Homeದಲಿತ್ ಫೈಲ್ಸ್ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಕುದುರೆ ಮೇಲೆ ಮೆರವಣಿಗೆ ಮಾಡಿದ್ದಕ್ಕೆ ದಲಿತ ವರನಿಗೆ ಥಳಿಸಿ ಜಾತಿ ದೌರ್ಜನ್ಯ; ಎಫ್‌ಐಆರ್‌

ಹಲವು ದಲಿತರ ಮೇಲೆ ಹಲ್ಲೆಯಾಗಿದ್ದು, ಮಹಿಳೆಯರಿಗೆ ಜಾತಿವಾದಿಗಳು ಕಿರುಕುಳ ನೀಡಿದ್ದಾರೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ

- Advertisement -
- Advertisement -

ಮೇ 4ರ ಸಂಜೆ ಆಗ್ರಾದ ಸೋಹಲ್ಲಾ ಜಾತವ್ ಬಸ್ತಿಯಲ್ಲಿ ಸಾಗುತ್ತಿದ್ದ ವಿವಾಹ ಮೆರವಣಿಗೆಗೆ ಸವರ್ಣೀಯ ಜಾತಿಯ ಪುಂಡರು ಅಡ್ಡಿಪಡಿಸಿ, ಮದುವೆ ಗಂಡು ಮತ್ತು ಇತರರಿಗೆ ಥಳಿಸಿದ್ದು ಎಫ್‌ಐಆರ್‌ ದಾಖಲಾಗಿದೆ.

ದಲಿತ ವಧುವರರು ಕುದುರೆ ಮೇಲೆ ಸಾಗುತ್ತಿದ್ದನ್ನು ಕಂಡು ಕೆಂಡಮಂಡಲವಾದ ಸುಮಾರು 20-25 ಮಂದಿ ಜಾತಿವಾದಿಗಳು, ಬಲವಂತವಾಗಿ ವಧುವರರನ್ನು ಕುದುರೆಯಿಂದ ಕೆಳಗಿಳಿಸಿದ್ದಾರೆ ಮತ್ತು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರನ ಅತ್ತೆ ಗೀತಾ ಜಾತವ್ ಅವರು ಮೇ 8 ರಂದು ನೀಡಿದ ದೂರಿನ ಆಧಾರದ ಮೇಲೆ ಆಗ್ರಾ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಸೊಹಲ್ಲಾ ಬಸ್ತಿಯಲ್ಲಿ ಮಗಳ ಮದುವೆ ಮೆರವಣಿಗೆ ಸಾಗುತ್ತಿದ್ದಾಗ 20ರಿಂದ 25 ಮಂದಿ ಸವರ್ಣಿಯ ಜಾತಿಯ ಗಂಡಸರು ದೊಣ್ಣೆ, ಕಬ್ಬಿಣದ ಸರಳುಗಳನ್ನು ಹಿಡಿದುಕೊಂಡು ಬಂದು ಅಳಿಯನನ್ನು ಬಲವಂತವಾಗಿ ಕೆಳಗಿಳಿಸಿ ಥಳಿಸಿದ್ದಾರೆ” ಎಂದು ಗೀತಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

“ರಾಧಾಕೃಷ್ಣ ಮದುವೆ ಹಾಲ್‌ನಲ್ಲಿ ದಲಿತ ವಧುವರರನ್ನು ರಕ್ಷಿಸಲು ಬಂದಾಗ ಇತರರಿಗೂ ಸವರ್ಣೀಯ ಗಂಡಸರು ಥಳಿಸಿದ್ದಾರೆ. ದಲಿತ ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ” ಎಂದು ವಿವರಿಸಿದ್ದಾರೆ.

