸ್ಥಾನಗಳನ್ನು ಪಡೆದು ಬಹುದೊಡ್ಡ ಪಕ್ಷವಾಗಿ ಹೊಮ್ಮಿತು. ಕಾಂಗ್ರೆಸ್ 80, ಜೆಡಿಎಸ್ 38 (ಚುನಾವಣಾ ಪೂರ್ವ ಒಪ್ಪಂದ ಮಾಡಿಕೊಂಡಿದ್ದ ಬಿಎಸ್‌ಪಿಯ 1 ಸ್ಥಾನ ಸೇರಿ) ಕ್ಷೇತ್ರಗಳಲ್ಲಿ ಗೆದ್ದಿದ್ದವು.

2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 122 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಮತ್ತು ಜೆಡಿಎಸ್ ತಲಾ 40 ಸ್ಥಾನಗಳನ್ನು ಪಡೆದರೆ, ಯಡಿಯೂರಪ್ಪ ಅವರ ಅಂದಿನ ಕರ್ನಾಟಕ ಜನತಾ ಪಕ್ಷ (ಕೆಜೆಪಿ) 6 ಸ್ಥಾನಗಳನ್ನು ಮತ್ತು ಬಿ ಶ್ರೀರಾಮುಲು ಅವರ ಬಡವರ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ 4 ಸ್ಥಾನಗಳನ್ನು ಪಡೆದುಕೊಂಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...