Homeಕರ್ನಾಟಕಸರ್ವಾಧಿಕಾರ ಧೋರಣೆಯ ಪುರುಷಹಂಕಾರ ಸಾಮಾನ್ಯರಿಗೂ ಸೋಂಕಿದಾಗ..

ಸರ್ವಾಧಿಕಾರ ಧೋರಣೆಯ ಪುರುಷಹಂಕಾರ ಸಾಮಾನ್ಯರಿಗೂ ಸೋಂಕಿದಾಗ..

- Advertisement -
- Advertisement -

ಚುನಾವಣೆಗಳ ಪ್ರಚಾರ ಭೌತಿಕ ಜಗತ್ತನ್ನು ಮೀರಿ ಡಿಜಿಟಲ್ ಜಗತ್ತನ್ನು ಆವರಿಸಿಕೊಂಡು ಹಲವು ವರ್ಷಗಳೇ ಕಳೆದವು. ಇನ್ನು, ಪ್ರಚಾರದಲ್ಲಿನ ಡೀಸೆನ್ಸಿ ಹಿಂದಿನ ವರ್ಷಗಳಿಗಿಂತಲೂ ಕುಸಿದು ಪಾತಾಳವನ್ನು ಕಂಡಿದೆ. ಚುನಾವಣೆ ಗೆಲುವಿಗಾಗಿ ಧರ್ಮ-ಜಾತಿಗಳ ಆಧಾರದಲ್ಲಿ ಹಾಗೂ ಸಾಮಾಜಿಕ-ಆರ್ಥಿಕ ಸಿದ್ಧಾಂತಗಳ ಮೇಲೆ ತೀವ್ರ ಧ್ರುವೀಕರಣದ ಪ್ರಾಜೆಕ್ಟ್ ಆರಂಭವಾಗಿ ಚುರುಕು ಪಡೆದಿರುವುದು ಕೆಲವು ವರ್ಷಗಳಿಂದೀಚೆಗೆ ಬಿಜೆಪಿ ಗಳಿಸಿರುವ ಯಶಸ್ಸಿನ ಫಲ. ಈ ಧ್ರುವೀಕರಣ ಯಾವ ಮಟ್ಟಕ್ಕೆ ಬೆಳೆದಿದೆಯೆಂದರೆ ರಾಜಕಾರಣಕ್ಕಾಗಿ ಮನೆಮನಗಳನ್ನು ಒಡೆದು ಬಿಸಾಕುವ ಮಟ್ಟಕ್ಕೆ. ಇಂತಹ ಅನಪೇಕ್ಷಿತ ಸಾಂಸ್ಕೃತಿಕ ಪಲ್ಲಟ ಎಷ್ಟು ವೇಗವಾಗಿ ಗತಿಸಿತೆಂದರೆ, ಇದಕ್ಕೆ ಪರಿಹಾರಗಳನ್ನು ಹುಡುಕುವುದಿರಲಿ, ಸ್ಪಷ್ಟವಾದ ಕಾರಣಗಳನ್ನು ಪಟ್ಟಿ ಮಾಡಲೂ ಆಗದ ರೀತಿಯಲ್ಲಿ ಬೆಳೆಯಿತು. ಇದಕ್ಕೆ ಡಿಜಿಟಲ್ ಮಾಧ್ಯಮದ ಕೊಡುಗೆಯೂ ಅಪಾರ. ಅಂತಹ ಒಡಕನ್ನು ಬಿಂಬಿಸುವ ಮತ್ತು ಮೆಜಾರಿಟೇರಿಯನ್ ರಾಜಕಾರಣ ತಳ್ಳುವ ದುಸ್ಥಿತಿಯನ್ನು ಸೂಚಿಸುವ ಕೆಲವು ಸಂಗತಿಗಳು ಈ ಚುನಾವಣೆಯಲ್ಲಿಯೂ ಕಂಡುಬಂದವು. ಸಾರ್ವಜನಿಕ ಸಜ್ಜನಿಕೆಯಲ್ಲಿ ಬಿಟ್ಟಿರುವ ಭಾರಿ ಬಿರುಕನ್ನು ಅನಾವರಣಗೊಳಿಸಿತು. ಇಂತಹುದನ್ನು ಬಿಂಬಿಸುವ ಕೆಲವು ವೈರಲ್ ವಿಡಿಯೋಗಳ ವಿಷಯ-ವಸ್ತುವನ್ನು ಇಲ್ಲಿ ಚರ್ಚಿಸುವ ಮೂಲಕ, ಮೇ 13ರಂದು ಸುಧಾರಿತ ಸರ್ಕಾರವೊಂದು ಬರುವುದಕ್ಕೆ ಸಾಧ್ಯವಾಗುವುದಾದರೆ, ಯಾವ ರೀತಿಯ ಸಾಂಸ್ಕೃತಿಕ ಕ್ರಾಂತಿಗೆ-ಬದಲಾವಣೆಗೆ ನಾಗರಿಕ ಸಮಾಜ ಮುಂದಾಗಬೇಕು ಮತ್ತು ಅದಕ್ಕೆ ಅಧಿಕಾರ ಹೇಗೆ ಸಹಕರಿಸಬೇಕೆಂಬುದನ್ನು ಚರ್ಚಿಸಬಹುದೇನೋ!

