Homeಮುಖಪುಟಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೆಫ್ಟಿನೆಂಟ್ ಗವರ್ನರ್‌ ಮೂಲಕ ದೆಹಲಿ ಸರ್ಕಾರಕ್ಕೆ ಮೂಗುದಾರ ಹಾಕುವ ಕೇಂದ್ರದ ಪ್ರಯತ್ನಗಳಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದ್ದು, ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿದೆ.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಕೋರ್ಟ್ ಹೇಳಿದೆ.

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಹೊಂದಿದ್ದರೂ, ಅವರು ಇಡೀ ದೆಹಲಿ ಸರ್ಕಾರದ ಮೇಲೆ ಅಧಿಕಾರವನ್ನು ಹೊಂದಿದ್ದಾರೆಂದು ಅರ್ಥವಲ್ಲ. ಹಾಗೇನಾದರೂ ಇದ್ದಿದ್ದರೆ ದೆಹಲಿಯಲ್ಲಿ ಪ್ರತ್ಯೇಕ ಚುನಾಯಿತ ಸರ್ಕಾರವನ್ನು ಹೊಂದುವ ಉದ್ದೇಶಕ್ಕೆ ಅರ್ಥವಿಲ್ಲದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

“ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವು ತನ್ನ ಅಧಿಕಾರಿಗಳನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿಲ್ಲದಿದ್ದರೆ, ಶಾಸಕಾಂಗ ಮತ್ತು ಸಾರ್ವಜನಿಕರ ಮೇಲಿನ ಅದರ ಜವಾಬ್ದಾರಿಯನ್ನು ದುರ್ಬಲಗೊಳಿಸಿದಂತಾಗುತ್ತದೆ. ಒಬ್ಬ ಅಧಿಕಾರಿ ಸರ್ಕಾರಕ್ಕೆ ಸ್ಪಂದಿಸದಿದ್ದರೆ, ಸಾಮೂಹಿಕ ಜವಾಬ್ದಾರಿ ದುರ್ಬಲಗೊಳ್ಳುತ್ತದೆ” ಎಂದು ಆತಂಕ ವ್ಯಕ್ತಪಡಿಸಿದೆ.

ದೆಹಲಿಯ ಆಡಳಿತಾರೂಢ ಎಎಪಿ 2013ರಿಂದಲೂ ಇಲ್ಲಿ ಅಧಿಕಾರದಲ್ಲಿದೆ. ಆದರೆ ವಿವಿಧ ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ವರ್ಷಗಳ ಕಾಲ ಅದು ಗುದ್ದಾಟವನ್ನು ನಡೆಸುತ್ತಲೇ ಬರಲಾಗಿದೆ.

“ಇದು ದೆಹಲಿಗೆ ದೊರೆತ ಐತಿಹಾಸಿಕ ಗೆಲುವಾಗಿದೆ. ನಾವು ಎಂಟು ವರ್ಷಗಳಿಂದ ಹೋರಾಡುತ್ತಿದ್ದೇವೆ. ಅವರು (ಕೇಂದ್ರ) ಉದ್ದೇಶಪೂರ್ವಕವಾಗಿ ತಮ್ಮ ನೇಮಕಗಳನ್ನು ಬಳಸಿಕೊಂಡು ನಮ್ಮ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿದರು. ನನ್ನ ಎರಡೂ ಕೈಗಳನ್ನು ಕಟ್ಟಿ ನದಿಗೆ ತಳ್ಳಲಾಯಿತು, ಆದರೆ ದೇವರ ಕೃಪೆಯಿಂದ ನಾನು ಈಜಾಡುತ್ತಿದ್ದೆ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

ಶೀಘ್ರದಲ್ಲಿಯೇ ಭ್ರಷ್ಟ ಅಧಿಕಾರಿಗಳನ್ನು ತೆಗೆದು ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. “ನಮ್ಮ ಕೆಲಸವು ಈಗ 10 ಪಟ್ಟು ವೇಗದಲ್ಲಿ ಪುನರಾರಂಭಗೊಳ್ಳುತ್ತದೆ” ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...