Homeಮುಖಪುಟ2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

- Advertisement -
- Advertisement -

2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಪಕ್ಷದ 16 ಶಾಸಕರ ರಾಜೀನಾಮೆ ಕೊಡಿಸಿ, ಆಪರೇಷನ್ ಕಮಲ ನಡೆಸಿತ್ತು. ಆನಂತರ ನಡೆದಿದ್ದ ಉಪ ಚುನಾವಣೆಯಲ್ಲಿ 14 ಕಡೆ ಬಿಜೆಪಿ ಗೆಲುವು ಕಂಡಿತ್ತು. 2023ರ ಚುನಾವಣೆಯಲ್ಲಿ ಆ 17 ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ..

1. ಗೋಕಾಕ್: ರಮೇಶ್ ಜಾರಕಿಹೊಳಿ – ಗೆಲುವು

ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದರು. ಆನಂತರ ನಡೆದ ಉಪಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಮಹಾಂತೇಶ್ ಕಡಾಡಿ, ಜೆಡಿಎಸ್‌ನಿಂದ ಚನ್ನಬಸಪ್ಪ ಬಾಳಪ್ಪ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ರಮೇಶ್ ಜಾರಕಿಹೊಳಿ ಗೆಲುವು ಕಂಡರು.

2. ಅಥಣಿ: ಮಹೇಶ್ ಕುಮಟಳ್ಳಿ – ಸೋಲು

2018ರಲ್ಲಿ ಬಿಜೆಪಿಯ ಲಕ್ಷ್ಮಣ ಸವದಿ ವಿರುದ್ಧ ಗೆದ್ದಿದ್ದ ಕಾಂಗ್ರೆಸ್ ಪಕ್ಷದ ಮಹೇಶ್ ಕುಮಟಳ್ಳಿ ಸಹ ರಮೇಶ್ ಜಾರಕಿಹೊಳಿ ಜೊತೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. 2019ರ ಉಪ ಚುನಾವಣೆಯಲ್ಲಿ ಅವರು ಗೆಲುವು ಸಾಧಿಸಿದ್ದರು. ಈಗ ಅವರ ವಿರುದ್ಧ ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಗೆಲುವು ಸಾಧಿಸಿದ್ದಾರೆ.

3. ಕಾಗವಾಡ: ಶ್ರೀಮಂತ ಪಾಟೀಲ್ – ಸೋಲು

ಬಿಜೆಪಿ ಸೇರಿದ ಶ್ರೀಮಂತ ಪಾಟೀಲ್ ಸಹ ಅನರ್ಹಗೊಂಡು ಮುಂಬೈ ಸೇರಿದ್ದರು. ಆನಂತರ ಉಪ ಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಭರಮಗೌಡ ಆಲಗೌಡ ಕಾಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

4. ಯಲ್ಲಾಪುರ: ಶಿವರಾಮ ಹೆಬ್ಬಾರ – ಗೆಲುವು

ಉತ್ತರ ಕನ್ನಡದ ಯಲ್ಲಾಪುರದ ಕಾಂಗ್ರೆಸ್ ಶಾಸಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದ್ದರು. ಅಲ್ಲದೆ ಉಪ ಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಗೆದ್ದು ಶಾಸಕರಾಗಿದ್ದರು. ಅವರ ವಿರುದ್ಧ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಪಾಟೀಲ್ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ನಾಗೇಶ ನಾಯ್ಕ ಕಣಕ್ಕಿಳಿದಿದ್ದರು. ಶಿವರಾಮ್ ಹೆಬ್ಬಾರ್ ಮತ್ತೆ ಗೆದ್ದಿದ್ದಾರೆ.

5. ವಿಜಯನಗರ: ಸಿದ್ಧಾರ್ಥ ಸಿಂಗ್ – ಸೋಲು

ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆದ್ದಿದ್ದರು. ಈ ಬಾರಿ ಅವರು ಸ್ಪರ್ಧಿಸದೆ ಅವರ ಮಗ ಸಿದ್ಧಾರ್ಥ ಸಿಂಗ್ ರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಎಚ್.ಆರ್ ಗವಿಯಪ್ಪ ಗೆಲುವು ಸಾಧಿಸಿದರು.

