Homeಮುಖಪುಟಈಶಾನ್ಯದಲ್ಲಿ ಬೆಂಕಿಯೊಂದಿಗೆ ಆಟವಾಡುವುದನ್ನು ನಿಲ್ಲಿಸಿ

ಈಶಾನ್ಯದಲ್ಲಿ ಬೆಂಕಿಯೊಂದಿಗೆ ಆಟವಾಡುವುದನ್ನು ನಿಲ್ಲಿಸಿ

- Advertisement -
- Advertisement -

ರಾಷ್ಟ್ರೀಯತೆಯ ಪರೀಕ್ಷೆ ಗಡಿಗಳಲ್ಲಿ ಆಗತ್ತೆ. ದೇಶದ ಗಡಿಗಳ ರಕ್ಷಣೆ ಕೇವಲ ಭದ್ರತಾ ಪಡೆಗಳ ಶೌರ್ಯದಷ್ಟೇ ಅಲ್ಲ, ರಾಜಕೀಯ ನೇತೃತ್ವದ ತಿಳಿವಳಿಕೆಯ ಪರೀಕ್ಷೆಯನ್ನೂ ಅದು ಬೇಡುತ್ತದೆ. ಕಳೆದ ವಾರ ಮಣಿಪುರದಲ್ಲಿ ನಡೆದ ಹಿಂಸೆ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ನಿಯತ್ತು ಮತ್ತು ನೀತಿ ಎರಡರ ಮೇಲೂ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ರಾಜ್ಯದ ಸೂಕ್ಷ್ಮವಾದ ಜಾತಿವಾರು ಸಮತೋಲನವನ್ನು ನಿರ್ಲಕ್ಷಿಸಿ ತನ್ನದೇ ಆದ ರಾಜಕೀಯ ಅಜೆಂಡಾ ಹೇರುವ ಪ್ರಯತ್ನ ಈ ಗಡಿಭಾಗದ ರಾಜ್ಯಕ್ಕಷ್ಟೇ ಅಲ್ಲ, ಇಡೀ ದೇಶಕ್ಕೂ ದುಬಾರಿಯಾಗಲಿದೆ.

ಮೊದಲ ನೋಟದಲ್ಲಿ ಮಣಿಪುರದಲ್ಲಿ ಆದ ಹಿಂಸೆ ಅಲ್ಲಿನ ಎರಡು ದೊಡ್ಡ ಸಮುದಾಯಗಳಾದ ಮೈತ್‌ಯಿ ಮತ್ತು ಕುಕಿ ಸಮುದಾಯಗಳ ನಡುವೆ ಆದ ಜನಾಂಗೀಯ ಕಲಹದ ಹಿಂಸೆಯಾಗಿದೆ. ಮಣಿಪುರದ ಬೆಟ್ಟಗಳಲ್ಲಿ ನೆಲೆಸಿದ ಮೈತ್‌ಯಿ ಸಮುದಾಯ ರಾಜ್ಯದ ಬಹುಸಂಖ್ಯಾತ ಸಮುದಾಯವಾಗಿದೆ. ವೈಷ್ಣವ ಹಿಂದೂ ನಂಬಿಕೆಯ ಮೈತ್‌ಯಿ ಸಮುದಾಯ ಜನಸಂಖ್ಯೆಯ 54% ರಷ್ಟಿದೆ ಹಾಗೂ ರಾಜಕೀಯದಲ್ಲಿ ಪ್ರಭಾವಶಾಲಿಯಾಗಿದೆ. ಈಶಾನ್ಯ ಪರ್ವತ ರಾಜ್ಯಗಳಲ್ಲಿ ಇದುವೇ ದೊಡ್ಡ ಹಿಂದೂ ಸಮುದಾಯವಾಗಿದ್ದು, ಸ್ವಾಭಾವಿಕವಾಗಿಯೇ ರಾಜ್ಯದಲ್ಲಿ ಬಿಜೆಪಿಯ ಹೆಚ್ಚಿನ ಬೆಂಬಲ ಮೈತ್‌ಯಿ ಸಮಯದಾಯದಿಂದ ಬಂದಿದೆ. ಅಧಿಕೃತವಾಗಿ ಅವರಿಗೆ ಒಬಿಸಿ ಸ್ಥಾನಮಾನ ನೀಡಲಾಗಿದೆ.

