Homeಕರ್ನಾಟಕ2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

- Advertisement -
- Advertisement -

2018ರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ರಾಜ್ಯದ ಮತದಾರರು ಸ್ಪಷ್ಟ ಬಹುಮತವನ್ನು ನೀಡಿರಲಿಲ್ಲ. 224 ಸಂಖ್ಯಾಬಲದ ವಿಧಾನಸಭೆಯಲ್ಲಿ 104 ಶಾಸಕರನ್ನು ಹೊಂದಿದ್ದ ಬಿಜೆಪಿಯು ಏಕೈಕ ದೊಡ್ಡ ಪಕ್ಷವಾಗಿ ಹೊಮ್ಮಿತು. ಸರ್ಕಾರ ರಚಿಸಲು ಬಿಜೆಪಿಯನ್ನು ಆಹ್ವಾನಿಸಲಾಯಿತು. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್‌ ತ್ವರಿತವಾಗಿ ಒಗ್ಗೂಡಿ ಸರ್ಕಾರ ರಚಿಸಿದವು.

ಕಾಂಗ್ರೆಸ್-ಜೆಡಿಎಸ್‌ನ 17 ಶಾಸಕರು ಬಂಡಾಯವೆದ್ದು ಆಪರೇಷನ್ ಕಮಲಕ್ಕೆ ಒಳಗಾಗಿ ಬಾಂಬೆ ಸೇರಿದ್ದರಿಂದ ಒಂದು ವರ್ಷದೊಳಗೆ ಸರ್ಕಾರ ಪಥನವಾಯಿತು. ಬಿಜೆಪಿ ಮತ್ತೆ ಸರ್ಕಾರವನ್ನು ರಚಿಸಿತು. ಕರ್ನಾಟಕ ಬಿಜೆಪಿಯ ಕಟ್ಟಾಳು ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದರು. ಆದರೆ ಜುಲೈ 26, 2021 ರಂದು ರಾಜೀನಾಮೆ ನೀಡಿದರು. ಅವರ ನಂತರದಲ್ಲಿ ಬಸವರಾಜ ಬೊಮ್ಮಾಯಿ ಸಿಎಂ ಆದರು.

2018ರ ಎಕ್ಸಿಟ್ ಪೋಲ್‌ಗಳು ಏನು ಹೇಳಿದ್ದವು?

ಆರು ರಾಷ್ಟ್ರೀಯ ಟೆಲಿವಿಷನ್ ಚಾನೆಲ್‌ಗಳು ಮತ್ತು ಒಂದು ಪ್ರಾದೇಶಿಕ ಚಾನೆಲ್ ಪ್ರಸಾರ ಮಾಡಿದ ಎಂಟು ಪ್ರಮುಖ ಎಕ್ಸಿಟ್ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊಮ್ಮಲಿದೆ ಎಂದು ಭವಿಷ್ಯ ನುಡಿದಿದ್ದವು. ಎಂಟರಲ್ಲಿ ಏಳು ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರದ ಕುರಿತು ಸುಳಿವು ನೀಡಿದ್ದವು. ಬಿಜೆಪಿ ಅಥವಾ ಕಾಂಗ್ರೆಸ್ ಬಹುಮತವನ್ನು ಪಡೆಯಲಿಲ್ಲ. ಜೆಡಿಎಸ್ ಕಿಂಗ್‌ಮೇಕರ್ ಆಗಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ತಿಳಿಸಿದ್ದವು. ಹಾಗೆಯೇ ಆಯಿತು. ಜೆಡಿಎಸ್‌ 20 ರಿಂದ 40 ಸ್ಥಾನಗಳನ್ನು ಪಡೆಯುತ್ತದೆ ಎಂದು ಸಮೀಕ್ಷೆಗಳು ಸೂಚನೆ ನೀಡಿದ್ದವು.

ವಿಧಾನಸಭೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಲಿದೆ ಎಂದು ಎಬಿಪಿ-ಸಿ ವೋಟರ್, ನ್ಯೂಸ್‌ಎಕ್ಸ್-ಸಿಎನ್‌ಎಕ್ಸ್, ರಿಪಬ್ಲಿಕ್-ಜನ್ ಕಿ ಬಾತ್ ಮತ್ತು ನ್ಯೂಸ್ ನೇಷನ್ ಎಕ್ಸಿಟ್ ಪೋಲ್‌ಗಳು  ಭವಿಷ್ಯ ನುಡಿದಿದ್ದವು. ಪ್ರಾದೇಶಿಕ ಮಾಧ್ಯಮವಾದ ದಿಗ್ವಿಜಯ್-ವಿಜಯವಾಣಿ ಸಮೀಕ್ಷೆಯು ಇದನ್ನೇ ಹೇಳಿತ್ತು.

ಇದನ್ನೂಓದಿರಿ: ಕರ್ನಾಟಕ ಚುನಾವಣೆ ಎಕ್ಸಿಟ್ ಪೋಲ್: ಮತದಾನೋತ್ತರ ಸಮೀಕ್ಷೆಗಳು ಹೀಗೆ ಹೇಳುತ್ತಿವೆ

ಟೈಮ್ಸ್ ನೌ ಎರಡು ಎಕ್ಸಿಟ್ ಪೋಲ್‌ಗಳನ್ನು ಪ್ರಸಾರ ಮಾಡಿತ್ತು. ಟೈಮ್ಸ್ ನೌ-ವಿಎಂಆರ್ ಸಮೀಕ್ಷೆ ಕಾಂಗ್ರೆಸ್‌ಗೆ ಅಲ್ಪ ಮುನ್ನಡೆ ನೀಡಿತ್ತು; ಟೈಮ್ಸ್ ನೌ-ಟುಡೇಸ್ ಚಾಣಕ್ಯ- ಬಿಜೆಪಿಗೆ ಸ್ಪಷ್ಟ ಬಹುಮತವನ್ನು ನೀಡಿತ್ತು. ಇಂಡಿಯಾ ಟುಡೆ-ಆಕ್ಸಿಸ್ ಎಕ್ಸಿಟ್ ಪೋಲ್- ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಲಿದೆ ಎಂದಿತ್ತು.

ಎಬಿಪಿ-ಸಿ ವೋಟರ್ ಸಮೀಕ್ಷೆಯು ಬಿಜೆಪಿಗೆ 104-116 ಸ್ಥಾನಗಳನ್ನು ನೀಡಿತ್ತು. ನಂತರ ಕಾಂಗ್ರೆಸ್‌ಗೆ 83-94 ಮತ್ತು ಜೆಡಿಎಸ್‌ಗೆ 20-29 ಸ್ಥಾನಗಳು ಬರಲಿವೆ ಎಂದಿತ್ತು. ನ್ಯೂಸ್‌ಎಕ್ಸ್-ಸಿಎನ್‌ಎಕ್ಸ್ ಬಿಜೆಪಿಗೆ 102-110, ಕಾಂಗ್ರೆಸ್‌ಗೆ 72-78, ಜೆಡಿಎಸ್‌ಗೆ 35-39 ಮತ್ತು ಇತರರಿಗೆ 3-5 ಸ್ಥಾನಗಳನ್ನು ನೀಡಿತ್ತು. ರಿಪಬ್ಲಿಕ್-ಜನ್ ಕಿ ಬಾತ್ ಸಮೀಕ್ಷೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 37 ಮತ್ತು ಇತರೆ 3 ಸ್ಥಾನ ಪಡೆದಿದ್ದವು.

ಟೈಮ್ಸ್ ನೌ-ಚಾಣಕ್ಯ ಸಮೀಕ್ಷೆಯು ಬಿಜೆಪಿ 120 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿತ್ತು. ಇದು ಯಾವುದೇ ಪಕ್ಷಕ್ಕೆ ಬಹುಮತದ ಮುನ್ಸೂಚನೆ ನೀಡಿದ ಏಕೈಕ ಸಮೀಕ್ಷೆಯಾಗಿತ್ತು. ಟೈಮ್ಸ್ ನೌ-ಚಾಣಕ್ಯದವರು ಕಾಂಗ್ರೆಸ್‌ಗೆ 73, ಜೆಡಿಎಸ್‌ಗೆ 26 ಮತ್ತು ಇತರರಿಗೆ 3 ಸ್ಥಾನಗಳನ್ನು ನೀಡಿದ್ದರು. ಟೈಮ್ಸ್ ನೌ-ವಿಎಂಆರ್ ಪ್ರಕಾರ, ಕಾಂಗ್ರೆಸ್ 97 ಸ್ಥಾನಗಳನ್ನು, ಬಿಜೆಪಿ 94 ಸ್ಥಾನಗಳನ್ನು, ಜೆಡಿಎಸ್ 28 ಸ್ಥಾನಗಳನ್ನು ಮತ್ತು ಇತರರು 3 ಸ್ಥಾನಗಳು ಪಡೆಯಲಿದ್ದವು.