ವಿಡಿಯೋ-1: ಈ ವಿಡಿಯೋವನ್ನು ಮೇ 6ರಂದು ಸುಮಾರು ಬಿಜೆಪಿ ಮುಖಂಡರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡರು. ಕಾಂಗ್ರೆಸ್‌ನ ಕೆಲವು ಕಾರ್ಯಕರ್ತರು ಬೀದಿಯೊಂದರಲ್ಲಿ ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಿಕೊಂಡು ತೆರಳುವಾಗ, ಸುಮಾರು 10-12 ವರ್ಷದ ಬಾಲಕಿಯೊಬ್ಬಳು ಜೈ ಮೋದಿ-ಜೈ ಮೋದಿ ಎಂದು ಆ ಕಾರ್ಯಕರ್ತರೆಡೆಗೆ ಕೂಗಿ ಹೇಳುತ್ತಾಳೆ. ಅವರ ಮನೆಯ ಸದಸ್ಯರು ಸಂಭ್ರಮದಿಂದ ಕೇಕೆ ಹಾಕಿಕೊಂಡು ಕುಣಿಯುವುದು ವಿಡಿಯೋದಲ್ಲಿ ದಾಖಲಾಗಿದೆ.

ಆ ಮುಗ್ಧ ಮಗುವಿಗೆ ಬಹುಶಃ ಕಾಂಗ್ರೆಸ್ ಆಗಲೀ, ಬಿಜೆಪಿ ಪಕ್ಷವಾಗಲೀ ಏನನ್ನು ಪ್ರತಿನಿಧಿಸುತ್ತದೆಂದು ತಿಳಿದಿರುವುದು ಬಹುತೇಕ ಅಸಾಧ್ಯ. ಇನ್ನು ಭಾರತ ದೇಶದ ಚರಿತ್ರೆ, ವಿವಿಧ ಸೈದ್ಧಾಂತಕ ತಿಕ್ಕಾಟಗಳ ಬಗೆಗಿನ ತಿಳಿವಳಿಕೆಯಂತೂ ಸಿದ್ಧಿಸಿರಲಿಕ್ಕೆ ಸಾಧ್ಯವೇ ಇಲ್ಲ. ಇಂತಹ ಸನ್ನಿವೇಶದಲ್ಲಿ ಅವರ ಮನೆಯ ಹಿರಿಯರು ಹೀಗೆ ರಾಜಕೀಯ ರ್‍ಯಾಲಿಯೊಂದಕ್ಕೆ ವಿರೋಧವಾಗಿ ಮೋದಿ ಘೋಷಣೆ ಕೂಗಲು ಬಿಟ್ಟಿರುವುದು ಪಿಚ್ಚೆನಿಸಿತು. ಇನ್ನು ತಮ್ಮ ನಾಯಕನನ್ನು ಹೊಗಳಿಕೊಳ್ಳಲು ರಾಜೀವ್ ಚಂದ್ರಶೇಖರ್‌ನಂತಹ ಹಿರಿಯ ಬಿಜೆಪಿ ಮುಖಂಡನಿಂದ ಹಿಡಿದು ಕಿರಿ-ಪರಿ ತಲೆಗಳೆಲ್ಲಾ ಆ ವಿಡಿಯೋವನ್ನು ಹಂಚಿಕೊಂಡಿದ್ದು, ಇಂತಹ ಅಸೂಕ್ಷ್ಮವನ್ನು ತಮ್ಮ ಬುದ್ಧಿಯಲ್ಲಿ ತುಂಬಿಕೊಂಡಿರುವ ಈ ರಾಜಕೀಯ ಮುಖಂಡರು, ಮುಂದೆ ನಾಡಿನ ಹಿತವನ್ನು ನಿಜವಾಗಿಯೂ ಕಾಯಬಲ್ಲರೇ ಎಂಬ ಕಳವಳ ಹುಟ್ಟಿಸಿತು.

