Homeಕರ್ನಾಟಕಮೈಸೂರು: 11 ಕ್ಷೇತ್ರಗಳ ಪೈಕಿ 7ರಲ್ಲಿ ಕಾಂಗ್ರೆಸ್‌ ಮುನ್ನಡೆ

ಮೈಸೂರು: 11 ಕ್ಷೇತ್ರಗಳ ಪೈಕಿ 7ರಲ್ಲಿ ಕಾಂಗ್ರೆಸ್‌ ಮುನ್ನಡೆ

- Advertisement -
- Advertisement -

ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಈ ಭಾರಿ ಹೆಚ್ಚಿನ ಸ್ಥಾನಗಳನ್ನು ಮೈಸೂರು ಜಿಲ್ಲೆಯಲ್ಲಿ ಪಡೆಯುವ ಸಾಧ್ಯತೆ ಹೆಚ್ಚಾಗುತ್ತಿದೆ.

ವರುಣಾ ವಿಧಾನಸಭಾ ಕ್ಷೇತ್ರ

ಸಿದ್ದರಾಮಯ್ಯ (ಕಾಂಗ್ರೆಸ್)- ಮುನ್ನಡೆ

ವಿ.ಸೋಮಣ್ಣ (ಬಿಜೆಪಿ)- ಹಿನ್ನಡೆ

ಭಾರತೀಶಂಕರ್‌ (ಜೆಡಿಎಸ್)- ಹಿನ್ನಡೆ

ಕೃಷ್ಣಮೂರ್ತಿ (ಬಿಎಸ್‌ಪಿ)- ಹಿನ್ನಡೆ

ಅಭ್ಯರ್ಥಿಗಳ ಹಿನ್ನೆಲೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಂಪ್ರದಾಯಿಕ ಕ್ಷೇತ್ರವಾದ ವರುಣಾ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿದೆ. 2008, 2013 ಸಿದ್ದರಾಮಯ್ಯನವರು ಇಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಮುಖ್ಯಮಂತ್ರಿಯೂ ಆದರು. 2018ರಲ್ಲಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಗೆದ್ದಿದ್ದರು. ಆದರೆ ಈ ಭಾರಿ ಸಿದ್ದರಾಮಯ್ಯನವರು ಸ್ವಕ್ಷೇತ್ರಕ್ಕೆ ಮರಳಿದರು. ಸಿದ್ದರಾಮಯ್ಯನವರನ್ನು ಕಟ್ಟಿಹಾಕಬೇಕೆಂದು ಸಚಿವ ವಿ.ಸೋಮಣ್ಣನವರನ್ನು ವರುಣಾದಿಂದ ಕಣಕ್ಕಿಳಿಸಲಾಗಿತ್ತು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡದೆ ಸೋಮಣ್ಣನವರನ್ನು ವರುಣಾ ಮತ್ತು ಚಾಮರಾಜನಗರದಿಂದ ಸ್ಪರ್ಧೆಗೆ ಇಳಿಸಲಾಗಿತ್ತು. ಸಿದ್ದರಾಮಯ್ಯನವರು ವರುಣಾದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮುಂದೆ ಬಿಜೆಪಿಯ ಜಾತಿ ಸಮೀಕರಣದ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆ ಕಾಣುತ್ತಿದೆ.

