Homeಮುಖಪುಟಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

- Advertisement -
- Advertisement -

ಗುವಾಹಟಿಯ ಸ್ಥಳೀಯ ನ್ಯಾಯಾಲಯದಲ್ಲಿ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ.

ಅಸ್ಸಾಂ ಪಬ್ಲಿಕ್ ವರ್ಕ್ಸ್ ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಮಾಜಿ ಮುಖ್ಯ ನ್ಯಾಯಮೂರ್ತಿ ಗೊಗೊಯ್‌ ಮತ್ತು ರೂಪಾ ಪಬ್ಲಿಕೇಷನ್ಸ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

ಗೊಗೊಯ್ ಅವರ ಆತ್ಮಚರಿತ್ರೆ ‘ಜಸ್ಟೀಸ್ ಫಾರ್ ಎ ಜಡ್ಜ್‌’ ಕೃತಿಯನ್ನು ರೂಪಾ ಪಬ್ಲಿಕೇಷನ್ಸ್‌ ಪ್ರಕಟಿಸಿದ್ದು, “ಪುಸ್ತಕದಲ್ಲಿ ತಪ್ಪುದಾರಿಗೆಳೆಯುವ ಮತ್ತು ಮಾನಹಾನಿಕರ ವಿಷಯಗಳನ್ನು ಹೇಳಲಾಗಿದೆ. 1 ಕೋಟಿ ರೂ. ಪರಿಹಾರ ನೀಡಬೇಕು” ಎಂದು ಅಭಿಜೀತ್‌ ಶರ್ಮಾ ದಾವೆ ಹೂಡಿದ್ದಾರೆ.

ಮಾನಹಾನಿಕರ ಹೇಳಿಕೆಗಳು ಮತ್ತು ಆರೋಪಗಳನ್ನು ಹೊಂದಿರುವ ಯಾವುದೇ ಪುಸ್ತಕವನ್ನು ಇನ್ನು ಮುಂದೆ ಪ್ರಕಟಿಸದಂತೆ, ವಿತರಿಸದಂತೆ ಅಥವಾ ಮಾರಾಟ ಮಾಡದಂತೆ ರಾಜ್ಯಸಭಾ ಸಂಸದರಾಗಿರುವ ಗೊಗೊಯ್ ಮತ್ತು ಈ ಕೃತಿಯ ಪ್ರಕಾಶಕರಿಗೆ ತಡೆಯಾಜ್ಞೆ ನೀಡಬೇಕು ಎಂದು ಶರ್ಮಾ ಮನವಿ ಮಾಡಿದ್ದಾರೆ. ಈ ಪುಸ್ತಕವನ್ನು 2021 ರಲ್ಲಿ ಬಿಡುಗಡೆ ಮಾಡಲಾಯಿತು.

ಗೊಗೊಯ್ ಅವರು 2018 ಮತ್ತು 2019 ರ ನಡುವೆ ಭಾರತದ 46 ನೇ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಫೇಲ್ ಯುದ್ಧ ವಿಮಾನ ಒಪ್ಪಂದ, ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಬಾಬರಿ ಮಸೀದಿ ವಿವಾದದಂತಹ ಹಲವಾರು ಪ್ರಮುಖ ಪ್ರಕರಣಗಳ ತೀರ್ಪುಗಳನ್ನು ನೀಡಿದ ನ್ಯಾಯಮೂರ್ತಿಗಳಲ್ಲಿ ಗೊಗೊಯ್ ಒಬ್ಬರು.