ವಿಡಿಯೋ-2: ’ಲಯನ್ ನ್ಯೂಸ್ ಕನ್ನಡ’ ಎಂಬ ಫೇಸ್ಬುಕ್‌ನ ಅಕೌಂಟ್ ಹಂಚಿಕೊಂಡಿದ್ದ ಒಂದು ವಿಡಿಯೋ. ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋಗಾಗಿ ಬೆಂಗಳೂರಿನ ಒಂದು ಭಾಗದಲ್ಲಿ ಕಾಯ್ತಾ ಇರುವ ಜನರನ್ನು ಈ ಯುಟ್ಯೂಬ್ ಮಾಧ್ಯಮದ ಆಂಕರ್ ಮಾತನಾಡಿಸುತ್ತಾ ಇದಾನೆ. ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಅತ್ಯಂತ ವ್ಯಗ್ರನಾಗಿ “ಗಂಡಸ್ರು ಲೀಡರ್ ಆಗ್ಬೇಕು ಕಣ್ರಿ” ಈ ದೇಶದಲ್ಲಿ ಅಂತ ಹೇಳ್ತಾ ಪ್ರಧಾನಿ ನರೇಂದ್ರ ಮೋದಿಯವರನ್ನು ಅದೇ ಉಗ್ರತೆಯಿಂದ ಹೊಗಳುತ್ತಾ ಹೋಗುತ್ತಾನೆ. ನಡುವೆ ಆಂಕರ್ “ರಾಹುಲ್ ಗಾಂಧಿ ಬಗ್ಗೆ ಏನು ಹೇಳ್ತೀರಿ” ಅಂದದ್ದಕ್ಕೆ ಆ ವ್ಯಕ್ತಿ ವ್ಯಗ್ರನಾಗಿ ಇನ್ನಷ್ಟು ಅತ್ಯುಗ್ರತೆಯಿಂದ “ಗಂಡಸರ ಬಗ್ಗೆ ಮಾತನಾಡ್ರಿ, ಅವರ ಬಗ್ಗೆ ಯಾಕೆ ಹೇಳ್ತೀರ್ರಿ” ಅನ್ನುತ್ತಾರೆ. ಸುತ್ತಮುತ್ತ ನೆರೆದಿರುವ ನಾಲ್ಕೈದು ಹೆಂಗಸರು ಗೊಳ್ಳೆಂದು ನಗುತ್ತಾರೆ! ಇದನ್ನು ಯಾವುದೇ ರೀತಿ ಎಡಿಟ್ ಮಾಡಿಕೊಳ್ಳದೆ, ಇಂಟರ್‌ಪ್ರಿಟೇಶನ್ ಇಲ್ಲದೆ ಹಾಗೆಯೇ ಪ್ರಸಾರ ಮಾಡಲಾಗುತ್ತದೆ. ಎಷ್ಟೋ ಜನ ಉತ್ಸಾಹದಿಂದ ಶೇರ್ ಮಾಡಕೊಳ್ತಾರೆ. ಅದರಲ್ಲಿ ಮಹಿಳೆಯರು ಕೂಡ ಇದ್ದಾರು!

ಈ ವಿಷಕಾರಿ ಮ್ಯಾಸ್ಕುಲಾನಿಟಿ ಏನನ್ನು ಸೂಚಿಸುತ್ತದೆ? ಈ ದೇಶದ ಸಮಸ್ಯೆಯನ್ನು ನಿವಾರಿಸಲು ಒಬ್ಬನೇ ಸರ್ವಶಕ್ತ ಎಂದು ನೋಡುವ ವ್ಯಕ್ತಿ (ಇಂತಹ ಜನರು) ಸಂಘಟಿತ ವಿವೇಕವನ್ನೇ ನುಚ್ಚುನೂರು ಮಾಡುತ್ತಿದ್ದಾನೆ. ಅವಿವೇಕದ ಪುರುಷಹಂಕಾರವನ್ನು ಒಬ್ಬ ಸರ್ವಾಧಿಕಾರಿ ಧೋರಣೆಯ ವ್ಯಕ್ತಿಯಲ್ಲಿ ನೋಡಿ ಸಂತೃಪ್ತಿಯಾಗಿದ್ದಾರೆ. ತನ್ನ ಸುತ್ತಮುತ್ತಲಿನ ಮಹಿಳೆಯರನ್ನೇ ಆತ ಅವಮಾನಿಸುತ್ತಿದ್ದಾನೆ ಎಂಬುದನ್ನು ತಿಳಿಯದಷ್ಟೂ ಅಂಧನಾಗಿದ್ದಾನೆ. ಪರಸ್ಪರ ಪ್ರೀತಿಗೌರವಗಳಿಲ್ಲದ ಸಮಾಜದಲ್ಲಿ ಬದುಕುವುದು ನರಕಸದೃಶ ಎಂದು ಈ ವ್ಯಕ್ತಿಗೆ ಅರ್ಥವಾಗಲು ಸಾಧ್ಯವೇ?