ಅತ್ತ ಮಿಜೊರಾಂ ಮತ್ತು ಮ್ಯಾನ್‌ಮಾರ್‌ಗೆ ಅಂಟಿಕೊಂಡಿರುವ ಪ್ರದೇಶಗಳಲ್ಲಿ ನೆಲೆಸಿರುವ ಕುಕಿ ಆದಿವಾಸಿ ಸಮುದಾಯದ ಸಂಖ್ಯೆ ಕೇವಲ 15% ರಷ್ಟಿದೆ ಆದರೆ ಇಂಫಾಲದ ಕೆಲವು ಗುಡ್ಡಗಾಡು ಜಿಲ್ಲೆಗಳಲ್ಲಿ ಇವರ ಪ್ರಭಾವವಿದೆ. ಮಣಿಪುರದ ಕುಕಿ, ನೆರೆರಾಜ್ಯದ ಮಿಜೊರಾಂನ ಲುಶಾಯಿ ಮತ್ತು ಗಡಿಯಾಚೆಯ ಮ್ಯಾನ್‌ಮಾರ್‌ನಲ್ಲಿ ನೆಲೆಸಿರುವ ಚಿನ್, ಎಲ್ಲರೂ ಒಂದೇ ಸಮಾಜದ ಜನರಾಗಿದ್ದಾರೆ, ಪರಸ್ಪರ ಸಂಬಂಧ ಹೊಂದಿದ್ದಾರೆ. ಕಳೆದ ವರ್ಷ ಚುನಾವಣೆಗಳಲ್ಲಿ ಬಿಜೆಪಿಗೆ ಕುಕಿ ಬಾಹುಳ್ಯವುಳ್ಳ ಕ್ಷೇತ್ರಗಳಲ್ಲೂ ಒಂದಿಷ್ಟು ಸಫಲತೆ ಸಿಕ್ಕಿದ್ದರೂ, ಬಿಜೆಪಿ ಸರಕಾರದ ಅನೇಕ ಕ್ರಮಗಳ ಕಾರಣದಿಂದ ಕುಕಿ ಸಮುದಾಯಕ್ಕೆ ಅದರಲ್ಲೂ, ವಿಶೇಷವಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್‌ರೊಂದಿಗೆ ಸರಿಬರುವುದಿಲ್ಲ. ಈ ರಾಜಕೀಯ ಪರಕೀಯತೆಯೇ ಕಳೆದ ವಾರ ಆದ ಹಿಂಸೆಯ ಮೂಲದಲ್ಲಿದೆ.

ಕಳೆದ ವರ್ಷ ಮಣಿಪುರದ ಚುನಾವಣೆಗಳಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರ ವಹಿಸಿಕೊಂಡ ನಂತರ ಮುಖ್ಯಮಂತ್ರಿ ಬಿರೇನ್ ಸಿಂಗ್ ಕುಕಿ ಪ್ರದೇಶಗಳಲ್ಲಿ ಎರಡು ವಿಷಯಗಳ ಮೇಲೆ ಕಟುವಾದ ಕ್ರಮ ಕೈಗೊಂಡರು. ಮೊದಲನೆಯದು, ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಅಫೀಮಿನ ಕೃಷಿ ಮತ್ತು ಡ್ರಗ್ಸ್‌ನ ಸಮಸ್ಯೆಗೆ ಸಂಬಂಧಿಸಿದೆ. ಈ ವಿಷಯದಲ್ಲಿ ಕೇಂದ್ರ ಸರಕಾರದ ಆತಂಕ ಸರಿಯಾಗಿದೆ ಹಾಗೂ ರಾಜ್ಯ ಸರಕಾರದ ಮೂಲಕ ಕ್ರಮ ಅವಶ್ಯಕವಾಗಿತ್ತು. ಆದರೆ ಮುಖ್ಯಮಂತ್ರಿಯು ಅಫೀಮಿನ ಜಮೀನುದಾರರು ಮತ್ತು ಡ್ರಗ್ ಮಾಫಿಯಾದ ವಿರುದ್ಧದ ಕಾರ್ಯಾಚರಣೆಗೆ, ಕುಕಿ ಸಮುದಾಯದ ವಿರುದ್ಧದ ಸಮರ ರೂಪ ನೀಡಿದರು. ಅವರು ಅನೇಕ ಬಾರಿ ಕುಕಿ ಆದಿವಾಸಿಗಳನ್ನು ಹೊರಗಿನವರು ಮತ್ತು ವಲಸಿಗರು ಎಂದು ಬಿಂಬಿಸುವ ಹೇಳಿಕೆಗಳನ್ನು ನೀಡಿದರು, ಅದರಿಂದ ಸ್ವತಃ ಬಿಜೆಪಿಯ ಕುಕಿ ಶಾಸಕರಿಗೂ ಕೂಡ ಅವರ ವಿರುದ್ಧ ಬಂಡಾಯ ಏಳುವ ಅನಿವಾರ್ಯತೆ ಸೃಷ್ಟಿಯಾಯಿತು.