“ಸವರ್ಣೀಯ ಠಾಕೂರರು ಈ ಕೃತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು. ನಮ್ಮ ಹಳ್ಳಿಯಲ್ಲಿ ಮದುವೆ ಗಂಡು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಪ್ರಶ್ನಿಸಿದರು. ಮೂರು-ನಾಲ್ಕು ಬಾರಿ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದರು. ಸ್ಥಳದಲ್ಲಿದ್ದ ಮಹಿಳೆಯರಿಗೆ ಕಿರುಕುಳ ನೀಡಿದರು, ಜಾತಿ ನಿಂದನೆ ಮಾಡಿದರು” ಎಂದು ಗೀತಾ ಅವರು ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ವಧುವಿನ ಸಹೋದರ ಮನೀಶ್ ಕುಮಾರ್ ಪ್ರತಿಕ್ರಿಯಿಸಿ, “ನಮ್ಮ ಹಳ್ಳಿಯಲ್ಲಿ ದಲಿತ ಅಳಿಯಂದಿರು ಕುದುರೆ ಸವಾರಿ ಮಾಡುವುದಿಲ್ಲ, ನಿಮಗೆ ಎಷ್ಟು ಧೈರ್ಯ? ಎಂದು ಅವರು ಪ್ರಶ್ನಿಸಿದರು. ನಾವು ದಾಳಿಕೋರರನ್ನು ತಡೆಯಲು ಪ್ರಯತ್ನಿಸಿದಾಗ, ದೊಣ್ಣೆಗಳಿಂದ ಥಳಿಸಲು ಪ್ರಾರಂಭಿಸಿದರು. ಕೆಲವು ಅತಿಥಿಗಳು ಗಂಭೀರವಾಗಿ ಗಾಯಗೊಂಡರು, ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಯಾರೋ ಕರೆ ಮಾಡಿದ್ದರು. ಮಾಹಿತಿ ತಿಳಿದ ತಕ್ಷಣ ಸುಮಾರು 10-12 ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ” ಎಂದಿದ್ದಾರೆ.

ದೂರಿನ ಆಧಾರದ ಮೇಲೆ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್, ಶಿಶುಪಾಲ್ ಮತ್ತು ಇತರ 20 ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಎಸ್‌ಸಿ-ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರು ಶವವಾಗಿ ಪತ್ತೆ

ಮೇ 4ರಂದು ರಾತ್ರಿ ಘಟನೆ ನಡೆದಿದ್ದರೂ, ವರನ ಅತ್ತೆ ಗೀತಾದೇವಿ ನೀಡಿದ ದೂರಿನ ಮೇರೆಗೆ ಮೇ 9ರಂದು ಎಫ್‌ಐಆರ್ ದಾಖಲಿಸಲಾಗಿದೆ.

ಎಸ್‌ಎಚ್‌ಒ ನೀರಜ್ ಶರ್ಮಾ ಪ್ರತಿಕ್ರಿಯಿಸಿ, “ನಾಲ್ವರು ಆರೋಪಿಗಳಾದ ಯೋಗೇಶ್ ಠಾಕೂರ್, ರಾಹುಲ್ ಕುಮಾರ್, ಸೋನು ಠಾಕೂರ್, ಕುನಾಲ್ ಠಾಕೂರ್ ಮತ್ತು ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಅಟ್ರಾಸಿಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 354 (ದಾಳಿ ಅಥವಾ ಕ್ರಿಮಿನಲ್ ಬಲ ಪ್ರಯೋಗದ ಮೂಲಕ ಮಹಿಳೆಯರಿಗೆ ಕಿರುಕುಳ), 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧಗಳಿಂದ ಶಸ್ತ್ರಸಜ್ಜಿತ), 452 (ಗಾಯ, ಆಕ್ರಮಣ ಅಥವಾ ಮನೆ-ಅತಿಕ್ರಮಣ), 352 (ಹಲ್ಲೆಗೆ ಶಿಕ್ಷೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 505 (ಶಾಂತಿಯ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್‌ಐಆರ್‌ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಸರ್ಕಲ್ ಆಫೀಸರ್ (ಸದರ್) ಅರ್ಚನಾ ಸಿಂಗ್, “ಆರೋಪಿಗಳಲ್ಲಿ ಒಬ್ಬರಾದ ರಾಹುಲ್ ಅವರನ್ನು ಬಂಧಿಸಲಾಗಿದೆ. ಇತರರನ್ನು ಹಿಡಿಯಲು ನಾವು ರೈಡ್‌ ಮಾಡುತ್ತಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...