ವಿಡಿಯೋ 3: ಇದು ಮಂಗಳೂರಿನಲ್ಲಿ ನಡೆದದ್ದು ಎಂದು ಕೆಲವರು ಹಂಚಿಕೊಂಡಿದ್ದಾರೆ; ಯಾವ ಜಾಗದಲ್ಲಿ ನಡೆಯಿತು ಎಂಬುದರ ನಿಖರವಾದ ಮಾಹಿತಿ ಇಲ್ಲದಿದ್ದರೂ, ಈ ವಿಡಿಯೋವನ್ನು ಮೇಲಿನ ಎರಡು ವಿಡಿಯೋಗಳಿಗೆ ಹೋಲಿಸಿದರೆ, ಕಾಂಗ್ರೆಸ್ ಪಕ್ಷದವರು ಹೆಚ್ಚು ಹಂಚಿಕೊಂಡಿದ್ದಾರೆ. ಪ್ರಸಕ್ತ ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಒಬ್ಬ ಮಹಿಳೆ ಪಟ್ಟಿಮಾಡತೊಡಗಿದಂತೆ ಕೆಲವು ಗಂಡಸಲು ಆಕೆಯ ಸುತ್ತ ನೆರೆದು ಜೈ ಮೋದಿ ಎಂದು ಕಿರುಚಲಾರಂಭಿಸುತ್ತಾರೆ. ಆಕೆಗೆ ಮಾತನಾಡಲು ಅವಕಾಶವನ್ನೂ ನೀಡದಂತೆ ಅಡ್ಡಿಪಡಿಸುತ್ತಾರೆ. ಮಹಿಳೆಯ ಧೈರ್ಯವನ್ನು ಕೊಂಡಾಡಿಕೊಂಡು, ಕಾಂಗ್ರೆಸ್ ಪಕ್ಷದ ಕೆಲವರು ಇದನ್ನು ಹಂಚಿಕೊಂಡಿದ್ದಾರದರೂ, ಆ ಮಹಿಳೆಯನ್ನು ಹೊಗಳುವ ಭರದಲ್ಲಿ ಮತ್ತು ಜೈ ಮೋದಿ ಘೋಷಣೆಯನ್ನು ಕೂಗಿದವರನ್ನು ನಿಂದಿಸುವುದರಲ್ಲಿ ಅದೇ ಪುರುಷ ಅಹಂಕಾರದ ಟೋನ್ ಕಾಣದೆ ಇರದು. ಅದೂ ಕೂಡ ಟ್ಯಾಕಲ್ ಮಾಡಬೇಕಿರುವ ವಿಷಯವೇ!

ಮುಕ್ತವಾಗಿ ಮತ್ತು ಗಾಂಭೀರ್ಯದಿಂದ ಒಂದು ಟೀಕೆಯನ್ನು ಹಂಚಿಕೊಳ್ಳಲಾಗದ ಪರಿಸ್ಥಿತಿಯನ್ನು ಈ ಬಲಪಂಥೀಯ ಅಭಿಮಾನಿಗಳು ಈ ಮಟ್ಟದಲ್ಲಿ ಸೃಷ್ಟಿಸಲು ಹವಣಿಸುತ್ತರುವುದೇಕೆ? ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ನೈತಿಕತೆಯ ಬಗ್ಗೆ ಇಷ್ಟು ಅಸಡ್ಡೆ ಬೆಳೆದರೆ ಮುಂದೆ ದೇಶದ ಗತಿಯೇನು?

