Homeಕರ್ನಾಟಕಎಕ್ಸಿಟ್ ಪೋಲ್: ರಾಜಕೀಯ ನಾಯಕರು ಏನಂದರು?

ಎಕ್ಸಿಟ್ ಪೋಲ್: ರಾಜಕೀಯ ನಾಯಕರು ಏನಂದರು?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತದಾನ ಮುಗಿದಿದೆ. ಹಲವಾರು ಚಾನೆಲ್‌ಗಳು ಮತ್ತು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ನಡೆಸಿದ್ದು, ಅವುಗಳೂ ಹೊರಬಿದ್ದಿವೆ. ಅವುಗಳಲ್ಲಿ ಇಂಡಿಯಾ ಟುಡೇ, ನವ ಭಾರತ್, TimesNow-ETG, India TV-CNX ಮತ್ತು ಝೀ ಮ್ಯಾಟ್ರಿಕ್ ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್‌ ಸ್ಪಷ್ಟ ಬಹುಮತ ಸಾಧಿಸುತ್ತದೆ ಎಂದಿವೆ.

ಎಕ್ಸಿಟ್ ಪೋಲ್ ಪ್ರಕಟವಾದ ಬೆನ್ನಲ್ಲೇ ರಾಜ್ಯದ ರಾಜಕಾರಣಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾತನಾಡಿ, “ಚುನಾವಣೋತ್ತರ ಸಮೀಕ್ಷೆಗಳು ಶೇಕಡ 100ರಷ್ಟು ಸರಿಯಾಗಿ ಇರುವುದಿಲ್ಲ. ನೈಜ ಫಲಿತಾಂಶ ಬರುವಾಗ ಪ್ಲಸ್‌-ಮೈನಸ್‌ ಆಗುತ್ತವೆ. ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಎಕ್ಸಿಟ್ ಪೋಲ್ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಎಕ್ಸಿಟ್ ಪೋಲ್ ಒಂದೊಂದು ರೀತಿ ತೋರಿಸುತ್ತಿವೆ. ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ” ಎಂದು ಹೇಳಿದ್ದಾರೆ.

“ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ 13ರವರೆಗೆ ಕಾಯೋಣ. ರೆಸಾರ್ಟ್‌ ರಾಜಕೀಯ ಇಲ್ಲ. ಯಾವುದೇ ರೆಸಾರ್ಟ್ ಆಗುವುದಿಲ್ಲ. ಈ ಬಾರಿ ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಇಲ್ಲ” ಎಂದು ತಿಳಿಸಿದ್ದಾರೆ.

ಮತದಾನೋತ್ತರ ಸಮೀಕ್ಷೆಗಳನ್ನು ತಳ್ಳಿಹಾಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, “ನನಗೆ ಜನರ ನಾಡಿಮಿಡಿತ ತಿಳಿದಿದೆ, ನಾವು ಸಂಪೂರ್ಣ ಬಹುಮತದೊಂದಿಗೆ 115 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುತ್ತೇವೆ. ನಾವು ಸರ್ಕಾರವನ್ನು ರಚಿಸುತ್ತೇವೆ. ಅತಂತ್ರ ಸರ್ಕಾರದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾವು ಜೆಡಿಎಸ್‌ನೊಂದಿಗೆ ಕೈಜೋಡಿಸಬೇಕಾದರೂ ಬಿಜೆಪಿಯ ರಾಷ್ಟ್ರೀಯ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಚುನಾವಣೋತ್ತರದ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗುವುದು ಬಹುತೇಕ ಪಕ್ಕ. 130 ಸೀಟ್‌ಗಳೊಂದಿಗೆ ನಾವು ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

“ಸರ್ಕಾರದ ವಿರುದ್ಧ ಜನಮತವಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾವು ಏನು ಫಲಿತಾಂಶದ ನಿರೀಕ್ಷೆ ಮಾಡಿದ್ದೆವೋ ಅದೇ ಫಲಿತಾಂಶ ಬರಲಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳ ನಂತರವೂ ಮಾತನಾಡಿರುವ ಅವರು, “ಈ ಬಾರಿ ಕರಾವಳಿ ಭಾಗದಲ್ಲೂ ನಮ್ಮ ಸೀಟು ಹೆಚ್ಚಾಗಲಿದೆ. ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡಿದ್ದಾರೆ. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ? ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ. ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದರು” ಎಂದು ಟೀಕಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, “ನಾನು ಈ ಸಂಖ್ಯೆಗಳನ್ನು (ಎಕ್ಸಿಟ್ ಪೋಲ್‌ಗಳು) ನಂಬುವುದಿಲ್ಲ. ನಾವು 146 ಸ್ಥಾನಗಳನ್ನು ದಾಟುತ್ತೇವೆ ಎಂಬ ನನ್ನ ನಿಲುವಿಗೆ ಬದ್ಧನಾಗಿದ್ದೇನೆ. ಕರ್ನಾಟಕದಲ್ಲಿ ಡಬಲ್ ಇಂಜಿನ್ ವಿಫಲವಾಗಿದೆ. ಜನರು ಉನ್ನತ ಶಿಕ್ಷಣ ಪಡೆದಿದ್ದಾರೆ. ದೊಡ್ಡ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿ ಬರುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

“ಕರ್ನಾಟಕದ ಜನರು ಹೊಸತನವನ್ನು ಬಯಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಡಬಲ್ ಇಂಜಿನ್ ಸರ್ಕಾರ ಫೇಲ್ ಆಗಿದೆ. ಭ್ರಷ್ಟ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಕಳಂಕ ಬಂದಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಹೊಸ ಕರ್ನಾಟಕಕ್ಕೆ ಹೊಸ ಸರ್ಕಾರ ಬರಲಿದೆ” ಎಂದಿದ್ದಾರೆ.

ಎಕ್ಸಿಟ್ ಪೋಲ್‌ ಹೊರಬೀಳುವ ಮುನ್ನವೇ ಪ್ರತಿಕ್ರಿಯಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು, “ಈ ಚುನಾವಣೆಯಲ್ಲಿ ಬಿಜೆಪಿ–ಕಾಂಗ್ರೆಸ್ ಹಣದ ಹೊಳೆಯನ್ನೇ ಹರಿಸಿದ್ದು, ನಾವು ನಮ್ಮ ಅಭ್ಯರ್ಥಿಗಳಿಗೆ ಹಣದ ಸಹಾಯ ಮಾಡಲು ಆಗದ್ದಕ್ಕೆ ನೋವಿದೆ. ಆದರೆ ಜೆಡಿಎಸ್‌ ಪಕ್ಷವು ರಾಜ್ಯದಲ್ಲಿ ಬಹುಮತ ಪಡೆಯಲಿದೆ” ಎಂದು ತಿಳಿಸಿದ್ದಾರೆ.

“ಉತ್ತರ ಕರ್ನಾಟಕದ ಹಲವು ಕಡೆಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು, ಅಫ್ಜಲ್‌ಪುರ, ಸೇಡಂ, ನವಲಗುಂದ, ರಾಯಭಾಗ, ಕುಡಚಿ, ರಾಯಚೂರು ಗ್ರಾಮೀಣ, ಕೊಪ್ಪಳ, ಸಿಂದಗಿ ಸೇರಿದಂತೆ ಕನಿಷ್ಠ 25 ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದಾಗಿ ನಮಗೆ ಹಿನ್ನಡೆ ಆಗಿದೆ. ಇದರಿಂದಾಗಿ ಗೆಲ್ಲುವ ಕ್ಷೇತ್ರಗಳಲ್ಲಿಯೂ ಪೆಟ್ಟು ತಿಂದಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...