****

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ

ಜಿ.ಟಿ.ದೇವೇಗೌಡ (ಜೆಡಿಎಸ್)- ಮುನ್ನಡೆ

ಮಾವಿನಹಳ್ಳಿ ಸಿದ್ದೇಗೌಡ (ಕಾಂಗ್ರೆಸ್)- ಹಿನ್ನಡೆ

ಕವೀಶ್ ಗೌಡ (ಬಿಜೆಪಿ)- ಹಿನ್ನಡೆ

ಸಿದ್ದರಾಮಯ್ಯನವರು 2018ರ ಚುನಾವಣೆಯಲ್ಲಿ ಭಾರೀ ಅಂತರದಿಂದ ಸೋಲಿಸಿ, ಸಮ್ಮಿಶ್ರ ಸರ್ಕಾರದಲ್ಲಿ ಸಚಿವರೂ ಆಗಿದ್ದ ಜಿ.ಟಿ.ದೇವೇಗೌಡ ಅವರು 2013ರಿಂದಲೂ ಚಾಮುಂಡೇಶ್ವರಿಯನ್ನು ಪ್ರತಿನಿಧಿಸುತ್ತಿದ್ದಾರೆ. ಈ ಚುಣಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮಾವಿನಹಳ್ಳಿ ಸಿದ್ದೇಗೌಡ ಅವರು ಮೂಲತಃ ಜಿ.ಟಿ.ದೇವೇಗೌಡ ಅವರ ಶಿಷ್ಯರು. ಈ ಚುನಾವಣೆಯಲ್ಲಿ ಸಿದ್ದೇಗೌಡರೇ ಜಿ.ಟಿ.ಡಿ. ಜೊತೆಯಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಆದರೆ ಜಿ.ಟಿ.ದೇವಗೌಡ ಮತ್ತು ಮಾವಿನಹಳ್ಳಿ ಸಿದ್ದೇಗೌಡ ಅವರು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್‌ನ ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್ ಗೌಡ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲಾಗಿತ್ತು. ನಿರೀಕ್ಷೆಯಂತೆ ಜಿ.ಟಿ.ದೇವೇಗೌಡ ಮುನ್ನಡೆ ಸಾಧಿಸಿದ್ದಾರೆ.

****

ಚಾಮರಾಜ ವಿಧಾನಸಭಾ ಕ್ಷೇತ್ರ

ಕೆ.ಹರೀಶ್‌ಗೌಡ (ಕಾಂಗ್ರೆಸ್)- ಮುನ್ನಡೆ

ಎಲ್.ನಾಗೇಂದ್ರ (ಬಿಜೆಪಿ)- ಹಿನ್ನಡೆ

ಎಚ್‌.ಕೆ.ರಮೇಶ್ (ಜೆಡಿಎಸ್‌)- ಹಿನ್ನಡೆ

ಜೆಡಿಎಸ್‌ನಿಂದ ಬಂಡಾಯವೆದ್ದು 2018ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 21,282 ಮತಗಳನ್ನು ಪಡೆದು ಗಮನ ಸೆಳೆದಿದ್ದ ಕೆ.ಹರೀಶ್ ಗೌಡ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿತ್ತು. 2018ರಲ್ಲಿ ಗೆದ್ದಿದ್ದ ಎಲ್.ನಾಗೇಂದ್ರ ಅವರನ್ನು ಬಿಜೆಪಿ ಮತ್ತೆ ಕಣಕ್ಕಿಳಿಸಿತ್ತು. ವಾಸು ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು.

***

ಕೃಷ್ಣರಾಜ ವಿಧಾನಸಭಾ ಕ್ಷೇತ್ರ

ಟಿ.ಎಸ್.ಶ್ರೀವತ್ಸ (ಬಿಜೆಪಿ)- ಮುನ್ನಡೆ

ಎಂ.ಕೆ.ಸೋಮಶೇಖರ್‌ (ಕಾಂಗ್ರೆಸ್)- ಹಿನ್ನಡೆ

ಕೆ.ವಿ.ಮಲ್ಲೇಶ್ (ಜೆಡಿಎಸ್)- ಹಿನ್ನಡೆ

ಶಾಸಕರಾಗಿದ್ದ ಎ.ಎಸ್.ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿಸಿ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿತ್ತು. ರಾಮದಾಸ್ ಅವರಿಗೆ ಸಾಂಪ್ರದಾಯಿಕ ಎದುರಾಳಿಯಾಗಿದ್ದ ಎಂ.ಕೆ.ಸೋಮಶೇಖರ್ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಸಾಮಾನ್ಯವಾಗಿ ರಾಮು- ಸೋಮು ಸ್ಪರ್ಧೆಯಾಗುತ್ತಿದ್ದ ಕ್ಷೇತ್ರದಲ್ಲಿ ಈ ಬಾರಿ ಟಿ.ಎಸ್.ಶ್ರೀವತ್ಸ ಅವರು ಎಷ್ಟರ ಮಟ್ಟಿಗೆ ಸೋಮಶೇಖರ್‌ ಅವರಿಗೆ ಪೈಪೋಟಿ ನೀಡುತ್ತಾರೆಂಬ ಕುತೂಹಲ ಹುಟ್ಟಿಕೊಂಡಿತ್ತು. ಕಳೆದ ಬಾರಿಯೂ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಪಾಲಿಕೆ ಸದಸ್ಯ ಕೆ.ವಿ.ಮಲ್ಲೇಶ್ ಅವರಿಗೆ ಈ ಸಲವೂ ಜೆಡಿಎಸ್ ಟಿಕೆಟ್ ನೀಡಿತ್ತು.