ಇವು ಕೆಲವೇ ಕೆಲವು ಉದಾಹರಣೆಗಳು. ಇದನ್ನು ಬರೆಯುತ್ತಿರುವ ಹೊತ್ತಿಗೆ ಮತ್ತೊಂದು ವಿಡಿಯೋವನ್ನು ಕೆಲವರು ಹಂಚಿಕೊಳ್ಳುತ್ತಿದ್ದರು. ಈದಿನ.ಕಾಂ ವರದಿಗಾರ್ತಿಯೊಬ್ಬರು ಬೆಂಗಳೂರಿನ ಮೋದಿ ರೋಡ್ ಶೋ ವೇಳೆ ಜನಸಾಮಾನ್ಯರಿಗಾಗಿರುವ ಸಮಸ್ಯೆಗಳ ಬಗ್ಗೆ ದ್ವಿಚಕ್ರವಾಹನದಲ್ಲಿ ಚಲಿಸುತ್ತಿರುವ ಇಬ್ಬರನ್ನು ಕೇಳುತ್ತಾರೆ. ಒಬ್ಬಾತ ’ತೊಂದರೆಯಾಗುತ್ತಿದೆ’ ಎಂದು ಹೇಳುತ್ತಿದ್ದಂತೆಯೇ ಕೇಸರಿ ಪಕ್ಷದ ಅಭಿಮಾನಿಯೊಬ್ಬ, ಅವರ ಸಂಭಾಷಣೆಗೆ ಅಡ್ಡಿಪಡಿಸುವುದಲ್ಲದೆ, ’ಎಂತೆಂಥ ವ್ಯಕ್ತಿಗಳನ್ನು ಪ್ರಶ್ನೆ ಮಾಡುತ್ತೀರ್ರಿ’ ಅಂತ ಆ ವರದಿಗಾರ್ತಿಗೆ ದಬಾಯಿಸುತ್ತಾರೆ. ಇದನ್ನು ಪ್ರಶ್ನಿಸಲು ನೀವ್ಯಾರು, ನಾವು ಎಲ್ಲರನ್ನೂ ಮಾತನಾಡಿಸುತ್ತೇವೆ ಎಂದು ಆಕೆ ಪ್ರತಿರೋಧ ತೋರಿಸಿದಾಕ್ಷಣ, ’ಕ್ರಾಸ್ ಕೊಶ್ಚನ್ ಮಾಡಬೇಕ್ರಿ’ ಎಂದು ಪತ್ರಿಕೋದ್ಯಮದ ಪಾಠ ಹೇಳಲು ಪ್ರಾರಂಭಿಸುತ್ತಾರೆ!

ಇದನ್ನೂ ಓದಿ: ‘ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಎಲ್ಲ ಯೋಜನೆಗಳು ಬಂದ್ ಆಗಲಿವೆ’: ಜೆಪಿ ನಡ್ಡಾ ಹೇಳಿಕೆ

ಪತ್ರಿಕೋದ್ಯಮದ ಪಾಠ ಹೇಳುವ ಈ ವ್ಯಕ್ತಿಯ ಥರದವರೇ ದಿನಬೆಳಗಾದರೇ ಮೋದಿ ಮತ್ತು ಅಮಿತ್ ಶಾರವರನ್ನು ದೈವೀಕರಿಸುವ ಕನ್ನಡ ನ್ಯೂಸ್ ಚಾನೆಲ್‌ಗಳನ್ನು ನೋಡುತ್ತಾ ಮುಳುಗುವವರು. ಅಲ್ಲಿ ಅಧಿಕಾರವನ್ನು ಪ್ರಶ್ನಿಸಿ, ಅಧಿಕಾರಕ್ಕೆ ಸತ್ಯ ನುಡಿಯುವ ಕಾರ್ಯಕ್ರಮಗಳನ್ನು ಮಾಡಿ ಎಂದು ಹೇಳಲು ಇವರಿಗೆ ಏಕೆ ಆಗುವುದಿಲ್ಲ?

ಮೇಲೆ ಚರ್ಚಿಸಿದ ಕೆಲವು ವಿಡಿಯೋಗಳಲ್ಲಿ ನೋಡಿದ ಜನಸಾಮಾನ್ಯರ ಅನುಚಿತ ವರ್ತನೆಗೆ ಈ ಮುಖ್ಯವಾಹಿನಿ ಮಾಧ್ಯಮಗಳು ಕೂಡ ದೊಡ್ಡ ಕೊಡುಗೆ ನೀಡಿವೆ. ಮೇ 6 ಮತ್ತು 7ನೇ ತಾರೀಖಿನಂದು ಪ್ರಧಾನಮಂತ್ರಿಗಳು ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವಾಗ ಈ ಸುವರ್ಣ, ಪಬ್ಲಿಕ್, ಟಿವಿ9 ಮುಂತಾದ ಟಿವಿ ಚಾನೆಲ್‌ಗಳು ಅಕ್ಷರಶಃ ಬಿಜೆಪಿ ಪಕ್ಷದ ಚಾನೆಲ್‌ಗಳಂತೆ ಇಡೀ ಸಮಯ ನೇರಪ್ರಸಾರ ಮಾಡಿಕೊಂಡು, ಮೋದಿ ಭಜನೆ ಮಾಡಿಕೊಂಡು ಕಾಲ ಕಳೆದವು. ಒಂದು ಕ್ರಿಟಿಕಲ್ ಆದ ನೋಟವೂ ಬರಲಿಲ್ಲ. ಇನ್ನು ಆ ರೋಡ್ ಶೋಗಾಗಿ ನೆರೆದ ಜನರ ಉನ್ಮಾದದ ಅಭಿಪ್ರಾಯಕ್ಕೆ ಈ ಚಾನೆಲ್‌ಗಳು ಸೀಮಿತವಾಗಿದ್ದವೇ ಹೊರತು, ಇದರಿಂದ ತೊಂದರೆಗೊಳಗಾದ ಅಸಂಖ್ಯಾತ ಜನಸಾಮಾನ್ಯರ ಅಭಿಪ್ರಾಯಗಳಿಗೆ ಬೆನ್ನುತರುಗಿಸಿ ಕೂತಿದ್ದವು.