ಎರಡನೆಯ ವಿಷಯ ಅರಣ್ಯಕ್ಕೆ ಸಂಬಂಧಿಸಿದ್ದು, ಅಲ್ಲಿಯೇ ಕುಕಿ ಸಮುದಾಯದ ಜನರು ನೆಲೆಸಿದ್ದಾರೆ. ಇತ್ತೀಚಿಗೆ ಕೇಂದ್ರೀಯ ಪರಿಸರ ಸಚಿವ ಭುಪೇಂದ್ರ ಯಾದವ ಮಣಿಪುರದಲ್ಲಿ ಹೇಳಿದ್ದೇನೆಂದರೆ, ರಾಜ್ಯದ ಅರಣ್ಯವು ಕೇಂದ್ರೀಯ ಕಾನೂನುಗಳ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತವೆ ಹಾಗೂ ಸಂರಕ್ಷಿತ ಅರಣ್ಯ (ರಿಸರ್ವ್ ಫಾರೆಸ್ಟ್)ಗಳನ್ನು ತೆರವುಗೊಳಿಸಲಾಗುವುದು ಎಂದು. ಇದರಲ್ಲೂ ರಾಜ್ಯ ಸರಕಾರ ಸಂವೇದನಾಶೀಲವಾಗಿ ವರ್ತಿಸುವ ಬದಲಿಗೆ ಒತ್ತಾಯಪೂರ್ವಕವಾಗಿ ಹಲವಾರು ಗ್ರಾಮಗಳನ್ನು ತೆರವುಗೊಳಿಸಿತು. ಇದರಿಂದ ತಮಗೆ ತಲೆತಲಾಂತರದಿಂದ ಬಂದಿರುವ ಭೂಮಿಯಿಂದ ಹೊರದಬ್ಬಲಾಗುತ್ತಿದೆ ಎಂದ ಸಂದೇಹ ಕುಕಿ ಸಮುದಾಯಕ್ಕೆ ಬಂತು. ಇದಕ್ಕೆ ವಿರೋಧ ಕಾಣಿಸಿಕೊಂಡಾಗ ಮುಖ್ಯಮಂತ್ರಿಯವರೇ ಹೋಗಿ ಜನರಿಗೆ ಬೆದರಿಕೆ ಹಾಕಿದರು ಹಾಗೂ ಸ್ಥಳೀಯ ಕುಕಿ ಭೂಗತ ಉಗ್ರವಾದಿಗಳೊಂದಿಗೆ ಅನೇಕ ವರ್ಷಗಳಿಂದ ನಡೆದುಕೊಂಡ ಬಂದ ಒಪ್ಪಂದವನ್ನು ರದ್ದುಪಡಿಸುವ ಹಾಗೂ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವ ಪ್ರಕ್ರಿಯೆ ಪ್ರಾರಂಭಿಸಿದರು.