****

ನರಸಿಂಹರಾಜ ವಿಧಾನಸಭಾ ಕ್ಷೇತ್ರ

ತನ್ವೀರ್‌ ಸೇಠ್ (ಕಾಂಗ್ರೆಸ್)- ಮುನ್ನಡೆ

ಅಬ್ದುಲ್ ಮಜೀದ್ (ಎಸ್‌ಡಿಪಿಐ)- ಹಿನ್ನಡೆ

ಸಂದೇಶ್‌ ಸ್ವಾಮಿ (ಬಿಜೆಪಿ)- ಹಿನ್ನಡೆ

ಅಬ್ದುಲ್‌ ಖಾದರ್ (ಜೆಡಿಎಸ್)-

ಕಾಂಗ್ರೆಸ್ಸಿನ ಮಾಜಿ ಸಚಿವ ತನ್ವೀರ್‌ ಸೇಠ್‌ ಅವರು ಸತತವಾಗಿ ಗೆದ್ದು ಬರುತ್ತಿರುವ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐ ಕಳೆದೆರಡು ಚುನಾವಣೆಯಿಂದಲೂ ಪೈಪೋಟಿ ನೀಡುತ್ತಾ ಬಂದಿದೆ. ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಕ್ಷೇತ್ರದಲ್ಲಿ ತಮ್ಮದೇ ಪ್ರಾಬಲ್ಯ ಹೊಂದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಎಸ್‌ಡಿಪಿಐ ಮಾಡಿರುವ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಮನವೊಲಿಕೆಗೆ ಮುಂದಾಗಿದ್ದರು.

****

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ

ಅಶ್ವಿನ್‌ ಕುಮಾರ್‌ (ಜೆಡಿಎಸ್)- ಮುನ್ನಡೆ

ಡಾ.ಎಚ್.ಸಿ.ಮಹದೇವಪ್ಪ (ಕಾಂಗ್ರೆಸ್)- ಹಿನ್ನಡೆ

ಡಾ.ರೇವಣ್ಣ (ಬಿಜೆಪಿ)- ಹಿನ್ನಡೆ

ಮಾಜಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರನ್ನು 28,000 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದ ಜೆಡಿಎಸ್‌ನ ಅಶ್ವಿನ್‌ಕುಮಾರ್‌ ಅವರು ಈ ಭಾರಿಯೂ ಎದುರಾಳಿಯಾಗಿದ್ದರು. ಕ್ಷೇತ್ರದಲ್ಲಿ ಇಟ್ಟುಕೊಂಡಿರುವ ಭಾರೀ ಜನಸಂಪರ್ಕ ಅವರ ಕೈಹಿಡಿಯುವ ಸಾಧ್ಯತೆ ಇದೆ ಎಂದು ಊಹಿಸಲಾಗಿತ್ತು. ಮತ್ತೊಂದೆಡೆ ನರಸೀಪುರ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ದ, ಹಿರಿಯ ದಲಿತ ನಾಯಕ ಮಹದೇವಪ್ಪ ಶತಾಯಗತಾಯ ಗೆಲ್ಲಲು ಯತ್ನಿಸಿದ್ದರು. ಕೈತಪ್ಪಿದ್ದ ಕ್ಷೇತ್ರವನ್ನು ಮತ್ತೆ ತಮ್ಮತ್ತ ಸೆಳೆದುಕೊಳ್ಳಲು ಪ್ರಯತ್ನಿಸಿದ್ದರು. ವೃತ್ತಿಯಲ್ಲಿ ವೈದ್ಯರಾಗಿರುವ ರೇವಣ್ಣ ಅವರಿಗೆ ಬಿಜೆಪಿ ಕಣಕ್ಕಿಳಿಸಿತ್ತು. ಟಿ.ನರಸೀಪುರ ಎಸ್‌ಸಿ ಮೀಸಲು ಕ್ಷೇತ್ರವಾಗಿದೆ.

****

ನಂಜನಗೂಡು ವಿಧಾನಸಭಾ ಕ್ಷೇತ್ರ

ದರ್ಶನ್ ಧ್ರುವನಾರಾಯಣ (ಕಾಂಗ್ರೆಸ್)- ಮುನ್ನಡೆ

ಬಿ.ಹರ್ಷವರ್ಧನ್ (ಬಿಜೆಪಿ)- ಹಿನ್ನಡೆ

ಜೆಡಿಎಸ್ ಅಭ್ಯರ್ಥಿ ಕಣದಲ್ಲಿ ಇಲ್ಲ.