ರಾಜಕೀಯ ಮುಖಂಡರ ಹದ್ದುಮೀರಿದ ಮಾತುಗಳ ಬಗ್ಗೆಯೂ ಮಾಧ್ಯಮಗಳು ಪಕ್ಷಪಾತಿ ಧೋರಣೆ ತೋರಿದವು. ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ಅವರು ಮೋದಿಯವರನ್ನು ಟೀಕಿಸಿದ್ದನ್ನು ಖಂಡಿಸುವುದಕ್ಕೆ ಸಾಕಷ್ಟು ಸಮಯವನ್ನು ಈ ಟಿವಿ ಮಾಧ್ಯಮಗಳು ನಿಗದಿಪಡಿಸಿದರೆ, ಖರ್ಗೆ ಕುಟುಂಬವನ್ನು ’ಸಾಫ್’ ಮಾಡುತ್ತೇನೆಂದು ಬೆದರಿಕೆ ಹಾಕಿದ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠರನ್ನು ಅದೇ ನಿಷ್ಠೆಯಿಂದ ಖಂಡಿಸುವ ಗೋಜಿಗೆ ಹೋಗಲಿಲ್ಲ. ಸೋನಿಯಾ ಗಾಂಧಿಯವರ ಬಗ್ಗೆ ಬೈಗುಳದ ಮಳೆ ಹರಿಸಿದ ಬಸವರಾಜ ಯತ್ನಾಳರ ಮಾತುಗಳಿಗೆ ಜಾಣ ಕಿವುಡಾದರು. ಇಂತಹ ಪಕ್ಷಪಾತಗಳನ್ನು ಲಿಸ್ಟ್ ಮಾಡುತ್ತಾ ಹೋದರೆ ಪುಟಗಳು ಸಾಲದಾದೀತು.

ಇನ್ನೊಂದು ಉದಾಹರಣೆಯೆಂಬಂತೆ, ಸುವರ್ಣ ಮತ್ತು ಪಬ್ಲಿಕ್ ಟಿವಿಯ ಸಂಪಾದಕರಾದ ಅಜಿತ್ ಹನುಮಕ್ಕನವರ ಮತ್ತು ರಂಗನಾಥ್ ಅವರು ಈ ಚುನಾವಣೆಯ ಪ್ರಚಾರದ ಸಮಯದಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂದರ್ಶನ ಮಾಡಿ ಕಾರ್ಯಕ್ರಮವನ್ನು ಪ್ರಸಾರ ಮಾಡಿದರು. ಕಾಂಗ್ರೆಸ್ ಪಕ್ಷದ ಮುಖಂಡರನ್ನು ಮನಸ್ಸಿಗೆ ಬಂದಂತೆ ತರಾಟೆಗೆ ತೆಗೆದುಕೊಳ್ಳುವ, ಕೆಲವೊಮ್ಮೆ ಬಿಜೆಪಿ ರಾಜ್ಯ ನಾಯಕರನ್ನೂ ಏರುದನಿಯಲ್ಲಿ ಪ್ರಶ್ನಿಸುವ ಇವರುಗಳು ಅಮಿತ್ ಶಾ ಮುಂದೆ ಶರಣಾದವರಂತೆ, ದೈನೇಸಿಯಾಗಿ ಮ್ಯಾಚ್ ಫಿಕ್ಸ್ ಮಾಡಿಕೊಂಡವರಂತೆ ಸೌಮ್ಯ ಸ್ವಭಾವದ ಮೂರ್ತ ರೂಪಗಳಾಗಿ ಪ್ರಶ್ನೆಗಳನ್ನು ಕೇಳುತ್ತಿದ್ದರು. ಅವರನ್ನು, ಅವರ ಆಡಳಿತವನ್ನು ಮುಜುಗರಕ್ಕೆ ಸಿಕ್ಕಿಸುವ ಒಂದು ಪ್ರಶ್ನೆಯೂ ಇವರ ಬಾಯಿಯಿಂದ ಉದುರಲಿಲ್ಲ. ಭ್ರಷ್ಟಾಚಾರದ ಬಗೆಗಾಗಲೀ, ಪರಿವಾರವಾದದ ಬಗೆಗಾಗಲಿ ಅಮಿತ್ ಶಾ ಕೊಟ್ಟ ವ್ಯಾಖ್ಯಾನಗಳನ್ನು ಮತ್ತು ಉತ್ತರಗಳನ್ನು ಕಣ್ಣಿಗೆ ಒತ್ತಿಕೊಂಡು ಸ್ವೀಕರಿಸುತ್ತಿದ್ದರು. ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿ ಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನಿಸುವಾಗ ಏರುವ ಈ ’ಪತ್ರಕರ್ತರ’ ಧ್ವನಿ ಅಮಿತ್ ಶಾ ಮುಂದೆ ಕಮರಿ ಹೋಗುವುದೇಕೆ?

