Homeಮುಖಪುಟ2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

- Advertisement -
- Advertisement -

2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಪಕ್ಷದ 16 ಶಾಸಕರ ರಾಜೀನಾಮೆ ಕೊಡಿಸಿ, ಆಪರೇಷನ್ ಕಮಲ ನಡೆಸಿತ್ತು. ಆನಂತರ ನಡೆದಿದ್ದ ಉಪ ಚುನಾವಣೆಯಲ್ಲಿ 14 ಕಡೆ ಬಿಜೆಪಿ ಗೆಲುವು ಕಂಡಿತ್ತು. 2023ರ ಚುನಾವಣೆಯಲ್ಲಿ ಆ 17 ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ..

1. ಗೋಕಾಕ್: ರಮೇಶ್ ಜಾರಕಿಹೊಳಿ – ಗೆಲುವು

ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದರು. ಆನಂತರ ನಡೆದ ಉಪಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಮಹಾಂತೇಶ್ ಕಡಾಡಿ, ಜೆಡಿಎಸ್‌ನಿಂದ ಚನ್ನಬಸಪ್ಪ ಬಾಳಪ್ಪ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ರಮೇಶ್ ಜಾರಕಿಹೊಳಿ ಗೆಲುವು ಕಂಡರು.

2. ಅಥಣಿ: ಮಹೇಶ್ ಕುಮಟಳ್ಳಿ – ಸೋಲು

2018ರಲ್ಲಿ ಬಿಜೆಪಿಯ ಲಕ್ಷ್ಮಣ ಸವದಿ ವಿರುದ್ಧ ಗೆದ್ದಿದ್ದ ಕಾಂಗ್ರೆಸ್ ಪಕ್ಷದ ಮಹೇಶ್ ಕುಮಟಳ್ಳಿ ಸಹ ರಮೇಶ್ ಜಾರಕಿಹೊಳಿ ಜೊತೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. 2019ರ ಉಪ ಚುನಾವಣೆಯಲ್ಲಿ ಅವರು ಗೆಲುವು ಸಾಧಿಸಿದ್ದರು. ಈಗ ಅವರ ವಿರುದ್ಧ ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಗೆಲುವು ಸಾಧಿಸಿದ್ದಾರೆ.

3. ಕಾಗವಾಡ: ಶ್ರೀಮಂತ ಪಾಟೀಲ್ – ಸೋಲು

ಬಿಜೆಪಿ ಸೇರಿದ ಶ್ರೀಮಂತ ಪಾಟೀಲ್ ಸಹ ಅನರ್ಹಗೊಂಡು ಮುಂಬೈ ಸೇರಿದ್ದರು. ಆನಂತರ ಉಪ ಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಭರಮಗೌಡ ಆಲಗೌಡ ಕಾಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

4. ಯಲ್ಲಾಪುರ: ಶಿವರಾಮ ಹೆಬ್ಬಾರ – ಗೆಲುವು

ಉತ್ತರ ಕನ್ನಡದ ಯಲ್ಲಾಪುರದ ಕಾಂಗ್ರೆಸ್ ಶಾಸಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದ್ದರು. ಅಲ್ಲದೆ ಉಪ ಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಗೆದ್ದು ಶಾಸಕರಾಗಿದ್ದರು. ಅವರ ವಿರುದ್ಧ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಪಾಟೀಲ್ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ನಾಗೇಶ ನಾಯ್ಕ ಕಣಕ್ಕಿಳಿದಿದ್ದರು. ಶಿವರಾಮ್ ಹೆಬ್ಬಾರ್ ಮತ್ತೆ ಗೆದ್ದಿದ್ದಾರೆ.

5. ವಿಜಯನಗರ: ಸಿದ್ಧಾರ್ಥ ಸಿಂಗ್ – ಸೋಲು

ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆದ್ದಿದ್ದರು. ಈ ಬಾರಿ ಅವರು ಸ್ಪರ್ಧಿಸದೆ ಅವರ ಮಗ ಸಿದ್ಧಾರ್ಥ ಸಿಂಗ್ ರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಎಚ್.ಆರ್ ಗವಿಯಪ್ಪ ಗೆಲುವು ಸಾಧಿಸಿದರು.