ಎನ್ ಬಿರೇನ್ ಸಿಂಗ್‌

ಅತ್ತ ಕಳೆದ ಕೆಲವು ವರ್ಷಗಳಿಂದ ಮಣಿಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಿಣಾಮ ಹೆಚ್ಚುತ್ತಿದೆ. ಅಲ್ಲಿ ಮೈತ್‌ಯಿ ಸಮುದಾಯವನ್ನು ಸ್ಥಳೀಯ ಪರಂಪರಾಗತ ಜನಾಂಗದ ಪರಂಪರೆಯಿಂದ ಕಡಿದು ಅವರಲ್ಲಿ ಹಿಂದೂ ಅಸ್ಮಿತೆಯನ್ನು ಎಚ್ಚರಿಸುವ ಕೆಲಸ ನಡೆಯುತ್ತಿದೆ. ಬಹುತೇಕ ಮೈತ್‌ಯಿ ಸಮುದಾಯ ಹಿಂದೂ ಆಗಿರುವುದರಿಂದ (ಅಂದಹಾಗೆ ಅವರಲ್ಲಿ ಪಂಗಾಲ್ ಸಮುದಾಯ ಮುಸ್ಲಿಂ ಆಗಿದ್ದು, ಸಣ್ಣ ಭಾಗ ಕ್ರಿಶ್ಚಿಯನ್ನರೂ ಇದಾರೆ) ಹಾಗೂ ಹೆಚ್ಚಿನ ಕುಕಿ ಮತ್ತು ನಾಗಾ ಜನರು ಕ್ರಿಶ್ಚಿಯನ್ನರಾಗಿರುವುದರಿಂದ, ಪ್ರದೇಶದ ಜನಾಂಗೀಯ ವಿವಿಧತೆ ಮತ್ತು ಒತ್ತಡಕ್ಕೆ ಧಾರ್ಮಿಕ ಸಂಘರ್ಷದ ಸ್ವರೂಪ ನೀಡುವ ಪ್ರಯತ್ನ ನಡೆದಿದೆ. ಒಂದು ಕಾಲಕ್ಕೆ ಮಣಿಪುರದಲ್ಲಿ ನಾಗಾ ಸಮುದಾಯದೊಂದಿಗೆ ಸಂಬಂಧವಿಟ್ಟುಕೊಂಡ ರಿಶಾಂಗ್ ಕಶಿಂಗ್‌ರನ್ನು ಎಲ್ಲ ಸಮುದಾಯಗಳ ಸರ್ವಮಾನ್ಯ ನಾಯಕರೆಂದು ಪರಿಗಣಿಸಲಾಗಿತ್ತು; ಅಲ್ಲಿ ಈಗ ಜಾತೀಯ ದ್ವೇಷ ಮತ್ತು ವೈಮನಸ್ಸು ಆಳವಾಗುತ್ತಿದೆ.

ಇದನ್ನೂ ಓದಿ: ಕುಸ್ತಿ ಸಂಘದ ವಿಷಯದಲ್ಲಿ ಪ್ರಧಾನಮಂತ್ರಿಗಳ ಅಸಹಾಯಕತೆಯೇನು?