ಇದನ್ನು ಓದುವ ಹೊತ್ತಿಗೆ ಮತದಾನ ಮುಗಿದುಹೋಗಿರುತ್ತದೆ. ಚುನಾವಣಾ ಫಲಿತಾಂಶಗಳು ಹೊರಬೀಳುವುದಕ್ಕೂ ಆರಂಭವಾಗಿರಬಹುದು. ಹಲವು ಚುನಾವಣಾ ಪೂರ್ವ ಅಭಿಪ್ರಾಯ ಸಮೀಕ್ಷೆಗಳು ಸೂಚಿಸಿರುವಂತೆ ಈಗಿರುವ ಬಿಜೆಪಿ ಸರ್ಕಾರ ಬದಲಾಗಬೇಕಿದೆ. ಒಂದು ಪಕ್ಷ ಬಿಜೆಪಿ ಅಧಿಕಾರವನ್ನು ಮರಳಿ ಪಡೆಯಲು ಸಾಧ್ಯವಾಗಿದ್ದರೆ ಮೇಲೆ ಚರ್ಚಿಸಿದ ಕಳವಳಕಾರಿ ಸಂಗತಿಗಳ ಬಗ್ಗೆ ಆ ಪಕ್ಷವಾಗಲೀ ಆ ಪಕ್ಷದ ಮುಖಂಡರಾಗಲೀ ತಲೆಕೆಡಿಸಿಕೊಳ್ಳುವ ಗೋಜಿಗೆ ಹೋಗುವುದಿಲ್ಲ. ಒಂದು ಪಕ್ಷ ಒಪಿನಿಯನ್ ಪೋಲ್ಸ್ ನಿಜವಾಗಿ ಬಲಪಂಥೀಯತೆ ಮತ್ತು ಮೆಜಾರಟೇರಿಯನ್ ಧೋರಣೆಯ ವಿರುದ್ಧವಾದ ಪಕ್ಷ ಅಥವಾ ಪಕ್ಷಗಳ ಮೈತ್ರಿ ಅಧಿಕಾರ ಹಿಡಿದಿದ್ದರೆ ಮೇಲಿನ ಕಳವಳಗಳನ್ನು ಅಡ್ರೆಸ್ ಮಾಡುವಂತಹ ನಿರ್ಣಾಯಕ ಸಾಂಸ್ಕೃತಿಕ ಸಮರಕ್ಕೆ ಅದು ಮುಂದಾಗಬೇಕಾಗುತ್ತದೆ. ಮನಸ್ಸುಗಳನ್ನು ಬೆಸೆಯಬೇಕಿರುವಾಗ, ತಿಳಿವಳಿಕೆ-ವಿವೇಕವನ್ನು ಮರುಗಳಿಸಿಕೊಳ್ಳಬೇಕಿರುವಾಗ ’ಸಮರ’ ಪದ ಅನುಚಿತವಾಗಿ ಕಂಡರೂ, ಸರ್ಕಾರ ಈ ನಿಟ್ಟಿನಲ್ಲಿ ಗೆಲ್ಲುವ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಂಡೇ ತೀರಬೇಕಿದೆ. ನಮ್ಮ ಪ್ರಜಾಪ್ರಭುತ್ವದ ಉಳಿವಿಗಾಗಿ. ಕೆಲವು ಸದ್ಯದ ಸಮಸ್ಯೆಗಳ ಬಗ್ಗೆ ತುರ್ತಾಗಿ ಕ್ರಮವಹಿಸಬೇಕಿದೆ.

1. ಮಕ್ಕಳ ಶಿಕ್ಷಣದಲ್ಲಿ ಸಮಾನತೆ, ಪ್ರತಿನಿಧಿತ್ವದಂತಹ ಮಹತ್ವವನ್ನು ಹೇಳಿಕೊಡುವ ಪಠ್ಯಗಳು ಸೇರಬೇಕು. ಅದರ ಮೂಲಕ ಸಹಜೀವಿಗಳನ್ನು ಗೌರವಿಸುವ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಹೆಚ್ಚೆಚ್ಚು ಪಸರಿಸುವ ಶಿಕ್ಷಣ ನೀಡಿ, ನಾಡಿನ ಬಹುತ್ವದ ರಕ್ಷಣೆಯ ಜವಾಬ್ದಾರಿಯನ್ನು ಅವರ ಮೇಲೆ ಹೊರಿಸಬೇಕು.