ಇದನ್ನು ಓದಿರಿ: ಕುಸುಮಾ ವಿರುದ್ಧ ಪ್ರಚಾರಕ್ಕೆ 80 ಲಕ್ಷ ಬೇಡಿಕೆ ಇಟ್ಟ ಡಿ.ಕೆ.ರವಿ ತಾಯಿ?; ವಿಡಿಯೊ ವೈರಲ್

ನ್ಯೂಸ್ ನೇಷನ್ ಸಮೀಕ್ಷೆಯು ಬಿಜೆಪಿಗೆ 99-108, ಕಾಂಗ್ರೆಸ್‌ಗೆ 75-84, ಜೆಡಿಎಸ್‌ಗೆ 31-40 ಮತ್ತು ಇತರರಿಗೆ 3-7 ಸ್ಥಾನ ನೀಡಿತ್ತು. ದಿಗ್ವಿಜಯ್-ವಿಜಯವಾಣಿ ಸಮೀಕ್ಷೆಯು ಬಿಜೆಪಿಗೆ 103-107, ಕಾಂಗ್ರೆಸ್‌ಗೆ 76-80, ಜೆಡಿಎಸ್‌ಗೆ 31-35 ಮತ್ತು ಇತರರಿಗೆ 4-8 ಸ್ಥಾನಗಳನ್ನು ನೀಡಲಾಗಿತ್ತು.

ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆಯು ಕಾಂಗ್ರೆಸ್ ಗೆಲ್ಲಲಿದೆ ಎಂದು ಮುನ್ಸೂಚನೆ ನೀಡಿತ್ತು. ಆಡಳಿತರೂಢ ಕಾಂಗ್ರೆಸ್‌ 106 ರಿಂದ 118 ಸ್ಥಾನಗಳನ್ನು ಪಡೆಯಲಿದೆ ಎಂದಿತ್ತು. ಬಿಜೆಪಿ 79-92, ಜೆಡಿಎಸ್‌ 22-30 ಮತ್ತು ಇತರರು 1-4 ಗಳಿಸುತ್ತಾರೆ ಎಂದಿತ್ತು.

ಬಹುತೇಕ ಎಕ್ಸಿಟ್‌ ಪೋಲ್‌ಗಳು ನುಡಿದಂತೆ ಬಿಜೆಪಿ 104 ಸ್ಥಾನಗಳನ್ನು ಪಡೆದು ಬಹುದೊಡ್ಡ ಪಕ್ಷವಾಗಿ ಹೊಮ್ಮಿತು. ಕಾಂಗ್ರೆಸ್ 80, ಜೆಡಿಎಸ್ 38 (ಚುನಾವಣಾ ಪೂರ್ವ ಒಪ್ಪಂದ ಮಾಡಿಕೊಂಡಿದ್ದ ಬಿಎಸ್‌ಪಿಯ 1 ಸ್ಥಾನ ಸೇರಿ) ಕ್ಷೇತ್ರಗಳಲ್ಲಿ ಗೆದ್ದಿದ್ದವು.

2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 122 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಮತ್ತು ಜೆಡಿಎಸ್ ತಲಾ 40 ಸ್ಥಾನಗಳನ್ನು ಪಡೆದರೆ, ಯಡಿಯೂರಪ್ಪ ಅವರ ಅಂದಿನ ಕರ್ನಾಟಕ ಜನತಾ ಪಕ್ಷ (ಕೆಜೆಪಿ) 6 ಸ್ಥಾನಗಳನ್ನು ಮತ್ತು ಬಿ ಶ್ರೀರಾಮುಲು ಅವರ ಬಡವರ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ 4 ಸ್ಥಾನಗಳನ್ನು ಪಡೆದುಕೊಂಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...