ಗೊಗೊಯ್ ಅವರು ತಮ್ಮ ಕೃತಿಯಲ್ಲಿ “ವೈಯಕ್ತಿಕ ದಾಳಿ” ನಡೆಸುತ್ತಿದ್ದಾರೆ ಎಂದು ಶರ್ಮಾ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ಸ್ಥಳೀಯ ರಾಜಕಾರಣಿಗಳಿಂದ ವಿಶೇಷವಾಗಿ ಅಭಿಜೀತ್ ಶರ್ಮಾ ಅವರಿಂದ ಸ್ಥಳೀಯ ಮಟ್ಟದಲ್ಲಿ ಎಸ್‌ಸಿಎನ್‌ಆರ್ (ಎನ್‌ಆರ್‌ಸಿಯ ರಾಜ್ಯ ಸಮನ್ವಯಕಾರ) ಮೇಲೆ ವೈಯಕ್ತಿಕ ದಾಳಿ ಹಾಗೂ ನ್ಯಾಯಾಧೀಶರು, ಮುಖ್ಯವಾಗಿ ನನ್ನ ಮೇಲೆ ಪರೋಕ್ಷ ದಾಳಿಗಳು ನಡೆದಿವೆ. ಹಜೇಲಾ (ಆಗಿನ ಎಸ್‌ಸಿಎನ್‌ಆರ್ ಪ್ರತೀಕ್ ಹಜೇಲಾ) ಅವರನ್ನು ಕಿರುಕುಳ ಮತ್ತು ಉದ್ದೇಶಿತ ತೊಂದರೆಗಳಿಂದ ರಕ್ಷಿಸಲು ನಾವು (ಪೀಠ) ಆದೇಶ ಹೊರಡಿಸಬೇಕು ಎಂಬ ಅಭಿಪ್ರಾಯಕ್ಕೆ ಬಂದಿದ್ದೆವು” ಎಂಬುದಾಗಿ ರಂಜನ್ ಗೊಗೊಯ್ ಅವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿರಿ: ಎಲ್ಲ ವಿಷಯಗಳಲ್ಲಿ ಕೇಂದ್ರ ಮೂಗು ತೂರಿಸುವಂತಿಲ್ಲ; ದೆಹಲಿ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

“ಐಎಎಸ್ ಅಧಿಕಾರಿಯಾಗಿರುವ ಹಜೇಲಾ ಅವರಿಗೆ ಭದ್ರತಾ ಬೆದರಿಕೆ ಇದೆ ಎಂದು ಅಥವಾ ಹಜೇಲಾ ಅವರನ್ನು ಮಧ್ಯಪ್ರದೇಶಕ್ಕೆ ವರ್ಗಾವಣೆ ಮಾಡುವಂತೆ ಗೊಗೊಯ್ ಅವರ ಮೇಲೆ ತಾನು ಒತ್ತಡ ಸೃಷ್ಟಿಸಿದ್ದೆ ಎಂಬುದಕ್ಕೆ ಎಲ್ಲಿಯೂ ಉಲ್ಲೇಖ ಇಲ್ಲ. ಗೊಗೊಯ್ ಅವರು ಸಿಜೆಐ ಆಗಿ ಸೇವೆ ಸಲ್ಲಿಸುವಾಗ ಎಂದಿಗೂ ಯಾವುದೇ ವೈಯಕ್ತಿಕ ದಾಳಿ ನಡೆಸಿರಲಿಲ್ಲ” ಎಂದು ಶರ್ಮಾ ತಿಳಿಸಿದ್ದಾರೆ.

“ಹಜೇಲಾ ಅವರ ತವರು ರಾಜ್ಯ ಮಧ್ಯಪ್ರದೇಶಕ್ಕೆ ಇಂಟರ್ ಕೇಡರ್ ವರ್ಗಾವಣೆಯ ನಿಯೋಜನೆಗೆ 2019ರ ಅಕ್ಟೋಬರ್ 18ರಂದು ಪೀಠ ಆದೇಶ ಹೊರಡಿಸಿತ್ತು. ಹಜೇಲಾ ಮತ್ತು ಇತರೆ ಎನ್‌ಆರ್‌ಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತಹ, ಭ್ರಷ್ಟಾಚಾರ ಆರೋಪಗಳು ಮತ್ತು ಸಿಬಿಐ ತನಿಖೆ ಆದೇಶ ಬೆದರಿಕೆಗಳಂತಹ ಪೂರಕ ಘಟನೆಗಳು ನಡೆದವು. ಜತೆಗೆ ಮಾಧ್ಯಮಗಳಿಗೆ ಸಾಕಷ್ಟು ತಪ್ಪು ಮಾಹಿತಿಗಳನ್ನು ರವಾನಿಸುವ ಮೂಲಕ ವ್ಯಾಪಕ ಪ್ರಚಾರ ನೀಡಲಾಯಿತು. ಹೀಗಾಗಿ ಸಂವಿಧಾನದ 142ನೇ ವಿಧಿಯನ್ನು ಬಳಸಿ ಹಜೇಲಾ ಅವರನ್ನು ಅಂತರ್ ಕೇಡರ್ ವರ್ಗಾವಣೆ ಮಾಡುವ ಅಹಸಜ ಆದೇಶವನ್ನು ಹೊರಡಿಸುವಂತೆ ನ್ಯಾಯಪೀಠಕ್ಕೆ ನಾನು ಮನವೊಲಿಸಬೇಕಾಗಿತ್ತು” ಎಂದು ಗೊಗೊಯ್ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...