6. ಹಿರೇಕೆರೂರು: ಬಿ.ಸಿ ಪಾಟೀಲ್ – ಸೋಲು

ಕಾಂಗ್ರೆಸ್‌ನಿಂದ ಗೆದ್ದಿದ್ದ ಬಿ.ಸಿ ಪಾಟೀಲ್ ಆಪರೇಷನ್ ಕಮಲದ ಕಾರಣಕ್ಕೆ ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಆಗ ಬಿಜೆಪಿಯಲ್ಲಿ ಯು.ಬಿ ಬಣಕಾರ್ ಕಾಂಗ್ರೆಸ್ ಸೇರಿ ಗೆಲುವು ಸಾಧಿಸಿದರು.

7. ಚಿಕ್ಕಬಳ್ಳಾಪುರ: ಡಾ.ಕೆ ಸುಧಾಕರ್ – ಸೋಲು

ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಬಿಜೆಪಿ ಸೇರಿ ಸಚಿವರಾದರು. ಈಗ ಅವರೆದುರು ಕಾಂಗ್ರೆಸ್ ಪಕ್ಷದ ಬಲಿಜ ಸಮುದಾಯದ ಪ್ರದೀಪ್ ಈಶ್ವರ್‌ರವರನ್ನು ಕಣಕ್ಕಿಳಿಸಿದೆ. ಜೆಡಿಎಸ್‌ನಿಂದ ಕೆ.ಪಿ ಬಚ್ಚೇಗೌಡ ಕಣದಲ್ಲಿದ್ದರು. ಪ್ರದೀಪ್ ಈಶ್ವರ್ ಅಚ್ಚರಿಯ ರೀತಿಯಲ್ಲಿ ಡಾ.ಕೆ ಸುಧಾಕರ್‌ರನ್ನು ಸೋಲಿಸಿದ್ದಾರೆ.

8. ಕೆ.ಆರ್ ಪುರಂ: ಭೈರತಿ ಬಸವರಾಜು – ಗೆಲುವು

ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಭೈರತಿ ಬಸವರಾಜು ಬಿಜೆಪಿ ಸೇರಿದ್ದಾರೆ. ಅವರ ಎದುರು ಡಿ.ಕೆ ಮೋಹನ್ ಎಂಬುವವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಆದರೆ ಭೈರತಿ ಬಸವರಾಜು ಗೆಲುವು ಸಾಧಿಸಿದ್ದಾರೆ.

9. ಯಶವಂತಪುರ: ಎಸ್‌.ಟಿ ಸೋಮಶೇಖರ್ – ಗೆಲುವು

ಕಾಂಗ್ರೆಸ್ ತೊರೆದಿದ್ದ ಎಸ್‌.ಟಿ ಸೋಮಶೇಖರ್ ಈಗ ಬಿಜೆಪಿ ಹುರಿಯಾಳು ಆಗಿದ್ದಾರೆ. ಅವರ ವಿರುದ್ಧ ಜೆಡಿಎಸ್‌ನ ಜವರಾಯೀಗೌಡ ಸ್ಪರ್ಧಿಸಿದ್ದರು. ಎಸ್.ಬಾಲರಾಜಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೂ ಎಸ್.ಟಿ ಸೋಮಶೇಖರ್ ಗೆಲುವು ಸಾಧಿಸಿದ್ದಾರೆ.

10. ರಾಜರಾಜೇಶ್ವರಿ ನಗರ: ಮುನಿರತ್ನ ನಾಯ್ಡು – ಗೆಲುವು

ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮುನಿರತ್ನ ನಾಯ್ಡು ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿದ್ದರು. ಈಗ ಮತ್ತೆ ಅವರೇ ಬಿಜೆಪಿ ಅಭ್ಯರ್ಥಿ. ಕುಸುಮ ಹನುಮಂತರಾಯಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.

11. ಮಹಾಲಕ್ಷ್ಮಿ ಲೇಔಟ್: ಕೆ.ಗೋಪಾಲಯ್ಯ – ಸೋಲು

ಜೆಡಿಎಸ್‌ನಿಂದ ಗೆಲುವು ಕಂಡಿದ್ದ ಗೋಪಾಲಯ್ಯನವರು ಬಿಜೆಪಿ ಸೇರಿ ಸಚಿವರಾದರು. ಅವರೀಗ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಅವರ ಎದುರು ಕೇಶವಮೂರ್ತಿ ಕಾಂಗ್ರೆಸ್ ಎದುರಾಳಿಯಾದರೆ, ರಾಜಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಆದರೂ ಗೋಪಾಲಯ್ಯ ಗೆಲುವು ಸಾಧಿಸಿದ್ದಾರೆ.