ಅಂದರೆ ಬಹಳ ಸಮಯದಿಂದ ಗುಂಡುಮದ್ದುಗಳು ತಯಾರಾಗುತ್ತಿದ್ದವು ಹಾಗೂ ಈಗ ಕೇವಲ ಒಂದು ಕಿಡಿಯ ಅವಶ್ಯಕತೆ ಇತ್ತು. ಈ ಕಿಡಿ ಹೈಕೋರ್ಟಿನ ಆದೇಶದಿಂದ ಹೊರಬಂದಿತು, ಅದರಲ್ಲಿ ಮೈತ್‌ಯಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಶಿಫಾರಸ್ಸು ಮಾಡಬೇಕೆಂಬ ನಿರ್ದೇಶನವನ್ನು ರಾಜ್ಯ ಸರಕಾರಕ್ಕೆ ನೀಡಲಾಗಿತ್ತು. ವಿಷಯ ಹತ್ತು ವರ್ಷಗಳಷ್ಟು ಹಿಂದಿನದು, ಆದೇಶ ಹೈಕೋರ್ಟಿನದ್ದಾಗಿತ್ತೇ ಹೊರತು ಸರಕಾರದ್ದಲ್ಲ ಹಾಗೂ ಕೇವಲ ರಾಜ್ಯ ಸರಕಾರ ಅದನ್ನು ಮಾಡುವುದರಿಂದ ಮಾತ್ರ ಯಾವ ಸಮುದಾಯಕ್ಕೂ ಪ.ಪಂ ದರ್ಜೆ ನೀಡಲಾಗುವುದಿಲ್ಲ. ಆದರೆ ಜನಾಂಗೀಯ ಆತಂಕದ ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಅದೇಶದಿಂದ ಜನರು ಕೆರಳಿದರು. ಅವರಿಗೆ ಅನಿಸಿದ್ದು; ಒಂದು ವೇಳೆ ಬಹುಸಂಖ್ಯಾತ ಮೈತ್‌ಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ದರ್ಜೆ ಸಿಕ್ಕುಬಿಟ್ಟರೆ ಅವರ ರಾಜಕೀಯ ಮತ್ತು ಆಡಳಿತಾತ್ಮಕ ಅಧಿಕಾರದ ಮೇಲಿನ ಅವರ ಹಿಡಿತ ಸಂಪೂರ್ಣವಾಗಿಬಿಡುತ್ತೆ ಎಂದು.

ಇದರ ನೇರ ಸಂಬಂಧ ಭೂಮಿಯ ಮಾಲೀಕತ್ವದೊಂದಿಗೆ ಇದೆ. ಮಣಿಪುರದ 90% ಭೂಮಿ ಗುಡ್ಡಗಾಡು ಪ್ರದೇಶ, ಅಲ್ಲಿ ಕೇವಲ ಪರಿಶಿಷ್ಟ ಸಮುದಾಯಗಳ ಜನರಷ್ಟೇ ಭೂಮಿಯನ್ನು ಖರೀದಿಸಬಹುದು. ಒಂದು ವೇಳೆ ಮೈತ್‌ಯಿ ಜನರು ಪರಿಶಿಷ್ಟ ಪಂಗಡಕ್ಕೆ ಸೇರಿದ್ದಲ್ಲಿ, ಕುಕಿ ಮತ್ತು ನಾಗಾ ಜನಾಂಗದವರಿಗೆ ತಮ್ಮ ಕೈಯಿಂದ ಭೂಮಿಯ ಒಡೆತನವನ್ನು ಕಳೆದುಕೊಳ್ಳುವ ಅಪಾಯ ಕಾಣಿಸಲಾರಂಭಿಸಿತು.