2. ಜನಪರ ಮಾಧ್ಯಮಗಳು ಹೆಚ್ಚುವಂತೆ ನೋಡಿಕೊಳ್ಳಬೇಕು. ಹಾಗೆ ಮಾಡುವಾಗ ಎಲ್ಲ ಅಧಿಕಾರವನ್ನೂ ಪ್ರಶ್ನಿಸುವ ಸ್ವಾತಂತ್ರ್ಯ ಆ ಮಾಧ್ಯಮಗಳಿಗೆ ಇರುವಂತೆ ಕಾಯಲು ನೀತಿನಿರೂಪಣೆಯನ್ನು ರಚಿಸಬೇಕು. ಒಂದು ದೊಡ್ಡ ರೀತಿಯಲ್ಲಿ ಮಾಧ್ಯಮ ಸ್ವಾತಂತ್ರ್ಯದ ಬಗ್ಗೆ ಶಿಕ್ಷಣವನ್ನು ನೀಡುವ (ಮಾಧ್ಯಮಕರ್ತರಿಗೂ ಮತ್ತು ಜನ ಸಾಮಾನ್ಯರಿಗೂ) ಯೋಜನೆಗಳನ್ನು ರೂಪಿಸಬೇಕು. ಸಮಾಜದಲ್ಲಿ ಒಡಕು ತರಲು ಬಯಸುವ ಪತ್ರಕರ್ತರಿಗೆ ಸಂವಿಧಾನದ ಪಾಠ ಹೇಳಿ ಆ ಮಾರ್ಗದಲ್ಲಿ ನಡೆಯುವ ಒತ್ತಡ ಅವರ ಮೇಲೆ ಹಾಕಬೇಕು.

3. ಜನಸಾಮಾನ್ಯರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸಬೇಕು; ಅದು ಸರ್ವಾಧಿಕಾರಿ ಮನೋಧೋರಣೆಯನ್ನು ಪ್ರಶ್ನಿಸುವಂತಿರಬೇಕು. ಪ್ರಜಾಪ್ರಭುತ್ವದಲ್ಲಿ ಬಹುತ್ವ, ವೈವಿಧ್ಯತೆ ಏಕೆ ಮುಖ್ಯ ಎಂಬುದನ್ನು ಮನಗಾಣಿಸುವಂತಿರಬೇಕು. ಈಗಿರುವ ಅಕಾಡೆಮಿಗಳು ತಮ್ಮತಮ್ಮ ಕ್ಷೇತ್ರದಲ್ಲಿ ಇಂತಹ ರಾಜಕೀಯ ಪ್ರಜ್ಞೆಯನ್ನು ಎಚ್ಚರಿಸುವಂತಹ ಯೋಜನೆಗಳನ್ನು ಹಾಕಿಕೊಳ್ಳಬೇಕು.

4. ಸಂಘ ಪರಿವಾರದ ಆರ್‌ಎಸ್‌ಎಸ್, ಬಜರಂಗದಳ ಮುಂತಾದ ಸಂಸ್ಥೆಗಳ ಬಗ್ಗೆ ಜನರು ನಿಖರ ತಿಳಿವಳಿಕೆಯನ್ನು ಪಡೆದು, ಬಹುತ್ವ ಮತ್ತು ಸಂವಿಧಾನ ವಿರೋಧಿ ಸಂಘಟನೆಗಳನ್ನು ಜನ ಸ್ವಯಂಪ್ರೇರಿತವಾಗಿ ವಿರೋಧಿಸುವ ಸಾಂಸ್ಕೃತಿಕ ಕ್ರಾಂತಿಗೆ ಮುಂದಿನ ಅಧಿಕಾರ ಅವಕಾಶ ಸೃಷ್ಟಿಸಬೇಕು.

5. ಧರ್ಮದ ಆಧಾರದಲ್ಲಿ ಧ್ರುವೀಕರಣಗೊಂಡಿರುವ ಜನರನ್ನು ಬೆಸೆಯಲು, ಅದರಲ್ಲಿಯೂ ದಾರಿತಪ್ಪಿರುವ ಬಹುಸಂಖ್ಯಾತರನ್ನು ವಿವೇಕದ ಹಳಿಗೆ ತರಲು ಸರ್ಕಾರದ ನೀತಿಗಳು ಸಹಕರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...