Homeಮುಖಪುಟಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೆಫ್ಟಿನೆಂಟ್ ಗವರ್ನರ್‌ ಮೂಲಕ ದೆಹಲಿ ಸರ್ಕಾರಕ್ಕೆ ಮೂಗುದಾರ ಹಾಕುವ ಕೇಂದ್ರದ ಪ್ರಯತ್ನಗಳಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದ್ದು, ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿದೆ.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಕೋರ್ಟ್ ಹೇಳಿದೆ.

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಹೊಂದಿದ್ದರೂ, ಅವರು ಇಡೀ ದೆಹಲಿ ಸರ್ಕಾರದ ಮೇಲೆ ಅಧಿಕಾರವನ್ನು ಹೊಂದಿದ್ದಾರೆಂದು ಅರ್ಥವಲ್ಲ. ಹಾಗೇನಾದರೂ ಇದ್ದಿದ್ದರೆ ದೆಹಲಿಯಲ್ಲಿ ಪ್ರತ್ಯೇಕ ಚುನಾಯಿತ ಸರ್ಕಾರವನ್ನು ಹೊಂದುವ ಉದ್ದೇಶಕ್ಕೆ ಅರ್ಥವಿಲ್ಲದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

“ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವು ತನ್ನ ಅಧಿಕಾರಿಗಳನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿಲ್ಲದಿದ್ದರೆ, ಶಾಸಕಾಂಗ ಮತ್ತು ಸಾರ್ವಜನಿಕರ ಮೇಲಿನ ಅದರ ಜವಾಬ್ದಾರಿಯನ್ನು ದುರ್ಬಲಗೊಳಿಸಿದಂತಾಗುತ್ತದೆ. ಒಬ್ಬ ಅಧಿಕಾರಿ ಸರ್ಕಾರಕ್ಕೆ ಸ್ಪಂದಿಸದಿದ್ದರೆ, ಸಾಮೂಹಿಕ ಜವಾಬ್ದಾರಿ ದುರ್ಬಲಗೊಳ್ಳುತ್ತದೆ” ಎಂದು ಆತಂಕ ವ್ಯಕ್ತಪಡಿಸಿದೆ.

ದೆಹಲಿಯ ಆಡಳಿತಾರೂಢ ಎಎಪಿ 2013ರಿಂದಲೂ ಇಲ್ಲಿ ಅಧಿಕಾರದಲ್ಲಿದೆ. ಆದರೆ ವಿವಿಧ ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ವರ್ಷಗಳ ಕಾಲ ಅದು ಗುದ್ದಾಟವನ್ನು ನಡೆಸುತ್ತಲೇ ಬರಲಾಗಿದೆ.

“ಇದು ದೆಹಲಿಗೆ ದೊರೆತ ಐತಿಹಾಸಿಕ ಗೆಲುವಾಗಿದೆ. ನಾವು ಎಂಟು ವರ್ಷಗಳಿಂದ ಹೋರಾಡುತ್ತಿದ್ದೇವೆ. ಅವರು (ಕೇಂದ್ರ) ಉದ್ದೇಶಪೂರ್ವಕವಾಗಿ ತಮ್ಮ ನೇಮಕಗಳನ್ನು ಬಳಸಿಕೊಂಡು ನಮ್ಮ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿದರು. ನನ್ನ ಎರಡೂ ಕೈಗಳನ್ನು ಕಟ್ಟಿ ನದಿಗೆ ತಳ್ಳಲಾಯಿತು, ಆದರೆ ದೇವರ ಕೃಪೆಯಿಂದ ನಾನು ಈಜಾಡುತ್ತಿದ್ದೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ಶೀಘ್ರದಲ್ಲಿಯೇ ಭ್ರಷ್ಟ ಅಧಿಕಾರಿಗಳನ್ನು ತೆಗೆದು ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. “ನಮ್ಮ ಕೆಲಸವು ಈಗ 10 ಪಟ್ಟು ವೇಗದಲ್ಲಿ ಪುನರಾರಂಭಗೊಳ್ಳುತ್ತದೆ” ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...