Homeಮುಖಪುಟಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ ಸೇರಿ, ಹಿರಿಯೂರು, ಹೊಸದುರ್ಗ ಸಾಮಾನ್ಯ ಕ್ಷೇತ್ರಗಳಿದ್ದರೆ, ಚಳ್ಳಕೆರೆ, ಮೊಳಕಾಲ್ಮೂರು ಪ.ಪಂ ಮೀಸಲು ಕ್ಷೇತ್ರ ಮತ್ತು ಹೊಳಲ್ಕೆರೆ ಪ.ಜಾ ಮೀಸಲು ಕ್ಷೇತ್ರಗಳಿವೆ. ಕಳೆದ ಬಾರಿ ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಚಳ್ಳಕೆರೆ ಹೊರತುಪಡಿಸಿ ಉಳಿದ 5 ಕಡೆ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಫಲಿತಾಂಶ ಉಲ್ಟಾ ಆಗಿದ್ದು 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ 1 ಕಡೆ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಸಂಪೂರ್ಣ ವಿವರ ಈ ರೀತಿಯಿದೆ.

ಚಿತ್ರದುರ್ಗ (ಸಾಮಾನ್ಯ ಕ್ಷೇತ್ರ) – ಕಾಂಗ್ರೆಸ್‌ನ ವೀರೇಂದ್ರ ಪಪ್ಪಿಗೆ ಗೆಲುವು

ಆರಂಭದಲ್ಲಿ ಚಿತ್ರದುರ್ಗ ಕಾಂಗ್ರೆಸ್ ನೆಲೆಯಾಗಿತ್ತು. 1994 ಮತ್ತು 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಜಿ.ಎಚ್ ತಿಪ್ಪಾರೆಡ್ಡಿಯವರು 2004ರಲ್ಲಿ ಕಾಂಗ್ರೆಸ್ ಸೇರಿ ಹ್ಯಾಟ್ರಿಕ್ ಸಾಧಿಸಿದ್ದರು. ಆದರೆ 2008ರಲ್ಲಿ ಜೆಡಿಎಸ್ ಅಭ್ಯರ್ಥಿ ಬಸವರಾಜನ್ ಎದುರು ಸೋಲು ಕಂಡರು. ನಂತರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಅಭ್ಯರ್ಥಿಯಾಗಿ 2013 ಮತ್ತು 2018ರಲ್ಲಿ ಜಯಗಳಿಸಿ, 5ನೇ ಬಾರಿಗೆ ಶಾಸಕರಾಗಿರುವ ಅವರು ಚಿತ್ರದುರ್ಗವನ್ನು ಬಿಜೆಪಿಯ ಭದ್ರಕೋಟೆಯಾಗಿಸಿದ್ದರು.

ಕಾಂಗ್ರೆಸ್: ಕೆ.ಸಿ ವಿರೇಂದ್ರ ಪಪ್ಪಿ – ಗೆಲುವು

ಬಿಜೆಪಿ: ಜಿ.ಎಚ್ ತಿಪ್ಪಾರೆಡ್ಡಿ – ಸೋಲು

ಜೆಡಿಎಸ್: ರಘು ಆಚಾರ್ – ಸೋಲು

ಪಕ್ಷೇತರ: ಸೌಭಾಗ್ಯ ಬಸವರಾಜನ್‌ – ಸೋಲು

ಮೊಳಕಾಲ್ಮೂರು (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಎನ್.ವೈ ಗೋಪಾಲಕೃಷ್ಣ ಗೆಲುವು

2018ರ ಚುನಾವಣೆಯಲ್ಲಿ ಬಾದಾಮಿ ಜೊತೆಗೆ ಮೊಳಕಾಲ್ಮೂರಿನಲ್ಲಿಯೂ ಬಿ.ಶ್ರೀರಾಮುಲು ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು.

ಕಾಂಗ್ರೆಸ್: ಎನ್.ವೈ ಗೋಪಾಲಕೃಷ್ಣ – ಗೆಲುವು

ಬಿಜೆಪಿ: ಎಸ್.ತಿಪ್ಪೇಸ್ವಾಮಿ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹಿರಿಯೂರು (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಡಿ.ಸುಧಾಕರ್ ಗೆಲುವು

2008ರಲ್ಲಿ ಸಾಮಾನ್ಯ ವಿಧಾನಸಭಾ ಕ್ಷೇತ್ರವಾದಾಗ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಜೈನ ಸಮುದಾಯದ ಡಿ.ಸುಧಾಕರ್ ಹಿರಿಯೂರಿಗೆ ಬಂದು ಗೆಲುವು ಸಾಧಿಸಿದರು. ಅವರು 2013ರಲ್ಲಿಯೂ ಸಹ ಯಾದವ ಸಮುದಾಯದ ಜೆಡಿಎಸ್‌ನ ಕೃಷ್ಣಪ್ಪನವರನ್ನು ಸೋಲಿಸಿ ಶಾಸಕರಾದರು. ಆದರೆ 2018ರ ವೇಳೆಗೆ ಕೃಷ್ಣಪ್ಪನವರ ಪುತ್ರಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಸೇರಿ ಜಯ ಕಂಡರು.