6. ಹಿರೇಕೆರೂರು: ಬಿ.ಸಿ ಪಾಟೀಲ್ – ಸೋಲು

ಕಾಂಗ್ರೆಸ್‌ನಿಂದ ಗೆದ್ದಿದ್ದ ಬಿ.ಸಿ ಪಾಟೀಲ್ ಆಪರೇಷನ್ ಕಮಲದ ಕಾರಣಕ್ಕೆ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಆಗ ಬಿಜೆಪಿಯಲ್ಲಿ ಯು.ಬಿ ಬಣಕಾರ್ ಕಾಂಗ್ರೆಸ್ ಸೇರಿ ಗೆಲುವು ಸಾಧಿಸಿದರು.

7. ಚಿಕ್ಕಬಳ್ಳಾಪುರ: ಡಾ.ಕೆ ಸುಧಾಕರ್ – ಸೋಲು

ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಬಿಜೆಪಿ ಸೇರಿ ಸಚಿವರಾದರು. ಈಗ ಅವರೆದುರು ಕಾಂಗ್ರೆಸ್ ಪಕ್ಷದ ಬಲಿಜ ಸಮುದಾಯದ ಪ್ರದೀಪ್ ಈಶ್ವರ್‌ರವರನ್ನು ಕಣಕ್ಕಿಳಿಸಿದೆ. ಜೆಡಿಎಸ್‌ನಿಂದ ಕೆ.ಪಿ ಬಚ್ಚೇಗೌಡ ಕಣದಲ್ಲಿದ್ದರು. ಪ್ರದೀಪ್ ಈಶ್ವರ್ ಅಚ್ಚರಿಯ ರೀತಿಯಲ್ಲಿ ಡಾ.ಕೆ ಸುಧಾಕರ್‌ರನ್ನು ಸೋಲಿಸಿದ್ದಾರೆ.

8. ಕೆ.ಆರ್ ಪುರಂ: ಭೈರತಿ ಬಸವರಾಜು – ಗೆಲುವು

ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಭೈರತಿ ಬಸವರಾಜು ಬಿಜೆಪಿ ಸೇರಿದ್ದಾರೆ. ಅವರ ಎದುರು ಡಿ.ಕೆ ಮೋಹನ್ ಎಂಬುವವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಆದರೆ ಭೈರತಿ ಬಸವರಾಜು ಗೆಲುವು ಸಾಧಿಸಿದ್ದಾರೆ.

9. ಯಶವಂತಪುರ: ಎಸ್‌.ಟಿ ಸೋಮಶೇಖರ್ – ಗೆಲುವು

ಕಾಂಗ್ರೆಸ್ ತೊರೆದಿದ್ದ ಎಸ್‌.ಟಿ ಸೋಮಶೇಖರ್ ಈಗ ಬಿಜೆಪಿ ಹುರಿಯಾಳು ಆಗಿದ್ದಾರೆ. ಅವರ ವಿರುದ್ಧ ಜೆಡಿಎಸ್‌ನ ಜವರಾಯೀಗೌಡ ಸ್ಪರ್ಧಿಸಿದ್ದರು. ಎಸ್.ಬಾಲರಾಜಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೂ ಎಸ್.ಟಿ ಸೋಮಶೇಖರ್ ಗೆಲುವು ಸಾಧಿಸಿದ್ದಾರೆ.

10. ರಾಜರಾಜೇಶ್ವರಿ ನಗರ: ಮುನಿರತ್ನ ನಾಯ್ಡು – ಗೆಲುವು

ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮುನಿರತ್ನ ನಾಯ್ಡು ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿದ್ದರು. ಈಗ ಮತ್ತೆ ಅವರೇ ಬಿಜೆಪಿ ಅಭ್ಯರ್ಥಿ. ಕುಸುಮ ಹನುಮಂತರಾಯಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.

11. ಮಹಾಲಕ್ಷ್ಮಿ ಲೇಔಟ್: ಕೆ.ಗೋಪಾಲಯ್ಯ – ಸೋಲು

ಜೆಡಿಎಸ್‌ನಿಂದ ಗೆಲುವು ಕಂಡಿದ್ದ ಗೋಪಾಲಯ್ಯನವರು ಬಿಜೆಪಿ ಸೇರಿ ಸಚಿವರಾದರು. ಅವರೀಗ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಅವರ ಎದುರು ಕೇಶವಮೂರ್ತಿ ಕಾಂಗ್ರೆಸ್ ಎದುರಾಳಿಯಾದರೆ, ರಾಜಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಆದರೂ ಗೋಪಾಲಯ್ಯ ಗೆಲುವು ಸಾಧಿಸಿದ್ದಾರೆ.

