Homeಮುಖಪುಟಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

- Advertisement -
- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ರದುರ್ಗ ಸೇರಿ, ಹಿರಿಯೂರು, ಹೊಸದುರ್ಗ ಸಾಮಾನ್ಯ ಕ್ಷೇತ್ರಗಳಿದ್ದರೆ, ಚಳ್ಳಕೆರೆ, ಮೊಳಕಾಲ್ಮೂರು ಪ.ಪಂ ಮೀಸಲು ಕ್ಷೇತ್ರ ಮತ್ತು ಹೊಳಲ್ಕೆರೆ ಪ.ಜಾ ಮೀಸಲು ಕ್ಷೇತ್ರಗಳಿವೆ. ಕಳೆದ ಬಾರಿ ಚಿತ್ರದುರ್ಗದ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಚಳ್ಳಕೆರೆ ಹೊರತುಪಡಿಸಿ ಉಳಿದ 5 ಕಡೆ ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಫಲಿತಾಂಶ ಉಲ್ಟಾ ಆಗಿದ್ದು 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ 1 ಕಡೆ ಮಾತ್ರ ಬಿಜೆಪಿ ಗೆಲುವು ಕಂಡಿದೆ. ಸಂಪೂರ್ಣ ವಿವರ ಈ ರೀತಿಯಿದೆ.

ಚಿತ್ರದುರ್ಗ (ಸಾಮಾನ್ಯ ಕ್ಷೇತ್ರ) – ಕಾಂಗ್ರೆಸ್‌ನ ವೀರೇಂದ್ರ ಪಪ್ಪಿಗೆ ಗೆಲುವು

ಆರಂಭದಲ್ಲಿ ಚಿತ್ರದುರ್ಗ ಕಾಂಗ್ರೆಸ್ ನೆಲೆಯಾಗಿತ್ತು. 1994 ಮತ್ತು 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಜಿ.ಎಚ್ ತಿಪ್ಪಾರೆಡ್ಡಿಯವರು 2004ರಲ್ಲಿ ಕಾಂಗ್ರೆಸ್ ಸೇರಿ ಹ್ಯಾಟ್ರಿಕ್ ಸಾಧಿಸಿದ್ದರು. ಆದರೆ 2008ರಲ್ಲಿ ಜೆಡಿಎಸ್ ಅಭ್ಯರ್ಥಿ ಬಸವರಾಜನ್ ಎದುರು ಸೋಲು ಕಂಡರು. ನಂತರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಅಭ್ಯರ್ಥಿಯಾಗಿ 2013 ಮತ್ತು 2018ರಲ್ಲಿ ಜಯಗಳಿಸಿ, 5ನೇ ಬಾರಿಗೆ ಶಾಸಕರಾಗಿರುವ ಅವರು ಚಿತ್ರದುರ್ಗವನ್ನು ಬಿಜೆಪಿಯ ಭದ್ರಕೋಟೆಯಾಗಿಸಿದ್ದರು.

ಕಾಂಗ್ರೆಸ್: ಕೆ.ಸಿ ವಿರೇಂದ್ರ ಪಪ್ಪಿ – ಗೆಲುವು

ಬಿಜೆಪಿ: ಜಿ.ಎಚ್ ತಿಪ್ಪಾರೆಡ್ಡಿ – ಸೋಲು

ಜೆಡಿಎಸ್: ರಘು ಆಚಾರ್ – ಸೋಲು

ಪಕ್ಷೇತರ: ಸೌಭಾಗ್ಯ ಬಸವರಾಜನ್‌ – ಸೋಲು

ಮೊಳಕಾಲ್ಮೂರು (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಎನ್.ವೈ ಗೋಪಾಲಕೃಷ್ಣ ಗೆಲುವು

2018ರ ಚುನಾವಣೆಯಲ್ಲಿ ಬಾದಾಮಿ ಜೊತೆಗೆ ಮೊಳಕಾಲ್ಮೂರಿನಲ್ಲಿಯೂ ಬಿ.ಶ್ರೀರಾಮುಲು ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು.

ಕಾಂಗ್ರೆಸ್: ಎನ್.ವೈ ಗೋಪಾಲಕೃಷ್ಣ – ಗೆಲುವು

ಬಿಜೆಪಿ: ಎಸ್.ತಿಪ್ಪೇಸ್ವಾಮಿ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹಿರಿಯೂರು (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಡಿ.ಸುಧಾಕರ್ ಗೆಲುವು

2008ರಲ್ಲಿ ಸಾಮಾನ್ಯ ವಿಧಾನಸಭಾ ಕ್ಷೇತ್ರವಾದಾಗ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಜೈನ ಸಮುದಾಯದ ಡಿ.ಸುಧಾಕರ್ ಹಿರಿಯೂರಿಗೆ ಬಂದು ಗೆಲುವು ಸಾಧಿಸಿದರು. ಅವರು 2013ರಲ್ಲಿಯೂ ಸಹ ಯಾದವ ಸಮುದಾಯದ ಜೆಡಿಎಸ್‌ನ ಕೃಷ್ಣಪ್ಪನವರನ್ನು ಸೋಲಿಸಿ ಶಾಸಕರಾದರು. ಆದರೆ 2018ರ ವೇಳೆಗೆ ಕೃಷ್ಣಪ್ಪನವರ ಪುತ್ರಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಸೇರಿ ಜಯ ಕಂಡರು.