ಭುಪೇಂದ್ರ ಯಾದವ

ರಾಜ್ಯದ ಕುಕಿ ಮತ್ತು ಅದಕ್ಕಿಂತ ದೊಡ್ಡ ನಾಗಾ ಬುಡಕಟ್ಟು ಸಮುದಾಯವು ಈ ಆದೇಶದ ವಿರುದ್ಧ ಪ್ರತಿಭಟನೆ ಮತ್ತು ಬಂದ್ ಆಯೋಜಿಸಿದವು. ನಾಗಾ ಪ್ರದೇಶಗಲ್ಲಿ ಈ ವಿರೋಧ ಶಾಂತಿಪೂರ್ಣವಾಗಿತ್ತು ಆದರೆ ಕುಕಿ ಪ್ರದೇಶಗಳಲ್ಲಿ ಈ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಪ್ರದರ್ಶನಗಳು ಹಿಂಸಾತ್ಮಕ ಸ್ವರೂಪ ಪಡೆದುಕೊಂಡವು. ಅದರ ಬದಲಿಗೆ ಮೈತ್‌ಯಿ ಜನರು ಇಂಫಾಲ್ ಬೆಟ್ಟಗಾಡಿನಲ್ಲಿ ನೆಲೆಸಿರುವ ಕುಕಿ ಜನರ ಮೇಲೆ ಹಲ್ಲೆ ನಡೆಸಿದರು. ಸರಕಾರ ನೋಡುತ್ತಲೇ ಇತ್ತು, ಹಾಗೂ ಕೆಲವೇ ಗಂಟೆಗಳಲ್ಲಿ ಈ ಬೆಂಕಿ ಹರಡಿಬಿಟ್ಟಿತು. ಮೈತ್‌ಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆದ ಈ ಹಿಂಸಾಚಾರಕ್ಕೆ ಇರುವ ಇನ್ನೊಂದು ಆತಂಕಕಾರಿ ಆಯಾಮವೇನೆಂದರೆ, ಮೈತ್‌ಯಿ ಸಮುದಾಯದ ಜನರೇ ಮೈತ್‌ಯಿ ಕ್ರಿಶ್ಚಿಯನ್ನರ ಚರ್ಚ್ ಮೇಲೆಯೂ ದಾಳಿ ಮಾಡಿದರು, ಅಂದರೆ ಜಾತೀಯ ಹಿಂಸೆ ಈಗ ಧಾರ್ಮಿಕ ಹಿಂಸೆಯ ಬಣ್ಣ ಬಳಿದುಕೊಳ್ಳುತ್ತಿದೆ. ಕೇಂದ್ರೀಯ ಗೃಹಸಚಿವ ಮತ್ತು ಪ್ರಧಾನಮಂತ್ರಿ ಕರ್ನಾಟಕದ ಚುನಾವಣೆಗಳಲ್ಲಿ ವ್ಯಸ್ತರಾಗಿದ್ದಾರೆ. ಮಣಿಪುರದಲ್ಲಿ ಸಮಯಕ್ಕೆ ಸರಿಯಾಗಿ ಸೇನೆ ಮತ್ತು ಇತರ ಭದ್ರತಾ ಪಡೆಗಳನ್ನು ನಿಯೋಜಿಸಲಿಲ್ಲ. ಅದರ ಪರಿಣಾಮವಾಗಿ, ಇಲ್ಲಿಯತನಕ ಅಧಿಕೃತವಾಗಿ 54 ಜನರು ಮೃತಪಟ್ಟಿದ್ದಾರೆಂದು ಘೋಷಿಸಲಾಗಿದೆ. ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ಅನೇಕ ತಲೆಮಾರುಗಳಿಂದ ಬಂದ ಸಂಬಂಧಗಳು ಈಗ ಹಳಸಿಬಿಟ್ಟಿವೆ. ಈ ರಕ್ತದ ಕಲೆಗಳು ಮಾಯವಾಗಲು ಇನ್ನೆಷ್ಟು ಮಳೆಗಾಲ ಕಾಣಬೇಕೋ ನಮಗೆ ಗೊತ್ತಿಲ್ಲ.

ಕಳೆದ ಎರಡು-ಮೂರು ದಿನಗಳಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಚ್ಚೆತ್ತುಕೊಂಡಿವೆ, ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ತರಲಾಗಿದೆ, ಭದ್ರತಾ ಪಡೆಗಳನ್ನು ಕಳುಹಿಸಲಾಗಿದೆ. ಆದರೆ ನಿಜವಾದ ಪ್ರಶ್ನೆ ರಾಜಕೀಯ ಪ್ರಶ್ನೆಯಾಗಿದೆ; ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಬೆಂಕಿಯೊಂದಿಗೆ ಆಟವಾಡುವುದನ್ನು ನಿಲ್ಲಿಸುವುದೇ? ಮಣಿಪುರದಂತಹ ಪ್ರದೇಶಗಳಲ್ಲಿರುವ ಜಟಿಲವಾದ ಮತ್ತು ಸೂಕ್ಷ್ಮವಾದ ಸಾಮಾಜಿಕ ರಚನೆಯೊಂದಿಗೆ ಹಸ್ತಕ್ಷೇಪವನ್ನು ನಿಲ್ಲಿಸುವುದೇ? ರಾಷ್ಟ್ರಹಿತವನ್ನು ಮುಂದಿಟ್ಟು, ತನ್ನ ತಾತ್ಕಾಲಿಕ ರಾಜಕೀಯ ಸ್ವಾರ್ಥವನ್ನು ಬದಿಗಿಡುವುದೇ?

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...