12. ಹೊಸಕೋಟೆ: ಎಂಟಿಬಿ ನಾಗರಾಜ್ – ಸೋಲು

ಎಂಟಿಬಿ ನಾಗರಾಜ್ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡರ ಎದುರು ಸೋಲು ಕಂಡಿದ್ದರು. ಈ ಬಾರಿ ಶರತ್ ಬಚ್ಚೇಗೌಡರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

13. ಕೆ.ಆರ್ ಪೇಟೆ: ಕೆ.ಸಿ ನಾರಾಯಣಗೌಡ – ಸೋಲು

ಕೆ.ಆರ್ ಪೇಟೆಯಲ್ಲಿ ಜೆಡಿಎಸ್‌ನಿಂದ ಗೆಲುವು ಕಂಡಿದ್ದ ನಾರಾಯಣಗೌಡ ಬಿಜೆಪಿ ಸೇರಿ ಉಪಚುನಾವಣೆ ಗೆದ್ದರು. ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದರು. ಈಗ ಅವರ ಎದುರು ಬಿ.ಎಲ್ ದೇವರಾಜು ಕಾಂಗ್ರೆಸ್‌ನಿಂದ ಮತ್ತು ಹೆಚ್.ಟಿ ಮಂಜುನಾಥ್ ಜೆಡಿಎಸ್ ಅಭ್ಯರ್ಥಿಗಳಾಗಿದ್ದರು. ಹೆಚ್ ಟಿ ಮಂಜುನಾಥ್ ಗೆಲುವು ಕಂಡರು.

14. ಹುಣಸೂರು: ಎಚ್ ವಿಶ್ವನಾಥ್ – ಜೆಡಿಎಸ್ ಗೆಲುವು

ಜೆಡಿಎಸ್ ನಿಂದ ಗೆಲುವು ಕಂಡಿದ್ದ ಎಚ್ ವಿಶ್ವನಾಥ್ ರವರು ಬಿಜೆಪಿ ಸೇರಿದರೂ ಉಪ ಚುನಾವಣೆಯಲ್ಲಿ ಸೋಲು ಕಂಡರು. ಆನಂತರ ಅವರನ್ನು ಎಂಎಲ್‌ಸಿ ಮಾಡಲಾಯಿತು. ಕೊನೆಗೆ ಅವರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಆದರೆ ಅವರು ಸ್ಪರ್ಧಿಸಿಲ್ಲ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಎಚ್.ಪಿ ಮಂಜುನಾಥ್, ಜೆಡಿಎಸ್‌ನಿಂದ ಜಿ.ಟಿ ದೇವೇಗೌಡರ ಮಗ ಹರೀಶ್ ಗೌಡ ಮತ್ತು ಬಿಜೆಪಿಯಿಂದ ದೇವರಹಳ್ಳಿ ಸೋಮಶೇಖರ್ ಸ್ಪರ್ಧಿಸಿದ್ದರು. ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಗೆಲುವು ಕಂಡರು.

15. ಮಸ್ಕಿ: ಪ್ರತಾಪ್ ಗೌಡ ಪಾಟೀಲ – ಸೋಲು

ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದ ಪ್ರತಾಪಗೌಡ ಪಾಟೀಲ್ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಸನಗೌಡ ತುರ್ವಿಹಾಳ್ ಎದುರು ಸೋಲು ಕಂಡಿದ್ದರು. ಈ ಬಾರಿಯೂ ಬಸನಗೌಡ ತುರ್ವಿಹಾಳ್ ಗೆಲುವು ಕಂಡಿದ್ದಾರೆ.

16. ರಾಣೇಬೆನ್ನೂರು: ಆರ್ ಶಂಕರ್ – ಸೋಲು

ಪಕ್ಷೇತರ ಅಭ್ಯರ್ಥಿಯಾದ ಆರ್. ಶಂಕರ್ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರು. ಆದರೆ ಆಪರೇಷನ್‌ಗೆ ಒಳಗಾದರು. ಉಪ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಇದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರಕಾಶ್ ಕೋಳಿವಾಡ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ – 9 ಕ್ಷೇತ್ರಗಳಲ್ಲಿ ಗೆಲುವು – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...