ಕಾಂಗ್ರೆಸ್: ಡಿ.ಸುಧಾಕರ್ – ಗೆಲುವು

ಬಿಜೆಪಿ: ಕೆ.ಪೂರ್ಣಿಮಾ ಶ್ರೀನಿವಾಸ್ – ಸೋಲು

ಜೆಡಿಎಸ್: ವೀರಭದ್ರಪ್ಪ – ಸೋಲು

ಹೊಸದುರ್ಗ (ಸಾಮಾನ್ಯ ವಿಧಾನಸಭಾ ಕ್ಷೇತ್ರ) – ಕಾಂಗ್ರೆಸ್‌ನ ಬಿ.ಜಿ.ಗೋವಿಂದಪ್ಪ ಗೆಲುವು

ಬಿ.ಜಿ.ಗೋವಿಂದಪ್ಪನವರು ಆರಂಭದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಆನಂತರ ಕಾಂಗ್ರೆಸ್ ಸೇರಿ ಒಟ್ಟು ಮೂರು ಬಾರಿ ಶಾಸಕರಾಗಿದ್ದಾರೆ. ಇನ್ನು ಈ ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬೋವಿ ಸಮುದಾಯದ ಗೂಳಿಹಟ್ಟಿ ಶೇಖರ್‌ರವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದ ಅವರು, 2018ರಲ್ಲಿ ಬಿಜೆಪಿ ಸೇರಿ ಶಾಸಕರಾಗಿದ್ದರು.

ಕಾಂಗ್ರೆಸ್: ಬಿ.ಜಿ.ಗೋವಿಂದಪ್ಪ ಗೆಲುವು

ಬಿಜೆಪಿ: ಎಸ್.ಲಿಂಗಮೂರ್ತಿ – ಸೋಲು

ಜೆಡಿಎಸ್: ತಿಪ್ಪೇಸ್ವಾಮಿ – ಸೋಲು

ಪಕ್ಷೇತರ: ಗೂಳಿಹಟ್ಟಿ ಶೇಖರ್‌ – ಸೋಲು

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) – ಬಿಜೆಪಿಯ ಎಂ.ಚಂದ್ರಪ್ಪ ಗೆಲುವು

2008ರಿಂದ ಇದು ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರವಾಗಿದೆ. 2008ರಲ್ಲಿ ಬಿಜೆಪಿಯ ಎಂ.ಚಂದ್ರಪ್ಪನವರು ಜಯ ಗಳಿಸಿದ್ದರು. 2013ರಲ್ಲಿ ಅವರನ್ನು ಕಾಂಗ್ರೆಸ್‌ನ ಹೆಚ್.ಆಂಜನೇಯರವರು ಮಣಿಸಿ ಸಚಿವರೂ ಆಗಿದ್ದರು. 2018ರಲ್ಲಿ ಮತ್ತೆ ಬಿಜೆಪಿಯ ಎಂ.ಚಂದ್ರಪ್ಪನವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ: ಎಂ.ಚಂದ್ರಪ್ಪ ಗೆಲುವು

ಕಾಂಗ್ರೆಸ್: ಹೆಚ್.ಆಂಜನೇಯ – ಸೋಲು

ಜೆಡಿಎಸ್: ಇಂದ್ರಜೀತ್ ನಾಯ್ಕ್ – ಸೋಲು

ಚಳ್ಳಕೆರೆ (ಪರಿಶಿಷ್ಟ ಪಂಗಡ ಮೀಸಲು) – ಕಾಂಗ್ರೆಸ್‌ನ ಟಿ.ರಘುಮೂರ್ತಿ ಗೆಲುವು

ಚಳ್ಳಕೆರೆ ಆರಂಭದಲ್ಲಿ ಪ.ಜಾ ಮೀಸಲು ದ್ವಿಸದಸ್ಯ ಕ್ಷೇತ್ರವಾಗಿತ್ತು. 1962ರಿಂದ 2008ರವರೆಗೆ ಸಾಮಾನ್ಯ ಕ್ಷೇತ್ರವಾಗಿದ್ದು, 2008ರಿಂದ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದೆ.

2008ರಲ್ಲಿ ಬಿಜೆಪಿಯಿಂದ ತಿಪ್ಪೆಸ್ವಾಮಿ ಗೆದ್ದು ಶಾಸಕರಾಗಿದ್ದರು. ಆದರೆ 2013ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ರಘುಮೂರ್ತಿ ಆಯ್ಕೆಯಾದರು. 2018ರಲ್ಲಿಯೂ ಅವರು ಪುನರಾಯ್ಕೆಯಾದರು. ಆಗ ಜೆಡಿಎಸ್ ಎರಡನೇ ಸ್ಥಾನ ಪಡೆದರೆ, ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು.

ಕಾಂಗ್ರೆಸ್: ಟಿ.ರಘುಮೂರ್ತಿ ಗೆಲುವು

ಬಿಜೆಪಿ: ಅನಿಲ್ ಕುಮಾರ್.ಆರ್ – ಸೋಲು

ಜೆಡಿಎಸ್: ರವೀಶ್‌ಕುಮಾರ್ – ಸೋಲು

ಇದನ್ನೂ ಓದಿ; ಸ್ಪಷ್ಟ ಬಹುಮತದತ್ತ ಕಾಂಗ್ರೆಸ್: 127 ಸ್ಥಾನಗಳಲ್ಲಿ ಗೆಲುವಿನ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...