12. ಹೊಸಕೋಟೆ: ಎಂಟಿಬಿ ನಾಗರಾಜ್ – ಸೋಲು

ಎಂಟಿಬಿ ನಾಗರಾಜ್ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡರ ಎದುರು ಸೋಲು ಕಂಡಿದ್ದರು. ಈ ಬಾರಿ ಶರತ್ ಬಚ್ಚೇಗೌಡರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

13. ಕೆ.ಆರ್ ಪೇಟೆ: ಕೆ.ಸಿ ನಾರಾಯಣಗೌಡ – ಸೋಲು

ಕೆ.ಆರ್ ಪೇಟೆಯಲ್ಲಿ ಜೆಡಿಎಸ್‌ನಿಂದ ಗೆಲುವು ಕಂಡಿದ್ದ ನಾರಾಯಣಗೌಡ ಬಿಜೆಪಿ ಸೇರಿ ಉಪಚುನಾವಣೆ ಗೆದ್ದರು. ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದರು. ಈಗ ಅವರ ಎದುರು ಬಿ.ಎಲ್ ದೇವರಾಜು ಕಾಂಗ್ರೆಸ್‌ನಿಂದ ಮತ್ತು ಹೆಚ್.ಟಿ ಮಂಜುನಾಥ್ ಜೆಡಿಎಸ್ ಅಭ್ಯರ್ಥಿಗಳಾಗಿದ್ದರು. ಹೆಚ್ ಟಿ ಮಂಜುನಾಥ್ ಗೆಲುವು ಕಂಡರು.

14. ಹುಣಸೂರು: ಎಚ್ ವಿಶ್ವನಾಥ್ – ಜೆಡಿಎಸ್ ಗೆಲುವು

ಜೆಡಿಎಸ್ ನಿಂದ ಗೆಲುವು ಕಂಡಿದ್ದ ಎಚ್ ವಿಶ್ವನಾಥ್ ರವರು ಬಿಜೆಪಿ ಸೇರಿದರೂ ಉಪ ಚುನಾವಣೆಯಲ್ಲಿ ಸೋಲು ಕಂಡರು. ಆನಂತರ ಅವರನ್ನು ಎಂಎಲ್‌ಸಿ ಮಾಡಲಾಯಿತು. ಕೊನೆಗೆ ಅವರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಆದರೆ ಅವರು ಸ್ಪರ್ಧಿಸಿಲ್ಲ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಎಚ್.ಪಿ ಮಂಜುನಾಥ್, ಜೆಡಿಎಸ್‌ನಿಂದ ಜಿ.ಟಿ ದೇವೇಗೌಡರ ಮಗ ಹರೀಶ್ ಗೌಡ ಮತ್ತು ಬಿಜೆಪಿಯಿಂದ ದೇವರಹಳ್ಳಿ ಸೋಮಶೇಖರ್ ಸ್ಪರ್ಧಿಸಿದ್ದರು. ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಗೆಲುವು ಕಂಡರು.

15. ಮಸ್ಕಿ: ಪ್ರತಾಪ್ ಗೌಡ ಪಾಟೀಲ – ಸೋಲು

ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದ ಪ್ರತಾಪಗೌಡ ಪಾಟೀಲ್ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಸನಗೌಡ ತುರ್ವಿಹಾಳ್ ಎದುರು ಸೋಲು ಕಂಡಿದ್ದರು. ಈ ಬಾರಿಯೂ ಬಸನಗೌಡ ತುರ್ವಿಹಾಳ್ ಗೆಲುವು ಕಂಡಿದ್ದಾರೆ.

16. ರಾಣೇಬೆನ್ನೂರು: ಆರ್ ಶಂಕರ್ – ಸೋಲು

ಪಕ್ಷೇತರ ಅಭ್ಯರ್ಥಿಯಾದ ಆರ್. ಶಂಕರ್ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರು. ಆದರೆ ಆಪರೇಷನ್‌ಗೆ ಒಳಗಾದರು. ಉಪ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಇದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರಕಾಶ್ ಕೋಳಿವಾಡ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಿಂದ 15 ಮುಸ್ಲಿಮರಿಗೆ ಟಿಕೆಟ್ – 9 ಕ್ಷೇತ್ರಗಳಲ್ಲಿ ಗೆಲುವು – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...