ಕಾಂಗ್ರೆಸ್: ಡಿ.ಸುಧಾಕರ್ – ಗೆಲುವು

ಬಿಜೆಪಿ: ಕೆ.ಪೂರ್ಣಿಮಾ ಶ್ರೀನಿವಾಸ್ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹೊಸದುರ್ಗ (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಬಿ.ಜಿ.ಗೋವಿಂದಪ್ಪ ಗೆಲುವು

ಬಿ.ಜಿ.ಗೋವಿಂದಪ್ಪನವರು ಆರಂಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಆನಂತರ ಕಾಂಗ್ರೆಸ್ ಸೇರಿ ಒಟ್ಟು ಮೂರು ಬಾರಿ ಶಾಸಕರಾಗಿದ್ದಾರೆ. ಇನ್ನು ಈ ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬೋವಿ ಸಮುದಾಯದ ಗೂಳಿಹಟ್ಟಿ ಶೇಖರ್‌ರವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದ ಅವರು, 2018ರಲ್ಲಿ ಬಿಜೆಪಿ ಸೇರಿ ಶಾಸಕರಾಗಿದ್ದರು.

ಕಾಂಗ್ರೆಸ್: ಬಿ.ಜಿ.ಗೋವಿಂದಪ್ಪ ಗೆಲುವು

ಬಿಜೆಪಿ: ಎಸ್.ಲಿಂಗಮೂರ್ತಿ – ಸೋಲು

ಜೆಡಿಎಸ್: ತಿಪ್ಪೇಸ್ವಾಮಿ – ಸೋಲು

ಪಕ್ಷೇತರ: ಗೂಳಿಹಟ್ಟಿ ಶೇಖರ್‌ – ಸೋಲು

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) – ಬಿಜೆಪಿಯ ಎಂ.ಚಂದ್ರಪ್ಪ ಗೆಲುವು

2008ರಿಂದ ಇದು ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಬಿಜೆಪಿಯ ಎಂ.ಚಂದ್ರಪ್ಪನವರು ಜಯ ಗಳಿಸಿದ್ದರು. 2013ರಲ್ಲಿ ಅವರನ್ನು ಕಾಂಗ್ರೆಸ್‌ನ ಹೆಚ್.ಆಂಜನೇಯರವರು ಮಣಿಸಿ ಸಚಿವರೂ ಆಗಿದ್ದರು. 2018ರಲ್ಲಿ ಮತ್ತೆ ಬಿಜೆಪಿಯ ಎಂ.ಚಂದ್ರಪ್ಪನವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ: ಎಂ.ಚಂದ್ರಪ್ಪ ಗೆಲುವು

ಕಾಂಗ್ರೆಸ್: ಹೆಚ್.ಆಂಜನೇಯ – ಸೋಲು

ಜೆಡಿಎಸ್: ಇಂದ್ರಜೀತ್ ನಾಯ್ಕ್ – ಸೋಲು

ಚಳ್ಳಕೆರೆ (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಟಿ.ರಘುಮೂರ್ತಿ ಗೆಲುವು

ಚಳ್ಳಕೆರೆ ಆರಂಭದಲ್ಲಿ ಪ.ಜಾ ಮೀಸಲು ದ್ವಿಸದಸ್ಯ ಕ್ಷೇತ್ರವಾಗಿತ್ತು. 1962ರಿಂದ 2008ರವರೆಗೆ ಸಾಮಾನ್ಯ ಕ್ಷೇತ್ರವಾಗಿದ್ದು, 2008ರಿಂದ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದೆ.

2008ರಲ್ಲಿ ಬಿಜೆಪಿಯಿಂದ ತಿಪ್ಪೆಸ್ವಾಮಿ ಗೆದ್ದು ಶಾಸಕರಾಗಿದ್ದರು. ಆದರೆ 2013ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ರಘುಮೂರ್ತಿ ಆಯ್ಕೆಯಾದರು. 2018ರಲ್ಲಿಯೂ ಅವರು ಪುನರಾಯ್ಕೆಯಾದರು. ಆಗ ಜೆಡಿಎಸ್ ಎರಡನೇ ಸ್ಥಾನ ಪಡೆದರೆ, ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು.

ಕಾಂಗ್ರೆಸ್: ಟಿ.ರಘುಮೂರ್ತಿ ಗೆಲುವು

ಬಿಜೆಪಿ: ಅನಿಲ್ ಕುಮಾರ್.ಆರ್ – ಸೋಲು

ಜೆಡಿಎಸ್: ರವೀಶ್‌ಕುಮಾರ್ – ಸೋಲು

ಇದನ್ನೂ ಓದಿ; ಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...