ಕಾಂಗ್ರೆಸ್‌ನ ಹಿರಿಯ ನಾಯಕ ಆರ್‌.ಧ್ರುವನಾರಾಯಣ ಅವರ ಹಠಾ‌ತ್ ನಿರ್ಗಮನದ ಬಳಿಕ ಅವರ ಪುತ್ರನಾದ ದರ್ಶನ್ ಧ್ರುವ ನಾರಾಯಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಧ್ರುವನಾರಾಯಣ ಅವರು ನಂಜನಗೂಡಿನಲ್ಲಿ ಸ್ಪರ್ಧಿಸುವ ಆಕಾಂಕ್ಷಿಯಾಗಿದ್ದರು. ಹೀಗಾಗಿ ಅನುಕಂಪದ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಟಿಕೆಟ್ ನೀಡಲಾಗಿತ್ತು. ತಂದೆ- ತಾಯಿ ಇಬ್ಬರನ್ನೂ ಕಳೆದುಕೊಂಡಿರುವ ದರ್ಶನ್ ಅವರಿಗೆ ಬೆಂಬಲ ಸೂಚಿಸಿದ್ದ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ಹಾಕಿರಲಿಲ್ಲ. ಬಿಜೆಪಿಯಿಂದ 2018ರಲ್ಲಿ ಗೆದ್ದಿದ್ದ ಬಿ.ಹರ್ಷವರ್ಧನ್‌ ಅವರು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಮತ್ತು ಹಿರಿಯ ದಲಿತ ನಾಯಕ ಬಿ.ಬಸವಲಿಂಗಪ್ಪ ಅವರ ಮೊಮ್ಮಗ. ನಂಜನಗೂಡು ಎಸ್‌ಸಿ ಮೀಸಲು ಕ್ಷೇತ್ರವಾಗಿದೆ.

***

ಎಚ್‌.ಡಿ.ಕೋಟೆ ವಿಧಾನಸಭಾ ಕ್ಷೇತ್ರ

ಅನಿಲ್ ಚಿಕ್ಕಮಾದು (ಕಾಂಗ್ರೆಸ್)- ಮುನ್ನಡೆ

ಕೃಷ್ಣನಾಯಕ (ಬಿಜೆಪಿ)- ಹಿನ್ನಡೆ

ಜಯಪ್ರಕಾಶ್ (ಜೆಡಿಎಸ್)- ಹಿನ್ನಡೆ

ಹಾಲಿ ಶಾಸಕರಾಗಿದ್ದ ಅನಿಲ್‌ ಚಿಕ್ಕಮಾದು (ಸಿ.ಅನಿಲ್‌ಕುಮಾರ್‌) ಅವರು ಮಾಜಿ ಶಾಸಕ ಚಿಕ್ಕಮಾದು ಅವರ ಪುತ್ರ. ಜೆಡಿಎಸ್‌ನಲ್ಲಿ ಇದ್ದು ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಅವರನ್ನು ಕಾಂಗ್ರೆಸ್‌ಗೆ ಕರೆತಂದು ಶಾಸಕರನ್ನಾಗಿ ಮಾಡುವಲ್ಲಿ ದಿವಂಗತ ಆರ್‌.ಧ್ರುವನಾರಾಯಣ್ ಅಂತಹ ನಾಯಕರ ಪಾತ್ರ ಮಹತ್ವದ್ದಾಗಿದೆ. ಈಗ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಎರಡನೇ ಅವಧಿಗೆ ಸ್ಪರ್ಧಿಸಿದ್ದರು. ಮಾಜಿ ಶಾಸಕ ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್‌ ಅವರಿಗೆ ಜೆಡಿಎಸ್‌ ಟಿಕೆಟ್‌ ನೀಡಿತ್ತು. ಹೀಗಾಗಿ ಇಬ್ಬರು ಮಾಜಿ ಶಾಸಕರ ಪುತ್ರರ ಜೊತೆಗೆ ಕೃಷ್ಣ ನಾಯಕ ಅವರು ಪ್ರಮುಖ ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ. ಕೃಷ್ಣನಾಯಕ್‌ ಮೂಲತಃ ಜೆಡಿಎಸ್‌ನಲ್ಲಿ ಇದ್ದವರು. ಅಪ್ಪಾಜಿ ಕ್ಯಾಂಟೀನ್‌ ಮಾಡಿ ಗಮನ ಸೆಳೆದಿದ್ದರು. ಕೋವಿಡ್ ಸಮಯದಲ್ಲಿ ಜನರಿಗೆ ಆಹಾರ ಕಿಟ್‌ಗಳನ್ನು ವಿತರಿಸಿ ಜನಮನ್ನಣೆ ಗಳಿಸಿದ್ದಾರೆ. ಎಚ್.ಡಿ.ಕೋಟೆ ಎಸ್‌ಟಿ ಮೀಸಲು ಕ್ಷೇತ್ರವಾಗಿದೆ.

***

ಹುಣಸೂರು ವಿಧಾನಸಭಾ ಕ್ಷೇತ್ರ

ಜಿ.ಡಿ.ಹರೀಶ್‌ಗೌಡ (ಜೆಡಿಎಸ್‌)- ಮುನ್ನಡೆ

ಎಚ್‌.ಪಿ.ಮಂಜುನಾಥ್‌ (ಕಾಂಗ್ರೆಸ್)- ಹಿನ್ನಡೆ

ದೇವರಹಳ್ಳಿ ಸೋಮಶೇಖರ್‌ (ಬಿಜೆಪಿ)- ಹಿನ್ನಡೆ

ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಕರ್ಮಭೂಮಿ ಹುಣಸೂರು ವಿಧಾನಸಭಾ ಕ್ಷೇತ್ರ. 2013ರ ಚುನಾವಣೆ ಮತ್ತು 2019ರ ಉಪಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್‌ನ ಮಂಜುನಾಥ್ ಈ ಭಾರಿಯೂ ಪಕ್ಷದಿಂದ ಕಣದಲ್ಲಿದ್ದಾರೆ. ಇವರ ಎದುರಲ್ಲಿ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್‌ಗೌಡ ಜೆಡಿಎಸ್‌ನಿಂದ ಸ್ಪರ್ಧಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಹರೀಶ್‌ ಪ್ರಬಲ ಪ್ರತಿಸ್ಪರ್ಧಿಯಾಗಿದ್ದಾರೆ. ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ದೇವರಹಳ್ಳಿ ಸೋಮಶೇಖರ್‌ ಈ ಚುನಾವಣೆಯಲ್ಲಿ ಬಿಜೆಪಿಗೆ ಸೇರಿ ಟಿಕೆಟ್ ಪಡೆದಿದ್ದರು.

***

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರ

ಕೆ.ವೆಂಕಟೇಶ್ (ಕಾಂಗ್ರೆಸ್)- ಮುನ್ನಡೆ

ಕೆ.ಮಹದೇವ್ (ಜೆಡಿಎಸ್)- ಹಿನ್ನಡೆ

ಸಿ.ಎಚ್.ವಿಜಯಶಂಖರ್‌- ಹಿನ್ನಡೆ

ಸತತವಾಗಿ ಕ್ಷೇತ್ರದಲ್ಲಿ ಗೆಲ್ಲುತ್ತಾ ಬಂದಿದ್ದ ಹಿರಿಯ ರಾಜಕಾರಣಿ ಕೆ.ವೆಂಕಟೇಶ್ 2018ರಲ್ಲಿ ಸೋತಿದ್ದರು. ಸತತವಾಗಿ ಸೋಲು ಕಂಡಿದ್ದ ಜೆಡಿಎಸ್‌ನ ಕೆ.ಮಹದೇವ್ ಅವರಿಗೆ ಅನುಕಂಪದ ಅಲೆ ಇತ್ತು. ಇನ್ನು ಮಾಜಿ ಸಚಿವ, ಮಾಜಿ ಶಾಸಕ ಸಿ.ಎಚ್.ವಿಜಯಶಂಕರ್‌ ಈ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದಾರೆ.

***

ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರ

ರವಿಶಂಕರ್‌ (ಕಾಂಗ್ರೆಸ್)- ಮುನ್ನಡೆ

ಸಾ.ರಾ.ಮಹೇಶ್‌ (ಜೆಡಿಎಸ್)- ಹಿನ್ನಡೆ

ಹೊಸಹಳ್ಳಿ ವೆಂಕಟೇಶ್ (ಬಿಜೆಪಿ)- ಹಿನ್ನಡೆ

ಕೆ.ಆರ್‌.ನಗರ ಕ್ಷೇತ್ರವು ಜೆಡಿಎಸ್ ಮತ್ತು ಕಾಂಗ್ರೆಸ್ಸಿನ ಪೈಪೋಟಿಯ ನೆಲ. ಮಾಜಿ ಸಚಿವ ಸಾರಾ ಮಹೇಶ್ ಸತತವಾಗಿ ಗೆಲ್ಲುತ್ತಾ ಬಂದಿದ್ದು, ಕಾಂಗ್ರೆಸ್ ಓಟಕ್ಕೆ ಬ್ರೇಕ್‌ ಹಾಕಿದ್ದರು. ಕಳೆದ ಚುನಾವಣೆಯಲ್ಲಿ ಸೋತಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ರವಿಶಂಕರ್‌ ಅವರಿಗೆ ಈ ಬಾರಿಯೂ ಕಾಂಗ್ರೆಸ್ ಟಿಕೆಟ್ ನೀಡಿದೆ. ಇಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...